Latest Updates
-
ಫ್ಯಾಮಿಲಿ ವಾಟ್ಸಾಪ್ ಗ್ರೂಪ್ನಲ್ಲಿ ರಾಜಕೀಯ ಜಗಳವೇ? ಈ ಟಿಪ್ಸ್ ಪಾಲಿಸಿ, ಸಂಬಂಧ ಉಳಿಸಿಕೊಳ್ಳಿ! -
ಓಣಂ ಹಬ್ಬದ ಸಂಭ್ರಮ: ಹೂವಿನ ಬೆಲೆ ಏರಿಕೆ ನಡುವೆ ಕಡಿಮೆ ದರದಲ್ಲಿ ಖರೀದಿಸಲು ಇಲ್ಲಿವೆ ಟಿಪ್ಸ್! -
ಸಸ್ಯಜನ್ಯ ಹಾಲು: ತೂಕ ಇಳಿಕೆ ಮತ್ತು ಮಧುಮೇಹ ನಿಯಂತ್ರಣಕ್ಕೆ ಇದುವೇ ಬೆಸ್ಟ್ ಪರ್ಯಾಯ! -
ಸಕ್ಕರೆ ಬೆಲೆ ಏರಿಕೆ ಬಿಸಿ: ಹಬ್ಬದ ಸಿಹಿ ಬಜೆಟ್ ಉಳಿಸಲು ಇಲ್ಲಿದೆ 300 ರೂಪಾಯಿಯ ಸ್ಮಾರ್ಟ್ ಟಿಪ್ಸ್ -
ವರಮಹಾಲಕ್ಷ್ಮೀ ವ್ರತದ ಶಾಸ್ತ್ರೋಕ್ತ ವಿಧಾನ ಮತ್ತು ಪೂಜಾ ನಿಯಮಗಳು -
ವರಮಹಾಲಕ್ಷ್ಮೀ ಹಬ್ಬದ ಸಂಭ್ರಮಕ್ಕೆ ಬೆಲೆ ಏರಿಕೆಯ ಬಿಸಿ: ಕೆ.ಆರ್. ಮಾರುಕಟ್ಟೆಯಲ್ಲಿ ಗಗನಕ್ಕೇರಿದ ಹೂವು-ಹಣ್ಣುಗಳ ದರ -
BWF ವಿಶ್ವ ಚಾಂಪಿಯನ್ಷಿಪ್: ದೆಹಲಿಯಲ್ಲಿ ಭಾರತೀಯ ಆಟಗಾರರ ಅಬ್ಬರ, ಅಭಿಮಾನಿಗಳಿಗೆ ಇಲ್ಲಿದೆ ವಿಶೇಷ ಗೇಮ್ ಪ್ಲಾನ್! -
ವರಮಹಾಲಕ್ಷ್ಮಿ ಹಬ್ಬದ ದಿನಾಂಕದ ಗೊಂದಲ: ಆಗಸ್ಟ್ 21 ಅಥವಾ 28? ಇಲ್ಲಿದೆ ಸ್ಪಷ್ಟ ಮಾಹಿತಿ! -
ವಿಶ್ವ ಸೊಳ್ಳೆ ದಿನ: ಮಳೆಗಾಲದಲ್ಲಿ ಬಾಲ್ಕನಿಯಲ್ಲಿ ಯೋಗ ಮಾಡುವಾಗ ಸೊಳ್ಳೆ ಕಡಿತದಿಂದ ಪಾರಾಗುವುದು ಹೇಗೆ? -
BWF ವರ್ಲ್ಡ್ಸ್ ದೆಹಲಿ: ಕ್ಯೂನಲ್ಲಿ ನಿಂತು ಸುಸ್ತಾಗಿದ್ದೀರಾ? ಈ 8 ನಿಮಿಷದ ವ್ಯಾಯಾಮ ನಿಮ್ಮ ನೋವನ್ನು ಮರೆಸುತ್ತೆ!
ಝೆನ್ ಕಥೆ : ಮನಸಲ್ಲಿ ಹೊತ್ತುಕೊಂಡ ಭಾರದ ಕಲ್ಲು

ತಮ್ಮನ್ನು ಬೆಚ್ಚಗೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಬೌದ್ಧ ಭಿಕ್ಷುಗಳು ಮಾತನಾಡುತ್ತಿದ್ದುದನ್ನು ಹೋಗೆನ್ ಕೇಳಿಸಿಕೊಂಡರು. ಅವರ ಮಾತುಗಳು ಹೋಗೆನ್ ರಲ್ಲಿ ಆಸಕ್ತಿ ಕೆರಳಿಸಿದವು. ಮೈ ಬೆಚ್ಚಗಿಸಿಕೊಳ್ಳುತ್ತ ಭಿಕ್ಕುಗಳು ವಿಷಯಾತ್ಮಕತೆ ಮತ್ತು ವಾಸ್ತವಿಕತೆಯ ಬಗ್ಗೆ ಮಾತನಾಡಲು ತೊಡಗಿದರು. ಝೆನ್ ಗುರು ಹೋಗೆನ್ ಕೂಡಾ ಅವರ ಜೊತೆ ಸೇರಿಕೊಂಡರು.
ಸಹಜವಾಗಿ ಅವರೆಲ್ಲರ ಗಮನ ಝೆನ್ ಗುರು ಮೇಲೆ ತಿರುಗಿತು. ಅವರು ಏನು ಹೇಳುತ್ತಾರೋ ಎಂದು ಕುತೂಹಲದಿಂದ ಕಾಯುತ್ತಿದ್ದ ಅವರನ್ನು ಉದ್ದೇಶಿಸಿ, "ಅಲ್ಲಿ ಒಂದು ದೊಡ್ಡ ಕಲ್ಲು ಇದೆ. ಇದು ನಿಮ್ಮ ಮನಸಿನ ಒಳಗೆ ಇದೆಯೆಂದು ತಿಳಿಯುತ್ತೀರೋ ಅಥವಾ ಮನಸಿನ ಹೊರಗೆ ಇದೆ ಎಂದು ಭಾವಿಸುತ್ತೀರೋ?" ಎಂದು ಹೋಗೆನ್ ಕೇಳಿದರು.
ಒಬ್ಬ ಭಿಕ್ಕುವು ಹೇಳಿದ, "ಬುದ್ಧರ ವಿಚಾರಧಾರೆಯ ಪ್ರಕಾರ ಕಲ್ಲು ನನ್ನ ಮನಸಿನ ಒಳಗೆ ಇದೆ. ಯಾಕೆಂದರೆ ಪ್ರತಿಯೊಂದರ ದರ್ಶನ ಮತ್ತು ನೋಡುವಿಕೆ ಎರಡೂ ಕೂಡಾ ಮನಸನ್ನು ಅವಲಂಬಿಸಿ ಇರುತ್ತದೆ."
ಮಹಾನ್ ದಾರ್ಶನಿಕರಾಗಿದ್ದ ಗುರು ಹೋಗೆನ್ ಅವರು ನಂತರ ಮುಗುಳ್ನಗೆ ನಕ್ಕು, "ಅಷ್ಟು ದೊಡ್ಡ ಕಲ್ಲನ್ನು ನಿಮ್ಮ ಮನಸಲ್ಲಿ ಹೊತ್ತುಕೊಂಡಿರುವುದರಿಂದ ನಿಮ್ಮ ತಲೆ ತುಂಬ ಭಾರ ಆಗಿರಬೇಕು!"



Click it and Unblock the Notifications