Just In
- 4 hrs ago ಹೋಟೆಲ್ ರುಚಿಯ ಪನೀರ್ ಪೆಪ್ಪರ್ ಫ್ರೈ ಮನೆಯಲ್ಲೇ ಮಾಡಿ..! 10 ನಿಮಿಷದಲ್ಲಿ ರೆಡಿ..!
- 12 hrs ago ಮೀನ ರಾಶಿಯಲ್ಲಿ ರಾಹು-ಮಂಗಳ ಯುತಿಯಿಂದ ಅಂಗಾರಕ ಯೋಗ: 12 ರಾಶಿಗಳ ಮೇಲಿರಲಿದೆ ಈ ನಕರಾತ್ಮಕ ಪರಿಣಾ
- 13 hrs ago ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- 13 hrs ago ಪುರುಷರಲ್ಲಿ ಹೆಚ್ಚಾಗುತ್ತಿದೆ ಬಂಜೆತನ: ಪುರುಷರು ಈ ಆಹಾರ ಸೇವಿಸಿದರೆ ಸಂತಾನೋತ್ಪತ್ತಿ ಸಾಮರ್ಥ್ಯ ಹೆಚ್ಚುವುದು
Don't Miss
- News Bengaluru: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಕೆಜಿಗಟ್ಟಲೆ ಚಿನ್ನ, ವಜ್ರ ಮತ್ತು ಹಣ ಪತ್ತೆ
- Technology SmartGlass: ಮೆಟಾ ರೇ-ಬ್ಯಾನ್ ಸ್ಮಾರ್ಟ್ ಗ್ಲಾಸ್ ಬಳಕೆದಾರರು ಇನ್ಮುಂದೆ ವಿಡಿಯೋ ಕಾಲ್ ಮಾಡಬಹುದು!
- Automobiles ಕ್ರ್ಯಾಶ್ ಟೆಸ್ಟ್ನಲ್ಲಿ ಕಳಪೆ ಪ್ರದರ್ಶನ ನೀಡಿ ನಿರಾಸೆ ಮೂಡಿಸಿದ ಮಧ್ಯಮ ವರ್ಗದ ಮೆಚ್ಚಿನ ಸ್ವದೇಶಿ ಕಾರು
- Sports 2025ರ ಚಾಂಪಿಯನ್ಸ್ ಟ್ರೋಫಿಗಾಗಿ ಭಾರತ ತಂಡ ಪಾಕಿಸ್ತಾನಕ್ಕೆ ಪ್ರಯಾಣಿಸಲಿದೆಯೇ?; ಬಿಸಿಸಿಐ ಹೇಳಿದ್ದೇನು?
- Movies ಅದ್ಧೂರಿ 'ರಾಮಾಯಣ' ಚಿತ್ರದ ಬಗ್ಗೆ ರಾಕಿಂಗ್ ಸ್ಟಾರ್ ಯಶ್ ಮೊದಲ ಮಾತು
- Finance ಬೆಂಗಳೂರಿನಲ್ಲಿ ಈ ಮೂರು ದಿನಗಳ ಕಾಲ ಮದ್ಯ ಮಾರಾಟ ನಿಷೇಧ, ದಿನಾಂಕ, ಸಮಯ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಯೋಗ: ವಜ್ರಾಸನ ಹುಟ್ಟಿಕೊಂಡ ಸ್ವಾರಸ್ಯಕರ ಕತೆ
ಯೋಗದಲ್ಲಿ ವಜ್ರಾಸನ ಎಂಬ ಭಂಗಿಯಿದೆ. ಈ ಆಸನವು ಅಭ್ಯಾಸ ಮಾಡುವುದರಿಂದ ದೇಹವನ್ನು ವಜ್ರಾಯುಧದಂತೆ ಬಲಶಾಲಿಯನ್ನಾಗಿಸುತ್ತದೆ. ಇದು ತುಂಬಾ ಸರಳವಾದ ಆಸನವಾಗಿದ್ದು, ಈ ಆಸನ ಜೀರ್ಣಕ್ರಿಯೆಗೆ ತುಂಬಾ ಒಳ್ಳೆಯದು. ಊಟದ ಬಳಿಕ ಒಂದು ಐದು ನಿಮಿಷ ವಜ್ರಾಸನದಲ್ಲಿ ಕೂತರೆ ಜೀರ್ಣಕ್ರಿಯೆಗೆ ತುಂಬಾನೇ ಸಹಕಾರಿ.
ಇಸ್ಲಾಂ, ಬೌದ್ಧ ಧರ್ಮದಲ್ಲಿ ಪ್ರಾರ್ಥನೆ ಮಾಡುವಾಗ ಈ ವಜ್ರಾಸನ ಭಂಗಿಯಲ್ಲಿ ಕುಳಿತುಕೊಳ್ಳುತ್ತಾರೆ. ಜಪಾನ್ನಲ್ಲಿ ವಜ್ರಾಸನದಲ್ಲಿ ಕುಳಿತುಕೊಳ್ಳುವ ಪದ್ಧತಿ ಇದೆ, ಇದಕ್ಕೆ ಸಿಝಾ ಎಂದು ಕರೆಯುತ್ತಾರೆ. ಟೀ ಸೆರ್ಮನಿ ಮಾಡುವಾಗ ಈ ಭಂಗಿಯಲ್ಲಿ ಕುಳಿತುಕೊಳ್ಳುತ್ತಾರೆ.
