Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಗಣೇಶ ಚತುರ್ಥಿ 2020: ಸಂಕಷ್ಟ ಚತುರ್ಥಿ ವ್ರತ ಮಾಡಿ-ಎಲ್ಲಾ ಸಂಕಷ್ಟ ದೂರವಾಗುತ್ತದೆ

ಪಂಚಾಂಗದ ಪ್ರಕಾರ ಹುಣ್ಣಿಮೆಯ ಅಥವಾ ಕೃಷ್ಣ ಪಕ್ಷದ ನಾಲ್ಕನೇ ದಿನದಂದು ಪ್ರತೀ ತಿಂಗಳು ಸಂಕಷ್ಟ ಚತುರ್ಥಿ ಆಚರಿಸಲಾಗುವುದು. ಇದು ಗಣಪತಿ ದೇವರಿಗೆ ತುಂಬಾ ಪವಿತ್ರವಾಗಿರುವ ದಿನ. ಸಂಕಷ್ಟಿ ಚತುರ್ಥಿಯಂದು ಹೆಚ್ಚಿನ ಮಹಿಳೆಯರು ತಮ್ಮ ಕುಟುಂಬದವರ ಸುಖ, ಸಮೃದ್ಧಿಗಾಗಿ ಉಪವಾಸ ವ್ರತ ಕೈಗೊಳ್ಳುವರು. ಸಂಕಷ್ಟಿಯೆಂದರೆ ಕಠಿಣ ಸಮಸ್ಯೆಯಿಂದ ಹೊರಬರುವುದು ಎಂದರ್ಥವಾಗಿದೆ.
ಉಪವಾಸ ವ್ರತ ಕೈಗೊಳ್ಳುವುದರಿಂದ ಜೀವನದಲ್ಲಿ ಬರುವಂತಹ ಎಲ್ಲಾ ರೀತಿಯ ಸಮಸ್ಯೆಗಳು ಹಾಗೂ ವಿಘ್ನಗಳನ್ನು ಗಣಪತಿ ದೇವರು ನಿವಾರಣೆ ಮಾಡುತ್ತಾರೆ ಎಂದು ನಂಬಲಾಗಿದೆ. ಈ ದಿನ ಜನರು ತುಂಬಾ ಕಠಿಣ ವ್ರತ ಕೈಗೊಳ್ಳುವರು ಮತ್ತು ರಾತ್ರಿ ಚಂದ್ರನ ನೋಡಿದ ಬಳಿಕ ಉಪವಾಸ ಕೈಬಿಡುವರು. ಈ ಸಾಲಿನಲ್ಲಿ ಆಗಸ್ಟ್ 22ರಂದು ಸಂಕಷ್ಟಿ ಚತುರ್ಥಿ ಇೆದೆ
ಪ್ರತೀ ತಿಂಗಳು ಸಂಕಷ್ಟಿ ಚತುರ್ಥಿ ಆಚರಿಸಲಾಗುತ್ತದೆ ಮತ್ತು ಈ ವೇಳೆ ಗಣಪತಿಯನ್ನು ವಿವಿಧ ಹೆಸರು ಮತ್ತು ಪೀಠ(ಕಮಲದ ದಳಗಳು) ಗಳಿಂದ ಪೂಜಿಸಲಾಗುವುದು. ಸಂಕಷ್ಟ ಚತುರ್ಥಿಯಂದು ಗಣೇಶನನ್ನು ಪೂಜಿಸುವ ವೇಳೆ ಪ್ರತಿಯೊಂದು ತಿಂಗಳಿಗೂ ಅದರದ್ದೇ ಆಗಿರುವ ಕಥೆಯಿದೆ. ಗಣೇಶನನ್ನು ಹೊರತುಪಡಿಸಿ, ಶಿವನನ್ನು ಕೂಡ ಪೂಜಿಸಲಾಗುವುದು. ಸಂಕಷ್ಟಿ ಚತುದರ್ಶಿಯ ಪುರಾಣದ ಬಗ್ಗೆ ತಿಳಿಯುವ....

ಹಿಂದೂ ಸಂಕಷ್ಟ ಚತುದರ್ಶಿಯ ಪುರಾಣ
ಗಣೇಶನ ಕಥೆಯು ಹೆಚ್ಚಿನವರಿಗೆ ತಿಳಿದೇ ಇದೆ. ಪಾರ್ವತಿ ಮಾತೆಯು ತನ್ನ ಮೇಲೆ ಹಚ್ಚಿಕೊಂಡಿರುವ ದಪ್ಪಗಿನ ಪದರವನ್ನು ತೆಗೆದು ಗಣಪತಿಯನ್ನು ರಚಿಸಿ, ಆತನನ್ನು ತನ್ನ ಮಗನೆಂದು ಸ್ವೀಕರಿಸುವಳು. ಒಂದು ದಿನ ಸ್ನಾನ ಗೃಹದ ಹೊರಗಡೆ ಕಾವಲು ಕಾಯುವಂತೆ ಗಣೇಶನಿಗೆ ಪಾರ್ವತಿಯು ಆಜ್ಞೆ ಮಾಡುವಳು. ಶಿವನು ತನ್ನ ಗಣಗಳೊಂದಿಗೆ ಇಲ್ಲಿಗೆ ಬಂದಾಗ ಶಿವನ ಬಗ್ಗೆ ತಿಳಿಯದೆ ಗಣೇಶನು ಪ್ರವೇಶ ನೀಡುವುದಿಲ್ಲ.

