Latest Updates
-
ಪ್ರೈಡ್ ಮಂತ್ 2026: ಮನೆಯವರ ಮುಂದೆ ನಿಮ್ಮ ನಿಜವಾದ ವ್ಯಕ್ತಿತ್ವವನ್ನು ಹೇಳಿಕೊಳ್ಳಲು ಹೆದರುತ್ತಿದ್ದೀರಾ? ಈ ಸಲಹೆಗಳು ನಿಮಗಾಗಿ! -
ಮಳೆಗಾಲದ ಮೊದಲ ಮಳೆ ಬಂತು: ನಿಮ್ಮ ಮನೆಯನ್ನು ದುಬಾರಿ ರಿಪೇರಿಯಿಂದ ರಕ್ಷಿಸಲು ಈ ಸಣ್ಣ ಕೆಲಸಗಳನ್ನು ಇಂದೇ ಮಾಡಿ! -
ಮಳೆಗಾಲದಲ್ಲಿ ಪದೇ ಪದೇ ಕಾಯಿಲೆ ಬೀಳ್ತಿದ್ದೀರಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ, ವೈರಲ್ ಜ್ವರದಿಂದ ದೂರವಿರಿ! -
ಆರ್ಸಿಬಿ ಗೆಲುವಿನ ಅಬ್ಬರ: ಬೆಂಗಳೂರಿನಲ್ಲಿ ವಿರಾಟ್-ಅನುಷ್ಕಾ ಸಂಭ್ರಮದ ವಿಡಿಯೋ ವೈರಲ್, ನೀವು ನೋಡಲೇಬೇಕಾದ ದೃಶ್ಯಗಳಿವು! -
ಮಳೆಗಾಲದಲ್ಲಿ ವ್ಯಾಯಾಮ ಮಾಡ್ತೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ! -
ಪ್ರೈಡ್ ಮಂತ್ 2026: ಕ್ವೀರ್ ಜೋಡಿಗಳ ಭವಿಷ್ಯ ಭದ್ರಪಡಿಸಲು ಮತ್ತು ಕುಟುಂಬದ ಮನವೊಲಿಸಲು ಇಲ್ಲಿದೆ ವಿಶೇಷ ಮಾರ್ಗದರ್ಶಿ! -
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ: ದುಬಾರಿ ರಿಪೇರಿ ತಪ್ಪಿಸಲು ಇಲ್ಲಿವೆ ಸರಳ ಟಿಪ್ಸ್! -
ಬಿಸಿಲು-ಮಳೆಯ ಆಟದಲ್ಲಿ ಸುಸ್ತಾಗಿದ್ದೀರಾ? ಆರೋಗ್ಯ ಕಾಪಾಡಿಕೊಳ್ಳಲು ಈ ಸರಳ ಆಹಾರ ಕ್ರಮಗಳನ್ನು ಮಿಸ್ ಮಾಡಬೇಡಿ! -
