Latest Updates
-
ಪುರಿ ರಥಯಾತ್ರೆ 2026: ಭಕ್ತರೇ ಎಚ್ಚರ! ಸುಗಮ ದರ್ಶನಕ್ಕೆ ಇಲ್ಲಿವೆ ಪ್ರಮುಖ ಟಿಪ್ಸ್ -
ಭಾರತ-ಇಂಗ್ಲೆಂಡ್ ಪಂದ್ಯ ವೀಕ್ಷಿಸುವಾಗ ಬೆನ್ನು ನೋವು ಕಾಡುತ್ತಿದೆಯೇ? ಈ 8 ನಿಮಿಷದ ವ್ಯಾಯಾಮ ಟ್ರೈ ಮಾಡಿ! -
ಮದುವೆ ಸಂಭ್ರಮಕ್ಕೆ ಸಿದ್ಧರಾಗಿದ್ದೀರಾ? ಮಳೆಗಾಲದ ಮದುವೆಗೆ ಈ 5 ಟಿಪ್ಸ್ ಮರೆಯದಿರಿ! -
ಬೆಲೆ ಏರಿಕೆಯ ಬಿಸಿ: ಜೂನ್ CPI ವರದಿ ಮತ್ತು ನಿಮ್ಮ ಕಿಚನ್ ಬಜೆಟ್ ಉಳಿಸುವ ಸ್ಮಾರ್ಟ್ ಟಿಪ್ಸ್ -
ಸ್ವಿಗ್ಗಿ ಇನ್ಸ್ಟಾಮಾರ್ಟ್ ಗ್ರಾಹಕರಿಗೆ ಎಚ್ಚರಿಕೆ: ಹಾಲು, ಮೊಟ್ಟೆ ಖರೀದಿಸುವಾಗ ಈ ತಪ್ಪು ಮಾಡಬೇಡಿ! -
4-0 ಸೋಲಿನ ಆಘಾತದಲ್ಲಿ ಭಾರತೀಯ ಫ್ಯಾನ್ಸ್: ಏಕದಿನ ಸರಣಿಗೆ ಕಮ್ಬ್ಯಾಕ್ ಸಾಧ್ಯವೇ? ಇಲ್ಲಿದೆ ಪಂದ್ಯಗಳ ವೇಳಾಪಟ್ಟಿ ಮತ್ತು ಹೆಲ್ತ್ ಟಿಪ್ಸ್! -
ಮಾಸಿಕ ಶಿವರಾತ್ರಿ ಉಪವಾಸ: ಸುಸ್ತಾಗದಂತೆ ಇರಲು 6 ನಿಮಿಷದ ಸರಳ ವ್ಯಾಯಾಮ ಮತ್ತು ಟಿಪ್ಸ್ -
ಮನೆಯವರ ವಿರೋಧದ ನಡುವೆ ಮದುವೆ: ಅಲಹಾಬಾದ್ ಹೈಕೋರ್ಟ್ನಿಂದ ಜೋಡಿಗಳಿಗೆ ಸಿಕ್ಕಿತು ಭರ್ಜರಿ ರಕ್ಷಣೆ! -
ಮಳೆ ನಂತರ ದೆಹಲಿ-ಎನ್ಸಿಆರ್ನಲ್ಲಿ ಶುದ್ಧ ಗಾಳಿ: ನಿಮ್ಮ ಮನೆಯನ್ನು ಫ್ರೆಶ್ ಆಗಿಡಲು ಈ ಸರಳ ಟಿಪ್ಸ್ ಪಾಲಿಸಿ! -
ಯೋಗಿನಿ ಏಕಾದಶಿ: ಮಧುಮೇಹಿಗಳು ಉಪವಾಸ ಮಾಡುವಾಗ ಈ ಆರೋಗ್ಯ ಟಿಪ್ಸ್ ಮರೆಯದಿರಿ!
ದೀಪಗಳಿಂದಲೇ ದೀಪಾವಳಿ ಹಬ್ಬಕ್ಕೆ ಮೆರುಗು ಏಕೆ?
