Latest Updates
-
ಸಣ್ಣ ಫ್ಲ್ಯಾಟ್ನಲ್ಲಿ ಗಣೇಶೋತ್ಸವ: ಅತಿಥಿಗಳಿಗಾಗಿ ಜಾಗ ಮತ್ತು ಸುರಕ್ಷತೆಗಾಗಿ ಈ 5 ಟಿಪ್ಸ್ ಫಾಲೋ ಮಾಡಿ -
ಗಣೇಶೋತ್ಸವದ ಪ್ರಸಾದ ಬೇಗ ಹಾಳಾಗುತ್ತಿದೆಯೇ? ಮೋದಕ ಮತ್ತು ಸಿಹಿ ತಿಂಡಿಗಳನ್ನು ತಾಜಾವಾಗಿಡಲು ಈ ಟಿಪ್ಸ್ ಪಾಲಿಸಿ! -
ಗಣೇಶೋತ್ಸವ 2026: ಲಾಲ್ಬಾಗ್ಚಾ ರಾಜನ ದರ್ಶನಕ್ಕೆ ಬೆಸ್ಟ್ ಟೈಮ್ ಯಾವುದು? ಮೆಟ್ರೋ ಮತ್ತು ಲೈವ್ ಅಪ್ಡೇಟ್ಸ್ ಇಲ್ಲಿದೆ! -
ಹಬ್ಬದ ಪೂಜೆಯ ವೇಳೆ ಮೊಣಕಾಲು ಮತ್ತು ಬೆನ್ನು ನೋವು ಕಾಡುತ್ತಿದೆಯೇ? ನೋವಿಲ್ಲದೆ ಪೂಜೆ ಮಾಡಲು ಇಲ್ಲಿದೆ 10 ನಿಮಿಷಗಳ ಸಿಂಪಲ್ ಟಿಪ್ಸ್! -
ಗಣೇಶೋತ್ಸವದ ಸೌಂಡ್ ಕಿರಿಕಿರಿ: ನೆರೆಹೊರೆಯವರ ಜೊತೆ ಜಗಳವಿಲ್ಲದೆ ನೆಮ್ಮದಿಯ ನಿದ್ರೆ ಪಡೆಯುವುದು ಹೇಗೆ? -
ದೆಹಲಿ ಮಳೆ: ನಿಮ್ಮ ಮನೆಯಲ್ಲಿ ಬೂಷ್ಟು ಮತ್ತು ತೇವಾಂಶ ತಡೆಯಲು 45 ನಿಮಿಷದ ಸಿಂಪಲ್ ಪ್ಲಾನ್! -
ಗಣೇಶ ಹಬ್ಬದ ಮೋದಕ: ಶುಗರ್ ಏರಿಕೆಯಾಗದಂತೆ ಸವಿಯಲು ಇಲ್ಲಿವೆ 5 ಆರೋಗ್ಯಕರ ಟಿಪ್ಸ್ -
ಐಫೋನ್ 18 ಪ್ರೋ ಪ್ರೀ-ಆರ್ಡರ್: ₹7,000 ಕ್ಯಾಶ್ಬ್ಯಾಕ್ ಪಡೆಯುವುದು ಹೇಗೆ? ನಕಲಿ ಆಫರ್ಗಳಿಂದ ಎಚ್ಚರ! -
ದೆಹಲಿ ಮಳೆ: ಜಾರಿ ಬೀಳದಂತೆ ಎಚ್ಚರ, ಬೆನ್ನುನೋವಿನಿಂದ ಮುಕ್ತಿ ಪಡೆಯಲು 12 ನಿಮಿಷದ ವರ್ಕೌಟ್ ರೂಟಿನ್! -
ಗಣೇಶೋತ್ಸವದ ಸಂಭ್ರಮದಲ್ಲಿ ದಂಪತಿಗಳ ಜಗಳ ಬೇಡ: ಸಮಯ ಮತ್ತು ಬಜೆಟ್ ನಿರ್ವಹಣೆಗೆ ಇಲ್ಲಿದೆ ಸಿಂಪಲ್ ಪ್ಲಾನ್!
