Latest Updates
-
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ!
ದೀಪಾವಳಿಗೆ ಈ ವಾಸ್ತು ಟಿಪ್ಸ್ ಪಾಲಿಸಿದರೆ ಹಣ-ಸಂಪತ್ತು ವೃದ್ಧಿಸುವುದು
ದೀಪಾವಳಿ ಹಬ್ಬ ಸಮೀಸುತ್ತಿದ್ದಂತೆ ನಮ್ಮ ಮನ್ಸಿನಲ್ಲಿ ಅದೇನೋ ಸಡಗರ-ಸಂಭ್ರಮ. ಆ ಬೆಳೆಕಿನ ಪ್ರಭೆಯನ್ನು ಕಣ್ತುಂಬಿಕೊಳ್ಳುವುದೇ ಕಣ್ಣಿಗೆ ಹಬ್ಬ. ದೀಪಾವಳಿಗೆ ಹತ್ತು-15 ದಿನಕ್ಕೆ ಮೊದಲೇ ಶಾಪಿಂಗ್ ಶುರುವಾಗುತ್ತೆ, ಇನ್ನು ಮನೆಯನ್ನು ದೀಪಾವಳಿಗೆ ಹೇಗೆ ಅಲಂಕರಿಸಬೇಕೆಂಬುವುದು ಒಂದು ವಾರಕ್ಕೆ ಮೊದಲೇ ಪ್ಲ್ಯಾನ್ ರೆಡಿಯಾಗಿರುತ್ತೆ, ಈಗಾಗಲೇ ಶುರುಕೂಡ ಮಾಡಿರುತ್ತೀರಿ.
ದೀಪಾವಳಿ ಅಂದರೆ ಬದುಕಿನಲ್ಲಿ ನೆಮ್ಮದಿ, ಸಮೃದ್ಧಿಯ ಸಂಕೇತ. ಹಾಗಾಗಿ ದೀಪಾವಳಿಯಲ್ಲಿ ಮನೆಯಲ್ಲಿ ಏನು ಮಾಡಬೇಕು, ಏನು ಮಾಡಬಾರದು ಎಂದು ವಾಸ್ತುಶಾಸ್ತ್ರದಲ್ಲಿ ಹೇಳಲಾಗಿದೆ. ವಾಸ್ತು ಪ್ರಕಾರ ನೀವು ಹೀಗೆಲ್ಲಾ ಮಾಡಿದರೆ ಮನೆಯಲ್ಲಿ ಸಂಪತ್ತು-ಸಮೃದ್ಧಿ ಹೆಚ್ಚುವುದು:

ದೀಪಾವಳಿಗೆ ಮನೆ ಸ್ವಚ್ಛ ಮಾಡಬೇಕು
ದೀಪಾವಳಿಯಲ್ಲಿ ಮನೆಯನ್ನು ಸಂಪೂರ್ಣವಾಗಿ ಸ್ವಚ್ಛ ಮಾಡಬೇಕು. ಮೂಲೆ-ಮೂಲೆಯಲ್ಲೂ ಕ್ಲೀನ್ ಮಾಡಬೇಕು, ಜೇಡರ ಬಲೆ, ಕೀಟಗಳು ಎಲ್ಲವನ್ನು ಹೋಗಲಾಡಿಸಬೇಕು. ಒಟ್ಟಿನಲ್ಲಿ ಲಕ್ಷ್ಮಿ ಪೂಜೆ ಮಾಡುವಾಗ ಮನೆ ತುಂಬಾನೇ ಸ್ವಚ್ಛವಾಗಿರಬೇಕು.

