Latest Updates
-
ಐಟಿಆರ್ ಸಲ್ಲಿಕೆ ಗಡುವು ಹತ್ತಿರ: ದಂಪತಿಗಳು ಒಟ್ಟಾಗಿ ಕುಳಿತು ಈ ಕೆಲಸ ಮಾಡಿದರೆ ಟೆನ್ಷನ್ ಫ್ರೀ! -
ಬೆಂಗಳೂರಿಗರೇ ಗಮನಿಸಿ: ಇಂದು 6 ಗಂಟೆ ಪವರ್ ಕಟ್, ಈ ಮುನ್ನೆಚ್ಚರಿಕೆ ಮರೆಯದಿರಿ! -
ಶ್ರಾವಣ ಉಪವಾಸದಲ್ಲಿ ದಿನವಿಡೀ ಎನರ್ಜಿಯಿಂದ ಇರಬೇಕೆ? ಈ ಹೈ-ಪ್ರೋಟೀನ್ ಸಾತ್ವಿಕ ಆಹಾರ ಪದ್ಧತಿ ಫಾಲೋ ಮಾಡಿ! -
ಗುರು ಪೂರ್ಣಿಮೆ 2026: ಸರಳ ಪೂಜಾ ವಿಧಿ ಮತ್ತು ಕಡಿಮೆ ಬಜೆಟ್ನಲ್ಲಿ ಗುರುಗಳಿಗೆ ನೀಡಬಹುದಾದ ಬೆಸ್ಟ್ ಗಿಫ್ಟ್ ಐಡಿಯಾಗಳು! -
10 ನಿಮಿಷದ 'ಟೈಗರ್ ಫ್ಲೋ': ಬೆನ್ನುನೋವಿಗೆ ಮುಕ್ತಿ ನೀಡುವ ಅದ್ಭುತ ವ್ಯಾಯಾಮ ಇಲ್ಲಿದೆ! -
ಪ್ರತಿಭಟನೆಯಲ್ಲಿ ಪ್ರೀತಿ: 'ಪ್ರೊಟೆಸ್ಟ್ ನೇ ಬನಾ ದಿ ಜೋಡಿ' ಟ್ರೆಂಡ್ ಹಿಂದೆ ಅಡಗಿದೆ ದೊಡ್ಡ ಅಪಾಯ! -
ಮಳೆಗಾಲದಲ್ಲಿ ಮನೆಯಲ್ಲಿ ಬೂಷ್ಟು ಹರಡುತ್ತಿದೆಯೇ? ಈ 20 ನಿಮಿಷದ ಟಿಪ್ಸ್ ಪಾಲಿಸಿ, ಮನೆ ಫ್ರೆಶ್ ಆಗಿಡಿ! -
ಕೇವಲ 200 ರೂಪಾಯಿಯಲ್ಲಿ ಪರಿಸರ ಸ್ನೇಹಿ ಊಟ: ವಿಶ್ವ ಪ್ರಕೃತಿ ಸಂರಕ್ಷಣಾ ದಿನಕ್ಕೆ ನಿಮ್ಮ ಅಡುಗೆಮನೆಯೇ ಮೊದಲ ಹೆಜ್ಜೆ! -
CWG 2026: 6ನೇ ದಿನ ಭಾರತದ ಪದಕದ ಬೇಟೆ; ಮನೆಯಲ್ಲೇ ಕಮ್ಮಿ ಬಜೆಟ್ನಲ್ಲಿ ಅದ್ಭುತ ವಾಚ್ ಪಾರ್ಟಿ ಪ್ಲಾನ್! -
ವಿಶ್ವ ಹೆಪಟೈಟಿಸ್ ದಿನ: ಲಿವರ್ ಆರೋಗ್ಯ ಹೆಚ್ಚಿಸಲು ಈ 10 ನಿಮಿಷದ ಬೆಳಗಿನ ದಿನಚರಿ ಪಾಲಿಸಿ!
ಸಂಕ್ರಾಂತಿಗೆ ಎಳ್ಳು-ಬೆಲ್ಲ ಏಕೆ: ಎಳ್ಳು ದಾನದಿಂದ ಏನು ಲಾಭ?
ಗ್ರಹಗಳ ರಾಜನಾಗಿರುವ ಸೂರ್ಯ ಧನುರಾಶಿಯಿಂದ ಮಕರ ರಾಶಿಗೆ ಪ್ರವೇಶಿಸುವುದನ್ನು ಮಕರ ಸಂಕ್ರಾಂತಿ ಎಂದು ಆಚರಿಸಲಾಗುತ್ತದೆ. ಮಕರ ಸಂಕ್ರಾಂತಿಯಂದು ಕರ್ನಾಟಕದಲ್ಲಿ ಎಳ್ಳು ಬೆಲ್ಲ ನೀಡಿ ಈ ಹಬ್ಬವನ್ನು ಆಚರಿಸಲಾಗುವುದು.
ಮಕರ ಸಂಕ್ರಾಂತಿ ದಿನ ಎಳ್ಳು-ಬೆಲ್ಲವನ್ನೇ ಏಕೆ ಮಾಡಲಾಗುತ್ತದೆ, ನಮ್ಮ ಹಿರಿಯರು ಈ ಆಹಾರ ಸೇವಿಸುವ ಸಂಪ್ರದಾಯ ಮಾಡಿರುವ ಹಿಂದಿನ ಕಾರಣವೇನು, ಸಂಕ್ರಾಂತಿಗೆ ಎಳ್ಳು-ಬೆಲ್ಲ ಬಳಸುವುದರ ಹಿಂದಿರುವ ವೈದಿಕ ಹಾಗೂ ವೈಜ್ಞಾನಿಕ ಕಾರಣವೇನು ಎಂದು ಈ ಲೇಖನದಲ್ಲಿ ಹೇಳಲಾಗಿದೆ ನೋಡಿ.

