Latest Updates
-
ಮಳೆಗಾಲದಲ್ಲಿ ಹಿರಿಯರು ಜಾರಿ ಬೀಳುವ ಆತಂಕವೇ? ಸುರಕ್ಷಿತವಾಗಿರಲು ಈ 12 ನಿಮಿಷಗಳ ಚೇರ್-ಯೋಗ ಟ್ರೈ ಮಾಡಿ! -
ಹಿರಿಯರ ಆರೋಗ್ಯಕ್ಕೆ ದಿನಕ್ಕೆ 12 ನಿಮಿಷದ 'ಚೇರ್ ಯೋಗ': ಚೈತನ್ಯ ಮತ್ತು ಸಮತೋಲನಕ್ಕೆ ಇದುವೇ ಮಂತ್ರ! -
ಫ್ಯಾಮಿಲಿ ವಾಟ್ಸಾಪ್ ಗ್ರೂಪ್ನಲ್ಲಿ ರಾಜಕೀಯ ಜಗಳವೇ? ಈ ಟಿಪ್ಸ್ ಪಾಲಿಸಿ, ಸಂಬಂಧ ಉಳಿಸಿಕೊಳ್ಳಿ! -
ಓಣಂ ಹಬ್ಬದ ಸಂಭ್ರಮ: ಹೂವಿನ ಬೆಲೆ ಏರಿಕೆ ನಡುವೆ ಕಡಿಮೆ ದರದಲ್ಲಿ ಖರೀದಿಸಲು ಇಲ್ಲಿವೆ ಟಿಪ್ಸ್! -
ಸಸ್ಯಜನ್ಯ ಹಾಲು: ತೂಕ ಇಳಿಕೆ ಮತ್ತು ಮಧುಮೇಹ ನಿಯಂತ್ರಣಕ್ಕೆ ಇದುವೇ ಬೆಸ್ಟ್ ಪರ್ಯಾಯ! -
ಸಕ್ಕರೆ ಬೆಲೆ ಏರಿಕೆ ಬಿಸಿ: ಹಬ್ಬದ ಸಿಹಿ ಬಜೆಟ್ ಉಳಿಸಲು ಇಲ್ಲಿದೆ 300 ರೂಪಾಯಿಯ ಸ್ಮಾರ್ಟ್ ಟಿಪ್ಸ್ -
ವರಮಹಾಲಕ್ಷ್ಮೀ ವ್ರತದ ಶಾಸ್ತ್ರೋಕ್ತ ವಿಧಾನ ಮತ್ತು ಪೂಜಾ ನಿಯಮಗಳು -
ವರಮಹಾಲಕ್ಷ್ಮೀ ಹಬ್ಬದ ಸಂಭ್ರಮಕ್ಕೆ ಬೆಲೆ ಏರಿಕೆಯ ಬಿಸಿ: ಕೆ.ಆರ್. ಮಾರುಕಟ್ಟೆಯಲ್ಲಿ ಗಗನಕ್ಕೇರಿದ ಹೂವು-ಹಣ್ಣುಗಳ ದರ -
BWF ವಿಶ್ವ ಚಾಂಪಿಯನ್ಷಿಪ್: ದೆಹಲಿಯಲ್ಲಿ ಭಾರತೀಯ ಆಟಗಾರರ ಅಬ್ಬರ, ಅಭಿಮಾನಿಗಳಿಗೆ ಇಲ್ಲಿದೆ ವಿಶೇಷ ಗೇಮ್ ಪ್ಲಾನ್! -
ವರಮಹಾಲಕ್ಷ್ಮಿ ಹಬ್ಬದ ದಿನಾಂಕದ ಗೊಂದಲ: ಆಗಸ್ಟ್ 21 ಅಥವಾ 28? ಇಲ್ಲಿದೆ ಸ್ಪಷ್ಟ ಮಾಹಿತಿ!
ಕಷ್ಟ ನಷ್ಟಗಳಿಂದ ಮುಕ್ತಿಪಡೆಯಲು ಸಂಧ್ಯಾಕಾಲದ ನಾಲ್ಕು ಸೂತ್ರ
ಸಂಜೆಯ ಹೊತ್ತು ಕೆಲವೊಂದು ಮಾಡಬಾರದ ಕೆಲಸಗಳನ್ನು ಮಾಡಲು ಹೋಗಲೇಬಾರದು ಎಂದು ಶಾಸ್ತ್ರಗಳು ಹೇಳುತ್ತವೆ. ಇದರಿಂದ ನಿಮಗೆ ದೈಹಿಕ ಸಮಸ್ಯೆಗಳು ಆಗುವುದರ ಜೊತೆಗೆ, ಸಂಪತ್ತಿನ ನಷ್ಟವು ಸಹ ಆಗುತ್ತದೆಯಂತೆ. ಶಾಸ್ತ್ರಗಳ ಪ್ರಕಾರ ಸಂತೋಷಕರ ಮತ್ತು ಶಾಂತಿಯುತವಾದ ಜೀವನಕ್ಕಾಗಿ ಕೆಲವೊಂದು ನೀತಿ ನಿಯಮಗಳನ್ನು ಅನುಸರಿಸಬೇಕಾಗುತ್ತದೆ.