ಬ್ರಹ್ಮಾಂಡವನ್ನೇ ನಾಶ ಮಾಡಲು ಪಾರ್ವತಿ ಮುಂದಾದಳು!
ಗಣೇಶನು ತನ್ನ ಮಗನೆಂದು ತಿಳಿಯದೆ ಆತ ಬಾಲಕನ ತಲೆ ಕಡಿಯಲು ತನ್ನ ಗಣಗಳಿಗೆ ಆದೇಶ ನೀಡುವನು. ಗಣೇಶನ ತಲೆ ಕಡಿದಿರುವುದನ್ನು ಕೇಳಿದ ಆದಿಶಕ್ತಿಯ ರೂಪ, ಪಾರ್ವತಿ ದೇವಿಯು ತುಂಬಾ ದುಃಖಿತಳಾಗುವಳು ಮತ್ತು ಕ್ರೋಧಗೊಂಡು ಇಡೀ ಬ್ರಹ್ಮಾಂಡವನ್ನೇ ನಾಶ ಮಾಡಿ ಬಿಡುವುದಾಗಿ ಹೇಳುವಳು. ಆಕೆಯನ್ನು ಒಲಿಸಿಕೊಳ್ಳಲು ಶಿವ ದೇವರು ಗಣೇಶನಿಗೆ ಮರು ಜೀವ ನೀಡುವುದಾಗಿ ಹೇಳುವರು. ಇದರಿಂದಾಗಿ ಗಣೇಶನ ತಲೆಯು ಆನೆಯ ತಲೆಯಾಯಿತು. ಇದರ ಬಳಿಕ ಗಣೇಶನಿಗೆ ಮೊದಲ ಪೂಜೆ ಸಲ್ಲಬೇಕು. ಆತನನ್ನು ಜ್ಞಾನ, ಸುಖ ಹಾಗೂ ಸಮೃದ್ಧಿಯ ದೇವರು ಎಂದು ಪೂಜಿಸಬೇಕೆಂದು ಮಹಾದೇವನು ಆದೇಶ ನೀಡುವನು.

ಎಲ್ಲಾ ದೇವರಿಗಿಂತ ಮೊದಲು ಗಣೇಶನ ಪೂಜೆ ಮಾಡಲಾಗುತ್ತದೆ
ಇದರಿಂದ ಯಾವುದೇ ಕಾರ್ಯ ಮಾಡಬೇಕಾದರೂ ಮೊದಲು ಗಣೇಶನನ್ನು ಪೂಜೆ ಮಾಡಿ ವಿಘ್ನ ನಿವಾರಣೆ ಮಾಡಲಾಗುತ್ತದೆ. ಎಲ್ಲಾ ದೇವರಿಗಿಂತ ಮೊದಲು ಗಣೇಶನ ಪೂಜೆ ಮಾಡಲಾಗುತ್ತದೆ. ಸಂಕಷ್ಟಿ ಚತುರ್ಥಿಯಂದು ಶಿವ ದೇವರು ಹೆಚ್ಚಿನ ಶಕ್ತಿ ನೀಡುವರು. ಇದರಿಂದ ಸಂಕಷ್ಟಿಯಂದು ಸಂಕಷ್ಟಹರ ಅಥವಾ ವಿಘ್ನವಿನಾಶಕನನ್ನು ಪೂಜಿಸಲಾಗುವುದು.

ಸಂಕಷ್ಟ ಚತುದರ್ಶಿಯು ತುಂಬಾ ಪವಿತ್ರ ಪೂಜೆ
ಸಂಕಷ್ಟ ಚತುದರ್ಶಿಯು ತುಂಬಾ ಪವಿತ್ರ ಪೂಜೆಯಾಗಿದೆ. ಈ ಪೂಜೆಯನ್ನು ಕುಟುಂಬದ ಸುಖ, ಸಮೃದ್ಧಿಗಾಗಿ ಮಾಡಲಾಗುತ್ತದೆ. ಸಂಕಷ್ಟಿ ಚತುದರ್ಶಿಯಮದು ಸೂರ್ಯಾಸ್ತದ ಬಳಿಕ ಪೂಜೆ ಮಾಡಲಾಗುವುದು. ಶುದ್ಧೀಕರಿಸಿದ ಬಳಿಕ ಗಣೀಶನ ಮೂರ್ತಿಯನ್ನು ಇಟ್ಟು, ಅದಕ್ಕೆ ಹೂಗಳು ಮತ್ತು ಕದಿಕೆ ಹುಲ್ಲನ್ನು ಇಟ್ಟು ಪೂಜಿಸಲಾಗುತ್ತದೆ. ಈ ವೇಳೆ ಗಣೇಶನಿಗೆ ಮೋದಕ ಮತ್ತು ಲಾಡು ಕೂಡ ಅರ್ಪಿಸಲಾಗುವುದು. ಸೂರ್ಯಾಸ್ತದ ಬಳಿಕ ವ್ರತಕಥೆ ಅಥವಾ ಆ ತಿಂಗಳಿನ ಕಥೆಯ ಮೂಲಕ ಪೂಜೆ ಆರಂಭವಾಗುವುದು. ಕುಟುಂಬವು ಸುಖಸಮೃದ್ಧಿಯಿಂದ ಇರಲಿ ಎಂದು ದಂಪತಿಯು ಈ ಪೂಜೆ ಮಾಡುವರು.



Click it and Unblock the Notifications