Latest Updates
-
ತೀವ್ರ ಶಾಖದ ಅಲೆ: ಬಿಸಿಲಿನಲ್ಲಿ ವ್ಯಾಯಾಮ ಮಾಡುವ ಮುನ್ನ ಎಚ್ಚರ! -
ಅಕ್ಷಯ ತೃತೀಯ ಮದುವೆ: ಬಾಲ್ಯ ವಿವಾಹ ತಡೆಯಲು ನೀವೇನು ಮಾಡಬೇಕು? -
ಬಾಲ್ಕನಿ ಗಿಡಗಳು ಒಣಗುತ್ತಿವೆಯೇ? ಈ ಟಿಪ್ಸ್ ಪಾಲಿಸಿ! -
ಬಿಸಿಲಿನ ಬೇಗೆಯಿಂದ ಪಾರಾಗಲು ಈ ಆಹಾರಗಳೇ ನಿಮ್ಮ ರಕ್ಷಕ -
ಅಕ್ಷಯ ತೃತೀಯ 2026: ಈ ಹೊಸ ಟ್ರೆಂಡ್ಸ್ ಮಿಸ್ ಮಾಡ್ಬೇಡಿ! -
ಲಿವರ್ ಆರೋಗ್ಯಕ್ಕೆ ಈ ಸರಳ ಅಭ್ಯಾಸಗಳು ನಿಮ್ಮನ್ನು ಕಾಪಾಡುತ್ತವೆ -
ಅಕ್ಷಯ ತೃತೀಯ: ಚಿನ್ನದ ಖರೀದಿ ಮತ್ತು ನಿಶ್ಚಿತಾರ್ಥಕ್ಕೆ ಹೀಗೆ ಪ್ಲಾನ್ ಮಾಡಿ -
ದೆಹಲಿ ಧೂಳು ತಡೆಯಲು ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ -
FSSAI ದಾಳಿ: ವಿಷಕಾರಿ ಹಣ್ಣುಗಳನ್ನು ಗುರುತಿಸುವುದು ಹೇಗೆ ಗೊತ್ತಾ? -
ಅಕ್ಷಯ ತೃತೀಯ ಸಂಭ್ರಮ: ಈ ಟ್ರೆಂಡಿ ಆಭರಣಗಳೇ ಈಗ ಹವಾ
ವಿಜಯ ದಿವಸ 2022: ಇಂಡೋ-ಪಾಕ್ ಯುದ್ಧದಲ್ಲಿ ಸೋತು ಶರಣಾಗಿದ್ದರು ಪಾಕ್ನ 93,000 ಸೈನಿಕರು!
ಡಿಸೆಂಬರ್ 16ರಂದು 52ನೇ ಕಾರ್ಗಿಲ್ ವಿಜಯ ದಿವಸವನ್ನು ಆಚರಿಸಲಾಗುತ್ತಿದೆ. 1971ರಲ್ಲಿ ಭಾರತ-ಪಾಕಿಸ್ತಾನದ ನಡುವೆ ನಡೆದ ಯುದ್ಧದಲ್ಲಿ ಭಾರತ ವಂಚಕ ಪಾಕಿಸ್ತಾನವನ್ನು ಹುಟ್ಟಡಗಿಸಿ ಅಭೂತಪೂರ್ವ ಜಯ ಸಾಧಿಸದ ದಿನವನ್ನು ವಿಜಯ ದಿವಸ ಎಂದು ಆಚರಿಸಲಾಗುತ್ತಿದೆ . ಹೀಗಾಗಿ ಈ ಜಯದ ನೆಪಪಿಗಾಗಿ ಈ ದಿನವನ್ನು ಭಾರತೀಯರಾದ ನಾವು ಸಂಭ್ರಮದಿಂದ ಆಚರಣೆ ಮಾಡುತ್ತೇವೆ. ಈ ಗೆಲುವಿನ ಸಂಕೇತವಾಗಿ ಡಿ.16ನ್ನು ವಿಜಯ ದಿವಸ ಎಂದು ಪ್ರತೀ ವರ್ಷ ಆಚರಿಸಲಾಗುತ್ತದೆ.

ಈ ದಿನ ಇಂಡೋ-ಪಕ್ ಯುದ್ಧದಲ್ಲಿ ಪ್ರಾಣ ತ್ಯಾಗ ಮಾಡಿದ ಭಾರತೀಯ ಹುತಾತ್ಮ ಸೈನಿಕರಿಗೆ ಗೌರವ ನಮನ ಸಲ್ಲಿಸಲಾಗುವುದು. 1971ರ ಇಂಡೋ-ಪಾಕ್ ಯುದ್ಧವು 13 ದಿನಗಳ ಕಾಲ ನಡೆಯಿತು, ಈ ಯುದ್ಧವು ಡಿಸೆಂಬರ್ 16ರಂದು ಕೊನೆಗೊಂಡಿತು. ಈ ಯುದ್ಧದಲ್ಲಿ ಪಾಕಿಸ್ತಾನ ಸೋತು ಸುಣ್ಣವಾಗಿತ್ತು.
