Latest Updates
-
ಪ್ರೈಡ್ ಮಂತ್ 2026: ಮನೆಯವರ ಮುಂದೆ ನಿಮ್ಮ ನಿಜವಾದ ವ್ಯಕ್ತಿತ್ವವನ್ನು ಹೇಳಿಕೊಳ್ಳಲು ಹೆದರುತ್ತಿದ್ದೀರಾ? ಈ ಸಲಹೆಗಳು ನಿಮಗಾಗಿ! -
ಮಳೆಗಾಲದ ಮೊದಲ ಮಳೆ ಬಂತು: ನಿಮ್ಮ ಮನೆಯನ್ನು ದುಬಾರಿ ರಿಪೇರಿಯಿಂದ ರಕ್ಷಿಸಲು ಈ ಸಣ್ಣ ಕೆಲಸಗಳನ್ನು ಇಂದೇ ಮಾಡಿ! -
ಮಳೆಗಾಲದಲ್ಲಿ ಪದೇ ಪದೇ ಕಾಯಿಲೆ ಬೀಳ್ತಿದ್ದೀರಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ, ವೈರಲ್ ಜ್ವರದಿಂದ ದೂರವಿರಿ! -
ಆರ್ಸಿಬಿ ಗೆಲುವಿನ ಅಬ್ಬರ: ಬೆಂಗಳೂರಿನಲ್ಲಿ ವಿರಾಟ್-ಅನುಷ್ಕಾ ಸಂಭ್ರಮದ ವಿಡಿಯೋ ವೈರಲ್, ನೀವು ನೋಡಲೇಬೇಕಾದ ದೃಶ್ಯಗಳಿವು! -
ಮಳೆಗಾಲದಲ್ಲಿ ವ್ಯಾಯಾಮ ಮಾಡ್ತೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ! -
ಪ್ರೈಡ್ ಮಂತ್ 2026: ಕ್ವೀರ್ ಜೋಡಿಗಳ ಭವಿಷ್ಯ ಭದ್ರಪಡಿಸಲು ಮತ್ತು ಕುಟುಂಬದ ಮನವೊಲಿಸಲು ಇಲ್ಲಿದೆ ವಿಶೇಷ ಮಾರ್ಗದರ್ಶಿ! -
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ: ದುಬಾರಿ ರಿಪೇರಿ ತಪ್ಪಿಸಲು ಇಲ್ಲಿವೆ ಸರಳ ಟಿಪ್ಸ್! -
ಬಿಸಿಲು-ಮಳೆಯ ಆಟದಲ್ಲಿ ಸುಸ್ತಾಗಿದ್ದೀರಾ? ಆರೋಗ್ಯ ಕಾಪಾಡಿಕೊಳ್ಳಲು ಈ ಸರಳ ಆಹಾರ ಕ್ರಮಗಳನ್ನು ಮಿಸ್ ಮಾಡಬೇಡಿ! -
ದಿಢೀರ್ ಮಳೆಗೆ ರೆಡಿಯಾಗಿದ್ದೀರಾ? ಸ್ಟೈಲಿಶ್ ಆಗಿ ಕಾಣಲು ಮತ್ತು ಮಳೆಯಿಂದ ಪಾರಾಗಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಹವಾಮಾನ ಬದಲಾಗಿದೆ, ನಿಮ್ಮ ವರ್ಕೌಟ್ ಪ್ಲಾನ್ ಬದಲಾಯಿಸಿದ್ದೀರಾ? ಇಲ್ಲದಿದ್ದರೆ ಈ ಎಚ್ಚರಿಕೆ ನಿಮಗಾಗಿ!
ನ.15ಕ್ಕೆ ತುಳಸಿ ವಿವಾಹ: ಆರೋಗ್ಯ, ಮನೆಯವರ ಶ್ರೇಯಸ್ಸಿಗಾಗಿ ಈ ಪೂಜೆ ಶ್ರೇಷ್ಠ
ಕಾರ್ತಿಕ ಮಾಸ ಹಿಂದೂಗಳಿಗೆ ತುಂಬಾ ಪವಿತ್ರವಾದ ಮಾಸ. ಈ ಮಾಸದಲ್ಲಿ ಸಂಜೆ ದೀಪ ಬೆಳಗಿ ದೇವರನ್ನು ಪೂಜಿಸಲಾಗುವುದು. ಈ ಮಾಸ ಶಿವನಿಗೆ ಮುಡುಪಾಗಿರುವ ಮಾಸ . ಕಾರ್ತಿಕ ಮಾಸದ ಶುದ್ಧ ದ್ವಾದಶಿ ಭಕ್ತರಿಗೆ ಮತ್ತಷ್ಟು ವಿಶೇಷವಾದ ದಿನವಾಗಿದೆ. ಈ ದಿನ ತುಳಸಿ ಹಬ್ಬವನ್ನು ಆಚರಿಸಲಾಗುವುದು. ಇದನ್ನು ಉತ್ಥಾನ ದ್ವಾದಶಿ ಎಂತಲೂ ಕರೆಯುವರು. ಉತ್ಥಾನ ಎಂದರೆ ಏಳುವುದು ಎಂದರ್ಥ.

