Just In
- 10 hrs ago ವೃಷಭ ರಾಶಿಗೆ ಗುರು ಸಂಚಾರ: ಗುರು ನಿಮ್ಮ ಲಗ್ನ ಮನೆಯಲ್ಲಿ ಇರುವುದರಿಂದ ಇದರ ಪ್ರಭಾವ ಹೇಗಿರಲಿದೆ?
- 10 hrs ago ವೃಷಭ ರಾಶಿಗೆ ದೇವಗುರುವಿನ ಸಂಚಾರ: ಮೇಷ ರಾಶಿಗಳಿಗೆ ಇದರ ಪ್ರಭಾವ ಹೇಗಿರಲಿದೆ?
- 11 hrs ago ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- 12 hrs ago ದಿನ ಭವಿಷ್ಯ ಏಪ್ರಿಲ್ 19: ಶುಕ್ರವಾರದ ಈ ಶುಭ ದಿನ ನಿಮ್ಮ ರಾಶಿಗೆ ಹೇಗಿರಲಿದೆ?
Don't Miss
- Technology ಇಂದು ಮತ್ತೆ ಮೊಟೊರೊಲಾ ಎಡ್ಜ್ 50 ಪ್ರೊ ಫೋನಿನ ಸ್ಪೆಷಲ್ ಸೇಲ್!..ಡಿಸ್ಕೌಂಟ್ ಎಷ್ಟು?
- News ಐತಿಹಾಸಿಕ ಪ್ರಸಿದ್ಧ ವದ್ದಿಕೆರೆ ಸಿದ್ದಪ್ಪನ ಬಗ್ಗೆ ನಿಮಗೆಷ್ಟು ಗೊತ್ತು?-ಇಲ್ಲಿದೆ ಸಂಪೂರ್ಣ ವಿವರ
- Sports PBKS vs MI IPL 2024: ಮತ್ತೊಮ್ಮೆ ಕೊನೆಯ ಓವರ್ನಲ್ಲಿ ಮುಗ್ಗರಿಸಿದ ಪಂಜಾಬ್ ಕಿಂಗ್ಸ್ ಪ್ಲೇಆಫ್ ಸನ್ನಿವೇಶ ಹೇಗಿದೆ?
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- Movies 'ಮಾರ್ಟಿನ್' ಚಿತ್ರದ ನಿರ್ಮಾಪಕ- ನಿರ್ದೇಶಕರ ಮಧ್ಯೆ ಕಿರಿಕ್: ಕೊನೆಗೂ ಸಿಕ್ತು ಸ್ಪಷ್ಟನೆ
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪತಿಯ ಆಯುಷ್ಯಕ್ಕಾಗಿ ವಟ ಸಾವಿತ್ರಿ ವ್ರತ, ಆಚರಣೆ ಹೇಗೆ?
ಪತಿಯ ದೀರ್ಘಾಯುಷ್ಯಕ್ಕಾಗಿ ಆಚರಿಸಲ್ಪಡುವ ಆಚರಣೆಯೇವಟ ಸಾವಿತ್ರಿ . ಈ ವರ್ಷ ಇದನ್ನು ಕರ್ನಾಟಕದಲ್ಲಿ ಜೂನ್ 5ರಂದು ಆಚರಿಸಲಾಗುವುದು. ಹಿಂದೂ ಪುರಾಣದಲ್ಲಿ ಸತ್ಯವಾನ್ ಸಾವಿತ್ರಿ ಕತೆಯಿದೆ. ಅದರಲ್ಲಿ ಸಾವಿತ್ರಿಯ ಪತಿ ಸತ್ಯವಾನ್ನನ್ನು ಯಮನ ಪಾಶದಿಂದ ರಕ್ಷಿಸಲು ಸಾವಿತ್ರ ವ್ರತ ಮಾಡುತ್ತಾಳೆ. ಆಕೆಯ ವ್ರತದ ಫಲವಾಹಿ ಸತ್ಯವಾನ್ ಸಾವಿತ್ರಿ ಬದುಕುಳಿತ್ತಾನೆ.
