Just In
- 2 min ago ಐಸ್ ಟೀ ಮಾಡುವುದು ಹೇಗೆ? ಇಲ್ಲಿದೆ ಪರ್ಫೆಕ್ಟ್ ಐಸ್ ಟೀ ರೆಸಿಪಿ
- 49 min ago ಮಕ್ಕಳಲ್ಲಿ ಮಲೇರಿಯಾ: ಹೇಗೆ ಬರುತ್ತದೆ, ಇದರ ಲಕ್ಷಣಗಳೇನು? ತಡೆಗಟ್ಟುವುದು ಹೇಗೆ?
- 2 hrs ago ರುಚಿ ರುಚಿಯ ಸ್ಪೆಷಲ್ ಅಂಬೂರ್ ಬಿರಿಯಾನಿ ಮಾಡಿ ನೋಡಿ..! ಇಲ್ಲಿದೆ ರೆಸಿಪಿ
- 3 hrs ago ಹನುಮಂತನ ಪವಾಡ: ಈ ದೇವಾಲಯದಲ್ಲಿ ಹನುಮಾನ್ ಮೂರ್ತಿ ವರ್ಷದಿಂದ ವರ್ಷಕ್ಕೆ ಎತ್ತರ ಬೆಳೆಯುತ್ತಿದೆ!
Don't Miss
- Automobiles HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- News Bengaluru Rain: ಮುದ್ದಿನ ನಾಯಿಮರಿಗೆ ಮೊದಲ ಮಳೆ ತೋರಿಸಿ ಖುಷಿ ಪಟ್ಟ ವ್ಯಕ್ತಿ; ವಿಡಿಯೋ ವೈರಲ್
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Movies Lok Sabha Election 2024: ಕನ್ನಡ ತಾರೆಯರು ನಾಳೆಏಪ್ರಿಲ್ 26 ಎಲ್ಲೆಲ್ಲಿ ತಮ್ಮ ಹಕ್ಕು ಚಲಾಯಿಸುತ್ತಾರೆ?
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಂಕ್ರಾಂತಿಗೆ ಎಳ್ಳು-ಬೆಲ್ಲ ಏಕೆ: ಎಳ್ಳು ದಾನದಿಂದ ಏನು ಲಾಭ?
ಗ್ರಹಗಳ ರಾಜನಾಗಿರುವ ಸೂರ್ಯ ಧನುರಾಶಿಯಿಂದ ಮಕರ ರಾಶಿಗೆ ಪ್ರವೇಶಿಸುವುದನ್ನು ಮಕರ ಸಂಕ್ರಾಂತಿ ಎಂದು ಆಚರಿಸಲಾಗುತ್ತದೆ. ಮಕರ ಸಂಕ್ರಾಂತಿಯಂದು ಕರ್ನಾಟಕದಲ್ಲಿ ಎಳ್ಳು ಬೆಲ್ಲ ನೀಡಿ ಈ ಹಬ್ಬವನ್ನು ಆಚರಿಸಲಾಗುವುದು.
ಮಕರ ಸಂಕ್ರಾಂತಿ ದಿನ ಎಳ್ಳು-ಬೆಲ್ಲವನ್ನೇ ಏಕೆ ಮಾಡಲಾಗುತ್ತದೆ, ನಮ್ಮ ಹಿರಿಯರು ಈ ಆಹಾರ ಸೇವಿಸುವ ಸಂಪ್ರದಾಯ ಮಾಡಿರುವ ಹಿಂದಿನ ಕಾರಣವೇನು, ಸಂಕ್ರಾಂತಿಗೆ ಎಳ್ಳು-ಬೆಲ್ಲ ಬಳಸುವುದರ ಹಿಂದಿರುವ ವೈದಿಕ ಹಾಗೂ ವೈಜ್ಞಾನಿಕ ಕಾರಣವೇನು ಎಂದು ಈ ಲೇಖನದಲ್ಲಿ ಹೇಳಲಾಗಿದೆ ನೋಡಿ.