ಜೀವನದಲ್ಲಿ ಹಲವಾರು ಕಷ್ಟ ನಷ್ಟಗಳನ್ನು ಎದುರಿಸುವವರು, "ಮನು ಸಂಹಿತಾ"ದಲ್ಲಿರುವ ಈ ನೀತಿ ನಿಯಮಗಳನ್ನು ತಪ್ಪದೆ ಪಾಲಿಸಬೇಕಾಗುತ್ತದೆ. ಬನ್ನಿ ಮನು ಸಂಹಿತೆಯಲ್ಲಿ ಬರೆದಿರುವ ಆ ನಿಷಿದ್ಧ ಸಂಗತಿಗಳ ಕುರಿತು ತಿಳಿದುಕೊಂಡು ಬರೋಣ.
ವರಿ ಖಾಲು ಕಾರ್ಯಾನಿ ಸಂಧ್ಯಾಕಾಲೆ ವಿವರ್ಜಯೆತ್
ಆಹಾರಂ ಮೈಥುನಂ ನಿದ್ರಾಂ ಸ್ವದ್ಯಾಚ್ ಚತುರ್ಥಕಂ.

ಮೊದಲ ಕೆಲಸ
ಮನು ಸಂಹಿತೆಯ ಪ್ರಕಾರ ಸಂಜೆ ಆಹಾರವನ್ನು ಸೇವಿಸಬಾರದು. ಇದರಿಂದ ಗ್ಯಾಸ್, ಅಜೀರ್ಣತೆ, ಎದೆ ಉರಿ, ಹೊಟ್ಟೆ ಉರಿ, ಹೊಟ್ಟೆ ನೋವು ಮುಂತಾದ ಸಮಸ್ಯೆಗಳು ಬರುತ್ತವೆ. ರಾತ್ರಿಯಾಗುವವರೆಗು ಕಾದು ನಂತರ ಆಹಾರ ಸೇವಿಸಿ. ಒಂದು ವೇಳೆ ತುಂಬಾ ಹಸಿವಾಗಿದ್ದಲ್ಲಿ, ಹಣ್ಣು ಅಥವಾ ಹಣ್ಣಿನ ರಸವನ್ನು ಸೇವಿಸಿ.
ಎರಡನೇಯ ಕೆಲಸ
ಸಂಜೆ ಸಮಯದಲ್ಲಿ ಲೈಂಗಿಕ ಕ್ರಿಯೆಯಲ್ಲಿ ತೊಡಗಿಕೊಳ್ಳಬೇಡಿ. ಇದಕ್ಕೆ ರಾತ್ರಿಯ ಸಮಯ ಸೂಕ್ತವಾದ ಸಮಯ. ಸಂಜೆ ಮಿಲನದಲ್ಲಿ ತೊಡಗಿಕೊಂಡರೆ, ಗಂಡು ಮತ್ತು ಹೆಣ್ಣು ಇಬ್ಬರ ಆರೋಗ್ಯಕ್ಕೆ ತೊಂದರೆಯಾಗುವ ಸಾಧ್ಯತೆ ಇರುತ್ತದೆಯಂತೆ.
ಜನರ ನಂಬಿಕೆಯ ಪ್ರಕಾರ ಲಕ್ಷ್ಮೀದೇವಿಯು ಸಂಜೆಯ ಸಮಯದಲ್ಲಿ ಭೂಲೋಕವನ್ನು ಸುತ್ತುತ್ತಿರುತ್ತಾಳಂತೆ ಮತ್ತು ನೀವು ಈ ಕಾರ್ಯದಲ್ಲಿ ತೊಡಗಿಕೊಂಡಿರುವುದನ್ನು ನೋಡಿದರೆ ಆಕೆ ಅಲ್ಲಿಂದ ತನ್ನ ನೋಟವನ್ನು ಪಕ್ಕಕ್ಕೆ ಸರಿಸುತ್ತಾಳಂತೆ. ಇದರಿಂದ ನಿಮಗೆ ಆರ್ಥಿಕ ಸಮಸ್ಯೆಗಳು ತಲೆದೋರುತ್ತವೆ.
ಮೂರನೇಯ ಕೆಲಸ
ಸಂಜೆ ಹೊತ್ತು ಯಾರು ನಿದ್ದೆ ಮಾಡುತ್ತಾರೋ, ಅವರಿಗೆ ಇನ್ಸೋಮ್ನಿಯಾ ಬರುತ್ತದೆಯಂತೆ, ಜೊತೆಗೆ ನಿದ್ರೆಗೆ ಸಂಬಂಧಿಸಿದ ಸಮಸ್ಯೆಗಳು ಅವರನ್ನು ಕಾಡುತ್ತವೆ. ರಾತ್ರಿಯಲ್ಲಿ ಅವರಿಗೆ ನಿದ್ದೆ ಬರುವುದಿಲ್ಲವಂತೆ. ಜೊತೆಗೆ ಮರುದಿನ ಅವರಿಗೆ ಲವಲವಿಕೆ ಕಾಡುತ್ತದೆಯಂತೆ.
ನಾಲ್ಕನೇಯ ಕೆಲಸ
ಸಂಜೆಯ ಸಮಯದಲ್ಲಿ ಯಾರೂ ವೇದಗಳನ್ನು ಓದಬಾರದಂತೆ. ವೇದಗಳನ್ನು ಓದಲು ಬೆಳಗಿನ ಸಮಯ ಪ್ರಶಸ್ತವಾಗಿರುತ್ತದೆಯಂತೆ. ಅದರಲ್ಲೂ ಸೂರ್ಯೋದಯಕ್ಕೆ ಮೊದಲು ಇದನ್ನು ಓದಬೇಕಂತೆ.



Click it and Unblock the Notifications