ವೈದಿಕ ಕಾರಣ:
ಶಾಸ್ತ್ರಗಳ ಪ್ರಕಾರ ಮಕರ ಸಂಕ್ರಾಂತಿಗೆ ಸೂರ್ಯನು ಧನು ರಾಶಿಯಿಂದ ಮಕರ ರಾಶಿಗೆ ಪ್ರವೇಶಿಸುತ್ತಾನೆ. ಶನಿ ಮಕರ ರಾಶಿಯ ಅಧಿಪತಿ, ಆದರೆ ಸೂರ್ಯನ ಜೊತೆಗೆ ಶನಿಗೆ ಶತ್ರುತ್ವ ಇರುತ್ತದೆ, ಸೂರ್ಯ ಮಕರ ರಾಶಿಗೆ ಪ್ರವೇಶಿಸಿದಾಗ, ಇದರಿಂದ ಶನಿ ಯಾವುದೇ ತೊಂದರೆ ಉಂಟು ಮಾಡದಿರಲು ಎಳ್ಳು ದಾನ ಮಾಡಲಾಗುವುದು.

ಗ್ರಹದೋಷ ನಿವಾರಣೆ ಮಾಡುವ ಎಳ್ಳು
ಈ ದಿನ ಎಳ್ಳು ದಾನ ಮಾಡಿದರೆ ಗ್ರಹ ದೋಷಗಳು ನಿವಾರಣೆಯಾಗುತ್ತದೆ. ಅಲ್ಲದೆ ಎಳ್ಳು ದಾನ ಮಾಡುವುದರಿಂದ ಪಾಪಕರ್ಮದಿಂದಲೂ ಮೋಕ್ಷ ಸಿಗುತ್ತದೆ ಎಂದು ಹೇಳಲಾಗುವುದು. ಈ ದಿನ ಎಳ್ಳು-ಬೆಲ್ಲ ದಾನ ಮಾಡಿದರೆ ಜಾತಕದಲ್ಲಿ ಸೂರ್ಯ ಮತ್ತು ಶನಿಯ ಸ್ಥಿತಿಯಿಂದ ಶಾಂತಿ ಲಭಿಸುತ್ತದೆ ಎಂದು ಹೇಳಲಾಗುವುದು

ಶನಿ ಸಾಡೆಸಾತಿಗೂ ಪರಿಹಾರ
ಶನಿ ಸಾಡೆಸಾತಿ ಬಂದರೆ ವ್ಯಕ್ತಿಗೆ ತುಂಬಾ ಕಷ್ಟಗಳು ಬರುವುದು. ಇದರಿಂದ ಹೊರಬರಲು ಏಳು ವರ್ಷಗಳು ಬೇಕಾಗುವುದು. ಶನಿ ಸಾಡೆಸಾತಿಗೆ ಒಳಗಾಗಿ ತುಂಬಾ ಕಷ್ಟ ಅನುಭವಿಸುತ್ತಿರುವವರು ತಾಮ್ರದ ಪಾತ್ರೆಯಲ್ಲಿ ಕರಿಎಳ್ಳು ತುಂಬಿ ದಾನ ಮಾಡಬೇಕು ಎಂದು ಹೇಳಲಾಗುವುದು.

ಎಳ್ಳು ಬೆಲ್ಲ ತಿನ್ನುವುದರಿಂದ ಆರೋಗ್ಯಕ್ಕೂ ಲಾಭ
ಸಂಕ್ರಾಂತಿಯನ್ನು ಚಳಿಗಾಲದ ಮಧ್ಯಭಾಗದಲ್ಲಿ ಆಚರಿಸಲಾಗುವುದು. ಈ ಸಮಯದಲ್ಲಿ ಎಳ್ಳು ತಿಂದರೆ ಅದು ದೇಹವನ್ನು ಬೆಚ್ಚಗಿಡುತ್ತದೆ, ಬೆಲ್ಲದಲ್ಲಿರುವ ಪೋಷಕಾಂಶಗಳು ರೋಗ ನಿರೋಧಕ ಶಕ್ತಿ ಹೆಚ್ಚಿಸಿ, ಸೋಂಕು, ಬ್ಯಾಕ್ಟಿರಿಯಾಗಳ ವಿರುದ್ಧ ಹೋರಾಡುತ್ತದೆ. ಇನ್ನು ಇದಕ್ಕೆ ನೆಲಗಡಲೆ, ಕೊಬ್ಬರಿ ಬಳಸುವುದರಿಂದ ಕೂದಲು ಹಾಗೂ ತ್ವಚೆಯ ರಕ್ಷಣೆ ಮಾಡುತ್ತದೆ.



Click it and Unblock the Notifications