Latest Updates
-
ಕೋಮಾದಲ್ಲಿದ್ದ ಹರೀಶ್ ರಾಣಾ ದಯಾಮರಣಕ್ಕೆ ಸುಪ್ರೀಂ ಒಪ್ಪಿಗೆ: ಈ ಕೇಸ್ ಬಗ್ಗೆ ನಿಮಗೆ ಗೊತ್ತಾ? -
ಪಂಜಾಬಿ ಸ್ಟೈಲ್ ಮಲೈ ಲಸ್ಸಿ! ಈ ರೀತಿ ಮಾಡಿ ಗಟ್ಟಿ ಕೆನೆಯ ಢಾಬಾ ಸ್ಟೈಲ್ ಲಸ್ಸಿ.. ಬಿಸಿಲ ತಾಪಕ್ಕೆ ಬೆಸ್ಟ್ ಕೂಲ್ ಡ್ರಿಂಕ್ -
ಮಾರ್ಚ್ ಅಂತ್ಯದಲ್ಲಿ ಗಜಕೇಸರಿ ಯೋಗ: ಈ ಮೂರು ರಾಶಿಯ ಜನರಿಗೆ ಒಲಿಯಲಿದೆ ಅದೃಷ್ಟ! -
ನಾಟಿ ಸ್ಟೈಲ್ನಲ್ಲಿ ಸೋಯಾ ಚಾಪ್ಸ್ ಮಾಡಿ: ಚಪಾತಿ, ಅನ್ನ, ಮುದ್ದೆ ಎಲ್ಲದ್ದಕ್ಕೂ ಬೆಸ್ಟ್! -
ತಣ್ಣೀರು ಬೇಕಾ? ಮಡಕೆ ಕೊಳ್ಳುವಾಗ ಈ ತಪ್ಪು ಮಾಡಬೇಡಿ.. ಸಮಸ್ಯೆ ಗ್ಯಾರಂಟಿ!! ಹೇಗೆ ಆಯ್ಕೆ ಮಾಡಬೇಕು? -
ನಿಮ್ಮ ಮನೆಯ ಗಡಿಯಾರ ತಪ್ಪಾದ ದಿಕ್ಕಿನಲ್ಲಿ ಇಡಲಾಗಿದ್ಯಾ? ಈ ಸಣ್ಣ ತಪ್ಪು ದೊಡ್ಡ ಸಮಸ್ಯೆ ತರಬಹುದು! -
ಶುಗರ್ ಇದ್ದರೂ ಯುಗಾದಿಗೆ ಗುಜಿಯಾ ತಿನ್ನಬಹುದು! ಸಕ್ಕರೆ ಬೇಡ.. ರುಚಿ ಅದ್ಭುತ.. ಹೆಲ್ತ್ 100ಕ್ಕೆ 100 ಸೇಫ್! -
ದೇಹ ತಂಪಾಗಿಸಲು, ತೂಕ ಇಳಿಸಲು ಈ ಬಾರ್ಲಿ ಜ್ಯೂಸ್ ಮಾಡಿ! 5 ನಿಮಿಷದೊಳಗೆ ಸಿದ್ದ! -
ರಾಹು-ಕೇತು ಸಂಯೋಗದಿಂದ ಕಾಳಸರ್ಪ ಯೋಗ: ಈ ಎಲ್ಲಾ ರಾಶಿಯವರಿಗೆ ಅದೃಷ್ಟದ ಸಮಯ! -
ಸಂಕಷ್ಟಗಳು ದೂರ, ಐಶ್ವರ್ಯ ಹತ್ತಿರ! ಕೇತು ಸಂಚಾರದಿಂದ ಇವರ ಜೀವನವೇ ಬಂಗಾರ.. ಯಾರಿಗೆ ರಾಜಯೋಗ?
Vishu 2022: ತುಳು ನಾಡಿನಲ್ಲಿ ವಿಷು ಆಚರಣೆ: ಈ ಹಬ್ಬದಲ್ಲಿ ವಿಷು ಕಣಿ ಪ್ರಮುಖ ಆಕರ್ಷಣೆ
ವಿಷು ಅಥವಾ ಬಿಷು ಶ್ರೀಕೃಷ್ಣನ ಆರಾಧಗೆ ಮೀಸಲಾಗಿರುವ ಹಬ್ಬವಾಗಿದ್ದು ಸೌರಮಾನ ಯುಗಾದಿಯಂದು ವಿಷು ಹಬ್ಬವನ್ನು ಆಚರಿಸಲಾಗುವುದು. ಈ ವರ್ಷ ಸೌರಮಾನ ಯುಗಾದಿ ಏಪ್ರಿಲ್ 15ಕ್ಕೆ ಬಂದಿದೆ.
