Latest Updates
-
ಅಂತರಾಷ್ಟ್ರೀಯ ಸ್ನೇಹ ದಿನ: ಗೆಳೆಯರೊಂದಿಗೆ 'ಬಡ್ಡಿ ವರ್ಕೌಟ್' ಮಾಡಿ ಆರೋಗ್ಯ ಮತ್ತು ಬಾಂಧವ್ಯ ಹೆಚ್ಚಿಸಿಕೊಳ್ಳಿ! -
ಐಟಿಆರ್ ಸಲ್ಲಿಕೆ ಗಡುವು ಹತ್ತಿರ: ದಂಪತಿಗಳು ಒಟ್ಟಾಗಿ ಕುಳಿತು ಈ ಕೆಲಸ ಮಾಡಿದರೆ ಟೆನ್ಷನ್ ಫ್ರೀ! -
ಬೆಂಗಳೂರಿಗರೇ ಗಮನಿಸಿ: ಇಂದು 6 ಗಂಟೆ ಪವರ್ ಕಟ್, ಈ ಮುನ್ನೆಚ್ಚರಿಕೆ ಮರೆಯದಿರಿ! -
ಶ್ರಾವಣ ಉಪವಾಸದಲ್ಲಿ ದಿನವಿಡೀ ಎನರ್ಜಿಯಿಂದ ಇರಬೇಕೆ? ಈ ಹೈ-ಪ್ರೋಟೀನ್ ಸಾತ್ವಿಕ ಆಹಾರ ಪದ್ಧತಿ ಫಾಲೋ ಮಾಡಿ! -
ಗುರು ಪೂರ್ಣಿಮೆ 2026: ಸರಳ ಪೂಜಾ ವಿಧಿ ಮತ್ತು ಕಡಿಮೆ ಬಜೆಟ್ನಲ್ಲಿ ಗುರುಗಳಿಗೆ ನೀಡಬಹುದಾದ ಬೆಸ್ಟ್ ಗಿಫ್ಟ್ ಐಡಿಯಾಗಳು! -
10 ನಿಮಿಷದ 'ಟೈಗರ್ ಫ್ಲೋ': ಬೆನ್ನುನೋವಿಗೆ ಮುಕ್ತಿ ನೀಡುವ ಅದ್ಭುತ ವ್ಯಾಯಾಮ ಇಲ್ಲಿದೆ! -
ಪ್ರತಿಭಟನೆಯಲ್ಲಿ ಪ್ರೀತಿ: 'ಪ್ರೊಟೆಸ್ಟ್ ನೇ ಬನಾ ದಿ ಜೋಡಿ' ಟ್ರೆಂಡ್ ಹಿಂದೆ ಅಡಗಿದೆ ದೊಡ್ಡ ಅಪಾಯ! -
ಮಳೆಗಾಲದಲ್ಲಿ ಮನೆಯಲ್ಲಿ ಬೂಷ್ಟು ಹರಡುತ್ತಿದೆಯೇ? ಈ 20 ನಿಮಿಷದ ಟಿಪ್ಸ್ ಪಾಲಿಸಿ, ಮನೆ ಫ್ರೆಶ್ ಆಗಿಡಿ! -
ಕೇವಲ 200 ರೂಪಾಯಿಯಲ್ಲಿ ಪರಿಸರ ಸ್ನೇಹಿ ಊಟ: ವಿಶ್ವ ಪ್ರಕೃತಿ ಸಂರಕ್ಷಣಾ ದಿನಕ್ಕೆ ನಿಮ್ಮ ಅಡುಗೆಮನೆಯೇ ಮೊದಲ ಹೆಜ್ಜೆ! -
CWG 2026: 6ನೇ ದಿನ ಭಾರತದ ಪದಕದ ಬೇಟೆ; ಮನೆಯಲ್ಲೇ ಕಮ್ಮಿ ಬಜೆಟ್ನಲ್ಲಿ ಅದ್ಭುತ ವಾಚ್ ಪಾರ್ಟಿ ಪ್ಲಾನ್!
ನ.15ಕ್ಕೆ ತುಳಸಿ ವಿವಾಹ: ಆರೋಗ್ಯ, ಮನೆಯವರ ಶ್ರೇಯಸ್ಸಿಗಾಗಿ ಈ ಪೂಜೆ ಶ್ರೇಷ್ಠ
ಕಾರ್ತಿಕ ಮಾಸ ಹಿಂದೂಗಳಿಗೆ ತುಂಬಾ ಪವಿತ್ರವಾದ ಮಾಸ. ಈ ಮಾಸದಲ್ಲಿ ಸಂಜೆ ದೀಪ ಬೆಳಗಿ ದೇವರನ್ನು ಪೂಜಿಸಲಾಗುವುದು. ಈ ಮಾಸ ಶಿವನಿಗೆ ಮುಡುಪಾಗಿರುವ ಮಾಸ . ಕಾರ್ತಿಕ ಮಾಸದ ಶುದ್ಧ ದ್ವಾದಶಿ ಭಕ್ತರಿಗೆ ಮತ್ತಷ್ಟು ವಿಶೇಷವಾದ ದಿನವಾಗಿದೆ. ಈ ದಿನ ತುಳಸಿ ಹಬ್ಬವನ್ನು ಆಚರಿಸಲಾಗುವುದು. ಇದನ್ನು ಉತ್ಥಾನ ದ್ವಾದಶಿ ಎಂತಲೂ ಕರೆಯುವರು. ಉತ್ಥಾನ ಎಂದರೆ ಏಳುವುದು ಎಂದರ್ಥ.

