Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ಝೆನ್ ಕಥೆ : ಮಹಾನುಭಾವ, ಇದೇ ಅಹಂಕಾರ!

ಎಷ್ಟೇ ಯಶಸ್ಸು, ಕೀರ್ತಿ ಲಭಿಸಿದ್ದರೂ ಪ್ರಧಾನಿ ಆಗಾಗ ತನಗೆ ಆಪ್ತರಾದ ಝೆನ್ ಗುರುಗಳ ಬಳಿ ಅಧ್ಯಯನಕ್ಕೆಂದು ಬರುತ್ತಿದ್ದ. ಆಡಳಿತಕ್ಕೆ ಸಂಬಂಧಿಸಿದಂತೆ ರಾಜ್ಯದ ಅಭಿವೃದ್ಧಿಗಾಗಿ ಪ್ರಧಾನ ಮಂತ್ರಿ ಆಗಾಗ ಝೆನ್ ಗುರುಗಳ ಬಳಿ ಉಪದೇಶ ಯಾಚಿಸುತ್ತಿದ್ದ. ಅವರಿಬ್ಬರ ನಡುವೆ ಯಾವುದೇ ಹಮ್ಮಿಬಿಮ್ಮುಗಳಿರಲಿಲ್ಲ. ಗುರು ಮತ್ತು ಶಿಷ್ಯ ಸಂಬಂಧದ ಹೊರತಾಗಿ ಅವರಿಬ್ಬರ ನಡುವೆ ಯಾವುದೇ ವ್ಯಾವಹಾರಿಕ ಸಂಬಂಧವಿರಲಿಲ್ಲ.
ಒಂದು ದಿನ ಅವನ ಸಾಮಾನ್ಯ ಭೇಟಿಯ ಸಂದರ್ಭದಲ್ಲಿ ಪ್ರಧಾನ ಮಂತ್ರಿಯು ಝೆನ್ ಗುರುವನ್ನು ಕೇಳಿದ, "ಗುರುಗಳೆ, ಬುದ್ಧ ತತ್ವದ ಪ್ರಕಾರ ಅಹಂಕಾರ ಎಂದರೆ ಏನು?" ಗುರುವಿನ ಮುಖ ಕೆಂಪಾಯಿತು, ಸಿಟ್ಟಿನಿಂದ ಪ್ರಧಾನಿಯನ್ನು ಅವಮಾನಿಸುವ ರೀತಿಯಲ್ಲಿ "ಇದೆಂಥಾ ಮೂರ್ಖ ಪ್ರಶ್ನೆ?" ಎಂದು ಏರು ದನಿಯಲ್ಲಿ ಮರು ಪ್ರಶ್ನೆ ಹಾಕಿದರು.
ಇಂಥ ಪ್ರತಿಕ್ರಿಯೆಯನ್ನು ಪ್ರಧಾನಿ ನಿರೀಕ್ಷಿಸಿರಲಿಲ್ಲ. ಈ ಅನಿರೀಕ್ಷಿತ ಪ್ರಶ್ನೆಯು ಪ್ರಧಾನಿಗೆ ಆಶ್ಚರ್ಯವನ್ನು ತಂದಿತಲ್ಲದೆ, ಸಿಟ್ಟು ಮತ್ತು ಅವಮಾನದಿಂದ ಕುದಿಯಲು ಪ್ರಾರಂಭಿಸಿದ. ಮುಖ ವಿವರ್ಣವಾಯಿತು. ಆಗ ಶಾಂತತೆಯಿಂದ ಝೆನ್ ಗುರು ನಗುತ್ತಾ ಹೇಳಿದ, "ಮಹಾನುಭಾವ, ಇದೇ ಅಹಂಕಾರ!"



Click it and Unblock the Notifications











