Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಮನೆಯಲ್ಲಿ ಸದಾ ಹೀಗೆಯೇ 'ದೀಪ' ಹಚ್ಚಿ, ಶಾಂತಿ ಸಮೃದ್ಧಿಯಿಂದಿರಿ...
ಮನೆಯಲ್ಲೊಂದು ಪುಟ್ಟ ದೀವಟಿಗೆ ಅಥವಾ ಹಣತೆ ಸದಾ ಉರಿಯುತ್ತಿರಬೇಕು. ಇದರಿಂದ ಸದಾ ದೇವರ ಅನುಗ್ರಹ ಮನೆಯನ್ನು ಕಾಯುತ್ತದೆ ಎಂದು ನಾವೆಲ್ಲಾ ಬಲ್ಲೆವು. ಇದರ ಜ್ವಾಲೆ ಬಾಳಿನಲ್ಲಿ ಕತ್ತಲನ್ನು ನಿವಾರಿಸಿ ಬೆಳಕು ಮೂಡಿಸುವ ಸಂಕೇತವಾಗಿದೆ. ಆದರೆ ಇದರ ಹಿಂದೆ ಒಂದು ವೈಜ್ಞಾನಿಕ ಕಾರಣವೂ ಇದೆ.
ಹಣತೆಯ ಜ್ವಾಲೆಗೆ ಸುತ್ತಲಿನ ಪರಿಸರದಲ್ಲಿ ಆಯಸ್ಕಾಂತೀಯ ಅಲೆಗಳನ್ನು ಸೃಷ್ಟಿಸುವ ಶಕ್ತಿಯಿದೆ. ಈ ಅಲೆಗಳು ವಿದ್ಯುದಾಯಸ್ಕಾಂತೀಯ ಶಕ್ತಿಯನ್ನು ಹೊಂದಿದ್ದು ಅತಿ ಕಡಿಮೆ ಪ್ರಮಾಣದಲ್ಲಿ ಚರ್ಮಕ್ಕೆ ನವಿರಾದ ಪ್ರಚೋದನೆ ನೀಡುತ್ತದೆ. ಇದರಿಂದ ಕನಿಷ್ಠ ಮೂರು ಗಂಟೆಗಳವರೆಗಾದರೂ ಚರ್ಮದ ಅಡಿಯಲ್ಲಿ ಸಾಗುವ ರಕ್ತಕಣಗಳನ್ನು ಹೆಚ್ಚು ಚುರುಕುಗೊಳಿಸುತ್ತದೆ.
ಎರಡನೆಯದಾಗಿ ವಿಶೇಷ ಹಬ್ಬವಾದ ದೀಪಾವಳಿಯೂ ಅಕ್ಟೋಬರ್ ನವೆಂಬರ್ ತಿಂಗಳಲ್ಲಿ ಆಗಮಿಸುತ್ತದೆ. ಈ ಸಮಯದಲ್ಲಿ ಭೌಗೋಳಿಕವಾಗಿ ಭಾರತದ ಪಶ್ಚಿಮ ಭಾಗದಲ್ಲಿ ಜಗುರುವ ಕ್ಷೋಭೆಯಿಂದಾಗಿ ಉತ್ತರ ಭಾರತದಲ್ಲಿ ಮಳೆಯಾಗುತ್ತದೆ. ಈ ಮಳೆಯಿಂದಾಗಿ ಗಾಳಿಯಲ್ಲಿ ಹೆಚ್ಚುವ ತೇವಾಂಶ ಕೆಲವು ಬಗೆಯ ಕ್ರಿಮಿಗಳು ಹಾಗೂ ಬ್ಯಾಕ್ಟೀರಿಯಾಗಳು ಭಾರೀ ಸಂಖ್ಯೆಯಲ್ಲಿ ವೃದ್ಧಿಗೊಳ್ಳಲು ಕಾರಣವಾಗುತ್ತದೆ.
ಈ ಸಮಯದಲ್ಲಿ ಮನೆಯ ಸುತ್ತಲೂ ನೂರಾರು ದೀಪಗಳನ್ನು ಉರಿಸುವ ಮೂಲಕ ಗಾಳಿಯಲ್ಲಿ ತೇಲಾಡುತ್ತಿರುವ ಈ ಸೂಕ್ಷ್ಮ ಬ್ಯಾಕ್ಟೀರಿಯಾ ಮತ್ತು ಕ್ರಿಮಿಗಳನ್ನು ಕೊಲ್ಲಲು ಸಾಧ್ಯವಾಗುತ್ತದೆ. ದೀಪವನ್ನು ಹಚ್ಚಲು ಸಾಮಾನ್ಯವಾಗಿ ಹರಳೆಣ್ಣೆಯನ್ನು ಬಳಸಲಾಗುತ್ತದೆ. ಹೆಚ್ಚು ಹೊತ್ತು ಉರಿಯುತ್ತದೆ ಎಂಬುದು ಪ್ರಮುಖ ಕಾರಣವಾದರೆ ಬೇರೆ ಬೇರೆ ತೈಲಗಳನ್ನು ಉರಿಸುವ ಕಾರಣಗಳೂ ಬೇರೆ ಬೇರೆಯೇ ಇವೆ. ಬನ್ನಿ, ಇವುಗಳ ಮಹತ್ವವೇನೆಂದು ಅರಿಯೋಣ....