ಅಂದರೆ ಶ್ರೀಮನ್ನಾರಾಯಣನು ಪಾಲ್ಗಡಲಿನಲ್ಲಿ ತನ್ನ ಸುಖಶಯನದಿಂದ ಮೇಲೆದ್ದು ತನ್ನ ನಿದ್ರಾಮುದ್ರೆಯನ್ನು ಭಕ್ತರಿಗೆ ಸಾಕ್ಷಾತ್ಕರಿಸುವ ದಿನ.ಈ ದಿನ ಸಂಜೆಯ ಸಮಯದಲ್ಲಿ ತುಳಸಿ ವಿವಾಹ ಏರ್ಪಡುವುದು. ಚಾಂದ್ರಮಾನ ಕಾರ್ತಿಕಮಾಸದ ಶುಕ್ಲಪಕ್ಷದ 12ನೇ ದಿನ ಅಂದರೆ ದ್ವಾದಶಿಯಂದು ವಿಷ್ಣು ಸ್ವರೂಪಿ ನೆಲ್ಲಿಕಾಯಿ ಗಿಡದೊಂದಿಗೆ ತುಳಸಿಯ ವಿವಾಹವನ್ನು ಮಾಡಲಾಗುತ್ತದೆ. ಈ ವರ್ಷ ನವೆಂಬರ್15ರಂದು ತುಳಸಿ ವಿವಾಹ ಪೂಜೆ ಮಾಡಲಾಗುವುದು.

ತುಳಸಿ ವಿವಾಹದ ದಿನಾಂಕ ಮತ್ತು ಮುಹೂರ್ತ
ಪ್ರತಿ ವರ್ಷ ತುಳಸಿ ವಿವಾಹವನ್ನು ಕಾರ್ತಿಕ್ ತಿಂಗಳ ಶುಕ್ಲ ಪಕ್ಷದ ದ್ವಾದಶಿ ದಿನಾಂಕದಂದು ಮಾಡಲಾಗುತ್ತದೆ. ಈ ವರ್ಷ ಈ ಏಕಾದಶಿ ದಿನಾಂಕವು ನವೆಂಬರ್ 25 ರಂದು ಪ್ರಾರಂಭವಾಗಿ 26 ರಂದು ಕೊನೆಗೊಳ್ಳುತ್ತದೆ. ತುಳಸಿ ಮದುವೆ ದ್ವಾದಶಿಯಂದು ಅಂದರೆ ನವೆಂಬರ್ 26 ರಂದು ನಡೆಯಲಿದೆ.
ತುಳಸಿ ವಿವಾಹಕ್ಕೆ ಶುಭ ಮುಹೂರ್ತ
ದ್ವಾದಶಿ ತಿಥಿ ಪ್ರಾರಂಭ: ನವೆಂಬರ್ 29, ಬೆಳಗ್ಗೆ 5:10ರಿಂದ
ದ್ವಾದಶಿ ತಿಥಿ ಮುಕ್ತಾಯ: ನವೆಂಬರ್ 27 ಬೆಳಗ್ಗೆ 7:46ಕ್ಕೆ