ನಮ್ಮ ಕರ್ನಾಟಕದ ಕೆಲವು ಕಡೆ ವಿಷು ಆಚರಿಸಲಾಗುವುದು, ಅಂದರೆ ದಕ್ಷಿಣ ಕನ್ನಡ -ತುಳು ನಾಡಿನಲ್ಲಿ ಹೊಸ ವರ್ಷವೆಂದು ಆಚರಿಸಲಾಗುವುದು. ಕೇರಳದಲ್ಲಿ ವಿಷು ತುಂಬಾ ದೊಡ್ಡ ಆಚರಣೆಯಾಗಿದೆ. ತಮಿಳು ನಾಡಿನಲ್ಲಿಯೂ ವಿಷು ಹಬ್ಬವನ್ನು ಆಚರಿಸಲಾಗುವುದು.

ವಿಷುವಿನ ಮಹತ್ವ
ವಿಷು ವಸಂತ ಋತುವಿನ ಕಾಲದಲ್ಲಿ ಆಚರಿಸಲಾಗುವುದು. ಶ್ರೀ ವಿಷ್ಣು ನರಕಾಸುರನನ್ನು ವಧಿಸಿದ ದಿನದ ಸಂಕೇತವಾಗಿ ವಿಷುವನ್ನು ಆಚರಿಸಲಾಗುವುದು. ವಿಷು ದಿನ ವಿಷು ಕಣಿ ಹಾಗೂ ವಿಷು ಕೈ ನೀಟ ತುಂಬಾನೇ ವಿಶೇಷವಾಗಿದೆ.
ವಿಷು ಕಣಿ ವಿಶೇಷತೆ
ವಿಷು ಹಬ್ಬದ ದಿನ ವಿಷು ಕಣಿ ಇಡಲಾಗುವುದು. ಈ ದಿನ ಒಂದು ತಟ್ಟೆಯಲ್ಲಿ ಹೂ, ಫಲ, ಚಿನ್ನ, ಬೆಳ್ಳಿ, ನಾಣ್ಯ , ಹೊಸ ಬಟ್ಟೆ, ಕನ್ನಡಿ ಇಟ್ಟು, ಹೊನ್ನೆ ಹೂವನ್ನು ಇಟ್ಟು ಶ್ರೀಕೃಷ್ಣನ ಫೋಟೋ ಮುಂದೆ ಇಟ್ಟು ಬೆಳಗ್ಗೆ ಎದ್ದು ಆ ವಿಷು ಕಣಿ ಮೊದಲು ನೋಡಲಾಗುವುದು. ಮನೆಯಲ್ಲಿ ಮಕ್ಕಳನ್ನು ಹಿರಿಯರು ಕಣ್ಣು ಮುಚ್ಚಿ ಕರೆದುಕೊಂಡು ಬಂದು ಮೊದಲು ವಿಷು ಕಣಿ ದರ್ಶನ ಮಾಡಿಸುತ್ತಾರೆ. ವಿಷು ಕಣಿ ನೋಡುವುದರಿಂದ ವರ್ಷದ ಆರಂಭ ಶುಭವಾಗುವುದು ಎಂಬ ನಂಬಿಕೆ.
ವಿಷ್ಣು ಕನಿಯನ್ನು ಮೊದಲು ನೋಡಬೇಕು. ಯಾಕೆಂದರೆ ಹೀಗೆ ಮಾಡುವ ಪರಿಣಾಮ ವರ್ಷವಿಡಿ ಅವರಿಗೆ ಒಳ್ಳೆಯ ಅದೃಷ್ಟ ಮತ್ತು ಸಮೃದ್ಧಿ ಸಿಗುವುದು. ಇದರಿಂದಾಗಿ ವಿಷ್ಣು ಕನಿಯನ್ನು ತುಂಬಾ ಎಚ್ಚರಿಕೆಯಿಂದ ಇಡಲಾಗುತ್ತದೆ ಮತ್ತು ಧನಾತ್ಮಕತೆ ಉಂಟಾಗುವಂತೆ ಇದನ್ನು ರಚಿಸಲಾಗುತ್ತದೆ.
ಇನ್ನು ಚಿಕ್ಕ ಮಕ್ಕಳು ಹಿರಿಯರ ಪಾದ ಮುಟ್ಟಿ ನಮಸ್ಕರಿಸಿ ಆಶೀರ್ವಾದ ಪಡೆಯುತ್ತಾರೆ, ಆಗ ಅವರಿಗೆ ಹಣವನ್ನು ನೀಡಲಾಗುವುದು, ಇದನ್ನು ಕೈ ನೀಟ ಎಂದು ಕರೆಯಲಾಗುವುದು.



Click it and Unblock the Notifications












