Latest Updates
-
ಮಳೆಗಾಲದಲ್ಲಿ ದಂಪತಿಗಳ ಬಾಂಧವ್ಯ ಗಟ್ಟಿಯಾಗಬೇಕೆ? ಮದುವೆ ಮತ್ತು ಬಜೆಟ್ ಪ್ಲಾನಿಂಗ್ಗೆ ಇಲ್ಲಿದೆ ಬೆಸ್ಟ್ ಟಿಪ್ಸ್ -
ದೆಹಲಿ ನೀರಿನ ಬಿಕ್ಕಟ್ಟು: ಮನೆಯಲ್ಲಿ ನೀರು ಉಳಿಸಿ, ಗಿಡಗಳನ್ನು ಕಾಪಾಡಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್! -
ತೂಕ ಇಳಿಕೆ ಮತ್ತು ಮಧುಮೇಹ ನಿಯಂತ್ರಣಕ್ಕೆ ಡೈರಿ ಉತ್ಪನ್ನಗಳ ಸ್ಮಾರ್ಟ್ ಆಯ್ಕೆ: ವಿಶ್ವ ಹಾಲು ದಿನದ ವಿಶೇಷ ಸಲಹೆಗಳು -
ಬೆಂಗಳೂರು ಮಳೆ: ಟ್ರಾಫಿಕ್ ಕಿರಿಕಿರಿ ತಪ್ಪಿಸಿ, ಸ್ಟೈಲಿಶ್ ಆಗಿ ಕಾಣಲು ಈ ವೈರಲ್ ಟಿಪ್ಸ್ ಮಿಸ್ ಮಾಡ್ಬೇಡಿ! -
ವಿಶ್ವ ಸೈಕಲ್ ದಿನ: ಫಿಟ್ನೆಸ್ ಕಾಯ್ದುಕೊಳ್ಳಲು ಮತ್ತು ಸುರಕ್ಷಿತ ಸೈಕ್ಲಿಂಗ್ಗೆ ಇಲ್ಲಿದೆ ಬೆಸ್ಟ್ ಟಿಪ್ಸ್ -
ಪ್ರೈಡ್ ಮಂತ್ 2026: ಮನೆಯವರ ಮುಂದೆ ನಿಮ್ಮ ನಿಜವಾದ ವ್ಯಕ್ತಿತ್ವವನ್ನು ಹೇಳಿಕೊಳ್ಳಲು ಹೆದರುತ್ತಿದ್ದೀರಾ? ಈ ಸಲಹೆಗಳು ನಿಮಗಾಗಿ! -
ಮಳೆಗಾಲದ ಮೊದಲ ಮಳೆ ಬಂತು: ನಿಮ್ಮ ಮನೆಯನ್ನು ದುಬಾರಿ ರಿಪೇರಿಯಿಂದ ರಕ್ಷಿಸಲು ಈ ಸಣ್ಣ ಕೆಲಸಗಳನ್ನು ಇಂದೇ ಮಾಡಿ! -
ಮಳೆಗಾಲದಲ್ಲಿ ಪದೇ ಪದೇ ಕಾಯಿಲೆ ಬೀಳ್ತಿದ್ದೀರಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ, ವೈರಲ್ ಜ್ವರದಿಂದ ದೂರವಿರಿ! -
ಆರ್ಸಿಬಿ ಗೆಲುವಿನ ಅಬ್ಬರ: ಬೆಂಗಳೂರಿನಲ್ಲಿ ವಿರಾಟ್-ಅನುಷ್ಕಾ ಸಂಭ್ರಮದ ವಿಡಿಯೋ ವೈರಲ್, ನೀವು ನೋಡಲೇಬೇಕಾದ ದೃಶ್ಯಗಳಿವು! -
ಮಳೆಗಾಲದಲ್ಲಿ ವ್ಯಾಯಾಮ ಮಾಡ್ತೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ!
ಯೋಗ: ವಜ್ರಾಸನ ಹುಟ್ಟಿಕೊಂಡ ಸ್ವಾರಸ್ಯಕರ ಕತೆ
ಯೋಗದಲ್ಲಿ ವಜ್ರಾಸನ ಎಂಬ ಭಂಗಿಯಿದೆ. ಈ ಆಸನವು ಅಭ್ಯಾಸ ಮಾಡುವುದರಿಂದ ದೇಹವನ್ನು ವಜ್ರಾಯುಧದಂತೆ ಬಲಶಾಲಿಯನ್ನಾಗಿಸುತ್ತದೆ. ಇದು ತುಂಬಾ ಸರಳವಾದ ಆಸನವಾಗಿದ್ದು, ಈ ಆಸನ ಜೀರ್ಣಕ್ರಿಯೆಗೆ ತುಂಬಾ ಒಳ್ಳೆಯದು. ಊಟದ ಬಳಿಕ ಒಂದು ಐದು ನಿಮಿಷ ವಜ್ರಾಸನದಲ್ಲಿ ಕೂತರೆ ಜೀರ್ಣಕ್ರಿಯೆಗೆ ತುಂಬಾನೇ ಸಹಕಾರಿ.
