Latest Updates
-
ತಾಯಂದಿರ ದಿನದ ಗೊಂದಲವೇ? ಅಮ್ಮ ಮತ್ತು ಅತ್ತೆ ಇಬ್ಬರನ್ನೂ ಖುಷಿಪಡಿಸಲು ಇಲ್ಲಿದೆ ಬೆಸ್ಟ್ ಪ್ಲಾನ್! -
ಅಮೆಜಾನ್ ಸೇಲ್ ಶುರು: ನಿಮ್ಮ ಬಾಲ್ಕನಿಯನ್ನು ಸುಂದರ ತೋಟವನ್ನಾಗಿಸಲು ಮಿಸ್ ಮಾಡ್ಬೇಡಿ ಈ ಬೆಸ್ಟ್ ಡೀಲ್ಸ್! -
ಬಿಸಿಲ ಧಗೆಯಿಂದ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಪಾನೀಯಗಳೇ ಮದ್ದು! -
ಅಮ್ಮನಿಗೆ ಕೊನೆಯ ನಿಮಿಷದಲ್ಲಿ ಗಿಫ್ಟ್ ಕೊಡಬೇಕಾ? ಈ ಟ್ರಿಕ್ಸ್ ಫಾಲೋ ಮಾಡಿ, ಅಮ್ಮನ ಮುಖದಲ್ಲಿ ನಗು ಮೂಡಿಸಿ! -
ಬಿಸಿಗಾಳಿಯ ಎಚ್ಚರಿಕೆ: ಮಧ್ಯಾಹ್ನ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪು ನಿಮ್ಮ ಆರೋಗ್ಯಕ್ಕೆ ಕುತ್ತು ತರಬಹುದು! -
ಬಿಸಿಗಾಳಿಯ ನಡುವೆ ಮದುವೆ ಸಂಭ್ರಮ: ಅತಿಥಿಗಳ ಸುರಕ್ಷತೆಗಾಗಿ ನೀವು ಮಾಡಲೇಬೇಕಾದ ಬದಲಾವಣೆಗಳಿವು! -
ಬಿಸಿಗಾಳಿಯ ಅಬ್ಬರ ಶುರು: ನಿಮ್ಮ ಮನೆ ತಂಪಾಗಿರಲು ಮತ್ತು ಗಿಡಗಳನ್ನು ಉಳಿಸಲು ಈ ಸೀಕ್ರೆಟ್ ಟಿಪ್ಸ್ ಮಿಸ್ ಮಾಡ್ಬೇಡಿ! -
ಸುಡುವ ಬಿಸಿಲಿಗೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರ ಕ್ರಮ ಪಾಲಿಸಿ! -
ಮದರ್ಸ್ ಡೇ 2026: ಅಮ್ಮನಿಗೆ ಸರ್ಪ್ರೈಸ್ ನೀಡಲು ಈ ವೈರಲ್ ಟ್ರೆಂಡ್ಸ್ ಫಾಲೋ ಮಾಡಿ, ಮಿಸ್ ಮಾಡ್ಬೇಡಿ! -
ಅಮ್ಮನಿಗೆ ಈ ಬಾರಿ ವಿಶೇಷ ಉಡುಗೊರೆ: ತಾಯಂದಿರ ದಿನದಂದು 20 ನಿಮಿಷದ ಯೋಗದ ಮ್ಯಾಜಿಕ್!
ಝೆನ್ ಕಥೆ : ಮಹಾನುಭಾವ, ಇದೇ ಅಹಂಕಾರ!

ಎಷ್ಟೇ ಯಶಸ್ಸು, ಕೀರ್ತಿ ಲಭಿಸಿದ್ದರೂ ಪ್ರಧಾನಿ ಆಗಾಗ ತನಗೆ ಆಪ್ತರಾದ ಝೆನ್ ಗುರುಗಳ ಬಳಿ ಅಧ್ಯಯನಕ್ಕೆಂದು ಬರುತ್ತಿದ್ದ. ಆಡಳಿತಕ್ಕೆ ಸಂಬಂಧಿಸಿದಂತೆ ರಾಜ್ಯದ ಅಭಿವೃದ್ಧಿಗಾಗಿ ಪ್ರಧಾನ ಮಂತ್ರಿ ಆಗಾಗ ಝೆನ್ ಗುರುಗಳ ಬಳಿ ಉಪದೇಶ ಯಾಚಿಸುತ್ತಿದ್ದ. ಅವರಿಬ್ಬರ ನಡುವೆ ಯಾವುದೇ ಹಮ್ಮಿಬಿಮ್ಮುಗಳಿರಲಿಲ್ಲ. ಗುರು ಮತ್ತು ಶಿಷ್ಯ ಸಂಬಂಧದ ಹೊರತಾಗಿ ಅವರಿಬ್ಬರ ನಡುವೆ ಯಾವುದೇ ವ್ಯಾವಹಾರಿಕ ಸಂಬಂಧವಿರಲಿಲ್ಲ.
ಒಂದು ದಿನ ಅವನ ಸಾಮಾನ್ಯ ಭೇಟಿಯ ಸಂದರ್ಭದಲ್ಲಿ ಪ್ರಧಾನ ಮಂತ್ರಿಯು ಝೆನ್ ಗುರುವನ್ನು ಕೇಳಿದ, "ಗುರುಗಳೆ, ಬುದ್ಧ ತತ್ವದ ಪ್ರಕಾರ ಅಹಂಕಾರ ಎಂದರೆ ಏನು?" ಗುರುವಿನ ಮುಖ ಕೆಂಪಾಯಿತು, ಸಿಟ್ಟಿನಿಂದ ಪ್ರಧಾನಿಯನ್ನು ಅವಮಾನಿಸುವ ರೀತಿಯಲ್ಲಿ "ಇದೆಂಥಾ ಮೂರ್ಖ ಪ್ರಶ್ನೆ?" ಎಂದು ಏರು ದನಿಯಲ್ಲಿ ಮರು ಪ್ರಶ್ನೆ ಹಾಕಿದರು.
ಇಂಥ ಪ್ರತಿಕ್ರಿಯೆಯನ್ನು ಪ್ರಧಾನಿ ನಿರೀಕ್ಷಿಸಿರಲಿಲ್ಲ. ಈ ಅನಿರೀಕ್ಷಿತ ಪ್ರಶ್ನೆಯು ಪ್ರಧಾನಿಗೆ ಆಶ್ಚರ್ಯವನ್ನು ತಂದಿತಲ್ಲದೆ, ಸಿಟ್ಟು ಮತ್ತು ಅವಮಾನದಿಂದ ಕುದಿಯಲು ಪ್ರಾರಂಭಿಸಿದ. ಮುಖ ವಿವರ್ಣವಾಯಿತು. ಆಗ ಶಾಂತತೆಯಿಂದ ಝೆನ್ ಗುರು ನಗುತ್ತಾ ಹೇಳಿದ, "ಮಹಾನುಭಾವ, ಇದೇ ಅಹಂಕಾರ!"



Click it and Unblock the Notifications