Latest Updates
-
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ? -
ಬೇಕರಿಯಲ್ಲಿ ಸಿಗುವ ಕೊಬ್ಬರಿ ತುರಿ ಬರ್ಫಿ ನಿಮಿಷದಲ್ಲಿ ಮಾಡಿ! ಇಲ್ಲಿದೆ ಸುಲಭದ ಸ್ವೀಟ್ ವಿಧಾನ -
ಮಧುರೈಗೆ ಹೋಗ್ತಿದ್ದೀರಾ? ಈ ಪವಿತ್ರ ದೇಗುಲಗಳಿಗೂ ಭೇಟಿ ನೀಡೋದನ್ನ ಮರೀಬೇಡಿ.. ಪಟ್ಟಿ ಇಲ್ಲಿದೆ
ಪತಿಯ ಆಯುಷ್ಯಕ್ಕಾಗಿ ವಟ ಸಾವಿತ್ರಿ ವ್ರತ, ಆಚರಣೆ ಹೇಗೆ?
ಪತಿಯ ದೀರ್ಘಾಯುಷ್ಯಕ್ಕಾಗಿ ಆಚರಿಸಲ್ಪಡುವ ಆಚರಣೆಯೇವಟ ಸಾವಿತ್ರಿ . ಈ ವರ್ಷ ಇದನ್ನು ಕರ್ನಾಟಕದಲ್ಲಿ ಜೂನ್ 5ರಂದು ಆಚರಿಸಲಾಗುವುದು. ಹಿಂದೂ ಪುರಾಣದಲ್ಲಿ ಸತ್ಯವಾನ್ ಸಾವಿತ್ರಿ ಕತೆಯಿದೆ. ಅದರಲ್ಲಿ ಸಾವಿತ್ರಿಯ ಪತಿ ಸತ್ಯವಾನ್ನನ್ನು ಯಮನ ಪಾಶದಿಂದ ರಕ್ಷಿಸಲು ಸಾವಿತ್ರ ವ್ರತ ಮಾಡುತ್ತಾಳೆ. ಆಕೆಯ ವ್ರತದ ಫಲವಾಹಿ ಸತ್ಯವಾನ್ ಸಾವಿತ್ರಿ ಬದುಕುಳಿತ್ತಾನೆ.

ಸತ್ಯವಾನ ಅಲ್ಪಾಯುಷಿ ಎಂಬುದು ತಿಳಿದೂ ಆತನನ್ನೇ ವರಿಸಿ, ನಂತರ ತನ್ನ ಸಚ್ಚಾರಿತ್ರ್ಯ, ಚತುರ ಮಾತುಗಳಿಂದ ಯಮನನ್ನೇ ಗೆದ್ದು ಪತಿಯನ್ನು ಉಳಿಸಿಕೊಂಡ ಮಹಾನ್ ಸ್ತ್ರೀ ಸಾವಿತ್ರಿ. ವ್ರತದ ಮೂಲಕ ಯಮನನ್ನು ಮೆಚ್ಚಿಸಿದ ಸಾವಿತ್ರಿಯ ನೆನಪಿಗಾಗಿ ಈ ದಿನವನ್ನು ವಟ ಸಾವಿತ್ರಿ ವ್ರತವನ್ನಾಗಿ ಆಚರಿಸಲಾಗುತ್ತದೆ.
ಹಿಂದೂ ಪಂಚಾಂಗದ ಪ್ರಕಾರ ಪ್ರತಿವರ್ಷ ಜ್ಯೇಷ್ಠ ಮಾಸದ ಶುದ್ಧ ಹುಣ್ಣಿಮೆಯಂದು ಈ ವ್ರತವನ್ನು ಆಚರಿಸುತ್ತಾರೆ. ಈ ವ್ರತದ ಆಚರಣೆಗೆ ಹೇಗೆ, ಈ ವ್ರತದ ಫಲವೇನು ಎಂಬುದನ್ನು ಇಲ್ಲಿ ಹೇಳಲಾಗಿದೆ.

ಎಲ್ಲೆಲ್ಲಿ ಆಚರಿಸಲಾಗುವುದು?
ಇದನ್ನು ಕರ್ನಾಟಕ ಹಾಗೂ ಉತ್ತರ ಭಾರತದಲ್ಲಿ ಆಚರಿಸುತ್ತಾರೆ. ಕೆಲವರು ವಟ ಸಾವಿತ್ರಿ ವ್ರತಕ್ಕೆ ಮೂರು ದಿನವಿರುವಾಗಲೇ ಮಡಿಯಿಂದ ಉಪವಾಸ ಮಾಡುತ್ತಾರೆ. ಇನ್ನು ಕೆಲವರು ಆ ದಿನ ಉಪವಾಸ ಮಾಡಿ, ಹುಣ್ಣಿಮೆ ಮುಗಿದು ಪಾಡ್ಯ ಶುರುವಾದ ಮೇಲೆಯೇ ಆಹಾರ ಸೇವಿಸುತ್ತಾರೆ.