ಇಸ್ಲಾಂ, ಬೌದ್ಧ ಧರ್ಮದಲ್ಲಿ ಪ್ರಾರ್ಥನೆ ಮಾಡುವಾಗ ಈ ವಜ್ರಾಸನ ಭಂಗಿಯಲ್ಲಿ ಕುಳಿತುಕೊಳ್ಳುತ್ತಾರೆ. ಜಪಾನ್ನಲ್ಲಿ ವಜ್ರಾಸನದಲ್ಲಿ ಕುಳಿತುಕೊಳ್ಳುವ ಪದ್ಧತಿ ಇದೆ, ಇದಕ್ಕೆ ಸಿಝಾ ಎಂದು ಕರೆಯುತ್ತಾರೆ. ಟೀ ಸೆರ್ಮನಿ ಮಾಡುವಾಗ ಈ ಭಂಗಿಯಲ್ಲಿ ಕುಳಿತುಕೊಳ್ಳುತ್ತಾರೆ.

ಈ ವಜ್ರಾಸನ ಎಷ್ಟೊಂದು ಉಪಯುಕ್ತ ಎನ್ನುವುದನ್ನು ಯೋಗದಲ್ಲಿ ಹೇಳಲಾಗುತ್ತದೆ. ಅದೇ ಈ ವಜ್ರಾಸನ ಹೇಗೆ ಹುಟ್ಟಿಕೊಂಡಿತು ಎಂಬುವುದಕ್ಕೂ ಒಂದು ಪೌರಾಣಿಕ ಕತೆಯಿದೆ, ಅದರ ಬಗ್ಗೆ ಈ ಲೇಖನದಲ್ಲಿ ಹೇಳಲಾಗಿದೆ.
ಇಂಧ್ರ ದೇವತೆಗಳ ಅಧಿಪತಿ, ವಜ್ರಾಯುಧ ಈತನ ಆಯುಧ, ಆದ್ದರಿಂದಲೇ ಇವನನ್ನು ವಜ್ರಪಾಣಿ ಎಂದು ಕೂಡ ಕರೆಯಲಾಗುತ್ತದೆ. ಈಜಿಪ್ಟ್, ಇರಾನ್, ಗ್ರೀಸ್ ಇಲ್ಲಿ ಕೂಡ ಇಂಧ್ರನನ್ನು ದೇವರೆಂದು ಪೂಜಿಸಲಾಗುತ್ತದೆ. ಆ ದೇಶಗಳಲ್ಲಿ ಇಂದ್ರನನ್ನು ಆ್ಯಂಡ್ರಿವ್,ಆ್ಯಂಡ್ರಿಯಾ, ಆ್ಯಂಡ್ರಿಸ್ ಮುಂತಾದ ಹೆಸರಿನಲ್ಲಿ ಪೂಜಿಸಲಾಗುವುದು.
ಇಂಧ್ರನಿಗೆ ವಜ್ರಾಯುಧ ಹೇಗೆ ಸಿಕ್ಕಿತು ಎಂಬುವುದಕ್ಕೆ ಒಂದು ಕತೆಯಿದೆ. ವ್ರಿತ್ರ ಎಂಬ ಅಸುರನ ಕಾಟಕ್ಕೆ ದೇವ ಲೋಕ ಬೇಸತ್ತು ಹೋಗಿರುತ್ತದೆ, ಈತನ ಕಾಟದಿಂದ ಪಾರಾಗಲು ದೇವತೆಗಳು ಇಂಧ್ರನ ಮೊರೆ ಹೋಗುತ್ತಾರೆ. ಆದರೆ ಇರುವ ಯಾವ ಆಯುಧದಿಂದಲೂ ನನ್ನ ಸಾವು ಉಂಟಾಗಬಾರದೆಂದು ವರ ಪಡಿದ ಕಾರಣ ಆತನನ್ನು ಕೊಲ್ಲಲು ಸಾಧ್ಯ ವಾಗುವುದಿಲ್ಲ. ಆತ ಮೂರು ಲೋಕ ವಶಪಡಿಸಿಕೊಂಡು, ಭೂಮಿಯ ನೀರನ್ನು ಕೂಡ ತನ್ನ ವಶದಲ್ಲಿ ಇಟ್ಟುಕೊಳ್ಳುತ್ತಾನೆ.
ಎಲ್ಲಾ ದೇವತೆಗಳು ಒಟ್ಟಾಗಿ ದಧಿಚಿ ಮುನಿಯನ್ನು ಭೇಟಿಯಾಗಿ ತಮ್ಮ ಸಂಕಷ್ಟ ಹೇಳಿಕೊಳ್ಳುತ್ತಾರೆ. ಆಗ ಮುನಿಯು ಲೋಕ ಕಲ್ಯಾಣಕ್ಕಾಗಿ ತನ್ನ ದೇಹವನ್ನು ತ್ಯಾಗ ಮಾಡುತ್ತಾನೆ. ಆ ಮುನಿಯ ಮೂಳೆಯಿಂದ ವಿಶ್ವಕರ್ಮ ತಯಾರಿಸಿದ ಆಯುಧವೇ ವಜ್ರಾಯುಧ. ಇದನ್ನು ಬಳಸಿ ಇಂಧ್ರ ಆ ಅಸುರನನ್ನು ಕೊಲ್ಲುತ್ತಾನೆ. ಭೂಮಿಗೆ ನೀರನ್ನು ಮರಳಿಸುತ್ತಾನೆ. ಇದು ವಜ್ರಾಸನದ ಕತೆ.
ಈ ವಜ್ರಾಸನ ಅಭ್ಯಾಸ ಮಾಡುವುದರಿಂದ ಬೆನ್ನು ಮೂಳೆ ಬಲಶಾಲಿಯಾಗುವುದು.



Click it and Unblock the Notifications
