Latest Updates
-
ಕಂಟೆಂಟ್ ಕ್ರಿಯೇಟರ್ಗಳೇ ಗಮನಿಸಿ: ಫೋಟೊ ಶೂಟ್ ವೇಳೆ ನೋವು ಮರೆಯಾಗಲು ಈ 12 ನಿಮಿಷದ ವರ್ಕೌಟ್ ಸಾಕು! -
ಫೋಟೋಗ್ರಾಫರ್ಗಳೇ ಎಚ್ಚರ! ನೋವಿಲ್ಲದೆ ಅದ್ಭುತ ಫೋಟೋ ಕ್ಲಿಕ್ಕಿಸಲು ಈ 7 ನಿಮಿಷದ ಮೊಬಿಲಿಟಿ ರಿಸೆಟ್ ಟ್ರೈ ಮಾಡಿ -
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್! -
ವಿಶ್ವ ಛಾಯಾಗ್ರಹಣ ದಿನ: ಮನೆಯಲ್ಲೇ ಫೋಟೋ ಸ್ಟುಡಿಯೋ ಮಾಡಿ, ನಿಮ್ಮ ಗಿಡಗಳ ಫೋಟೋ ವೈರಲ್ ಆಗುವಂತೆ ಕ್ಲಿಕ್ ಮಾಡಿ! -
98% ಅಂಕ ಪಡೆದರೂ ಅಂಗಡಿ ಬಂದ್: FDAಗೆ ಹೈಕೋರ್ಟ್ ತರಾಟೆ, ಕಲಬೆರಕೆ ಸಿಹಿ ಪತ್ತೆಹಚ್ಚುವುದು ಹೇಗೆ? -
BWF ವಿಶ್ವ ಚಾಂಪಿಯನ್ಷಿಪ್ 2026: ಲಕ್ಷ್ಯ ಸೇನ್ ಅಬ್ಬರಕ್ಕೆ ದೆಹಲಿ ಸಜ್ಜು, ಲೈವ್ ಮಿಸ್ ಮಾಡ್ಬೇಡಿ! -
ವಿಶ್ವ ಹಿರಿಯ ನಾಗರಿಕರ ದಿನ: ಪೋಷಕರ ಆರೋಗ್ಯ ಮತ್ತು ಸಮತೋಲನ ಹೆಚ್ಚಿಸುವ ಸರಳ ಬೆಳಗಿನ ವ್ಯಾಯಾಮಗಳು
ನ.15ಕ್ಕೆ ತುಳಸಿ ವಿವಾಹ: ಆರೋಗ್ಯ, ಮನೆಯವರ ಶ್ರೇಯಸ್ಸಿಗಾಗಿ ಈ ಪೂಜೆ ಶ್ರೇಷ್ಠ
ಕಾರ್ತಿಕ ಮಾಸ ಹಿಂದೂಗಳಿಗೆ ತುಂಬಾ ಪವಿತ್ರವಾದ ಮಾಸ. ಈ ಮಾಸದಲ್ಲಿ ಸಂಜೆ ದೀಪ ಬೆಳಗಿ ದೇವರನ್ನು ಪೂಜಿಸಲಾಗುವುದು. ಈ ಮಾಸ ಶಿವನಿಗೆ ಮುಡುಪಾಗಿರುವ ಮಾಸ . ಕಾರ್ತಿಕ ಮಾಸದ ಶುದ್ಧ ದ್ವಾದಶಿ ಭಕ್ತರಿಗೆ ಮತ್ತಷ್ಟು ವಿಶೇಷವಾದ ದಿನವಾಗಿದೆ. ಈ ದಿನ ತುಳಸಿ ಹಬ್ಬವನ್ನು ಆಚರಿಸಲಾಗುವುದು. ಇದನ್ನು ಉತ್ಥಾನ ದ್ವಾದಶಿ ಎಂತಲೂ ಕರೆಯುವರು. ಉತ್ಥಾನ ಎಂದರೆ ಏಳುವುದು ಎಂದರ್ಥ.