ಬೇಡದ ವಸ್ತುಗಳನ್ನು ಹೊರಹಾಕಿ
ಮನೆಯಲ್ಲಿ ಮುರಿದ ಚೇರ್, ತುಂಬಾ ಹಳೆಯದಾದ ಪಾತ್ರೆಗಳು, ಡಬ್ಬಗಳು ಇವೆಲ್ಲಾ ಇದ್ದರೆ ಅವುಗಳನ್ನ ಹೊರ ಹಾಕಿ. ಮುರಿದು ಹೋದ ವಸ್ತುಗಳನ್ನು ಮನೆಯಲ್ಲಿ ಇಡುವುದು ಮನೆಗೆ ಒಳ್ಳೆಯದಲ್ಲ. ಅವಗಳೆನ್ನೆಲ್ಲಾ ಬಿಸಾಡಿ, ಇದರಿಂದ ಮನೆಯೊಳಗಡೆ ಧನಾತ್ಮಕ ಶಕ್ತಿ ನಾವೇನು ಪಾಸಿಟಿವ್ ವೈಬ್ಸ್ ಎಂದು ಕರೆಯುತ್ತೇವೆ ಅಲ್ವಾ ಅದು ಹೆಚ್ಚಾಗುವುದು.

ಮನೆಯ ಮುಂಭಾಗದಲ್ಲಿ ಏನೂ ಇಡಬೇಡಿ
ಮನೆಯ ಒಳಗಡೆ ಬರುವ ಜಾಗದಲ್ಲಿ ವಸ್ತುಗಳನ್ನು ಇಡಬೇಡಿ. ಮನೆಯ ಹೊಸ್ತಿಲು ಹಾಗೂ ಹಾಲ್ ತುಂಬಾ ಸುಂದರವಾಗಿ ಕಾಣಬೇಕು. ಮನೆಯ ಹೊಸ್ತಿಲು ಅಲಂಕರಿಸಿ. ಮನೆಯ ಮುಂದುಗಡೆ ರಂಗೋಲಿ ಬಿಡಿ. ಮನೆಯ ಹಾಲ್ ಕ್ಲೀನ್ ಹಾಗೂ ಆಕರ್ಷಕವಾಗಿ ಕಾಣುವಂತೆ ಇರಲಿ. ಮನೆ ಚಿಕ್ಕದು-ದೊಡ್ಡದು ಎಂಬುವುದಲ್ಲ, ನಾವು ಮನೆಯನ್ನು ಹೇಗೆ ಇಡುತ್ತೇವೆ ಅನ್ನುವುದು ಮುಖ್ಯವಾಗುತ್ತೆ.

ಮನೆಯ ವಸ್ತುಗಳನ್ನು ಸರಿಯಾದ ಜಾಗದಲ್ಲಿ ಇಡಿ
ಮನೆಯ ಉತ್ತರ ಹಾಗೂ ಈಶಾನ್ಯ ದಕ್ಕಿನಲ್ಲಿ ಯಾವುದೇ ವಸ್ತುಗಳನ್ನು ಇಡಬೇಡಿ, ಅಲ್ಲಿ ಕಸ, ಮುರಿದ ವಸ್ತುಗಳು, ಬೇಡದ ವಸ್ತುಗಳು ಏನೂ ಇಡಬಾರದು. ಹಸಿರು ಗಿಡಗಳಿರಲಿ, ಮನೆಯ ಒಳಗಡೆ ಚಿಕ್ಕ-ಚಿಕ್ಕ ಗಿಡಗಳನ್ನು ಇಡಿ. ಹೀಗೆ ಮಾಡುವುದರಿಂದ ಲಕ್ಷ್ಮಿ ಬೇಗನೆ ಆಕರ್ಷಿತಳಾಗುತ್ತಾಳೆ ಎಂದು ನಂಬಲಾಗಿದೆ.

ಉಪ್ಪು ನೀರು ಚಿಮುಕಿಸಿ
ನೆಯನ್ನು ಸ್ವಚ್ಛ ಮಾಡಿದ ಬಳಿಕ ಒಂದು ಲೋಟ ನೀರಿಗೆ ಕಲ್ಲುಪ್ಪು ಹಾಕಿ ಆ ನೀರನ್ನು ಮನೆಯ ಎಲ್ಲಾ ಕಡೆ ಚಿಮುಕಿಸಿ. ಉಪ್ಪ ಋಣಾತ್ಮಕ ಶಕ್ತಿ ಹೀರಿಕೊಳ್ಳುತ್ತದೆ ಎಂದು ನಂಬಲಾಗಿದೆ.