ವೈದಿಕ ಕಾರಣ:
ಶಾಸ್ತ್ರಗಳ ಪ್ರಕಾರ ಮಕರ ಸಂಕ್ರಾಂತಿಗೆ ಸೂರ್ಯನು ಧನು ರಾಶಿಯಿಂದ ಮಕರ ರಾಶಿಗೆ ಪ್ರವೇಶಿಸುತ್ತಾನೆ. ಶನಿ ಮಕರ ರಾಶಿಯ ಅಧಿಪತಿ, ಆದರೆ ಸೂರ್ಯನ ಜೊತೆಗೆ ಶನಿಗೆ ಶತ್ರುತ್ವ ಇರುತ್ತದೆ, ಸೂರ್ಯ ಮಕರ ರಾಶಿಗೆ ಪ್ರವೇಶಿಸಿದಾಗ, ಇದರಿಂದ ಶನಿ ಯಾವುದೇ ತೊಂದರೆ ಉಂಟು ಮಾಡದಿರಲು ಎಳ್ಳು ದಾನ ಮಾಡಲಾಗುವುದು.
ಗ್ರಹದೋಷ ನಿವಾರಣೆ ಮಾಡುವ ಎಳ್ಳು
ಈ ದಿನ ಎಳ್ಳು ದಾನ ಮಾಡಿದರೆ ಗ್ರಹ ದೋಷಗಳು ನಿವಾರಣೆಯಾಗುತ್ತದೆ. ಅಲ್ಲದೆ ಎಳ್ಳು ದಾನ ಮಾಡುವುದರಿಂದ ಪಾಪಕರ್ಮದಿಂದಲೂ ಮೋಕ್ಷ ಸಿಗುತ್ತದೆ ಎಂದು ಹೇಳಲಾಗುವುದು. ಈ ದಿನ ಎಳ್ಳು-ಬೆಲ್ಲ ದಾನ ಮಾಡಿದರೆ ಜಾತಕದಲ್ಲಿ ಸೂರ್ಯ ಮತ್ತು ಶನಿಯ ಸ್ಥಿತಿಯಿಂದ ಶಾಂತಿ ಲಭಿಸುತ್ತದೆ ಎಂದು ಹೇಳಲಾಗುವುದು
ಶನಿ ಸಾಡೆಸಾತಿಗೂ ಪರಿಹಾರ
ಶನಿ ಸಾಡೆಸಾತಿ ಬಂದರೆ ವ್ಯಕ್ತಿಗೆ ತುಂಬಾ ಕಷ್ಟಗಳು ಬರುವುದು. ಇದರಿಂದ ಹೊರಬರಲು ಏಳು ವರ್ಷಗಳು ಬೇಕಾಗುವುದು. ಶನಿ ಸಾಡೆಸಾತಿಗೆ ಒಳಗಾಗಿ ತುಂಬಾ ಕಷ್ಟ ಅನುಭವಿಸುತ್ತಿರುವವರು ತಾಮ್ರದ ಪಾತ್ರೆಯಲ್ಲಿ ಕರಿಎಳ್ಳು ತುಂಬಿ ದಾನ ಮಾಡಬೇಕು ಎಂದು ಹೇಳಲಾಗುವುದು.
ಎಳ್ಳು ಬೆಲ್ಲ ತಿನ್ನುವುದರಿಂದ ಆರೋಗ್ಯಕ್ಕೂ ಲಾಭ
ಸಂಕ್ರಾಂತಿಯನ್ನು ಚಳಿಗಾಲದ ಮಧ್ಯಭಾಗದಲ್ಲಿ ಆಚರಿಸಲಾಗುವುದು. ಈ ಸಮಯದಲ್ಲಿ ಎಳ್ಳು ತಿಂದರೆ ಅದು ದೇಹವನ್ನು ಬೆಚ್ಚಗಿಡುತ್ತದೆ, ಬೆಲ್ಲದಲ್ಲಿರುವ ಪೋಷಕಾಂಶಗಳು ರೋಗ ನಿರೋಧಕ ಶಕ್ತಿ ಹೆಚ್ಚಿಸಿ, ಸೋಂಕು, ಬ್ಯಾಕ್ಟಿರಿಯಾಗಳ ವಿರುದ್ಧ ಹೋರಾಡುತ್ತದೆ. ಇನ್ನು ಇದಕ್ಕೆ ನೆಲಗಡಲೆ, ಕೊಬ್ಬರಿ ಬಳಸುವುದರಿಂದ ಕೂದಲು ಹಾಗೂ ತ್ವಚೆಯ ರಕ್ಷಣೆ ಮಾಡುತ್ತದೆ.