Latest Updates
-
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್! -
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ! -
ಮಳೆಗಾಲದಲ್ಲಿ ಅಂತರಾಷ್ಟ್ರೀಯ ಯೋಗ ದಿನ: ಹಿರಿಯರು ಸುರಕ್ಷಿತವಾಗಿ ಯೋಗ ಮಾಡುವುದು ಹೇಗೆ?
ಸಂಕ್ರಾಂತಿಗೆ ಎಳ್ಳು-ಬೆಲ್ಲ ಏಕೆ: ಎಳ್ಳು ದಾನದಿಂದ ಏನು ಲಾಭ?
ಗ್ರಹಗಳ ರಾಜನಾಗಿರುವ ಸೂರ್ಯ ಧನುರಾಶಿಯಿಂದ ಮಕರ ರಾಶಿಗೆ ಪ್ರವೇಶಿಸುವುದನ್ನು ಮಕರ ಸಂಕ್ರಾಂತಿ ಎಂದು ಆಚರಿಸಲಾಗುತ್ತದೆ. ಮಕರ ಸಂಕ್ರಾಂತಿಯಂದು ಕರ್ನಾಟಕದಲ್ಲಿ ಎಳ್ಳು ಬೆಲ್ಲ ನೀಡಿ ಈ ಹಬ್ಬವನ್ನು ಆಚರಿಸಲಾಗುವುದು.
ಮಕರ ಸಂಕ್ರಾಂತಿ ದಿನ ಎಳ್ಳು-ಬೆಲ್ಲವನ್ನೇ ಏಕೆ ಮಾಡಲಾಗುತ್ತದೆ, ನಮ್ಮ ಹಿರಿಯರು ಈ ಆಹಾರ ಸೇವಿಸುವ ಸಂಪ್ರದಾಯ ಮಾಡಿರುವ ಹಿಂದಿನ ಕಾರಣವೇನು, ಸಂಕ್ರಾಂತಿಗೆ ಎಳ್ಳು-ಬೆಲ್ಲ ಬಳಸುವುದರ ಹಿಂದಿರುವ ವೈದಿಕ ಹಾಗೂ ವೈಜ್ಞಾನಿಕ ಕಾರಣವೇನು ಎಂದು ಈ ಲೇಖನದಲ್ಲಿ ಹೇಳಲಾಗಿದೆ ನೋಡಿ.

ವೈದಿಕ ಕಾರಣ:
ಶಾಸ್ತ್ರಗಳ ಪ್ರಕಾರ ಮಕರ ಸಂಕ್ರಾಂತಿಗೆ ಸೂರ್ಯನು ಧನು ರಾಶಿಯಿಂದ ಮಕರ ರಾಶಿಗೆ ಪ್ರವೇಶಿಸುತ್ತಾನೆ. ಶನಿ ಮಕರ ರಾಶಿಯ ಅಧಿಪತಿ, ಆದರೆ ಸೂರ್ಯನ ಜೊತೆಗೆ ಶನಿಗೆ ಶತ್ರುತ್ವ ಇರುತ್ತದೆ, ಸೂರ್ಯ ಮಕರ ರಾಶಿಗೆ ಪ್ರವೇಶಿಸಿದಾಗ, ಇದರಿಂದ ಶನಿ ಯಾವುದೇ ತೊಂದರೆ ಉಂಟು ಮಾಡದಿರಲು ಎಳ್ಳು ದಾನ ಮಾಡಲಾಗುವುದು.

ಗ್ರಹದೋಷ ನಿವಾರಣೆ ಮಾಡುವ ಎಳ್ಳು
ಈ ದಿನ ಎಳ್ಳು ದಾನ ಮಾಡಿದರೆ ಗ್ರಹ ದೋಷಗಳು ನಿವಾರಣೆಯಾಗುತ್ತದೆ. ಅಲ್ಲದೆ ಎಳ್ಳು ದಾನ ಮಾಡುವುದರಿಂದ ಪಾಪಕರ್ಮದಿಂದಲೂ ಮೋಕ್ಷ ಸಿಗುತ್ತದೆ ಎಂದು ಹೇಳಲಾಗುವುದು. ಈ ದಿನ ಎಳ್ಳು-ಬೆಲ್ಲ ದಾನ ಮಾಡಿದರೆ ಜಾತಕದಲ್ಲಿ ಸೂರ್ಯ ಮತ್ತು ಶನಿಯ ಸ್ಥಿತಿಯಿಂದ ಶಾಂತಿ ಲಭಿಸುತ್ತದೆ ಎಂದು ಹೇಳಲಾಗುವುದು

ಶನಿ ಸಾಡೆಸಾತಿಗೂ ಪರಿಹಾರ
ಶನಿ ಸಾಡೆಸಾತಿ ಬಂದರೆ ವ್ಯಕ್ತಿಗೆ ತುಂಬಾ ಕಷ್ಟಗಳು ಬರುವುದು. ಇದರಿಂದ ಹೊರಬರಲು ಏಳು ವರ್ಷಗಳು ಬೇಕಾಗುವುದು. ಶನಿ ಸಾಡೆಸಾತಿಗೆ ಒಳಗಾಗಿ ತುಂಬಾ ಕಷ್ಟ ಅನುಭವಿಸುತ್ತಿರುವವರು ತಾಮ್ರದ ಪಾತ್ರೆಯಲ್ಲಿ ಕರಿಎಳ್ಳು ತುಂಬಿ ದಾನ ಮಾಡಬೇಕು ಎಂದು ಹೇಳಲಾಗುವುದು.

ಎಳ್ಳು ಬೆಲ್ಲ ತಿನ್ನುವುದರಿಂದ ಆರೋಗ್ಯಕ್ಕೂ ಲಾಭ
ಸಂಕ್ರಾಂತಿಯನ್ನು ಚಳಿಗಾಲದ ಮಧ್ಯಭಾಗದಲ್ಲಿ ಆಚರಿಸಲಾಗುವುದು. ಈ ಸಮಯದಲ್ಲಿ ಎಳ್ಳು ತಿಂದರೆ ಅದು ದೇಹವನ್ನು ಬೆಚ್ಚಗಿಡುತ್ತದೆ, ಬೆಲ್ಲದಲ್ಲಿರುವ ಪೋಷಕಾಂಶಗಳು ರೋಗ ನಿರೋಧಕ ಶಕ್ತಿ ಹೆಚ್ಚಿಸಿ, ಸೋಂಕು, ಬ್ಯಾಕ್ಟಿರಿಯಾಗಳ ವಿರುದ್ಧ ಹೋರಾಡುತ್ತದೆ. ಇನ್ನು ಇದಕ್ಕೆ ನೆಲಗಡಲೆ, ಕೊಬ್ಬರಿ ಬಳಸುವುದರಿಂದ ಕೂದಲು ಹಾಗೂ ತ್ವಚೆಯ ರಕ್ಷಣೆ ಮಾಡುತ್ತದೆ.



Click it and Unblock the Notifications