Latest Updates
-
ಸೆಪ್ಟೆಂಬರ್ 15ರ ಲವ್ ರಾಶಿಫಲ: ನಿಮ್ಮ ಸಂಗಾತಿಯ ಮನ ಗೆಲ್ಲಲು ಈ 2 ನಿಮಿಷದ ಸೂತ್ರ ಬಳಸಿ! -
ಮಳೆಗಾಲದ ಎಚ್ಚರಿಕೆ: ಮುಂಬೈ-ಪುಣೆಯಲ್ಲಿ ಮನೆ ಸೋರಿಕೆ ತಡೆಯಲು 30 ನಿಮಿಷದ ಸಿಂಪಲ್ ಟಿಪ್ಸ್ -
ಅಡುಗೆಮನೆ ಬಜೆಟ್ ಏರಿಕೆ: ₹30 ಕ್ಕಿಂತ ಕಡಿಮೆ ವೆಚ್ಚದಲ್ಲಿ ಆರೋಗ್ಯಕರ ಪ್ರೋಟೀನ್ ಆಹಾರ ಪಡೆಯುವುದು ಹೇಗೆ? -
iOS 27 ಅಪ್ಡೇಟ್ ನಂತರ ಫೋನ್ ಬ್ಯಾಟರಿ ಬೇಗ ಖಾಲಿಯಾಗುತ್ತಿದೆಯೇ? ಗಾಬರಿಯಾಗಬೇಡಿ, ಈ ಟಿಪ್ಸ್ ಫಾಲೋ ಮಾಡಿ! -
ಗಣೇಶ ವಿಸರ್ಜನೆ: ಮೂರ್ತಿ ಹೊರುವಾಗ ಬೆನ್ನು ನೋವು ಕಾಡದಿರಲು ಈ ಸರಳ ಟಿಪ್ಸ್ ಪಾಲಿಸಿ -
ಸಣ್ಣ ಫ್ಲ್ಯಾಟ್ನಲ್ಲಿ ಗಣೇಶೋತ್ಸವ: ಅತಿಥಿಗಳಿಗಾಗಿ ಜಾಗ ಮತ್ತು ಸುರಕ್ಷತೆಗಾಗಿ ಈ 5 ಟಿಪ್ಸ್ ಫಾಲೋ ಮಾಡಿ -
ಗಣೇಶೋತ್ಸವದ ಪ್ರಸಾದ ಬೇಗ ಹಾಳಾಗುತ್ತಿದೆಯೇ? ಮೋದಕ ಮತ್ತು ಸಿಹಿ ತಿಂಡಿಗಳನ್ನು ತಾಜಾವಾಗಿಡಲು ಈ ಟಿಪ್ಸ್ ಪಾಲಿಸಿ! -
ಗಣೇಶೋತ್ಸವ 2026: ಲಾಲ್ಬಾಗ್ಚಾ ರಾಜನ ದರ್ಶನಕ್ಕೆ ಬೆಸ್ಟ್ ಟೈಮ್ ಯಾವುದು? ಮೆಟ್ರೋ ಮತ್ತು ಲೈವ್ ಅಪ್ಡೇಟ್ಸ್ ಇಲ್ಲಿದೆ! -
ಹಬ್ಬದ ಪೂಜೆಯ ವೇಳೆ ಮೊಣಕಾಲು ಮತ್ತು ಬೆನ್ನು ನೋವು ಕಾಡುತ್ತಿದೆಯೇ? ನೋವಿಲ್ಲದೆ ಪೂಜೆ ಮಾಡಲು ಇಲ್ಲಿದೆ 10 ನಿಮಿಷಗಳ ಸಿಂಪಲ್ ಟಿಪ್ಸ್! -
ಗಣೇಶೋತ್ಸವದ ಸೌಂಡ್ ಕಿರಿಕಿರಿ: ನೆರೆಹೊರೆಯವರ ಜೊತೆ ಜಗಳವಿಲ್ಲದೆ ನೆಮ್ಮದಿಯ ನಿದ್ರೆ ಪಡೆಯುವುದು ಹೇಗೆ?
'ದುಷ್ಟ ಶಕ್ತಿ'ಯಿಂದ ರಕ್ಷಣೆ ನೀಡುವ ದಾರಗಳಿವು! ಕೈಗೆ ಕಟ್ಟಿ ನೋಡಿ
ಹಿಂದೂ ಧರ್ಮದಲ್ಲಿ ಅನೇಕ ಶಾಸ್ತ್ರ-ಸಂಪ್ರದಾಯಗಳಿವೆ. ಪ್ರತಿಯೊಂದು ತನ್ನದೇ ಆದ ಪವಿತ್ರ ಪ್ರಾಮುಖ್ಯತೆಯನ್ನು ಪಡೆದುಕೊಂಡಿವೆ. ಅದರಲ್ಲಿ ಮೌಲಿ ಧರಿಸುವುದು ಒಂದು. ಅನೇಕರು ಮಣಿಕಟ್ಟಿನ ಮೇಲೆ ಕೆಂಪು, ಹಳದಿ, ಕಪ್ಪು ಮತ್ತು ಕಿತ್ತಳೆ ಬಣ್ಣದ ದಾರವನ್ನು ಕಟ್ಟಿಕೊಂಡಿರುವುದನ್ನು ಕಂಡಿರುತ್ತೇವೆ. ಈ ಪವಿತ್ರ ದಾರವನ್ನು ಕಲಾವ ಅಥವಾ ಮೌಲಿ ಎಂದು ಕರೆಯುತ್ತಾರೆ.
ಇದರ ಮಹತ್ವ ಅಪಾರವಾದದ್ದು. ಇವುಗಳನ್ನು ಕಟ್ಟಿಕೊಳ್ಳುವುದರಿಂದ ಬ್ರಹ್ಮ, ವಿಷ್ಣು, ಮಹೇಶ್ವರ ಮತ್ತು ಲಕ್ಷ್ಮಿ, ಪಾರ್ವತಿ, ಸರಸ್ವತಿಯರ ಆಶೀರ್ವಾದಗಳು ಆಕರ್ಷಿತವಾಗುತ್ತವೆ ಎನ್ನಲಾಗುತ್ತದೆ. ಇದನ್ನು ಕೈಗೆ ಕಟ್ಟಿಕೊಳ್ಳುವುದರಿಂದ ಉಂಟಾಗುವ ಉಪಯೋಗ ಹಾಗೂ ಮಹತ್ವದ ಬಗೆಗಿನ ಕಿರು ಪರಿಚಯ ಇಲ್ಲಿದೆ ನೋಡಿ....

