Latest Updates
-
ಡೆಂಗ್ಯೂ ಜ್ವರದಿಂದ ಬೇಗ ಚೇತರಿಸಿಕೊಳ್ಳಬೇಕೇ? ನಿಮ್ಮ ಆಹಾರದಲ್ಲಿ ಇರಲಿ ಈ ಪೌಷ್ಟಿಕಾಂಶಗಳು! -
ಡೆಂಗ್ಯೂ ಜ್ವರದ ಬಳಿಕ ಸುಸ್ತು ಕಾಡುತ್ತಿದೆಯೇ? ಬೇಗ ಚೇತರಿಸಿಕೊಳ್ಳಲು ಈ ಆಹಾರಕ್ರಮ ಪಾಲಿಸಿ, ಮನೆಯಲ್ಲೇ ORS ಮಾಡಿ -
ಓಣಂ ಸದ್ಯದ ಹಬ್ಬದೂಟಕ್ಕೆ ಭಾರಿ ಬೇಡಿಕೆ: ಬೆಂಗಳೂರು-ಕೊಚ್ಚಿಯಲ್ಲಿ ಸ್ಲಾಟ್ಗಳು ಫುಲ್, ಈಗಲೇ ಬುಕ್ ಮಾಡಿ! -
ವರಮಹಾ ಲಕ್ಷ್ಮಿ ವ್ರತ 2026: ಆಗಸ್ಟ್ 21 ಅಥವಾ 28? ದಿನಾಂಕದ ಗೊಂದಲಕ್ಕೆ ಇಲ್ಲಿದೆ ಪರಿಹಾರ! -
ಕಂಟೆಂಟ್ ಕ್ರಿಯೇಟರ್ಗಳೇ ಗಮನಿಸಿ: ಫೋಟೊ ಶೂಟ್ ವೇಳೆ ನೋವು ಮರೆಯಾಗಲು ಈ 12 ನಿಮಿಷದ ವರ್ಕೌಟ್ ಸಾಕು! -
ಫೋಟೋಗ್ರಾಫರ್ಗಳೇ ಎಚ್ಚರ! ನೋವಿಲ್ಲದೆ ಅದ್ಭುತ ಫೋಟೋ ಕ್ಲಿಕ್ಕಿಸಲು ಈ 7 ನಿಮಿಷದ ಮೊಬಿಲಿಟಿ ರಿಸೆಟ್ ಟ್ರೈ ಮಾಡಿ -
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್!
ಸಂಕ್ರಾಂತಿಗೆ ಎಳ್ಳು-ಬೆಲ್ಲ ಏಕೆ: ಎಳ್ಳು ದಾನದಿಂದ ಏನು ಲಾಭ?
ಗ್ರಹಗಳ ರಾಜನಾಗಿರುವ ಸೂರ್ಯ ಧನುರಾಶಿಯಿಂದ ಮಕರ ರಾಶಿಗೆ ಪ್ರವೇಶಿಸುವುದನ್ನು ಮಕರ ಸಂಕ್ರಾಂತಿ ಎಂದು ಆಚರಿಸಲಾಗುತ್ತದೆ. ಮಕರ ಸಂಕ್ರಾಂತಿಯಂದು ಕರ್ನಾಟಕದಲ್ಲಿ ಎಳ್ಳು ಬೆಲ್ಲ ನೀಡಿ ಈ ಹಬ್ಬವನ್ನು ಆಚರಿಸಲಾಗುವುದು.
ಮಕರ ಸಂಕ್ರಾಂತಿ ದಿನ ಎಳ್ಳು-ಬೆಲ್ಲವನ್ನೇ ಏಕೆ ಮಾಡಲಾಗುತ್ತದೆ, ನಮ್ಮ ಹಿರಿಯರು ಈ ಆಹಾರ ಸೇವಿಸುವ ಸಂಪ್ರದಾಯ ಮಾಡಿರುವ ಹಿಂದಿನ ಕಾರಣವೇನು, ಸಂಕ್ರಾಂತಿಗೆ ಎಳ್ಳು-ಬೆಲ್ಲ ಬಳಸುವುದರ ಹಿಂದಿರುವ ವೈದಿಕ ಹಾಗೂ ವೈಜ್ಞಾನಿಕ ಕಾರಣವೇನು ಎಂದು ಈ ಲೇಖನದಲ್ಲಿ ಹೇಳಲಾಗಿದೆ ನೋಡಿ.

