Latest Updates
-
ಕೋಲ್ಕತ್ತಾದಲ್ಲಿ ಭಾರಿ ಮಳೆ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಮಿಸ್ ಮಾಡಬೇಡಿ! -
ಮಳೆಗಾಲದಲ್ಲಿ ಹೊಟ್ಟೆಯ ಸಮಸ್ಯೆ ಕಾಡ್ತಿದೆಯಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ -
ಧಮಾಲ್ 4 ರಿಲೀಸ್: ಅಜಯ್ ದೇವಗನ್ ಕಾಮಿಡಿ ಹಬ್ಬಕ್ಕೆ ಫ್ಯಾಮಿಲಿ ಜೊತೆ ರೆಡಿಯಾಗಿ! -
ಸಮಲಿಂಗಿ ಜೋಡಿಗಳೇ ಎಚ್ಚರ: ಗಿಫ್ಟ್ ಟ್ಯಾಕ್ಸ್ನಿಂದ ಪಾರಾಗಲು ಈ ದಾಖಲೆಗಳು ಕಡ್ಡಾಯ! -
ಅಡುಗೆ ಎಣ್ಣೆ ಬೆಲೆ ಏರಿಕೆ: ಬಜೆಟ್ ಮತ್ತು ಆರೋಗ್ಯ ಕಾಪಾಡಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್! -
ಯುಪಿಐನಲ್ಲಿ ಎಐ ಕ್ರಾಂತಿ: ಇನ್ಮುಂದೆ ನಿಮ್ಮ ಬಿಲ್ ಪಾವತಿಗಳನ್ನು ಡಿಜಿಟಲ್ ಏಜೆಂಟ್ ನೋಡಿಕೊಳ್ಳಲಿದೆ! -
ಉತ್ತರಾಖಂಡದಲ್ಲಿ ಆರೆಂಜ್ ಅಲರ್ಟ್: ಹೋಟೆಲ್ ರೂಮ್ನಲ್ಲೇ ಫಿಟ್ ಆಗಿರಲು ಈ ಸರಳ ವ್ಯಾಯಾಮಗಳನ್ನು ಮಾಡಿ! -
UGC-NET ಪರೀಕ್ಷೆಯ ಗೊಂದಲ: ವಿದ್ಯಾರ್ಥಿಗಳ ಆತಂಕ ದೂರ ಮಾಡಲು ಪೋಷಕರಿಗೆ ಇಲ್ಲಿದೆ 48 ಗಂಟೆಗಳ ಸ್ಟಡಿ-ರಿಸೆಟ್ ಪ್ಲಾನ್! -
ದೆಹಲಿ ಮಳೆ: ಗುಡುಗು-ಮಿಂಚಿನಿಂದ ನಿಮ್ಮ ಎಲೆಕ್ಟ್ರಾನಿಕ್ ವಸ್ತುಗಳನ್ನು ರಕ್ಷಿಸಲು ಈ 15 ನಿಮಿಷದ ಟಿಪ್ಸ್ ಪಾಲಿಸಿ! -
ಎನರ್ಜಿ ಡ್ರಿಂಕ್ಸ್ ಕುಡಿಯುವ ಮುನ್ನ ಎಚ್ಚರ! FSSAI ಹೊಸ ನಿಯಮ ಮತ್ತು ಆರೋಗ್ಯಕರ ಪರ್ಯಾಯಗಳು
ಝೆನ್ ಕಥೆ : ಮಹಾನುಭಾವ, ಇದೇ ಅಹಂಕಾರ!

ಎಷ್ಟೇ ಯಶಸ್ಸು, ಕೀರ್ತಿ ಲಭಿಸಿದ್ದರೂ ಪ್ರಧಾನಿ ಆಗಾಗ ತನಗೆ ಆಪ್ತರಾದ ಝೆನ್ ಗುರುಗಳ ಬಳಿ ಅಧ್ಯಯನಕ್ಕೆಂದು ಬರುತ್ತಿದ್ದ. ಆಡಳಿತಕ್ಕೆ ಸಂಬಂಧಿಸಿದಂತೆ ರಾಜ್ಯದ ಅಭಿವೃದ್ಧಿಗಾಗಿ ಪ್ರಧಾನ ಮಂತ್ರಿ ಆಗಾಗ ಝೆನ್ ಗುರುಗಳ ಬಳಿ ಉಪದೇಶ ಯಾಚಿಸುತ್ತಿದ್ದ. ಅವರಿಬ್ಬರ ನಡುವೆ ಯಾವುದೇ ಹಮ್ಮಿಬಿಮ್ಮುಗಳಿರಲಿಲ್ಲ. ಗುರು ಮತ್ತು ಶಿಷ್ಯ ಸಂಬಂಧದ ಹೊರತಾಗಿ ಅವರಿಬ್ಬರ ನಡುವೆ ಯಾವುದೇ ವ್ಯಾವಹಾರಿಕ ಸಂಬಂಧವಿರಲಿಲ್ಲ.
ಒಂದು ದಿನ ಅವನ ಸಾಮಾನ್ಯ ಭೇಟಿಯ ಸಂದರ್ಭದಲ್ಲಿ ಪ್ರಧಾನ ಮಂತ್ರಿಯು ಝೆನ್ ಗುರುವನ್ನು ಕೇಳಿದ, "ಗುರುಗಳೆ, ಬುದ್ಧ ತತ್ವದ ಪ್ರಕಾರ ಅಹಂಕಾರ ಎಂದರೆ ಏನು?" ಗುರುವಿನ ಮುಖ ಕೆಂಪಾಯಿತು, ಸಿಟ್ಟಿನಿಂದ ಪ್ರಧಾನಿಯನ್ನು ಅವಮಾನಿಸುವ ರೀತಿಯಲ್ಲಿ "ಇದೆಂಥಾ ಮೂರ್ಖ ಪ್ರಶ್ನೆ?" ಎಂದು ಏರು ದನಿಯಲ್ಲಿ ಮರು ಪ್ರಶ್ನೆ ಹಾಕಿದರು.
ಇಂಥ ಪ್ರತಿಕ್ರಿಯೆಯನ್ನು ಪ್ರಧಾನಿ ನಿರೀಕ್ಷಿಸಿರಲಿಲ್ಲ. ಈ ಅನಿರೀಕ್ಷಿತ ಪ್ರಶ್ನೆಯು ಪ್ರಧಾನಿಗೆ ಆಶ್ಚರ್ಯವನ್ನು ತಂದಿತಲ್ಲದೆ, ಸಿಟ್ಟು ಮತ್ತು ಅವಮಾನದಿಂದ ಕುದಿಯಲು ಪ್ರಾರಂಭಿಸಿದ. ಮುಖ ವಿವರ್ಣವಾಯಿತು. ಆಗ ಶಾಂತತೆಯಿಂದ ಝೆನ್ ಗುರು ನಗುತ್ತಾ ಹೇಳಿದ, "ಮಹಾನುಭಾವ, ಇದೇ ಅಹಂಕಾರ!"



Click it and Unblock the Notifications