ಪುರಾಣ ಕಥೆಗಳ ಪ್ರಕಾರ...
ವಿಷ್ಣುವಿನ ಅವತಾರ ಎನಿಸಿಕೊಂಡ ವಾಮನನು ಬಲಿ ರಾಜನ ಕೈಗೆ (ಮಣಿಕಟ್ಟಿನ ಮೇಲೆ) ಈ ದಾರವನ್ನು ಕಟ್ಟಿದ್ದನು ಎನ್ನಲಾಗುತ್ತದೆ.

ಹಳದಿ ಮತ್ತು ಕೆಂಪು ದಾರ ಮಂಗಳಕರ
ಪುರಾತನ ಕಾಲದಿಂದಲೂ ಮಂಗಳಕರ ಎನ್ನುವ ಹಳದಿ ಮತ್ತು ಕೆಂಪು ದಾರವನ್ನು ಕಟ್ಟಿಕೊಳ್ಳುವ ಸಂಪ್ರದಾಯ ಅಸ್ತಿತ್ವಕ್ಕೆ ಬಂದಿತ್ತು ಎನ್ನಲಾಗುತ್ತದೆ.

ಶತ್ರುಗಳ ಕಾಟ ತಪ್ಪಿಸುತ್ತದೆ...
ಕೆಂಪು ದಾರವನ್ನು ಕಾಳವೆ ಎಂದು ಕರೆಯುತ್ತಾರೆ. ಈ ಬಣ್ಣ ದೀರ್ಘ ಜೀವನ, ಜೀವಂತಿಕೆ ಮತ್ತು ಶತ್ರುಗಳ ವಿರುದ್ಧ ಸಂರಕ್ಷಿಸುತ್ತದೆ.

ಈ ದಾರ ಕಟ್ಟುವ ವಿಧಾನ...
ಈ ದಾರವನ್ನು ಪುರುಷರು ಮತ್ತು ಅವಿವಾಹಿತ ಮಹಿಳೆಯರ ಬಲಗೈ ಮಣಿಕಟ್ಟಿನ ಮೇಲೆ ಕಟ್ಟುತ್ತಾರೆ. ವಿವಾಹಿತ ಮಹಿಳೆಯರಾಗಿದ್ದರೆ ಎಡಗೈ ಮಣಿಕಟ್ಟಿನ ಮೇಲೆ ಕಟ್ಟಬೇಕು..

ಕಿತ್ತಳೆ, ಹಳದಿ, ಕೆಂಪು ಬಣ್ಣಗಳ ದಾರ
ಕಿತ್ತಳೆ, ಹಳದಿ, ಕೆಂಪು ಬಣ್ಣಗಳ ದಾರವನ್ನು ಹಿಂದೂ ಧರ್ಮದಲ್ಲಿ ಮಂಗಳಕರ ಎಂದು ಪರಿಗಣಿಸುತ್ತಾರೆ. ಅಲ್ಲದೆ ಇವು ಗುರು, ಮಂಗಳ ಮತ್ತು ಸೂರ್ಯನಿಗೆ ಹೆಚ್ಚು ಪ್ರಾಶಸ್ತ್ಯವಾದವು ಎನ್ನಲಾಗುತ್ತದೆ.



Click it and Unblock the Notifications