ಸತ್ಯವಾನ ಅಲ್ಪಾಯುಷಿ ಎಂಬುದು ತಿಳಿದೂ ಆತನನ್ನೇ ವರಿಸಿ, ನಂತರ ತನ್ನ ಸಚ್ಚಾರಿತ್ರ್ಯ, ಚತುರ ಮಾತುಗಳಿಂದ ಯಮನನ್ನೇ ಗೆದ್ದು ಪತಿಯನ್ನು ಉಳಿಸಿಕೊಂಡ ಮಹಾನ್ ಸ್ತ್ರೀ ಸಾವಿತ್ರಿ. ವ್ರತದ ಮೂಲಕ ಯಮನನ್ನು ಮೆಚ್ಚಿಸಿದ ಸಾವಿತ್ರಿಯ ನೆನಪಿಗಾಗಿ ಈ ದಿನವನ್ನು ವಟ ಸಾವಿತ್ರಿ ವ್ರತವನ್ನಾಗಿ ಆಚರಿಸಲಾಗುತ್ತದೆ.
ಹಿಂದೂ ಪಂಚಾಂಗದ ಪ್ರಕಾರ ಪ್ರತಿವರ್ಷ ಜ್ಯೇಷ್ಠ ಮಾಸದ ಶುದ್ಧ ಹುಣ್ಣಿಮೆಯಂದು ಈ ವ್ರತವನ್ನು ಆಚರಿಸುತ್ತಾರೆ. ಈ ವ್ರತದ ಆಚರಣೆಗೆ ಹೇಗೆ, ಈ ವ್ರತದ ಫಲವೇನು ಎಂಬುದನ್ನು ಇಲ್ಲಿ ಹೇಳಲಾಗಿದೆ.
ಎಲ್ಲೆಲ್ಲಿ ಆಚರಿಸಲಾಗುವುದು?
ಇದನ್ನು ಕರ್ನಾಟಕ ಹಾಗೂ ಉತ್ತರ ಭಾರತದಲ್ಲಿ ಆಚರಿಸುತ್ತಾರೆ. ಕೆಲವರು ವಟ ಸಾವಿತ್ರಿ ವ್ರತಕ್ಕೆ ಮೂರು ದಿನವಿರುವಾಗಲೇ ಮಡಿಯಿಂದ ಉಪವಾಸ ಮಾಡುತ್ತಾರೆ. ಇನ್ನು ಕೆಲವರು ಆ ದಿನ ಉಪವಾಸ ಮಾಡಿ, ಹುಣ್ಣಿಮೆ ಮುಗಿದು ಪಾಡ್ಯ ಶುರುವಾದ ಮೇಲೆಯೇ ಆಹಾರ ಸೇವಿಸುತ್ತಾರೆ.
ವಟ ಸಾವಿತ್ರಿ ವ್ರತ ಆಚರಣೆ ಹೇಗೆ?
ವ್ರತದ ದಿನ ಬೆಳಿಗ್ಗೆ ನಸುಕಿನಲ್ಲೇ ಎದ್ದು ತಲೆಸ್ನಾನ ಮಾಡಿ, ಮಡಿಬಟ್ಟೆ ಧರಿಸಿ ವ್ರತ ಮಾಡಬೇಕು. ಈ ವ್ರತ ಆಚರಣೆ ಮಾಡುವವರು ಮಣೆಯ ಮೇಲೆ ಅಥವಾ ಮನೆಯ ಗೋಡೆಯ ಮೇಲೆ ಯಮ, ಸಾವಿತ್ರಿ, ಸತ್ಯವಾನ, ಆಲದ ಮರಗಳನ್ನು ಗಂಧದಲ್ಲಿ ಬರೆಯುತ್ತಾರೆ. ನಂತರ ನೆಲದ ಮೇಲೆ ಅಕ್ಕಿಯನ್ನು ಹರವುತ್ತಾರೆ. ಸಾವಿತ್ರಿ ಮತ್ತು ಸತ್ಯವಾನನ ಬೊಂಬೆ ಅಥವಾ ಮೂರ್ತಿಯನ್ನು ಬಟ್ಟಲಿನಲ್ಲಿಟ್ಟು ಪೂಜಿಸುತ್ತಾರೆ. ಈ ಪೂಜೆಗೆ ಗಂಧದ ಬಟ್ಟಲಾದರೆ ಶ್ರೇಷ್ಠ ಎಂದು ಹೇಳಲಾಗುತ್ತದೆ. ಈ ಬಟ್ಟಲಿನಲ್ಲಿ ಆಲದ ಮರದ ಎಲೆಗಳನ್ನು ಇಟ್ಟು ಮಂತ್ರ ಹೇಳುತ್ತಾ ಪೂಜಿಸುತ್ತಾರೆ.