ವೈದಿಕ ಕಾರಣ:
ಶಾಸ್ತ್ರಗಳ ಪ್ರಕಾರ ಮಕರ ಸಂಕ್ರಾಂತಿಗೆ ಸೂರ್ಯನು ಧನು ರಾಶಿಯಿಂದ ಮಕರ ರಾಶಿಗೆ ಪ್ರವೇಶಿಸುತ್ತಾನೆ. ಶನಿ ಮಕರ ರಾಶಿಯ ಅಧಿಪತಿ, ಆದರೆ ಸೂರ್ಯನ ಜೊತೆಗೆ ಶನಿಗೆ ಶತ್ರುತ್ವ ಇರುತ್ತದೆ, ಸೂರ್ಯ ಮಕರ ರಾಶಿಗೆ ಪ್ರವೇಶಿಸಿದಾಗ, ಇದರಿಂದ ಶನಿ ಯಾವುದೇ ತೊಂದರೆ ಉಂಟು ಮಾಡದಿರಲು ಎಳ್ಳು ದಾನ ಮಾಡಲಾಗುವುದು.

ಗ್ರಹದೋಷ ನಿವಾರಣೆ ಮಾಡುವ ಎಳ್ಳು
ಈ ದಿನ ಎಳ್ಳು ದಾನ ಮಾಡಿದರೆ ಗ್ರಹ ದೋಷಗಳು ನಿವಾರಣೆಯಾಗುತ್ತದೆ. ಅಲ್ಲದೆ ಎಳ್ಳು ದಾನ ಮಾಡುವುದರಿಂದ ಪಾಪಕರ್ಮದಿಂದಲೂ ಮೋಕ್ಷ ಸಿಗುತ್ತದೆ ಎಂದು ಹೇಳಲಾಗುವುದು. ಈ ದಿನ ಎಳ್ಳು-ಬೆಲ್ಲ ದಾನ ಮಾಡಿದರೆ ಜಾತಕದಲ್ಲಿ ಸೂರ್ಯ ಮತ್ತು ಶನಿಯ ಸ್ಥಿತಿಯಿಂದ ಶಾಂತಿ ಲಭಿಸುತ್ತದೆ ಎಂದು ಹೇಳಲಾಗುವುದು

ಶನಿ ಸಾಡೆಸಾತಿಗೂ ಪರಿಹಾರ
ಶನಿ ಸಾಡೆಸಾತಿ ಬಂದರೆ ವ್ಯಕ್ತಿಗೆ ತುಂಬಾ ಕಷ್ಟಗಳು ಬರುವುದು. ಇದರಿಂದ ಹೊರಬರಲು ಏಳು ವರ್ಷಗಳು ಬೇಕಾಗುವುದು. ಶನಿ ಸಾಡೆಸಾತಿಗೆ ಒಳಗಾಗಿ ತುಂಬಾ ಕಷ್ಟ ಅನುಭವಿಸುತ್ತಿರುವವರು ತಾಮ್ರದ ಪಾತ್ರೆಯಲ್ಲಿ ಕರಿಎಳ್ಳು ತುಂಬಿ ದಾನ ಮಾಡಬೇಕು ಎಂದು ಹೇಳಲಾಗುವುದು.

ಎಳ್ಳು ಬೆಲ್ಲ ತಿನ್ನುವುದರಿಂದ ಆರೋಗ್ಯಕ್ಕೂ ಲಾಭ
ಸಂಕ್ರಾಂತಿಯನ್ನು ಚಳಿಗಾಲದ ಮಧ್ಯಭಾಗದಲ್ಲಿ ಆಚರಿಸಲಾಗುವುದು. ಈ ಸಮಯದಲ್ಲಿ ಎಳ್ಳು ತಿಂದರೆ ಅದು ದೇಹವನ್ನು ಬೆಚ್ಚಗಿಡುತ್ತದೆ, ಬೆಲ್ಲದಲ್ಲಿರುವ ಪೋಷಕಾಂಶಗಳು ರೋಗ ನಿರೋಧಕ ಶಕ್ತಿ ಹೆಚ್ಚಿಸಿ, ಸೋಂಕು, ಬ್ಯಾಕ್ಟಿರಿಯಾಗಳ ವಿರುದ್ಧ ಹೋರಾಡುತ್ತದೆ. ಇನ್ನು ಇದಕ್ಕೆ ನೆಲಗಡಲೆ, ಕೊಬ್ಬರಿ ಬಳಸುವುದರಿಂದ ಕೂದಲು ಹಾಗೂ ತ್ವಚೆಯ ರಕ್ಷಣೆ ಮಾಡುತ್ತದೆ.



Click it and Unblock the Notifications