ದಿಢೀರ್ ಮಳೆಗೆ ರೆಡಿಯಾಗಿದ್ದೀರಾ? ಸ್ಟೈಲಿಶ್ ಆಗಿ ಕಾಣಲು ಮತ್ತು ಮಳೆಯಿಂದ ಪಾರಾಗಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಹವಾಮಾನ ಬದಲಾಗಿದೆ, ನಿಮ್ಮ ವರ್ಕೌಟ್ ಪ್ಲಾನ್ ಬದಲಾಯಿಸಿದ್ದೀರಾ? ಇಲ್ಲದಿದ್ದರೆ ಈ ಎಚ್ಚರಿಕೆ ನಿಮಗಾಗಿ!
ಮುಸ್ಸಂಜೆಯ ವೇಳೆ ಈ ಕೆಲಸಗಳನ್ನು ಮಾಡಬೇಡಿ... ಕಷ್ಟಗಳು ಬರುವುದು!
ಅದೃಷ್ಟ ದೇವತೆಗಳಾದ ಅಷ್ಟ ಲಕ್ಷ್ಮಿಗಳು ಮನೆಯಲ್ಲಿರಬೇಕಾದರೆ ನಮ್ಮ ಆಚಾರ-ವಿಚಾರಗಳು ಸರಿಯಿರಬೇಕು. ನಿತ್ಯವೂ ಕೆಟ್ಟ ಶಬ್ದಗಳ ಬೈಗುಳ, ಹೊತ್ತಲ್ಲದ ಹೊತ್ತಲ್ಲಿ ಮಾಡುವ ಕೆಲಸಗಳಿಂದ ನಮ್ಮ ಸಂಪತ್ತು ಕರಗುತ್ತದೆ. ಹಿಂದೂ ಧರ್ಮಗ್ರಂಥದ ಪ್ರಕಾರ ಜೀವನದಲ್ಲಿ ಆರೋಗ್ಯ ಮತ್ತು ಸಂತೋಷದ ಜೀವನ ನಡೆಸಲು ಕೆಲವು ನಿಯಮಗಳನ್ನು ಅನುಸರಿಸಬೇಕು.
ಅದರಲ್ಲೂ ಸಾಯಂಕಾಲ ಅಥವಾ ಸೂರ್ಯಾಸ್ತದ ಸಮಯದಲ್ಲಿ ಕೆಲ ಕೆಲಸಗಳನ್ನು ಮಾಡಬಾರದು. ಸಾಯಂಕಾಲದ ಹೊತ್ತು ಸಲ್ಲದ ಕೆಲಸ ಮಾಡಿದರೆ ಸಾಯುವವರೆಗೂ ಬಡತನ ಮತ್ತು ದುಃಖ ನಮ್ಮನ್ನು ಕಾಡುತ್ತದೆ ಎಂದು ಹೇಳಲಾಗುತ್ತದೆ.
"ವರಿ ಖಾಲು ಕಾರ್ಯಾಣಿ ಸಂಧ್ಯಾಕಾಲೇ ವಿವಾರ್ಜಯೆತ್
ಆಹಾರಾಮ್ ಮೈಥುನಮ್ ನಿದ್ರಮ್ ಸದ್ವೈಚ್ ಚತುರ್ಥಕಮ್"
ಈ ಶ್ಲೋಕದ ಪ್ರಕಾರ ಕೆಲವು ಕೆಲಸವನ್ನು ಸಾಯಂಕಾಲದ ಹೊತ್ತು ಮಾಡಬಾರದು. ಅದರಿಂದ ನಮಗೆ ದಾರಿದ್ರ್ಯ ಉಂಟಾಗುತ್ತದೆ. ಅವು ಯಾವವು ಎನ್ನುವುದನ್ನು ಇಲ್ಲಿ ವಿವರಿಸಿದ್ದೇವೆ, ಮುಂದೆ ಓದಿ...

