Latest Updates
-
ಪ್ರೈಡ್ ಮಂತ್ 2026: ಮನೆಯವರ ಮುಂದೆ ನಿಮ್ಮ ನಿಜವಾದ ವ್ಯಕ್ತಿತ್ವವನ್ನು ಹೇಳಿಕೊಳ್ಳಲು ಹೆದರುತ್ತಿದ್ದೀರಾ? ಈ ಸಲಹೆಗಳು ನಿಮಗಾಗಿ! -
ಮಳೆಗಾಲದ ಮೊದಲ ಮಳೆ ಬಂತು: ನಿಮ್ಮ ಮನೆಯನ್ನು ದುಬಾರಿ ರಿಪೇರಿಯಿಂದ ರಕ್ಷಿಸಲು ಈ ಸಣ್ಣ ಕೆಲಸಗಳನ್ನು ಇಂದೇ ಮಾಡಿ! -
ಮಳೆಗಾಲದಲ್ಲಿ ಪದೇ ಪದೇ ಕಾಯಿಲೆ ಬೀಳ್ತಿದ್ದೀರಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ, ವೈರಲ್ ಜ್ವರದಿಂದ ದೂರವಿರಿ! -
ಆರ್ಸಿಬಿ ಗೆಲುವಿನ ಅಬ್ಬರ: ಬೆಂಗಳೂರಿನಲ್ಲಿ ವಿರಾಟ್-ಅನುಷ್ಕಾ ಸಂಭ್ರಮದ ವಿಡಿಯೋ ವೈರಲ್, ನೀವು ನೋಡಲೇಬೇಕಾದ ದೃಶ್ಯಗಳಿವು! -
ಮಳೆಗಾಲದಲ್ಲಿ ವ್ಯಾಯಾಮ ಮಾಡ್ತೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ! -
ಪ್ರೈಡ್ ಮಂತ್ 2026: ಕ್ವೀರ್ ಜೋಡಿಗಳ ಭವಿಷ್ಯ ಭದ್ರಪಡಿಸಲು ಮತ್ತು ಕುಟುಂಬದ ಮನವೊಲಿಸಲು ಇಲ್ಲಿದೆ ವಿಶೇಷ ಮಾರ್ಗದರ್ಶಿ! -
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ: ದುಬಾರಿ ರಿಪೇರಿ ತಪ್ಪಿಸಲು ಇಲ್ಲಿವೆ ಸರಳ ಟಿಪ್ಸ್! -
ಬಿಸಿಲು-ಮಳೆಯ ಆಟದಲ್ಲಿ ಸುಸ್ತಾಗಿದ್ದೀರಾ? ಆರೋಗ್ಯ ಕಾಪಾಡಿಕೊಳ್ಳಲು ಈ ಸರಳ ಆಹಾರ ಕ್ರಮಗಳನ್ನು ಮಿಸ್ ಮಾಡಬೇಡಿ! -
ದಿಢೀರ್ ಮಳೆಗೆ ರೆಡಿಯಾಗಿದ್ದೀರಾ? ಸ್ಟೈಲಿಶ್ ಆಗಿ ಕಾಣಲು ಮತ್ತು ಮಳೆಯಿಂದ ಪಾರಾಗಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಹವಾಮಾನ ಬದಲಾಗಿದೆ, ನಿಮ್ಮ ವರ್ಕೌಟ್ ಪ್ಲಾನ್ ಬದಲಾಯಿಸಿದ್ದೀರಾ? ಇಲ್ಲದಿದ್ದರೆ ಈ ಎಚ್ಚರಿಕೆ ನಿಮಗಾಗಿ!
ಕಷ್ಟ ನಷ್ಟಗಳಿಂದ ಮುಕ್ತಿಪಡೆಯಲು ಸಂಧ್ಯಾಕಾಲದ ನಾಲ್ಕು ಸೂತ್ರ
ಸಂಜೆಯ ಹೊತ್ತು ಕೆಲವೊಂದು ಮಾಡಬಾರದ ಕೆಲಸಗಳನ್ನು ಮಾಡಲು ಹೋಗಲೇಬಾರದು ಎಂದು ಶಾಸ್ತ್ರಗಳು ಹೇಳುತ್ತವೆ. ಇದರಿಂದ ನಿಮಗೆ ದೈಹಿಕ ಸಮಸ್ಯೆಗಳು ಆಗುವುದರ ಜೊತೆಗೆ, ಸಂಪತ್ತಿನ ನಷ್ಟವು ಸಹ ಆಗುತ್ತದೆಯಂತೆ. ಶಾಸ್ತ್ರಗಳ ಪ್ರಕಾರ ಸಂತೋಷಕರ ಮತ್ತು ಶಾಂತಿಯುತವಾದ ಜೀವನಕ್ಕಾಗಿ ಕೆಲವೊಂದು ನೀತಿ ನಿಯಮಗಳನ್ನು ಅನುಸರಿಸಬೇಕಾಗುತ್ತದೆ.
ಜೀವನದಲ್ಲಿ ಹಲವಾರು ಕಷ್ಟ ನಷ್ಟಗಳನ್ನು ಎದುರಿಸುವವರು, "ಮನು ಸಂಹಿತಾ"ದಲ್ಲಿರುವ ಈ ನೀತಿ ನಿಯಮಗಳನ್ನು ತಪ್ಪದೆ ಪಾಲಿಸಬೇಕಾಗುತ್ತದೆ. ಬನ್ನಿ ಮನು ಸಂಹಿತೆಯಲ್ಲಿ ಬರೆದಿರುವ ಆ ನಿಷಿದ್ಧ ಸಂಗತಿಗಳ ಕುರಿತು ತಿಳಿದುಕೊಂಡು ಬರೋಣ.
