Latest Updates
-
UGC NET ಪರೀಕ್ಷೆ: ಪರೀಕ್ಷೆಯ ಒತ್ತಡದ ನಡುವೆ ಮನೆಯಲ್ಲಿ ನೆಮ್ಮದಿ ಕಾಪಾಡಿಕೊಳ್ಳುವುದು ಹೇಗೆ? -
ದೆಹಲಿ-ಎನ್ಸಿಆರ್ನಲ್ಲಿ ಭಾರಿ ಬಿರುಗಾಳಿ ಎಚ್ಚರಿಕೆ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಈಗಲೇ ಈ ಕೆಲಸ ಮಾಡಿ! -
ಭಾರಿ ಮಳೆ, ವಿದ್ಯುತ್ ಕಡಿತ: ಸಂಕಷ್ಟದ ಸಮಯದಲ್ಲಿ ನಿಮ್ಮ ಆರೋಗ್ಯ ಮತ್ತು ಆಹಾರ ಸುರಕ್ಷತೆ ಕಾಪಾಡಿಕೊಳ್ಳುವುದು ಹೇಗೆ? -
ಮುಂಬೈನಲ್ಲಿ ವರುಣನ ಆರ್ಭಟ: ರೆಡ್ ಅಲರ್ಟ್ ಘೋಷಣೆ, ಪ್ರಯಾಣಿಕರೇ ಎಚ್ಚರ! -
ದೆಹಲಿ-ಎನ್ಸಿಆರ್ನಲ್ಲಿ ಧೂಳಿನ ಆರ್ಭಟ: ಹೊರಗೆ ಹೋಗುವ ಮುನ್ನ ಎಚ್ಚರ, ಮನೆಯಲ್ಲೇ ಫಿಟ್ ಆಗಿರಲು ಈ 8 ನಿಮಿಷದ ಟಿಪ್ಸ್! -
ಟೆಲಿಗ್ರಾಂ ಬಳಕೆದಾರರೇ ಗಮನಿಸಿ: ಸೇವೆ ಆರಂಭವಾದರೂ ಈ ಬದಲಾವಣೆ ಮರೆಯದಿರಿ! -
ಬಿಸಿಗಾಳಿಯ ಎಚ್ಚರಿಕೆ: ಅಡುಗೆ ಮಾಡದೆಯೇ ದೇಹಕ್ಕೆ ತಂಪು ನೀಡುವ ಪ್ರೋಟೀನ್ ಆಹಾರಗಳಿವು! -
ಮಳೆಯ ನಡುವೆ ಯುಜಿಸಿ ನೆಟ್ ಪರೀಕ್ಷೆ: ಸಂಗಾತಿಯ ಈ ಸಣ್ಣ ಬೆಂಬಲವೇ ಯಶಸ್ಸಿನ ಗುಟ್ಟು -
ಮಳೆಗಾಲದಲ್ಲಿ ಮನೆಯ ಪೀಠೋಪಕರಣ ಹಾಳಾಗುತ್ತಿದೆಯೇ? ಬೂಸು ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಮುಂಬೈ ಆರೆಂಜ್ ಅಲರ್ಟ್: ಮಳೆಯಲ್ಲಿ ಆಫೀಸ್ ಹೋಗುವವರೇ, ಈ 'ನೋ-ಕುಕ್' ಪ್ರೋಟೀನ್ ಮೀಲ್ಸ್ ಮಿಸ್ ಮಾಡ್ಬೇಡಿ!
ವೈಕುಂಠ ಚತುರ್ದಶಿ ಯಾವಾಗ? ಇದು ಹರಿ-ಹರನ ಆರಾಧನೆಗೆ ತುಂಬಾ ಮುಖ್ಯವಾದ ದಿನ, ಏಕೆ?
ಹಿಂದೂಗಳಿಗೆ ವೈಕುಂಠ ಚತುರ್ದಶಿ ತುಂಬಾ ಪ್ರಮುಖವಾದ ದಿನವಾಗಿದೆ. ಪ್ರತೀ ವರ್ಷ ಕಾರ್ತಿಕ ಮಾಸದಲ್ಲಿ ಬರುವ ಶುಕ್ಲ ಪಕ್ಷದ ಚತುರ್ದಶಿಯಂದು ಆಚರಿಸಲಾಗುವುದು. ಈ ದಿನ ಶಿವ ಹಾಗೂ ವಿಷ್ಣುವಿನ ಆರಾಧನೆಗೆ ಮೀಸಲಾಗಿರುವ ದಿನವಾಗಿದೆ. ದೇಶದೆಲ್ಲಡೆ ಈ ವೈಕುಂಠ ಚತುರ್ದಶಿಯಂದು ಹರಿ-ಹರನಿಗೆ ವಿಶೇಷ ಪೂಜೆಯನ್ನು ಸಲ್ಲಿಸಲಾಗುವುದು.