ಸಂಜೆಯ ಹೊತ್ತು ಗಲಾಟೆ ಮಾಡಿಕೊಳ್ಳಬೇಡಿ...
ಮುಸ್ಸಂಜೆಯ ಸಮಯದಲ್ಲಿ ಕೆಟ್ಟ ಶಬ್ದಗಳನ್ನು ಬಳಸಿ ಕಿತ್ತಾಡಬಾರದು. ಆ ವೇಳೆ ದೇವರ ಜಪ-ತಪಗಳು ನಡೆಯಬೇಕು. ಸಂಜೆ ಸಮಯದಲ್ಲಿ ಗಲಾಟೆ ನಡೆಯುತ್ತಿದ್ದರೆ ಆ ಮನೆಗೆ ದಾರಿದ್ರ್ಯ ಬರುವುದು.

ಸಂಜೆಯ ಹೊತ್ತು ಗಲಾಟೆ ಮಾಡಿಕೊಳ್ಳಬೇಡಿ...
ಸಂಜೆ ಸಮಯದಲ್ಲಿ ನೆಲವನ್ನು ತೊಳೆಯುವುದು ಅಥವಾ ಗುಡಿಸುವ ಕೆಲಸಕ್ಕೆ ಹೋಗಬಾರದು. ಇದರಿಂದ ಮನೆಯಲ್ಲಿ ಲಕ್ಷ್ಮಿ ನೆಲೆಸುವುದಿಲ್ಲ. ಕೆಲವರು ಇದನ್ನು ಮೂಢ ನಂಬಿಕೆ ಎನ್ನಬಹುದು. ಆದರೆ ಶಾಸ್ತ್ರದ ಪ್ರಕಾರ ಸಂಧ್ಯಾಕಾಲವು ಲಕ್ಷ್ಮಿ ಪೂಜೆಗೆ ಸೂಕ್ತ. ಆ ಸಮಯದಲ್ಲಿ ಮನೆಯನ್ನು ಸ್ವಚ್ಛಗೊಳಿಸುತ್ತಿದ್ದರೆ ಧನಾತ್ಮಕ ಶಕ್ತಿಯು ನಾಶವಾಗುವುದು ಎಂದು ಹೇಳಲಾಗಿದೆ.

ಸಂಜೆಯ ಹೊತ್ತು ಆದಷ್ಟು ಲಕ್ಷ್ಮಿಯ ಧ್ಯಾನಮಾಡಿ...
ಮುಸ್ಸಂಜೆಯ ಸಮಯದಲ್ಲಿ ಲೈಂಗಿಕ ಕೆಲಸದಲ್ಲಿ ತೊಡಗಬಾರದು. ಸಂಜೆಯ ಸಮಯದಲ್ಲಿ ಲಕ್ಷ್ಮಿಯು ಧರೆಗಿಳಿಯುತ್ತಾಳೆ. ಆ ಸಮಯದಲ್ಲಿ ಈ ಚಟುವಟಿಕೆಗಳು ನಡೆಯುತ್ತಿದ್ದರೆ ಲಕ್ಷ್ಮಿ ಮುನಿಸಿಕೊಳ್ಳುತ್ತಾಳೆ. ಇದರಿಂದ ಮನೆಯಲ್ಲಿ ಆರ್ಥಿಕ ಸಮಸ್ಯೆ ತಲೆದೂರುವುದು.

ಮುಸ್ಸಂಜೆಯ ಸಮಯದಲ್ಲಿ ಮಲಗಬಾರದು...
ಮುಸ್ಸಂಜೆಯ ಸಮಯದಲ್ಲಿ ಮಲಗಬಾರದು. ಮಲಗಿದರೆ ಮನಸ್ಸು ಮತ್ತು ನೆನಪಿನ ಶಕ್ತಿಯು ದುರ್ಬಲಗೊಳ್ಳುತ್ತದೆ. ಅಲ್ಲದೆ ಸ್ಥೂಲಕಾಯದಿಂದ ಆರೋಗ್ಯ ಸಮಸ್ಯೆಗೆ ಒಳಗಾಗಬೇಕಾಗುವುದು.

ಮುಸ್ಸಂಜೆಯ ಹೊತ್ತು ತುಳಸಿ ಎಲೆಗಳನ್ನು ಕೀಳಬೇಡಿ...
ಮುಸ್ಸಂಜೆಯ ಸಮಯದಲ್ಲಿ ತುಳಸಿ, ದೂರ್ವೆ ಮತ್ತು ಇನ್ನಿತರ ಸಸ್ಯಗಳ ಎಲೆಗಳನ್ನು ಕೀಳಬಾರದು. ಇದರಿಂದ ವ್ಯಕ್ತಿಯ ಮನೆಗೆ ಬಡತನ ಮತ್ತು ಶಾಪ ತಗುಲುವುದು. ಮುಸ್ಸಂಜೆಯ ನಂತರ ಎಲೆಗಳನ್ನು ಕಿತ್ತರೆ ಆ ಸಸ್ಯವನ್ನು ನಿರ್ಜೀವಗೊಳಿಸಿದಂತೆ ಎಂದು ವಿಜ್ಞಾನ ಹೇಳುತ್ತದೆ.



Click it and Unblock the Notifications