ಅಂದರೆ ಶ್ರೀಮನ್ನಾರಾಯಣನು ಪಾಲ್ಗಡಲಿನಲ್ಲಿ ತನ್ನ ಸುಖಶಯನದಿಂದ ಮೇಲೆದ್ದು ತನ್ನ ನಿದ್ರಾಮುದ್ರೆಯನ್ನು ಭಕ್ತರಿಗೆ ಸಾಕ್ಷಾತ್ಕರಿಸುವ ದಿನ.ಈ ದಿನ ಸಂಜೆಯ ಸಮಯದಲ್ಲಿ ತುಳಸಿ ವಿವಾಹ ಏರ್ಪಡುವುದು. ಚಾಂದ್ರಮಾನ ಕಾರ್ತಿಕಮಾಸದ ಶುಕ್ಲಪಕ್ಷದ 12ನೇ ದಿನ ಅಂದರೆ ದ್ವಾದಶಿಯಂದು ವಿಷ್ಣು ಸ್ವರೂಪಿ ನೆಲ್ಲಿಕಾಯಿ ಗಿಡದೊಂದಿಗೆ ತುಳಸಿಯ ವಿವಾಹವನ್ನು ಮಾಡಲಾಗುತ್ತದೆ. ಈ ವರ್ಷ ನವೆಂಬರ್15ರಂದು ತುಳಸಿ ವಿವಾಹ ಪೂಜೆ ಮಾಡಲಾಗುವುದು.

ತುಳಸಿ ವಿವಾಹದ ದಿನಾಂಕ ಮತ್ತು ಮುಹೂರ್ತ
ಪ್ರತಿ ವರ್ಷ ತುಳಸಿ ವಿವಾಹವನ್ನು ಕಾರ್ತಿಕ್ ತಿಂಗಳ ಶುಕ್ಲ ಪಕ್ಷದ ದ್ವಾದಶಿ ದಿನಾಂಕದಂದು ಮಾಡಲಾಗುತ್ತದೆ. ಈ ವರ್ಷ ಈ ಏಕಾದಶಿ ದಿನಾಂಕವು ನವೆಂಬರ್ 25 ರಂದು ಪ್ರಾರಂಭವಾಗಿ 26 ರಂದು ಕೊನೆಗೊಳ್ಳುತ್ತದೆ. ತುಳಸಿ ಮದುವೆ ದ್ವಾದಶಿಯಂದು ಅಂದರೆ ನವೆಂಬರ್ 26 ರಂದು ನಡೆಯಲಿದೆ.
ತುಳಸಿ ವಿವಾಹಕ್ಕೆ ಶುಭ ಮುಹೂರ್ತ
ದ್ವಾದಶಿ ತಿಥಿ ಪ್ರಾರಂಭ: ನವೆಂಬರ್ 29, ಬೆಳಗ್ಗೆ 5:10ರಿಂದ
ದ್ವಾದಶಿ ತಿಥಿ ಮುಕ್ತಾಯ: ನವೆಂಬರ್ 27 ಬೆಳಗ್ಗೆ 7:46ಕ್ಕೆ

ತುಳಸಿ ವಿವಾಹದ ಪೂಜಾ ವಿಧಿ
ಹೆಂಗಳೆಯರು ತುಳಸಿ ಗಿಡವನ್ನು ಮದುವಣಗಿತ್ತಿಯಂತೆ ಸಿಂಗರಿಸುತ್ತಾರೆ. ವಿಷ್ಣುವಿನ ಅಥವಾ ಅವನ ಅವತಾರವಾದ ಕೃಷ್ಣ, ರಾಮನ ಫೋಟೋವನ್ನು ಇಲ್ಲವೇ ಸಾಲಿಗ್ರಾಮ ಕಲ್ಲು, ಇಲ್ಲವೇ ನೆಲ್ಲಿಕಾಯಿ ಗಿಡವನ್ನು ತುಳಸಿ ಗಿಡದ ಪಕ್ಕ ಇಟ್ಟು ಇಬ್ಬರನ್ನೂ ಸ್ನಾನ ಮಾಡಿಸಿ ಶುಭ್ರ ಬಟ್ಟೆ ತೊಡಿಸಿ ಹೂವು, ಹಣ್ಣುಗಳಿಂದ ಅಲಂಕರಿಸುತ್ತಾರೆ. ವಿಷ್ಣುವಿನ ಭಾವಚಿತ್ರ ಹಾಗೂ ತುಳಸಿ ಗಿಡಕ್ಕೆ ಹತ್ತಿಯಿಂದ ತಯಾರಿಸಿದ ಮಾಲೆಯನ್ನು ತೊಡಿಸಿ ಮದುವೆಯ ಶಾಸ್ತ್ರ ಮಾಡಲಾಗುತ್ತದೆ. ಹಿಂದೂ ವಿವಾಹ ಪದ್ಧತಿಯಲ್ಲಿ ನಡೆಯುವ ಆಚರಣೆಯಂತೆಯೇ ವಿಷ್ಣು-ತುಳಸಿ ವಿವಾಹವನ್ನು ಭಕ್ತರು ಆಚರಿಸುತ್ತಾರೆ.