ದೀಪಾವಳಿ ಹಬ್ಬವು ಹಿಂದೂ ಜನಾಂಗದವರಿಗೆ ಒಂದು ಅಪಾರ ಪ್ರಸಿದ್ಧ ಹಬ್ಬ. ಅಕ್ಟೋಬರ್ ಅಥವ ನವೆಂಬರ್ ತಿಂಗಳಲ್ಲಿ ಆಚರಿಸಲಾಗುವ ಪ್ರಮುಖ ಭಾರತೀಯ ಹಬ್ಬಗಳಲ್ಲಿ ಇದು ಒಂದಾಗಿದೆ. ದೀಪಾವಳಿ ಅಂದರೆ 'ದೀಪಗಳ ಸಾಲು" ಎಂದರ್ಥ. ಆದ್ದರಿಂದ ದೀಪಗಳು ಈ ಹಬ್ಬದ ಸಮಯದಲ್ಲಿ ಅತ್ಯಂತ ಪ್ರಮುಖ ಪಾತ್ರವಹಿಸಿಕೊಳ್ಳುತ್ತದೆ. ದೀಪಾವಳಿ ಸಮಯದಲ್ಲಿ ಪ್ರತಿ ಮನೆಯಲ್ಲಿ ಎಣ್ಣೆ ದೀಪಗಳು, ಮೇಣದ ಬತ್ತಿಗಳು ಮತ್ತು ಬಣ್ಣ ಬಣ್ಣದ ವಿದ್ಯುತ್ ದೀಪಗಳನ್ನು ಹಚ್ಚಿ ಅಲಂಕರಿಸುತ್ತಾರೆ.
ಸಾಂಪ್ರದಾಯಿಕವಾಗಿ ಬಹಳಷ್ಟು ಮನೆಗಳಲ್ಲಿ ಹತ್ತಿಯಿಂದ ತಯಾರಿಸಿದ ಬತ್ತಿಗಳನ್ನು ಮಣ್ಣಿನ ಹಣತೆಯಲ್ಲಿಟ್ಟು ಬೆಳಗುತ್ತಾರೆ. ಆದಾಗ್ಯೂ ಬದಲಾಗುತ್ತಿರುವ ಈ ಆಧುನಿಕ ಕಾಲದಲ್ಲಿ ಮಣ್ಣಿನ ಹಣತೆಗಳನ್ನು ಮೇಣದ ಬತ್ತಿಗಳಿಂದ ಬದಲಾಯಿಸಲ್ಪಟ್ಟಿದೆ. ಆದರೂ ಬೆಳಕಿನಹಬ್ಬದ ಕಲ್ಪನೆಯೇನೂ ಬದಲಾಗದೇ ಉಳಿದಿದೆ. ಹಿಂದೂ ಜನಾಂಗದವರು ದೀಪಾವಳಿಯ ಸಮಯದಲ್ಲಿ ದೀಪಗಳನ್ನು ಏಕೆ ಬೆಳಗುತ್ತಾರೆ ಎಂಬುವುದಕ್ಕೆ ಕಾರಣಗಳೇನು ಎಂದು ಯೋಚಿಸಿದ್ದೀರಾ? ಯಾಕೆಂಬುದನ್ನು ನೋಡೋಣ ಬನ್ನಿ:

ದೀಪಗಳನ್ನು ಬೆಳಗುವ ಹಿಂದಿರುವ ಪುರಾಣದ ಕಥೆ
ಭಾರತದ ಉತ್ತರ ಭಾಗದಲ್ಲಿ ಪ್ರಸಿದ್ಧ ಕಥೆಯೊಂದರಂತೆ ಹಿಂದೆ ಶ್ರೀ ರಾಮನು ಪತ್ನಿ ಮತ್ತು ತಮ್ಮನೊಡನೆ 14 ವರ್ಷಗಳ ಕಾಲ ವನವಾಸ ಮುಗಿಸಿಕೊಂಡು ಅಯೋಧ್ಯೆಗೆ ಮರಳಿ ಬಂದ ಸಮಯವೆಂದು ಆಚರಿಸುತ್ತಾರೆ. ತಮ್ಮ ರಾಜನು ಮರಳಿ ಬಂದ ಸಮಯವನ್ನು ಸಾಂಪ್ರದಾಯಿಕವಾಗಿ ದೀಪಗಳಿಂದ ಬೆಳಗುತ್ತಾರೆ ಮತ್ತು ಹೀಗಾಗಿ ದೀಪಗಳನ್ನು ಬೆಳಗುವ ಸಂಪ್ರದಾಯವು ಮುಂದುವರಿದಿದೆ.