ಹಸುವಿನ ತುಪ್ಪದ ದೀಪ:
ಈ ದೀಪದ ಬೆಳಕು ಮನೆಯಲ್ಲಿ ತೇಜಸ್ಸು, ದೇವರ ಅನುಗ್ರಹ, ಸಮೃದ್ಧಿ ಹಾಗೂ ಆರೋಗ್ಯವನ್ನು ತರುತ್ತದೆ.

ಸಾಮಾನ್ಯ ಎಣ್ಣೆ
ಮನೆಯಲ್ಲಿ ನೆಮ್ಮದಿ ಹಾಗೂ ಜ್ಞಾನವನ್ನು ಹೆಚ್ಚಿಸುತ್ತದೆ.

ಬೇವಿನ ಎಣ್ಣೆ
ಇದರಿಂದ ಮನೆಯಲ್ಲಿ ಸಮೃದ್ಧಿ ಹೆಚ್ಚುತ್ತದೆ.

ಎಳ್ಳೆಣ್ಣೆ
ಕಣ್ಣಿಗೆ ಕಾಣಿಸದ ಅಪಾಯ ಹಾಗೂ ಅಡ್ಡಿಗಳನ್ನು ನಿವಾರಿಸುತ್ತದೆ.

ಸಸ್ಯಜನ್ಯ ಎಣ್ಣೆ ಅಥವಾ ಸುಗಂಧವಿರುವ ಎಣ್ಣೆ
ಇದರ ಪರಿಮಳದಿಂದ ಮಾನಸಿಕ ಒತ್ತಡ ನಿವಾರಣೆಯಾಗುತ್ತದೆ.

ಹಣತೆಯನ್ನು ಹಚ್ಚಲು ಮಣ್ಣಿನ ಅಥವಾ ಹಿತ್ತಾಳೆ-ಯಾವುದು ಉತ್ತಮ?
ಸಾಮಾನ್ಯವಾಗಿ ಮಣ್ಣಿನ ಹಣತೆಯನ್ನು ಬಳಸಲಾಗುತ್ತದೆ. ಇದಕ್ಕೆ ಪ್ರಮುಖ ಕಾರಣವೆಂದರೆ ಇದು ಅತ್ಯಂತ ಅಗ್ಗ ಹಾಗೂ ಸುಲಭವಾಗಿ ಲಭ್ಯವಿರುತ್ತದೆ ಅಥವಾ ತಯಾರಿಸಿಕೊಳ್ಳಲು ಸಾಧ್ಯವಿದೆ.

ಹಣತೆಯನ್ನು ಹಚ್ಚಲು ಮಣ್ಣಿನ ಅಥವಾ ಹಿತ್ತಾಳೆ-ಯಾವುದು ಉತ್ತಮ?
ಆದರೆ ನಿಮಗೆ ಖರ್ಚು ಭರಿಸಲು ಸಾಧ್ಯವಿದೆ ಎಂದಾದಲ್ಲಿ ಹಿತ್ತಾಳೆ, ಬೆಳ್ಳಿ ಅಥವಾ ಚಿನ್ನದ್ದನ್ನೂ ಮಾಡಿಸಿಕೊಳ್ಳಬಹುದು. ನೆನಪಿರಲಿ! ದೀಪದ ಜ್ವಾಲೆ ಮುಖ್ಯವೇ ಹೊರತು ದೀಪವನ್ನು ತಯಾರಿಸಿದ ಸಾಮಾಗ್ರಿ ಅಲ್ಲ.

ಹಿಂದೂ ಧರ್ಮದ ಪ್ರಕಾರ....
ಹಿಂದೂ ಧರ್ಮೀಯರು ಈ ಜ್ವಾಲೆಯನ್ನು ಜ್ಞಾನ, ಸಂತೋಷ, ಶಾಂತಿ, ವಿವೇಕ, ಸತ್ಯ ಹಾಗೂ ಸಮೃದ್ಧಿಯ ಸಂಕೇತವೆಂದು ಪರಿಗಣಿಸುತ್ತಾರೆ. ಹಲವು ದಂತಕಥೆಗಳಲ್ಲಿ ಹಾಗೂ ಪುರಾಣಗಳಲ್ಲಿ ದೀಪದ ಜ್ವಾಲೆಯನ್ನು ತಿಳಿವಳಿಕೆಯ ಸಂಕೇತವನ್ನಾಗಿ ಸೂಚಿಸಲಾಗಿದೆ.

ಜ್ಞಾನದೆಡೆ ಒಯ್ಯುವ ದಾರಿದೀಪ
ಇದು ಜ್ಞಾನದೆಡೆ ಒಯ್ಯುವ ದಾರಿದೀಪವೂ ಆಗಿದೆ. ಈ ಜ್ವಾಲೆಯ ಬೆಳಕನ್ನು ಪಡೆದ ಪ್ರತಿಯೊಬ್ಬರೂ ಜೀವನದಲ್ಲಿ ನೆಮ್ಮದಿಯ ಮನ ಮತ್ತು ಆತ್ಮವನ್ನು ಹೊಂದುವ ನಿಟ್ಟಿನಲ್ಲಿ ಸರಿಯಾದ ಮಾರ್ಗ ತುಳಿಯುವಂತೆ ಮಾರ್ಗದರ್ಶನ ನೀಡುತ್ತದೆ.



Click it and Unblock the Notifications