ತುಳಸಿ ವಿವಾಹದ ಪೂಜಾ ವಿಧಿ
ಹೆಂಗಳೆಯರು ತುಳಸಿ ಗಿಡವನ್ನು ಮದುವಣಗಿತ್ತಿಯಂತೆ ಸಿಂಗರಿಸುತ್ತಾರೆ. ವಿಷ್ಣುವಿನ ಅಥವಾ ಅವನ ಅವತಾರವಾದ ಕೃಷ್ಣ, ರಾಮನ ಫೋಟೋವನ್ನು ಇಲ್ಲವೇ ಸಾಲಿಗ್ರಾಮ ಕಲ್ಲು, ಇಲ್ಲವೇ ನೆಲ್ಲಿಕಾಯಿ ಗಿಡವನ್ನು ತುಳಸಿ ಗಿಡದ ಪಕ್ಕ ಇಟ್ಟು ಇಬ್ಬರನ್ನೂ ಸ್ನಾನ ಮಾಡಿಸಿ ಶುಭ್ರ ಬಟ್ಟೆ ತೊಡಿಸಿ ಹೂವು, ಹಣ್ಣುಗಳಿಂದ ಅಲಂಕರಿಸುತ್ತಾರೆ. ವಿಷ್ಣುವಿನ ಭಾವಚಿತ್ರ ಹಾಗೂ ತುಳಸಿ ಗಿಡಕ್ಕೆ ಹತ್ತಿಯಿಂದ ತಯಾರಿಸಿದ ಮಾಲೆಯನ್ನು ತೊಡಿಸಿ ಮದುವೆಯ ಶಾಸ್ತ್ರ ಮಾಡಲಾಗುತ್ತದೆ. ಹಿಂದೂ ವಿವಾಹ ಪದ್ಧತಿಯಲ್ಲಿ ನಡೆಯುವ ಆಚರಣೆಯಂತೆಯೇ ವಿಷ್ಣು-ತುಳಸಿ ವಿವಾಹವನ್ನು ಭಕ್ತರು ಆಚರಿಸುತ್ತಾರೆ.

ತುಳಸಿ ವಿವಾಹದಂದು ಪಾಲಿಸುವ ಕ್ರಮಗಳು
ತುಳಸಿ ವಿವಾಹ ಆಚರಣೆ ಮಾಡುವವರು ಉಪವಾಸವರಬೇಕು. ಮನೆ ಮುಂದೆ ಇರುವ ತುಳಸಿ ಗಿಡದ ಸುತ್ತ ಮದುವೆ ಮಂಟಪ ನಿರ್ಮಿಸಿ ಅದಕ್ಕೆ ಅಲಂಕರಿಸಿರುತ್ತಾರೆ, ಈ ಮಂಟಪಕ್ಕೆ ಬೃಂದಾವನವೆಂದು ಹೆಸರು. ಈ ಮಂಟಪದಲ್ಲಿ ವೃಂದಾಳ ಆತ್ಮವಿದ್ದು ಮರುದಿನ ಬೆಳಗ್ಗೆ ಹೊರಟು ಹೋಗುತ್ತದೆ ಎಂಬ ನಂಬಿಕೆಯಿದೆ. ತುಳಸಿ ವಿವಾಹ ನೋಡಲು ಬಂದವರು ತುಳಸಿ ಹಾಗೂ ವಿಷ್ಣು ಫೋಟೋ ಅಥವಾ ನೆಲ್ಲಿಕಾಯಿ ಗಿಡವನ್ನು ಅಲಂಕಾರ ಮಾಡಿ ಪೂಜಿಸಿದ ಮಹಿಳೆಯರಿಗೆ ಉಡುಗೊರೆಗಳನ್ನು ನೀಡಬೇಕು.
ತುಳಸಿ ವಿವಾಹ ಹಬ್ಬದಲ್ಲಿ ಸಿಹಿತಿಂಡಿ, ಜ್ಯೂಸ್, ಹಬ್ಬದ ಅಡುಗೆಯನ್ನು ಮಾಡಿ ಬಂದವರಿಗೆ ನೀಡಲಾಗುವುದು.

ತುಳಸಿ ವಿವಾಹ ಮಾಡುವುದರಿಂದ ದೊರೆಯುವ ಪ್ರಯೋಜನಗಳು
* ಮನೆಯಲ್ಲಿ ಮಕ್ಕಳ ಮದುವೆಗೆ ಇರುವ ಅಡೆತಡೆಗಳು ದೂರವಾಗುತ್ತದೆ
* ಮನೆಗೆ ಐಶ್ಚರ್ಯ ಲಭಿಸುತ್ತದೆ
* ಮನೆ ಮಂದಿಗೆ ಸಂತೋಷ ಉಂಟು ಮಾಡುವುದು.
* ಮನೆಯವರ ಶ್ರೇಯಸ್ಸಿಗಾಗಿ ಈ ಪೂಜೆ ಮಾಡಲಾಗುವುದು
* ಮಕ್ಕಳ ಭಾಗ್ಯ ಲಭಿಸುವುದು.
* ಕನ್ಯಾದಾನ ಮಾಡುವ ಭಾಗ್ಯ ದೊರೆಯುವುದು



Click it and Unblock the Notifications