Latest Updates
-
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ! -
ಮಳೆಗಾಲದಲ್ಲಿ ಅಂತರಾಷ್ಟ್ರೀಯ ಯೋಗ ದಿನ: ಹಿರಿಯರು ಸುರಕ್ಷಿತವಾಗಿ ಯೋಗ ಮಾಡುವುದು ಹೇಗೆ? -
ವಿಶ್ವ ಸಂಗೀತ ದಿನ: ಸಂಗಾತಿಯೊಂದಿಗೆ ಮರೆಯಲಾಗದ ಕ್ಷಣ ಕಳೆಯಲು ಇಲ್ಲಿದೆ ಸಿಂಪಲ್ ಪ್ಲಾನ್! -
ಮುಂಬೈನಲ್ಲಿ ತೀವ್ರ ನೀರಿನ ಅಭಾವ: ಬಿಎಂಸಿ ಕಠಿಣ ನಿಯಮಗಳ ನಡುವೆ ನೀರು ಉಳಿಸಲು ಈ ಟಿಪ್ಸ್ ಪಾಲಿಸಿ -
ಮಳೆಗಾಲದಲ್ಲಿ ಸಿಕಲ್ ಸೆಲ್ ಸಮಸ್ಯೆ: ಆರೋಗ್ಯ ಕಾಪಾಡಲು ಈ ಆಹಾರ ಕ್ರಮ ಪಾಲಿಸಿ, ನೋವು ದೂರವಿಡಿ! -
ಟೆಲಿಗ್ರಾಂ ಬ್ಯಾನ್: ಜೂನ್ 22ರವರೆಗೆ ಈ ಆಪ್ಗಳನ್ನು ಬಳಸಿ, ಇಲ್ಲದಿದ್ದರೆ ತೊಂದರೆ ಕಟ್ಟಿಟ್ಟ ಬುತ್ತಿ! -
ಮಳೆಗಾಲದಲ್ಲಿ 'ರನ್ ಫಾರ್ ಯೋಗ': ಜಾರುವ ರಸ್ತೆಯಲ್ಲಿ ಸುರಕ್ಷಿತವಾಗಿ ಓಡಲು ಈ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ: ಅಪ್ಪನ ಜೊತೆಗಿನ ಮೌನ ಮುರಿಯಲು ಮತ್ತು ಸಂಬಂಧ ಗಟ್ಟಿಗೊಳಿಸಲು ಇಲ್ಲಿದೆ ಸರಳ ಟಿಪ್ಸ್ -
ಮುಂಬೈ ಜನರೇ ಎಚ್ಚರ! ಜೂನ್ 18-19ರಂದು ಭಾರಿ ಹೈ-ಟೈಡ್ ಭೀತಿ: ಪ್ರವಾಹದಿಂದ ಪಾರಾಗಲು ಈ ಮುನ್ನೆಚ್ಚರಿಕೆ ಮರೆಯದಿರಿ -
ಮಳೆಗಾಲದ ಎಚ್ಚರಿಕೆ: ಟೈಫಾಯಿಡ್ ಮತ್ತು ಸೋಂಕಿನಿಂದ ಪಾರಾಗಲು ನಿಮ್ಮ ಆಹಾರ ಕ್ರಮ ಹೀಗಿರಲಿ
ಝೆನ್ ಕಥೆ : ಮಹಾನುಭಾವ, ಇದೇ ಅಹಂಕಾರ!

ಎಷ್ಟೇ ಯಶಸ್ಸು, ಕೀರ್ತಿ ಲಭಿಸಿದ್ದರೂ ಪ್ರಧಾನಿ ಆಗಾಗ ತನಗೆ ಆಪ್ತರಾದ ಝೆನ್ ಗುರುಗಳ ಬಳಿ ಅಧ್ಯಯನಕ್ಕೆಂದು ಬರುತ್ತಿದ್ದ. ಆಡಳಿತಕ್ಕೆ ಸಂಬಂಧಿಸಿದಂತೆ ರಾಜ್ಯದ ಅಭಿವೃದ್ಧಿಗಾಗಿ ಪ್ರಧಾನ ಮಂತ್ರಿ ಆಗಾಗ ಝೆನ್ ಗುರುಗಳ ಬಳಿ ಉಪದೇಶ ಯಾಚಿಸುತ್ತಿದ್ದ. ಅವರಿಬ್ಬರ ನಡುವೆ ಯಾವುದೇ ಹಮ್ಮಿಬಿಮ್ಮುಗಳಿರಲಿಲ್ಲ. ಗುರು ಮತ್ತು ಶಿಷ್ಯ ಸಂಬಂಧದ ಹೊರತಾಗಿ ಅವರಿಬ್ಬರ ನಡುವೆ ಯಾವುದೇ ವ್ಯಾವಹಾರಿಕ ಸಂಬಂಧವಿರಲಿಲ್ಲ.
ಒಂದು ದಿನ ಅವನ ಸಾಮಾನ್ಯ ಭೇಟಿಯ ಸಂದರ್ಭದಲ್ಲಿ ಪ್ರಧಾನ ಮಂತ್ರಿಯು ಝೆನ್ ಗುರುವನ್ನು ಕೇಳಿದ, "ಗುರುಗಳೆ, ಬುದ್ಧ ತತ್ವದ ಪ್ರಕಾರ ಅಹಂಕಾರ ಎಂದರೆ ಏನು?" ಗುರುವಿನ ಮುಖ ಕೆಂಪಾಯಿತು, ಸಿಟ್ಟಿನಿಂದ ಪ್ರಧಾನಿಯನ್ನು ಅವಮಾನಿಸುವ ರೀತಿಯಲ್ಲಿ "ಇದೆಂಥಾ ಮೂರ್ಖ ಪ್ರಶ್ನೆ?" ಎಂದು ಏರು ದನಿಯಲ್ಲಿ ಮರು ಪ್ರಶ್ನೆ ಹಾಕಿದರು.
ಇಂಥ ಪ್ರತಿಕ್ರಿಯೆಯನ್ನು ಪ್ರಧಾನಿ ನಿರೀಕ್ಷಿಸಿರಲಿಲ್ಲ. ಈ ಅನಿರೀಕ್ಷಿತ ಪ್ರಶ್ನೆಯು ಪ್ರಧಾನಿಗೆ ಆಶ್ಚರ್ಯವನ್ನು ತಂದಿತಲ್ಲದೆ, ಸಿಟ್ಟು ಮತ್ತು ಅವಮಾನದಿಂದ ಕುದಿಯಲು ಪ್ರಾರಂಭಿಸಿದ. ಮುಖ ವಿವರ್ಣವಾಯಿತು. ಆಗ ಶಾಂತತೆಯಿಂದ ಝೆನ್ ಗುರು ನಗುತ್ತಾ ಹೇಳಿದ, "ಮಹಾನುಭಾವ, ಇದೇ ಅಹಂಕಾರ!"



Click it and Unblock the Notifications