ಈ ಯುದ್ಧದ ಬಳಿಕ ಬಾಂಗ್ಲಾದೇಶ ಉದಯವಾಯಿತು. ಈಗೀನ ಬಾಂಗ್ಲಾದೇಶ ಆಗ ಪೂರ್ವ ಪಾಕಿಸ್ತಾನವಾಗಿತ್ತು. ಈ ಪ್ರದೇಶದ ಮೇಲೆ ಪಾಕ್ ಸೈನಿಕರಿಂದ ನಿರಂತರವಾಗಿ ದಾಳಿಯಾಗುತ್ತಿತ್ತು. ಇಲ್ಲಿಯ ಜನರ ಮೇಲೆ ಪಾಕ್ ಸೈನಿಕರು ದೌರ್ಜನ್ಯ ಎಸಗುತ್ತಿದ್ದರು, ಅತ್ಯಾಚಾರ, ಕೊಲೆ, ಸುಲಿಗೆಯಿಂದಾಗಿ ಇಲ್ಲಿಯ ಜನರು ನೆಮ್ಮದಿಯನ್ನು ಕಳೆದುಕೊಂಡಿದ್ದರು. ಪಾಕಿಸ್ತಾನ ಸೈನಿಕರು ನೀಡುತ್ತಿರುವ ಹಿಂಸೆಯಿಂದ ರೋಸಿ ಹೋದ ಅಲ್ಲಿಯ ಸುಮಾರು 9 ಲಕ್ಷ ನಿರಾಶ್ರಿತರು ಭಾರತದೊಳಕ್ಕೆ ನುಸುಳಿ ಬಂದು ಭಾರತದ ಸರ್ಕಾರದ ಮುಂದೆ ನಮ್ಮನ್ನು ರಕ್ಷಿಸುವಂತೆ ಬೇಡಿಕೊಂಡಿತ್ತು.
ಪಾಕಿಸ್ತಾನದ ಕೃತ್ಯವನ್ನು ವಿರೋಧಿಸಿ ಭಾರತ ಬಾಂಗ್ಲಾದೇಶ ಬಾಂಗ್ಲಾ ದೇಶಕ್ಕೆ ನೆರವು ನೀಡಲು ಮುಂದಾಯಿತು. 1971ರ ಡಿಸೆಂಬರ್ 3ರಂದು ಪಾಕಿಸ್ತಾನ ಸೇನೆಯ ವಿರುದ್ಧ ಸಮರ ಸಾರಲಾಯಿತು. ಭಾರತ-ಪಾಕ್ ನಡುವೆ ನಡೆದ ಯುದ್ಧದಲ್ಲಿ ಪಾಕಿಸ್ತಾನ ಕೇವಲ 13 ದಿನಗಳಲ್ಲಿ ಭಾರತೀಯ ಯೋಧರ ಮುಂದೆ ಸೋತು ಮಂಡಿಯೂರಿತು. ಪಾಕಿಸ್ತಾನದ 93 ಸಾವಿರಕ್ಕೂ ಅಧಿಕ ಸೈನಿಕರು ಭಾರತೀಯ ಸೈನಿಕರ ಎದುರು ತಮ್ಮ ಸೊಲನ್ನು ಒಪ್ಪಿಕೊಂಡರು. ಜಗತ್ತಿನಲ್ಲಿ ಇದುವರೆಗೆ ನಡಡದ ಯುದ್ಧದಲ್ಲಿ ಇಷ್ಟೊಂದು ಸೈನಿಕರು ಶರಣಾಗತಿಯಾದದ್ದು ಇದೇ ಮೊದಲಾಗಿತ್ತು.
ಭಾರತ ದೊಡ್ಡ ಮನಸ್ಸು ಮಾಡಿ ಒಪ್ಪಂದದ ಮೂಲಕ ಯುದ್ಧ ಖೈದಿಗಳನ್ನು ಬಿಡುಗಡೆ ಮಾಡಿತು. ಈ ಯುದ್ಧ ನಡೆದ ಬಳಿಕ ಬಾಂಗ್ಲಾದೇಶ ಹುಟ್ಟಿಕೊಂಡಿತು. ಬಾಂಗ್ಲಾ ದೇಶ ಇಂದು ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತದೆ. ನಮ್ಮ ಭಾರತೀಯ ಸೈನಿಕರ ಶಕ್ತಿಯನ್ನು ವಿಶ್ವಕ್ಕೆ ಪರಿಚಯಿಸಿದ ಯುದ್ಧ ಇದಾಗಿದೆ. ಈ ಯುದ್ಧ ಮುಕ್ತಾಯವಾದ ದಿನವನ್ನು ವಿಜಯ್ ದಿವಸ್ ಎಂದು ಆಚರಿಸಿ ಹುತಾತ್ಮರನ್ನು ಸ್ಮರಿಸಲಾಗುವುದು.



Click it and Unblock the Notifications