ಯಾರು ವೈಕುಂಠ ಚತುರ್ದಶಿಯನ್ನು ಉಪವಾಸವಿದ್ದು ಶ್ರದ್ಧಾ- ಭಕ್ತಿಯಿಂದ ಆಚರಿಸುತ್ತಾರೋ ಅವರಿಗೆ ಮೋಕ್ಷ ಸಿಗುವುದು, ಜೀವನದಲ್ಲಿನ ಕಷ್ಟಗಳು ದೂರಾಗಲಿದೆ ಎಂಬ ನಂಬಿಕೆ ಇದೆ.
ಈ ವರ್ಷ ವೈಕುಂಠ ಚತುರ್ದಶಿ ಯಾವಾಗ ಆಚರಿಸಲಾಗುವುದು, ಆಚರಣೆಯ ವಿಧಿ-ವಿಧಾನಗಳೇನು ಎಂದು ತಿಳಿಯೋಣ ಬನ್ನಿ:

ವೈಕುಂಠ ಚತುರ್ದಶಿ ದಿನಾಂಕ
ಕಾರ್ತಿಕ ಮಾಸದ ಶುಕ್ಲ ಪಕ್ಷದ ಚತುರ್ದಶಿ ದಿನಾಂಕ ಪ್ರಾರಂಭವಾಗುತ್ತದೆ: ಅಂದರೆ ನವೆಂಬರ್ 6 2022, ಭಾನುವಾರ, ಸಂಜೆ 4:28 ಕ್ಕೆ ಪ್ರಾರಂಭವಾಗಿ
ನವೆಂಬರ್ 7,2022, ಸೋಮವಾರ ಸಂಜೆ 4:15 ಕ್ಕೆ ಮುಕ್ತಾಯವಾಗುತ್ತದೆ.
ಧರ್ಮಗ್ರಂಥಗಳ ಪ್ರಕಾರ, ನಿಶಿತಾ ಅವಧಿಯಲ್ಲಿ ಭಗವಾನ್ ವಿಷ್ಣುವನ್ನು ವೈಕುಂಠ ಚತುರ್ದಶಿಯಂದು ಪೂಜಿಸಲಾಗುತ್ತದೆ, ಆದ್ದರಿಂದ ವೈಕುಂಠ ಚತುರ್ದಶಿಯನ್ನು ನವೆಂಬರ್ 6 ರಂದು ಆಚರಿಸಲಾಗುತ್ತದೆ.

ವೈಕುಂಠ ಚತುರ್ದಶಿ 2022 ಮುಹೂರ್ತ
ನಿಶಿತಕಾಲ ಪೂಜೆ ಮುಹೂರ್ತ - 06 ನವೆಂಬರ್ 2022, ರಾತ್ರಿ 11:45 ರಿಂದ 12:37 ರವರೆಗೆ
ಬೆಳಗಿನ ಪೂಜಾ ಸಮಯ - 06 ನವೆಂಬರ್ 2022, ಬೆಳಗ್ಗೆ 11.48 - ಮಧ್ಯಾಹ್ನ 12.32 ರವರೆಗೆ