ವರಿ ಖಾಲು ಕಾರ್ಯಾನಿ ಸಂಧ್ಯಾಕಾಲೆ ವಿವರ್ಜಯೆತ್
ಆಹಾರಂ ಮೈಥುನಂ ನಿದ್ರಾಂ ಸ್ವದ್ಯಾಚ್ ಚತುರ್ಥಕಂ.

ಮೊದಲ ಕೆಲಸ
ಮನು ಸಂಹಿತೆಯ ಪ್ರಕಾರ ಸಂಜೆ ಆಹಾರವನ್ನು ಸೇವಿಸಬಾರದು. ಇದರಿಂದ ಗ್ಯಾಸ್, ಅಜೀರ್ಣತೆ, ಎದೆ ಉರಿ, ಹೊಟ್ಟೆ ಉರಿ, ಹೊಟ್ಟೆ ನೋವು ಮುಂತಾದ ಸಮಸ್ಯೆಗಳು ಬರುತ್ತವೆ. ರಾತ್ರಿಯಾಗುವವರೆಗು ಕಾದು ನಂತರ ಆಹಾರ ಸೇವಿಸಿ. ಒಂದು ವೇಳೆ ತುಂಬಾ ಹಸಿವಾಗಿದ್ದಲ್ಲಿ, ಹಣ್ಣು ಅಥವಾ ಹಣ್ಣಿನ ರಸವನ್ನು ಸೇವಿಸಿ.
ಎರಡನೇಯ ಕೆಲಸ
ಸಂಜೆ ಸಮಯದಲ್ಲಿ ಲೈಂಗಿಕ ಕ್ರಿಯೆಯಲ್ಲಿ ತೊಡಗಿಕೊಳ್ಳಬೇಡಿ. ಇದಕ್ಕೆ ರಾತ್ರಿಯ ಸಮಯ ಸೂಕ್ತವಾದ ಸಮಯ. ಸಂಜೆ ಮಿಲನದಲ್ಲಿ ತೊಡಗಿಕೊಂಡರೆ, ಗಂಡು ಮತ್ತು ಹೆಣ್ಣು ಇಬ್ಬರ ಆರೋಗ್ಯಕ್ಕೆ ತೊಂದರೆಯಾಗುವ ಸಾಧ್ಯತೆ ಇರುತ್ತದೆಯಂತೆ.
ಜನರ ನಂಬಿಕೆಯ ಪ್ರಕಾರ ಲಕ್ಷ್ಮೀದೇವಿಯು ಸಂಜೆಯ ಸಮಯದಲ್ಲಿ ಭೂಲೋಕವನ್ನು ಸುತ್ತುತ್ತಿರುತ್ತಾಳಂತೆ ಮತ್ತು ನೀವು ಈ ಕಾರ್ಯದಲ್ಲಿ ತೊಡಗಿಕೊಂಡಿರುವುದನ್ನು ನೋಡಿದರೆ ಆಕೆ ಅಲ್ಲಿಂದ ತನ್ನ ನೋಟವನ್ನು ಪಕ್ಕಕ್ಕೆ ಸರಿಸುತ್ತಾಳಂತೆ. ಇದರಿಂದ ನಿಮಗೆ ಆರ್ಥಿಕ ಸಮಸ್ಯೆಗಳು ತಲೆದೋರುತ್ತವೆ.
ಮೂರನೇಯ ಕೆಲಸ
ಸಂಜೆ ಹೊತ್ತು ಯಾರು ನಿದ್ದೆ ಮಾಡುತ್ತಾರೋ, ಅವರಿಗೆ ಇನ್ಸೋಮ್ನಿಯಾ ಬರುತ್ತದೆಯಂತೆ, ಜೊತೆಗೆ ನಿದ್ರೆಗೆ ಸಂಬಂಧಿಸಿದ ಸಮಸ್ಯೆಗಳು ಅವರನ್ನು ಕಾಡುತ್ತವೆ. ರಾತ್ರಿಯಲ್ಲಿ ಅವರಿಗೆ ನಿದ್ದೆ ಬರುವುದಿಲ್ಲವಂತೆ. ಜೊತೆಗೆ ಮರುದಿನ ಅವರಿಗೆ ಲವಲವಿಕೆ ಕಾಡುತ್ತದೆಯಂತೆ.
ನಾಲ್ಕನೇಯ ಕೆಲಸ
ಸಂಜೆಯ ಸಮಯದಲ್ಲಿ ಯಾರೂ ವೇದಗಳನ್ನು ಓದಬಾರದಂತೆ. ವೇದಗಳನ್ನು ಓದಲು ಬೆಳಗಿನ ಸಮಯ ಪ್ರಶಸ್ತವಾಗಿರುತ್ತದೆಯಂತೆ. ಅದರಲ್ಲೂ ಸೂರ್ಯೋದಯಕ್ಕೆ ಮೊದಲು ಇದನ್ನು ಓದಬೇಕಂತೆ.



Click it and Unblock the Notifications