Latest Updates
-
ಬಿಸಿಲಿನ ತಾಪಕ್ಕೆ ದಂಪತಿಗಳ ನಡುವೆ ಜಗಳವೇ? ಸಂಬಂಧ ಗಟ್ಟಿಯಾಗಿರಲು ಇಲ್ಲಿವೆ ನೋಡಿ ಸರಳ ಉಪಾಯಗಳು -
ಬಿಸಿಲ ಬೇಗೆಯಿಂದ ತತ್ತರಿಸಿದ್ದೀರಾ? ವಿದ್ಯುತ್ ಬಿಲ್ ಇಲ್ಲದೆ ಮನೆಯನ್ನು ತಂಪಾಗಿಡಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಬಿಸಿಲ ಬೇಗೆಗೆ ರೆಡ್ ಅಲರ್ಟ್: ಹೀಟ್ ಸ್ಟ್ರೋಕ್ನಿಂದ ಪಾರಾಗಲು ಈ ಮನೆಮದ್ದುಗಳನ್ನು ಇಂದೇ ಟ್ರೈ ಮಾಡಿ! -
ಮಳೆಗಾಲದಲ್ಲಿ ಸ್ಟೈಲಿಶ್ ಆಗಿ ಕಾಣಬೇಕಾ? ಈ ಸಿಂಪಲ್ ಟಿಪ್ಸ್ ನಿಮ್ಮನ್ನು ಮಳೆಗಾಲದ ಫ್ಯಾಷನ್ ಐಕಾನ್ ಮಾಡೋದು ಗ್ಯಾರಂಟಿ! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಆರೋಗ್ಯಕ್ಕೆ ಕುತ್ತು ತಪ್ಪಿದ್ದಲ್ಲ! -
ಸೋಷಿಯಲ್ ಮೀಡಿಯಾದಲ್ಲಿ ಪ್ರೀತಿಯನ್ನು ತೋರಿಸುವ ಹೊಸ ಟ್ರೆಂಡ್: 'ಸಾಫ್ಟ್ ಲಾಂಚ್' ಮೂಲಕ ನಿಮ್ಮ ಸಂಬಂಧವನ್ನು ಭದ್ರಪಡಿಸಿಕೊಳ್ಳಿ! -
ಹೀಟ್ವೇವ್ ಎಚ್ಚರಿಕೆ: ಸುಡುವ ಬಿಸಿಲಲ್ಲೂ ನಿಮ್ಮ ಮನೆಯನ್ನು ತಂಪಾಗಿಡಲು ಮತ್ತು ಗಿಡಗಳನ್ನು ಉಳಿಸಲು ಈ ಟಿಪ್ಸ್ ಸಾಕು! -
ಬಿಸಿಲ ಬೇಗೆಗೆ ಸುಸ್ತಾಗಿದ್ದೀರಾ? ಹೀಟ್ವೇವ್ನಿಂದ ಪಾರಾಗಲು ಈ ಆಹಾರ ಕ್ರಮಗಳನ್ನು ಮರೆಯದೆ ಪಾಲಿಸಿ! -
ಮುಟ್ಟಿನ ನೈರ್ಮಲ್ಯ ದಿನ: ಕೇವಲ 200 ರೂಪಾಯಿಗೂ ಕಡಿಮೆ ಬೆಲೆಯಲ್ಲಿ ಸಿಗುತ್ತಿವೆ ಈ ಅಗತ್ಯ ಉತ್ಪನ್ನಗಳು, ಮಿಸ್ ಮಾಡ್ಬೇಡಿ! -
ಬಿಸಿಲಿನಲ್ಲಿ ಮದುವೆ ಮಾಡ್ತಿದ್ದೀರಾ? ಅತಿಥಿಗಳ ಆರೋಗ್ಯಕ್ಕಾಗಿ ಈ 5 ಬದಲಾವಣೆಗಳನ್ನು ಮರೆಯಬೇಡಿ!
ಝೆನ್ ಕಥೆ : ಮಹಾನುಭಾವ, ಇದೇ ಅಹಂಕಾರ!

ಎಷ್ಟೇ ಯಶಸ್ಸು, ಕೀರ್ತಿ ಲಭಿಸಿದ್ದರೂ ಪ್ರಧಾನಿ ಆಗಾಗ ತನಗೆ ಆಪ್ತರಾದ ಝೆನ್ ಗುರುಗಳ ಬಳಿ ಅಧ್ಯಯನಕ್ಕೆಂದು ಬರುತ್ತಿದ್ದ. ಆಡಳಿತಕ್ಕೆ ಸಂಬಂಧಿಸಿದಂತೆ ರಾಜ್ಯದ ಅಭಿವೃದ್ಧಿಗಾಗಿ ಪ್ರಧಾನ ಮಂತ್ರಿ ಆಗಾಗ ಝೆನ್ ಗುರುಗಳ ಬಳಿ ಉಪದೇಶ ಯಾಚಿಸುತ್ತಿದ್ದ. ಅವರಿಬ್ಬರ ನಡುವೆ ಯಾವುದೇ ಹಮ್ಮಿಬಿಮ್ಮುಗಳಿರಲಿಲ್ಲ. ಗುರು ಮತ್ತು ಶಿಷ್ಯ ಸಂಬಂಧದ ಹೊರತಾಗಿ ಅವರಿಬ್ಬರ ನಡುವೆ ಯಾವುದೇ ವ್ಯಾವಹಾರಿಕ ಸಂಬಂಧವಿರಲಿಲ್ಲ.
ಒಂದು ದಿನ ಅವನ ಸಾಮಾನ್ಯ ಭೇಟಿಯ ಸಂದರ್ಭದಲ್ಲಿ ಪ್ರಧಾನ ಮಂತ್ರಿಯು ಝೆನ್ ಗುರುವನ್ನು ಕೇಳಿದ, "ಗುರುಗಳೆ, ಬುದ್ಧ ತತ್ವದ ಪ್ರಕಾರ ಅಹಂಕಾರ ಎಂದರೆ ಏನು?" ಗುರುವಿನ ಮುಖ ಕೆಂಪಾಯಿತು, ಸಿಟ್ಟಿನಿಂದ ಪ್ರಧಾನಿಯನ್ನು ಅವಮಾನಿಸುವ ರೀತಿಯಲ್ಲಿ "ಇದೆಂಥಾ ಮೂರ್ಖ ಪ್ರಶ್ನೆ?" ಎಂದು ಏರು ದನಿಯಲ್ಲಿ ಮರು ಪ್ರಶ್ನೆ ಹಾಕಿದರು.
ಇಂಥ ಪ್ರತಿಕ್ರಿಯೆಯನ್ನು ಪ್ರಧಾನಿ ನಿರೀಕ್ಷಿಸಿರಲಿಲ್ಲ. ಈ ಅನಿರೀಕ್ಷಿತ ಪ್ರಶ್ನೆಯು ಪ್ರಧಾನಿಗೆ ಆಶ್ಚರ್ಯವನ್ನು ತಂದಿತಲ್ಲದೆ, ಸಿಟ್ಟು ಮತ್ತು ಅವಮಾನದಿಂದ ಕುದಿಯಲು ಪ್ರಾರಂಭಿಸಿದ. ಮುಖ ವಿವರ್ಣವಾಯಿತು. ಆಗ ಶಾಂತತೆಯಿಂದ ಝೆನ್ ಗುರು ನಗುತ್ತಾ ಹೇಳಿದ, "ಮಹಾನುಭಾವ, ಇದೇ ಅಹಂಕಾರ!"



Click it and Unblock the Notifications