ಆಲದ ಮರಕ್ಕೆ ಪೂಜೆ
ಮನೆಯ ಒಳಗಡೆ ಪೂಜೆ ಮಾಡಿದ ಬಳಿಕ ಹೊರಗಿರುವ ಆಲದ ಮರವನ್ನು ಪೂಜಿಸುತ್ತಾರೆ. ಆಲದ ಮರದ ಸುತ್ತ ದಾರವನ್ನು ಕಟ್ಟಿ, ತಾಮ್ರ ಅಥವಾ ಯಾವುದೇ ನಾಣ್ಯಗಳನ್ನಿಟ್ಟು ಪತಿಯ ಆಯುಷ್ಯ ವೃದ್ಧಿಗೆ ಪ್ರಾರ್ಥಿಸುತ್ತಾರೆ. ಹಿರಿಯ ಮಹಿಳೆಯರು ಕಿರಿಯ ಮಹಿಳೆಯರಿಗೆ, 'ನೀನೂ ಸಾವಿತ್ರಿಯಂತಾಗು' ಎಂದು ಹಾರೈಸುತ್ತಾರೆ. ಈ ವ್ರತವನ್ನು ಪ್ರತಿವರ್ಷ ಶ್ರದ್ಧೆ ಭಕ್ತಿಯಿಂದ ಮಾಡಿದರೆ ಪತಿಯ ಆರೋಗ್ಯ ಹೆಚ್ಚಾಗುತ್ತದೆ ಎಂಬ ನಂಬಿಕೆಯಿದೆ.
ಆಲದ ಮರಕ್ಕೆ ಏಕೆ ಈ ವ್ರತದಲ್ಲಿ ವಿಶೇಷ ಸ್ಥಾನ?
ವಟ ಸಾವಿತ್ರಿ ವ್ರತ ಇದರಲ್ಲಿಯೇ ಆಲದ ಮರದ ಮಹತ್ವ ಅಡಗಿದೆ. ವಟ ವೃಕ್ಷ ಎಂದರೆ ಆಲದ ಮರ. ಯಮ ಸತ್ಯವಾನ್ ಪ್ರಾಣ ತೆಗೆಯಲು ಬಂದಾಗ ಸಾವಿತ್ರಿ ಸತ್ಯವಾನ್ನ ದೇಹವನ್ನು ತನ್ನ ತೊಡೆಯ ಮೇಲೆ ಮಲಗಿಸಿಕೊಂಡು ಆಲದ ಮರದ ಕೆಳಗಡೆ ಕೂತಿದ್ದಳು. ಈ ಮರದ ಅಡಿಯಲ್ಲಿಯೇ ಯಮನ ಬಳಿ ತನ್ನ ಪ್ರಾಣವನ್ನು ಹಿಂತಿರುಗಿಸಿ ಕೊಡುವಂತೆ ಬೇಡುತ್ತಾಳೆ. ಆಕೆಯ ಚತುರ ಮಾತುಗಳಿಗೆ ಸೋತ ಯಮ ಸತ್ಯವಾನನಿಗೆ ದೀರ್ಘಾಯುಷ್ಯ ನೀಡಿ, ದಂಪತಿಯನ್ನು ಹರಿಸುತ್ತಾನೆ.