ವೈಕುಂಠ ಚತುರ್ದಶಿ ಮಹತ್ವ
ವೈಕುಂಠ ಚತುರ್ದಶಿಯನ್ನು ಕಾರ್ತಿಕ ಪೂರ್ಣಿಮೆಯ ಒಂದು ದಿನ ಮೊದಲು ಆಚರಿಸಲಾಗುತ್ತದೆ. ಹಿಂದೂ ಕ್ಯಾಲೆಂಡರ್ ಪ್ರಕಾರ, ಕಾರ್ತಿಕ ಮಾಸದ ಶುಕ್ಲ ಪಕ್ಷದ ಚತುರ್ದಶಿ ದಿನಾಂಕವು ವಿಶೇಷ ಮಹತ್ವವನ್ನು ಹೊಂದಿದೆ. ಇದನ್ನು ಬೈಕುಂಠ ಅಥವಾ ವೈಕುಂಠ ಚತುರ್ದಶಿ ಎನ್ನುತ್ತಾರೆ.
ಈ ದಿನದಂದು ಭಗವಾನ್ ವಿಷ್ಣುವನ್ನು ಪೂಜಿಸುವುದರಿಂದ, ಸಾಧಕರು ವೈಕುಂಠಧಾಮವನ್ನು ಪಡೆಯುತ್ತಾರೆ ಮತ್ತು ಶಿವನ ಕೃಪೆಯಿಂದ ಪಾಪಗಳನ್ನು ತೊಡೆದುಹಾಕುತ್ತಾರೆ ಎಂದು ನಂಬಲಾಗಿದೆ. ದೇವ್ ದೀಪಾವಳಿಯ ಒಂದು ದಿನ ಮೊದಲು ಆಚರಿಸಲಾಗುವುದು. ವಾರಣಾಸಿ, ಋಷಿಕೇಶ, ಮುಂತಾದ ಪುಣ್ಯ ಕ್ಷೇತ್ರದಲ್ಲಿ ತುಂಬಾ ವಿಜೃಂಭಣೆಯಿಂದ ಆಚರಿಸಲಾಗುವುದು.
ವೈಕುಂಠ ಚತುರ್ದಶಿ ತುಂಬಾ ವಿಶೇಷವಾದ ದಿನ, ಏಕೆಂದರೆ ಈ ದಿನ ವಿಷ್ಣು ಮತ್ತು ಶಿವ ದೇವರನ್ನು ಪೂಜಿಸಲಾಗುತ್ತದೆ. ಶಿವ ಪುರಾಣದ ಪ್ರಕಾರವೈಕುಂಠ ಚತುರ್ದಶಿಯ ದಿನದಂದು ಶಿವನು ವಿಷ್ಣುವಿಗೆ ಸುದರ್ಶನ ಚಕ್ರವನ್ನು ನೀಡಿದನು.
ಧಾರ್ಮಿಕ ನಂಬಿಕೆಯ ಪ್ರಕಾರ, ಒಬ್ಬ ಭಕ್ತನು ಈ ದಿನದಂದು ಭಗವಾನ್ ವಿಷ್ಣುವನ್ನು 1000 ಕಮಲದ ಹೂವುಗಳಿಂದ ಪೂಜಿಸಿದರೆ, ಅವನು ವೈಕುಂಠಧಾಮದಲ್ಲಿ ಸ್ಥಾನ ಪಡೆಯುತ್ತಾನೆ ಎಂದು ಹೇಳಲಾಗುವುದು.

ವೈಕುಂಠ ಚತುರ್ದಶಿಯ ಪೂಜಾ ವಿಧಾನ
ಚತುರ್ದಶಿಯ ದಿನ ಪ್ರಾತಃಕಾಲ ಎದ್ದು ಸ್ನಾನ ಮಾಡಿ, ನಂತರ ಉಪವಾಸವಿದ್ದು ಸಂಕಲ್ಪ ತೆಗೆದುಕೊಳ್ಳಬೇಕು.
ಇದರ ನಂತರ ಶ್ರೀ ಹರಿ ವಿಷ್ಣುವನ್ನು 108 ಕಮಲದ ಹೂವುಗಳಿಂದ ಪೂಜಿಸಿ.
ಈ ದಿನ ಶಿವನ ಆರಾಧನೆಯನ್ನೂ ಕೂಡ ಮಾಡಬೇಕು.
ಈ ದಿನವಿಡೀ ವಿಷ್ಣು ಮತ್ತು ಶಿವನ ಹೆಸರುಗಳನ್ನು ಪಠಿಸಿ.
ಪೂಜೆಯ ಸಮಯದಲ್ಲಿ
' ವಿನಾ ಯೋ ಹರಿಪೂಜಾನ್ ತು ಕುರ್ಯಾದ್ ರುದ್ರಸ್ಯ ಚರ್ಚನಮ್. ವೃತ ತಸ್ಯ ಭವೇತ್ಪೂಜಾ ಸತ್ಯಮೇತದ್ವಚೋ ಮಾಮ್ ।।' ಮಂತ್ರ ಪಠಿಸಿ.



Click it and Unblock the Notifications