ಈ ವಜ್ರಾಸನ ಎಷ್ಟೊಂದು ಉಪಯುಕ್ತ ಎನ್ನುವುದನ್ನು ಯೋಗದಲ್ಲಿ ಹೇಳಲಾಗುತ್ತದೆ. ಅದೇ ಈ ವಜ್ರಾಸನ ಹೇಗೆ ಹುಟ್ಟಿಕೊಂಡಿತು ಎಂಬುವುದಕ್ಕೂ ಒಂದು ಪೌರಾಣಿಕ ಕತೆಯಿದೆ, ಅದರ ಬಗ್ಗೆ ಈ ಲೇಖನದಲ್ಲಿ ಹೇಳಲಾಗಿದೆ.
ಇಂಧ್ರ ದೇವತೆಗಳ ಅಧಿಪತಿ, ವಜ್ರಾಯುಧ ಈತನ ಆಯುಧ, ಆದ್ದರಿಂದಲೇ ಇವನನ್ನು ವಜ್ರಪಾಣಿ ಎಂದು ಕೂಡ ಕರೆಯಲಾಗುತ್ತದೆ. ಈಜಿಪ್ಟ್, ಇರಾನ್, ಗ್ರೀಸ್ ಇಲ್ಲಿ ಕೂಡ ಇಂಧ್ರನನ್ನು ದೇವರೆಂದು ಪೂಜಿಸಲಾಗುತ್ತದೆ. ಆ ದೇಶಗಳಲ್ಲಿ ಇಂದ್ರನನ್ನು ಆ್ಯಂಡ್ರಿವ್,ಆ್ಯಂಡ್ರಿಯಾ, ಆ್ಯಂಡ್ರಿಸ್ ಮುಂತಾದ ಹೆಸರಿನಲ್ಲಿ ಪೂಜಿಸಲಾಗುವುದು.
ಇಂಧ್ರನಿಗೆ ವಜ್ರಾಯುಧ ಹೇಗೆ ಸಿಕ್ಕಿತು ಎಂಬುವುದಕ್ಕೆ ಒಂದು ಕತೆಯಿದೆ. ವ್ರಿತ್ರ ಎಂಬ ಅಸುರನ ಕಾಟಕ್ಕೆ ದೇವ ಲೋಕ ಬೇಸತ್ತು ಹೋಗಿರುತ್ತದೆ, ಈತನ ಕಾಟದಿಂದ ಪಾರಾಗಲು ದೇವತೆಗಳು ಇಂಧ್ರನ ಮೊರೆ ಹೋಗುತ್ತಾರೆ. ಆದರೆ ಇರುವ ಯಾವ ಆಯುಧದಿಂದಲೂ ನನ್ನ ಸಾವು ಉಂಟಾಗಬಾರದೆಂದು ವರ ಪಡಿದ ಕಾರಣ ಆತನನ್ನು ಕೊಲ್ಲಲು ಸಾಧ್ಯ ವಾಗುವುದಿಲ್ಲ. ಆತ ಮೂರು ಲೋಕ ವಶಪಡಿಸಿಕೊಂಡು, ಭೂಮಿಯ ನೀರನ್ನು ಕೂಡ ತನ್ನ ವಶದಲ್ಲಿ ಇಟ್ಟುಕೊಳ್ಳುತ್ತಾನೆ.
ಎಲ್ಲಾ ದೇವತೆಗಳು ಒಟ್ಟಾಗಿ ದಧಿಚಿ ಮುನಿಯನ್ನು ಭೇಟಿಯಾಗಿ ತಮ್ಮ ಸಂಕಷ್ಟ ಹೇಳಿಕೊಳ್ಳುತ್ತಾರೆ. ಆಗ ಮುನಿಯು ಲೋಕ ಕಲ್ಯಾಣಕ್ಕಾಗಿ ತನ್ನ ದೇಹವನ್ನು ತ್ಯಾಗ ಮಾಡುತ್ತಾನೆ. ಆ ಮುನಿಯ ಮೂಳೆಯಿಂದ ವಿಶ್ವಕರ್ಮ ತಯಾರಿಸಿದ ಆಯುಧವೇ ವಜ್ರಾಯುಧ. ಇದನ್ನು ಬಳಸಿ ಇಂಧ್ರ ಆ ಅಸುರನನ್ನು ಕೊಲ್ಲುತ್ತಾನೆ. ಭೂಮಿಗೆ ನೀರನ್ನು ಮರಳಿಸುತ್ತಾನೆ. ಇದು ವಜ್ರಾಸನದ ಕತೆ.
ಈ ವಜ್ರಾಸನ ಅಭ್ಯಾಸ ಮಾಡುವುದರಿಂದ ಬೆನ್ನು ಮೂಳೆ ಬಲಶಾಲಿಯಾಗುವುದು.