Latest Updates
-
ಅಮ್ಮನಿಗೆ ಕೊನೆಯ ನಿಮಿಷದಲ್ಲಿ ಗಿಫ್ಟ್ ಕೊಡಬೇಕಾ? ಈ ಟ್ರಿಕ್ಸ್ ಫಾಲೋ ಮಾಡಿ, ಅಮ್ಮನ ಮುಖದಲ್ಲಿ ನಗು ಮೂಡಿಸಿ! -
ಬಿಸಿಗಾಳಿಯ ಎಚ್ಚರಿಕೆ: ಮಧ್ಯಾಹ್ನ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪು ನಿಮ್ಮ ಆರೋಗ್ಯಕ್ಕೆ ಕುತ್ತು ತರಬಹುದು! -
ಬಿಸಿಗಾಳಿಯ ನಡುವೆ ಮದುವೆ ಸಂಭ್ರಮ: ಅತಿಥಿಗಳ ಸುರಕ್ಷತೆಗಾಗಿ ನೀವು ಮಾಡಲೇಬೇಕಾದ ಬದಲಾವಣೆಗಳಿವು! -
ಬಿಸಿಗಾಳಿಯ ಅಬ್ಬರ ಶುರು: ನಿಮ್ಮ ಮನೆ ತಂಪಾಗಿರಲು ಮತ್ತು ಗಿಡಗಳನ್ನು ಉಳಿಸಲು ಈ ಸೀಕ್ರೆಟ್ ಟಿಪ್ಸ್ ಮಿಸ್ ಮಾಡ್ಬೇಡಿ! -
ಸುಡುವ ಬಿಸಿಲಿಗೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರ ಕ್ರಮ ಪಾಲಿಸಿ! -
ಮದರ್ಸ್ ಡೇ 2026: ಅಮ್ಮನಿಗೆ ಸರ್ಪ್ರೈಸ್ ನೀಡಲು ಈ ವೈರಲ್ ಟ್ರೆಂಡ್ಸ್ ಫಾಲೋ ಮಾಡಿ, ಮಿಸ್ ಮಾಡ್ಬೇಡಿ! -
ಅಮ್ಮನಿಗೆ ಈ ಬಾರಿ ವಿಶೇಷ ಉಡುಗೊರೆ: ತಾಯಂದಿರ ದಿನದಂದು 20 ನಿಮಿಷದ ಯೋಗದ ಮ್ಯಾಜಿಕ್! -
ದೆಹಲಿ ಮಳೆಯಲ್ಲಿ ಮದುವೆ ಸಂಭ್ರಮಕ್ಕೆ ಅಡ್ಡಿಯೇ? ಈ ಸಣ್ಣ ಬದಲಾವಣೆಗಳು ನಿಮ್ಮ ಮದುವೆಯನ್ನು ಉಳಿಸುತ್ತವೆ! -
ಬಿರುಗಾಳಿ ಅಬ್ಬರಕ್ಕೆ ಬಾಲ್ಕನಿ ಗಾರ್ಡನ್ ಹಾಳಾಗುತ್ತಾ? ನಿಮ್ಮ ಮನೆ ಮತ್ತು ಗಿಡಗಳನ್ನು ರಕ್ಷಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ಬೇಗೆಗೆ ಸುಸ್ತಾಗಿದ್ದೀರಾ? ದೆಹಲಿ ಸರ್ಕಾರದ ಈ 'ರಿಲೀಫ್ ವ್ಯಾನ್' ನಿಮ್ಮ ಜೀವ ರಕ್ಷಕವಾಗಬಹುದು!
ರಾಮನ ಹೆಜ್ಜೆ ಗುರುತು ಸೀತೆ ಲಕ್ಷ್ಮಣರಿಗೆ ಪಾವನ ಏಕೆ?
ರಾಮಾಯಣವನ್ನು ಓದಿದ ಮೇಲೆ ಅಥವಾ ಕೇಳಿದ ಮೇಲೆ ಒಂದು ವಿಚಾರ ನಮಗೆ ಮತ್ತೆ ಮತ್ತೆ ಅರ್ಥವಾಗುತ್ತದೆ. ಅದು ರಾಮ ಎಲ್ಲಿಯೇ ಹೋದರು ಸೀತೆ ಮತ್ತು ಲಕ್ಷ್ಮಣರು ಆತನ ಹಿಂದೆಯೇ ಹೋಗುತ್ತಿದ್ದರು ಎಂದು. ರಾಮ ಎಲ್ಲಿಯೇ ಹೋದರು ಇವರು ಆತನ ಹಿಂದೆ ಅಲ್ಲಿ ಹಾಜರಿರುತ್ತಿದ್ದರು ಹಾಗು ಜನರು ಸಹ ಇವರನ್ನು ಬರ ಮಾಡಿಕೊಳ್ಳಲು ಮತ್ತು ಅವರಿಗೆ ಆತಿಥ್ಯ ನೀಡಲು ಹಾಗೂ ಭೇಟಿ ಮಾಡಲು ಕಾಯುತ್ತ ಕುಳಿತಿರುತ್ತಿದ್ದರು ಎಂದು ನಮಗೆ ತಿಳಿದು ಬರುತ್ತದೆ.