ಅಂದರೆ ಶ್ರೀಮನ್ನಾರಾಯಣನು ಪಾಲ್ಗಡಲಿನಲ್ಲಿ ತನ್ನ ಸುಖಶಯನದಿಂದ ಮೇಲೆದ್ದು ತನ್ನ ನಿದ್ರಾಮುದ್ರೆಯನ್ನು ಭಕ್ತರಿಗೆ ಸಾಕ್ಷಾತ್ಕರಿಸುವ ದಿನ.ಈ ದಿನ ಸಂಜೆಯ ಸಮಯದಲ್ಲಿ ತುಳಸಿ ವಿವಾಹ ಏರ್ಪಡುವುದು. ಚಾಂದ್ರಮಾನ ಕಾರ್ತಿಕಮಾಸದ ಶುಕ್ಲಪಕ್ಷದ 12ನೇ ದಿನ ಅಂದರೆ ದ್ವಾದಶಿಯಂದು ವಿಷ್ಣು ಸ್ವರೂಪಿ ನೆಲ್ಲಿಕಾಯಿ ಗಿಡದೊಂದಿಗೆ ತುಳಸಿಯ ವಿವಾಹವನ್ನು ಮಾಡಲಾಗುತ್ತದೆ. ಈ ವರ್ಷ ನವೆಂಬರ್15ರಂದು ತುಳಸಿ ವಿವಾಹ ಪೂಜೆ ಮಾಡಲಾಗುವುದು.

ತುಳಸಿ ವಿವಾಹದ ದಿನಾಂಕ ಮತ್ತು ಮುಹೂರ್ತ
ಪ್ರತಿ ವರ್ಷ ತುಳಸಿ ವಿವಾಹವನ್ನು ಕಾರ್ತಿಕ್ ತಿಂಗಳ ಶುಕ್ಲ ಪಕ್ಷದ ದ್ವಾದಶಿ ದಿನಾಂಕದಂದು ಮಾಡಲಾಗುತ್ತದೆ. ಈ ವರ್ಷ ಈ ಏಕಾದಶಿ ದಿನಾಂಕವು ನವೆಂಬರ್ 25 ರಂದು ಪ್ರಾರಂಭವಾಗಿ 26 ರಂದು ಕೊನೆಗೊಳ್ಳುತ್ತದೆ. ತುಳಸಿ ಮದುವೆ ದ್ವಾದಶಿಯಂದು ಅಂದರೆ ನವೆಂಬರ್ 26 ರಂದು ನಡೆಯಲಿದೆ.
ತುಳಸಿ ವಿವಾಹಕ್ಕೆ ಶುಭ ಮುಹೂರ್ತ
ದ್ವಾದಶಿ ತಿಥಿ ಪ್ರಾರಂಭ: ನವೆಂಬರ್ 29, ಬೆಳಗ್ಗೆ 5:10ರಿಂದ
ದ್ವಾದಶಿ ತಿಥಿ ಮುಕ್ತಾಯ: ನವೆಂಬರ್ 27 ಬೆಳಗ್ಗೆ 7:46ಕ್ಕೆ