ಭಾರತದ ದಕ್ಷಿಣ ಭಾಗದಲ್ಲಿ ಜನರು ಕುಖ್ಯಾತ ರಾಕ್ಷಸನಾಗಿದ್ದ ನರಕಾಸುರನನ್ನು ದುರ್ಗಾ ದೇವಿಯು ಇದೇ ಸಮಯದಲ್ಲಿ ಸಂಹಾರ ಮಾಡಿದ ವಿಜಯವನ್ನು ಆಚರಿಸಲು ದೀಪಗಳನ್ನು ಬೆಳಗುತ್ತಾರೆ. ಆದ್ದರಿಂದ ದಕ್ಷಿಣ ಭಾರತದಲ್ಲಿ ಜನರು ' ಕತ್ತಲೆ ಸಾಗಿ ಬೆಳಕುಬರುವ ಹಬ್ಬ' ಅಂದರೆ 'ದುಷ್ಟ ಶಕ್ತಿಯ ಮೇಲಿನ ವಿಜಯ' ವನ್ನು ಆಚರಿಸಲು ನರಕಚತುರ್ದಶಿಯಂದು ದೀಪಗಳನ್ನು ಬೆಳಗುತ್ತಾರೆ. ಕಾಜು ಬರ್ಫಿ: ದೀಪಾವಳಿಗೆ ಸ್ಪೆಷಲ್ ರೆಸಿಪಿ
ದೀಪಗಳನ್ನು ಬೆಳಗುವುದರಲ್ಲಿರುವ ಮಹತ್ವ
ಹಿಂದೂ ಧರ್ಮದಲ್ಲಿ ದೀಪ ಒಂದು ಮಹತ್ವವುಳ್ಳ ವಿಷಯ ಯಾಕೆಂದರೆ ಅದು ಪವಿತ್ರತೆ, ಒಳ್ಳೆಯತನ ಮತ್ತು ಶಕ್ತಿ ಇವುಗಳ ಸಂಕೇತವಾಗಿದೆ. ಬೆಳಕಿದೆಯೆಂದರೆ ಕತ್ತಲೆ ಮತ್ತು ದುಷ್ಟ ಶಕ್ತಿಗಳ ಇರುವುದಿಲ್ಲ ಎನ್ನುವ ನಂಬಿಕೆ. ಅಮಾವಾಸ್ಯೆಯ ರಾತ್ರಿ ಎಲ್ಲೆಡೆಯಲ್ಲೂ ಸಂಪೂರ್ಣ ಕತ್ತಲೆ ಇರುವಾಗ ಜನರು ಲಕ್ಷಾಂತರ ದೀಪಗಳನ್ನು ಬೆಳಗಿ ಕತ್ತಲನ್ನು ತೊಡೆದುಹಾಕಲು ದೀಪಾವಳಿಯನ್ನು ಆಚರಿಸುತ್ತಾರೆ. ದುಷ್ಟ ಶಕ್ರಿಗಳು ಮತ್ತು ಅವುಗಳ ಪಡೆಗಳು ಕತ್ತಲಲ್ಲಿ ಸಕ್ರಿಯವಾಗುತ್ತಾರೆಂಬ ನಂಬಿಕೆ ಜನರಿಗೆ ಇದೆ.
ಆದ್ದರಿಂದ ದುಷ್ಟಶಕ್ತಿಗಳನ್ನು ದುರ್ಬಲಗೊಳಿಸಲು ಮನೆಯ ಪ್ರತಿಯೊಂದು ಮೂಲೆಯಲ್ಲೂ ದೀಪಗಳನ್ನು ಬೆಳಗುತ್ತಾರೆ. ವ್ಯಕ್ತಿಯ ಅಂತರಿಕ ಆಧ್ಯಾತ್ಮಿಕ ಬೆಳಕು ಹೊರಗೂ ಸೂಚಿಸಬೇಕೆಂಬ ಸಂದೇಶವನ್ನು ಸಾರಲು ಪ್ರತಿ ಮನೆಯ ಬಾಗಿಲ ಹೊರಗೆ ದೀಪಗಳನ್ನು ಬೆಳಗುತ್ತಾರೆ. ಒಂದು ದೀಪದಿಂದ ಹಲವಾರು ದೀಪಗಳನ್ನು ತನ್ನ ಬೆಳಕಿಗೆ ಧಕ್ಕೆಯಾಗದಂತೆ ಬೆಳಗಲು ಸಮರ್ಥವಾಗಿದೆ. ಆದ್ದರಿಂದ ದೀಪಾವಳಿಯ ಸಮಯದಲ್ಲಿ ದೀಪಗಳನ್ನು ಬೆಳಗುವುದು ಆಧ್ಯಾತ್ಮಿಕವಾಗಿ ಹಾಗೂ ಸಾಮಾಜಿಕವಾಗಿ ಎಲ್ಲಾ ಮನುಷ್ಯರಿಗೆ ಗಮನಾರ್ಹವಾಗಿ ಅನ್ವಯಿಸುತ್ತದೆ.



Click it and Unblock the Notifications