ಆದರೂ ಒಂದು ವಿಚಾರ ನಮಗೆ ತಿಳಿಯುತ್ತದೆ. ಅದೇನೆಂದರೆ ಸೀತೆ ಮತ್ತು ಲಕ್ಷ್ಮಣ ಇಬ್ಬರೂ ರಾಮನ ಹಿಂದೆ ಹೋದರೆ ಹೊರತು, ಅಪ್ಪಿ-ತಪ್ಪಿ ಸಹ ಆತನ ಮುಂದೆ ನಡೆಯಲಿಲ್ಲ, ಯಾವಾಗಲು ಇವರು ರಾಮನನ್ನೆ ಹಿಂಬಾಲಿಸಿದರು. ವಿಚಿತ್ರ ಎನಿಸಿದರು ಇದು ಸತ್ಯ. ಇದಕ್ಕೆ ಕಾರಣ ಅವರಲ್ಲಿ ಇದ್ದ ನಂಬಿಕೆಯೇ ಕಾರಣ, ಅದೇ ಅವರನ್ನು ಹೀಗೆ ಮಾಡಿಸಿತ್ತು. ಹಾಗಾದರೆ ಯಾವ ನಂಬಿಕೆ ಮತ್ತು ಆಚಾರ ಸೀತೆ ಮತ್ತು ಲಕ್ಷ್ಮಣರನ್ನು ಎಂದೆಂದಿಗು ರಾಮನ ಹಿಂದೆಯೇ ಹೋಗುವಂತೆ ಮಾಡಿತ್ತು? ಎಂಬುದನ್ನು ನೋಡೋಣ.

ಪ್ರಯಾಣ ಮಾಡುವಾಗ ಸೀತೆಯು ರಾಮನ ಹಿಂದೆಯೇ ನಡೆದುಕೊಂಡು ಬರುತ್ತಿದ್ದಳು. ಹೀಗೆ ಬರುವಾಗ ಆಕೆ ಸುಮ್ಮನೆ ಬರುತ್ತಿರಲಿಲ್ಲ, ಸೀತೆ ಅಪ್ಪಿ-ತಪ್ಪಿ ಸಹ ರಾಮನ ಹೆಜ್ಜೆ ಗುರುತುಗಳನ್ನು ತುಳಿಯಲು ಹೋಗುತ್ತಿರಲಿಲ್ಲ. ಇದಕ್ಕಾಗಿ ಆಕೆಯು ನಡೆಯುವಾಗ ರಾಮನ ಹೆಜ್ಜೆ ಗುರುತುಗಳ ನಡುವೆಯೇ ಹೆಜ್ಜೆ ಇರಿಸಿ ನಡೆದುಕೊಂಡು ಬರುತ್ತಿದ್ದಳು. ಇದರ ಜೊತೆಗೆ ಲಕ್ಷ್ಮಣನು ಇವರಿಬ್ಬರ ಹಿಂದೆ ನಡೆದುಕೊಂಡು ಬರುತ್ತಿದ್ದನು. ಆತನು ಸಹ ರಾಮ-ಸೀತೆ ಇಬ್ಬರ ಹೆಜ್ಜೆ ಗುರುತುಗಳನ್ನು ತುಳಿಯದೆ ಬರುತ್ತಿದ್ದನು. ರಾಮಾಯಣದಲ್ಲಿ ಬಚ್ಚಿಟ್ಟ ಸತ್ಯ; ಸೀತಾದೇವಿ ರಾವಣನ ಪುತ್ರಿ?
ಸೀತೆ ರಾಮನ ಹೆಜ್ಜೆ ಗುರುತನ್ನು ತುಳಿಯದೆ ಇರುವುದಕ್ಕು, ಲಕ್ಷ್ಮಣ ಸೀತಾ-ರಾಮರ ಹೆಜ್ಜೆ ಗುರುತುಗಳನ್ನು ತುಳಿಯದೆ ಇರುವುದು ಕುಟುಂಬ ಗೌರವದ ಒಂದು ಅಮೋಘ ಉದಾಹರಣೆಯಾಗಿ ನಿಲ್ಲುತ್ತದೆ. ಏಕೆಂದರೆ ರಾಮನು ಸೀತೆಯ ಪತಿಯಾದ್ದರಿಂದ ಆಕೆ ತನ್ನ ಪತಿಯ ಹೆಜ್ಜೆ ಗುರುತುಗಳನ್ನು ತುಳಿಯದೆ ಆತನಿಗೆ ಗೌರವವನ್ನು ನೀಡುತ್ತಿದ್ದಳು.
ಲಕ್ಷ್ಮಣನಿಗೆ ರಾಮ ಮತ್ತು ಸೀತೆ ಇಬ್ಬರೂ ಹಿರಿಯರಾದ್ದರಿಂದ, ಆತನು ಈ ಇಬ್ಬರ ಹೆಜ್ಜೆ ಗುರುತುಗಳನ್ನು ತುಳಿಯದೆ ಅವರಿಬ್ಬರಿಗೆ ಗೌರವವನ್ನು ನೀಡುತ್ತಿದ್ದನು. ಇಲ್ಲಿ ಸೀತಾ ಮತ್ತು ಲಕ್ಷ್ಮಣರ ನಡವಳಿಕೆಯು ಕುಟುಂಬಗಳ ಮೌಲ್ಯವನ್ನು ಮತ್ತು ಹಿರಿಯರಿಗೆ ನೀಡುವ ಗೌರವವನ್ನು ಸಾರುತ್ತದೆ. ಕುಟುಂಬದ ಹಿರಿಯರಿಗೆ ಗೌರವ ನೀಡದಿದ್ದಲ್ಲಿ ಅವರನ್ನು ನಿಂದಿಸಿದಂತೆಯೇ ಆಗುತ್ತದೆ.



Click it and Unblock the Notifications