ವಟ ಸಾವಿತ್ರಿ ವ್ರತ ಆಚರಣೆ ಹೇಗೆ?
ವ್ರತದ ದಿನ ಬೆಳಿಗ್ಗೆ ನಸುಕಿನಲ್ಲೇ ಎದ್ದು ತಲೆಸ್ನಾನ ಮಾಡಿ, ಮಡಿಬಟ್ಟೆ ಧರಿಸಿ ವ್ರತ ಮಾಡಬೇಕು. ಈ ವ್ರತ ಆಚರಣೆ ಮಾಡುವವರು ಮಣೆಯ ಮೇಲೆ ಅಥವಾ ಮನೆಯ ಗೋಡೆಯ ಮೇಲೆ ಯಮ, ಸಾವಿತ್ರಿ, ಸತ್ಯವಾನ, ಆಲದ ಮರಗಳನ್ನು ಗಂಧದಲ್ಲಿ ಬರೆಯುತ್ತಾರೆ. ನಂತರ ನೆಲದ ಮೇಲೆ ಅಕ್ಕಿಯನ್ನು ಹರವುತ್ತಾರೆ. ಸಾವಿತ್ರಿ ಮತ್ತು ಸತ್ಯವಾನನ ಬೊಂಬೆ ಅಥವಾ ಮೂರ್ತಿಯನ್ನು ಬಟ್ಟಲಿನಲ್ಲಿಟ್ಟು ಪೂಜಿಸುತ್ತಾರೆ. ಈ ಪೂಜೆಗೆ ಗಂಧದ ಬಟ್ಟಲಾದರೆ ಶ್ರೇಷ್ಠ ಎಂದು ಹೇಳಲಾಗುತ್ತದೆ. ಈ ಬಟ್ಟಲಿನಲ್ಲಿ ಆಲದ ಮರದ ಎಲೆಗಳನ್ನು ಇಟ್ಟು ಮಂತ್ರ ಹೇಳುತ್ತಾ ಪೂಜಿಸುತ್ತಾರೆ.

ಆಲದ ಮರಕ್ಕೆ ಪೂಜೆ
ಮನೆಯ ಒಳಗಡೆ ಪೂಜೆ ಮಾಡಿದ ಬಳಿಕ ಹೊರಗಿರುವ ಆಲದ ಮರವನ್ನು ಪೂಜಿಸುತ್ತಾರೆ. ಆಲದ ಮರದ ಸುತ್ತ ದಾರವನ್ನು ಕಟ್ಟಿ, ತಾಮ್ರ ಅಥವಾ ಯಾವುದೇ ನಾಣ್ಯಗಳನ್ನಿಟ್ಟು ಪತಿಯ ಆಯುಷ್ಯ ವೃದ್ಧಿಗೆ ಪ್ರಾರ್ಥಿಸುತ್ತಾರೆ. ಹಿರಿಯ ಮಹಿಳೆಯರು ಕಿರಿಯ ಮಹಿಳೆಯರಿಗೆ, 'ನೀನೂ ಸಾವಿತ್ರಿಯಂತಾಗು' ಎಂದು ಹಾರೈಸುತ್ತಾರೆ. ಈ ವ್ರತವನ್ನು ಪ್ರತಿವರ್ಷ ಶ್ರದ್ಧೆ ಭಕ್ತಿಯಿಂದ ಮಾಡಿದರೆ ಪತಿಯ ಆರೋಗ್ಯ ಹೆಚ್ಚಾಗುತ್ತದೆ ಎಂಬ ನಂಬಿಕೆಯಿದೆ.

ಆಲದ ಮರಕ್ಕೆ ಏಕೆ ಈ ವ್ರತದಲ್ಲಿ ವಿಶೇಷ ಸ್ಥಾನ?
ವಟ ಸಾವಿತ್ರಿ ವ್ರತ ಇದರಲ್ಲಿಯೇ ಆಲದ ಮರದ ಮಹತ್ವ ಅಡಗಿದೆ. ವಟ ವೃಕ್ಷ ಎಂದರೆ ಆಲದ ಮರ. ಯಮ ಸತ್ಯವಾನ್ ಪ್ರಾಣ ತೆಗೆಯಲು ಬಂದಾಗ ಸಾವಿತ್ರಿ ಸತ್ಯವಾನ್ನ ದೇಹವನ್ನು ತನ್ನ ತೊಡೆಯ ಮೇಲೆ ಮಲಗಿಸಿಕೊಂಡು ಆಲದ ಮರದ ಕೆಳಗಡೆ ಕೂತಿದ್ದಳು. ಈ ಮರದ ಅಡಿಯಲ್ಲಿಯೇ ಯಮನ ಬಳಿ ತನ್ನ ಪ್ರಾಣವನ್ನು ಹಿಂತಿರುಗಿಸಿ ಕೊಡುವಂತೆ ಬೇಡುತ್ತಾಳೆ. ಆಕೆಯ ಚತುರ ಮಾತುಗಳಿಗೆ ಸೋತ ಯಮ ಸತ್ಯವಾನನಿಗೆ ದೀರ್ಘಾಯುಷ್ಯ ನೀಡಿ, ದಂಪತಿಯನ್ನು ಹರಿಸುತ್ತಾನೆ.



Click it and Unblock the Notifications