ತುಳಸಿ ವಿವಾಹದಂದು ಪಾಲಿಸುವ ಕ್ರಮಗಳು
ತುಳಸಿ ವಿವಾಹ ಆಚರಣೆ ಮಾಡುವವರು ಉಪವಾಸವರಬೇಕು. ಮನೆ ಮುಂದೆ ಇರುವ ತುಳಸಿ ಗಿಡದ ಸುತ್ತ ಮದುವೆ ಮಂಟಪ ನಿರ್ಮಿಸಿ ಅದಕ್ಕೆ ಅಲಂಕರಿಸಿರುತ್ತಾರೆ, ಈ ಮಂಟಪಕ್ಕೆ ಬೃಂದಾವನವೆಂದು ಹೆಸರು. ಈ ಮಂಟಪದಲ್ಲಿ ವೃಂದಾಳ ಆತ್ಮವಿದ್ದು ಮರುದಿನ ಬೆಳಗ್ಗೆ ಹೊರಟು ಹೋಗುತ್ತದೆ ಎಂಬ ನಂಬಿಕೆಯಿದೆ. ತುಳಸಿ ವಿವಾಹ ನೋಡಲು ಬಂದವರು ತುಳಸಿ ಹಾಗೂ ವಿಷ್ಣು ಫೋಟೋ ಅಥವಾ ನೆಲ್ಲಿಕಾಯಿ ಗಿಡವನ್ನು ಅಲಂಕಾರ ಮಾಡಿ ಪೂಜಿಸಿದ ಮಹಿಳೆಯರಿಗೆ ಉಡುಗೊರೆಗಳನ್ನು ನೀಡಬೇಕು.
ತುಳಸಿ ವಿವಾಹ ಹಬ್ಬದಲ್ಲಿ ಸಿಹಿತಿಂಡಿ, ಜ್ಯೂಸ್, ಹಬ್ಬದ ಅಡುಗೆಯನ್ನು ಮಾಡಿ ಬಂದವರಿಗೆ ನೀಡಲಾಗುವುದು.

ತುಳಸಿ ವಿವಾಹ ಮಾಡುವುದರಿಂದ ದೊರೆಯುವ ಪ್ರಯೋಜನಗಳು
* ಮನೆಯಲ್ಲಿ ಮಕ್ಕಳ ಮದುವೆಗೆ ಇರುವ ಅಡೆತಡೆಗಳು ದೂರವಾಗುತ್ತದೆ
* ಮನೆಗೆ ಐಶ್ಚರ್ಯ ಲಭಿಸುತ್ತದೆ
* ಮನೆ ಮಂದಿಗೆ ಸಂತೋಷ ಉಂಟು ಮಾಡುವುದು.
* ಮನೆಯವರ ಶ್ರೇಯಸ್ಸಿಗಾಗಿ ಈ ಪೂಜೆ ಮಾಡಲಾಗುವುದು
* ಮಕ್ಕಳ ಭಾಗ್ಯ ಲಭಿಸುವುದು.
* ಕನ್ಯಾದಾನ ಮಾಡುವ ಭಾಗ್ಯ ದೊರೆಯುವುದು



Click it and Unblock the Notifications