ಮನೆಯ ನಾಲ್ಕೂ ದಿಕ್ಕಿಗೂ ದೀಪ ಹಚ್ಚಿ
ದೀಪಾವಳಿಗೆ ನೀವು ದೀಪಗಳನ್ನು ಹಚ್ಚುವಾಗ ಮನೆಯ ನಾಲ್ಕು ದಿಕ್ಕಿಗೆ ಹಚ್ಚಿ.
ದೀಪಾವಳಿಗೆ ದೀಪ ಹಚ್ಚುವಾಗ ಈ ನಿಯಮ ಪಾಲಿಸಿ:
* ದೀಪಾವಳಿಯಂದು ಮೊದಲಿಗೆ ದಕ್ಷಿಣ ದಿಕ್ಕಿನಲ್ಲಿ ದೀಪ ಹಚ್ಚಬಾರದು.
* ದೀಪಾವಳಿಯಂದು ತುಪ್ಪದ ದೀಪ ಹಚ್ಚಿ
* ದೀಪಕ್ಕೆ ಸೂರ್ಯಕಾಂತಿ ಎಣ್ಣೆ ಬಳಸಲೇಬೇಡಿ, ಎಳ್ಳೆಣ್ಣೆ ಬಳಸಬಹುದು.
* ಮೊದಲಿಗೆ ನೀವು ದೇವರ ಕೋಣೆಯಲ್ಲಿ ದೀಪವನ್ನು ಹಚ್ಚಬೇಕು.
* ನಂತರ ಹೊಸ್ತಿಲಿನಲ್ಲಿ ಹಣತೆ ಹಚ್ಚಿ, ನಂತರ ಮನೆಯಲ್ಲಿ ನಿಮಗೆ ಬೇಕಾದ ಕಡೆ ಇಡಿ.
ದೀಪಾವಳಿಗೆ ಏನು ಮಾಡಬೇಕು, ಏನು ಮಾಡಬಾರದು?
ಏನು ಮಾಡಬೇಕು?
* ಮನೆಯ ಹೊಸ್ತಿಲು ಹೊಸದಾಗಿರಬೇಕು ಅಥವಾ ಸರಿಪಡಿಸಿರಬೇಕು
* ಲಕ್ಷ್ಮಿ ಪಾದುಕೆಗಳು ಮನೆಯೊಳಗಡೆ ಬರುವಂತೆ ರಂಗೋಲಿ ಹಾಕಬೇಕು
* ದೇವರ ಮೂರ್ತಿ ಸ್ವಚ್ಛಗೊಳಿಸಲು ಸ್ವಚ್ಛವಾದ ಬಟ್ಟೆ ಬಳಸಿ.
ಏನು ಮಾಡಬಾರದು
* ಮನೆಯ ಮುಂಬಾಗಿಲು ಮುಚ್ಚಬೇಡಿ, ಅಲ್ಲದೆ ಮನೆಯ ಬಾಗಿಲು ತೆರೆಯುವಾಗ ಕಿರ್-ಕಿರ್ ಅಂತ ಶಬ್ದ ಮಾಡಬಾರದು
* ಸ್ವಸ್ತಿಕ್, ಓಂ ಹಾಗೂ ರಂಗೋಲಿಯನ್ನು ದಕ್ಷಿಣ, ಪಶ್ಚಿಮ ಭಾಗಕ್ಕೆ ಹಾಕಬಾರದು.
* ಕುಟಂಬಸ್ಥರು ಅಥವಾ ಸ್ನೇಹಿತರಿಗೆ ಆ್ಯಂಟಿಕ್ ವಸ್ತುಗಳನ್ನು ನೀಡಬೇಡಿ.
* ಮನೆಯ ಮುಂದುಗಡೆ ಲಕ್ಷ್ಮಿ ಅಥವಾ ಶ್ರೀ ಗಣಪನ ರಂಗೋಲಿ ಹಾಕಬೇಡಿ.



Click it and Unblock the Notifications