Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಝೆನ್ ಕಥೆ : ಮನಸಲ್ಲಿ ಹೊತ್ತುಕೊಂಡ ಭಾರದ ಕಲ್ಲು

ತಮ್ಮನ್ನು ಬೆಚ್ಚಗೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಬೌದ್ಧ ಭಿಕ್ಷುಗಳು ಮಾತನಾಡುತ್ತಿದ್ದುದನ್ನು ಹೋಗೆನ್ ಕೇಳಿಸಿಕೊಂಡರು. ಅವರ ಮಾತುಗಳು ಹೋಗೆನ್ ರಲ್ಲಿ ಆಸಕ್ತಿ ಕೆರಳಿಸಿದವು. ಮೈ ಬೆಚ್ಚಗಿಸಿಕೊಳ್ಳುತ್ತ ಭಿಕ್ಕುಗಳು ವಿಷಯಾತ್ಮಕತೆ ಮತ್ತು ವಾಸ್ತವಿಕತೆಯ ಬಗ್ಗೆ ಮಾತನಾಡಲು ತೊಡಗಿದರು. ಝೆನ್ ಗುರು ಹೋಗೆನ್ ಕೂಡಾ ಅವರ ಜೊತೆ ಸೇರಿಕೊಂಡರು.
ಸಹಜವಾಗಿ ಅವರೆಲ್ಲರ ಗಮನ ಝೆನ್ ಗುರು ಮೇಲೆ ತಿರುಗಿತು. ಅವರು ಏನು ಹೇಳುತ್ತಾರೋ ಎಂದು ಕುತೂಹಲದಿಂದ ಕಾಯುತ್ತಿದ್ದ ಅವರನ್ನು ಉದ್ದೇಶಿಸಿ, "ಅಲ್ಲಿ ಒಂದು ದೊಡ್ಡ ಕಲ್ಲು ಇದೆ. ಇದು ನಿಮ್ಮ ಮನಸಿನ ಒಳಗೆ ಇದೆಯೆಂದು ತಿಳಿಯುತ್ತೀರೋ ಅಥವಾ ಮನಸಿನ ಹೊರಗೆ ಇದೆ ಎಂದು ಭಾವಿಸುತ್ತೀರೋ?" ಎಂದು ಹೋಗೆನ್ ಕೇಳಿದರು.
ಒಬ್ಬ ಭಿಕ್ಕುವು ಹೇಳಿದ, "ಬುದ್ಧರ ವಿಚಾರಧಾರೆಯ ಪ್ರಕಾರ ಕಲ್ಲು ನನ್ನ ಮನಸಿನ ಒಳಗೆ ಇದೆ. ಯಾಕೆಂದರೆ ಪ್ರತಿಯೊಂದರ ದರ್ಶನ ಮತ್ತು ನೋಡುವಿಕೆ ಎರಡೂ ಕೂಡಾ ಮನಸನ್ನು ಅವಲಂಬಿಸಿ ಇರುತ್ತದೆ."
ಮಹಾನ್ ದಾರ್ಶನಿಕರಾಗಿದ್ದ ಗುರು ಹೋಗೆನ್ ಅವರು ನಂತರ ಮುಗುಳ್ನಗೆ ನಕ್ಕು, "ಅಷ್ಟು ದೊಡ್ಡ ಕಲ್ಲನ್ನು ನಿಮ್ಮ ಮನಸಲ್ಲಿ ಹೊತ್ತುಕೊಂಡಿರುವುದರಿಂದ ನಿಮ್ಮ ತಲೆ ತುಂಬ ಭಾರ ಆಗಿರಬೇಕು!"



Click it and Unblock the Notifications