ತುಳಸಿ ವಿವಾಹದ ಪೂಜಾ ವಿಧಿ
ಹೆಂಗಳೆಯರು ತುಳಸಿ ಗಿಡವನ್ನು ಮದುವಣಗಿತ್ತಿಯಂತೆ ಸಿಂಗರಿಸುತ್ತಾರೆ. ವಿಷ್ಣುವಿನ ಅಥವಾ ಅವನ ಅವತಾರವಾದ ಕೃಷ್ಣ, ರಾಮನ ಫೋಟೋವನ್ನು ಇಲ್ಲವೇ ಸಾಲಿಗ್ರಾಮ ಕಲ್ಲು, ಇಲ್ಲವೇ ನೆಲ್ಲಿಕಾಯಿ ಗಿಡವನ್ನು ತುಳಸಿ ಗಿಡದ ಪಕ್ಕ ಇಟ್ಟು ಇಬ್ಬರನ್ನೂ ಸ್ನಾನ ಮಾಡಿಸಿ ಶುಭ್ರ ಬಟ್ಟೆ ತೊಡಿಸಿ ಹೂವು, ಹಣ್ಣುಗಳಿಂದ ಅಲಂಕರಿಸುತ್ತಾರೆ. ವಿಷ್ಣುವಿನ ಭಾವಚಿತ್ರ ಹಾಗೂ ತುಳಸಿ ಗಿಡಕ್ಕೆ ಹತ್ತಿಯಿಂದ ತಯಾರಿಸಿದ ಮಾಲೆಯನ್ನು ತೊಡಿಸಿ ಮದುವೆಯ ಶಾಸ್ತ್ರ ಮಾಡಲಾಗುತ್ತದೆ. ಹಿಂದೂ ವಿವಾಹ ಪದ್ಧತಿಯಲ್ಲಿ ನಡೆಯುವ ಆಚರಣೆಯಂತೆಯೇ ವಿಷ್ಣು-ತುಳಸಿ ವಿವಾಹವನ್ನು ಭಕ್ತರು ಆಚರಿಸುತ್ತಾರೆ.

ತುಳಸಿ ವಿವಾಹದಂದು ಪಾಲಿಸುವ ಕ್ರಮಗಳು
ತುಳಸಿ ವಿವಾಹ ಆಚರಣೆ ಮಾಡುವವರು ಉಪವಾಸವರಬೇಕು. ಮನೆ ಮುಂದೆ ಇರುವ ತುಳಸಿ ಗಿಡದ ಸುತ್ತ ಮದುವೆ ಮಂಟಪ ನಿರ್ಮಿಸಿ ಅದಕ್ಕೆ ಅಲಂಕರಿಸಿರುತ್ತಾರೆ, ಈ ಮಂಟಪಕ್ಕೆ ಬೃಂದಾವನವೆಂದು ಹೆಸರು. ಈ ಮಂಟಪದಲ್ಲಿ ವೃಂದಾಳ ಆತ್ಮವಿದ್ದು ಮರುದಿನ ಬೆಳಗ್ಗೆ ಹೊರಟು ಹೋಗುತ್ತದೆ ಎಂಬ ನಂಬಿಕೆಯಿದೆ. ತುಳಸಿ ವಿವಾಹ ನೋಡಲು ಬಂದವರು ತುಳಸಿ ಹಾಗೂ ವಿಷ್ಣು ಫೋಟೋ ಅಥವಾ ನೆಲ್ಲಿಕಾಯಿ ಗಿಡವನ್ನು ಅಲಂಕಾರ ಮಾಡಿ ಪೂಜಿಸಿದ ಮಹಿಳೆಯರಿಗೆ ಉಡುಗೊರೆಗಳನ್ನು ನೀಡಬೇಕು.
ತುಳಸಿ ವಿವಾಹ ಹಬ್ಬದಲ್ಲಿ ಸಿಹಿತಿಂಡಿ, ಜ್ಯೂಸ್, ಹಬ್ಬದ ಅಡುಗೆಯನ್ನು ಮಾಡಿ ಬಂದವರಿಗೆ ನೀಡಲಾಗುವುದು.

ತುಳಸಿ ವಿವಾಹ ಮಾಡುವುದರಿಂದ ದೊರೆಯುವ ಪ್ರಯೋಜನಗಳು
* ಮನೆಯಲ್ಲಿ ಮಕ್ಕಳ ಮದುವೆಗೆ ಇರುವ ಅಡೆತಡೆಗಳು ದೂರವಾಗುತ್ತದೆ
* ಮನೆಗೆ ಐಶ್ಚರ್ಯ ಲಭಿಸುತ್ತದೆ
* ಮನೆ ಮಂದಿಗೆ ಸಂತೋಷ ಉಂಟು ಮಾಡುವುದು.
* ಮನೆಯವರ ಶ್ರೇಯಸ್ಸಿಗಾಗಿ ಈ ಪೂಜೆ ಮಾಡಲಾಗುವುದು
* ಮಕ್ಕಳ ಭಾಗ್ಯ ಲಭಿಸುವುದು.
* ಕನ್ಯಾದಾನ ಮಾಡುವ ಭಾಗ್ಯ ದೊರೆಯುವುದು



Click it and Unblock the Notifications