2020 ಗೌರಿ ಹಬ್ಬ: ಗೌರಿ ಹಬ್ಬದ ಆಚರಣೆ ಹಾಗೂ ಪೂಜಾ ವಿಧಿ ವಿಧಾನ...
ಬಾಲ ಗಂಗಾಧರ ತಿಲಕ್ ಅವರು ಸ್ವಾತಂತ್ರ್ಯ ಸಂಗ್ರಾಮದ ವೇಳೆ ಜನರನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಸಾರ್ವಜನಿಕ ಗಣೇಶೋತ್ಸವನ್ನು ಮಾಡಲು ಆರಂಭಿಸಿದರು. ಇದರಿಂದಾಗಿ ಸಾರ್ವಜನಿಕ ಮಟ್ಟದಲ್ಲಿ ಗಣೇಶನ ಆರಾಧನೆ ಆರಂಭವಾಯಿತು. ಭಾರತದೆಲ್ಲೆಡೆ ಗಣೇಶ ಚತುರ್ಥಿಯನ್ನು ತುಂಬಾ ವಿಜೃಂಭಣೆಯಿಂದ ಆಚರಿಸುತ್ತಾರೆ.
ಈ ವರ್ಷ (2020) ಆಗಸ್ಟ್ 21ರಂದು ಗೌರಿ ವ್ರತ ಹಾಗೂ 22ರಂದು ಗಣೇಶನ ಹಬ್ಬವನ್ನು ಆಚರಿಸಲಾಗುತ್ತಿದೆ.
ಪದ್ಧತಿಯಂತೆ ಗಣೇಶ ಚತುರ್ಥಿಯ ಒಂದು ದಿನ ಮೊದಲು ಗೌರಿಯನ್ನು ಪೂಜಿಸಲಾಗುತ್ತದೆ. ನಾವು ತಿಳಿದಿರುವಂತೆ ಮೊದಲ ಪೂಜೆ ಸಲ್ಲುವುದು ಗಣೇಶನಿಗೆ. ಆದರೆ ಗಣೇಶನಿಗಿಂತ ಮೊದಲು ಗೌರಿಯನ್ನು ಪೂಜಿಸಲು ಕಾರಣಗಳು ಏನು?

ಗೌರಿಯು ಗಣೇಶನ ತಾಯಿ ಪಾರ್ವತಿಯಾಗಿರುವ ಕಾರಣದಿಂದಾಗಿ ನಾವು ಮೊದಲು ಆಕೆಯನ್ನು ಪೂಜಿಸುತ್ತೇವೆ. ಗೌರಿಯನ್ನು ಹೇಗೆ ಮತ್ತು ಯಾವ ರೀತಿಯಲ್ಲಿ ಪೂಜಿಸಬೇಕೆಂಬ ಪ್ರಶ್ನೆ ಬಂದಾಗ ಇದು ಆಯಾಯ ಪ್ರದೇಶಕ್ಕೆ ಅನುಗುಣವಾಗಿ ಬದಲಾಗುತ್ತಾ ಹೋಗುತ್ತದೆ. ಆದರೆ ದೇಶದೆಲ್ಲೆಡೆ ಗಣೇಶನನ್ನು ಮನೆಗೆ ತರುವ ಮೊದಲು ಗೌರಿಯನ್ನು ತುಂಬಾ ಭಕ್ತಿಯಿಂದ ಪೂಜಿಸಲಾಗುತ್ತದೆ.
ಗಣೇಶ ಚತುರ್ಥಿಗೆ ಒಂದು ದಿನ ಮೊದಲೇ ಗೌರಿಯ ಮೂರ್ತಿಯನ್ನು ಮನೆಗೆ ತರಲಾಗುತ್ತದೆ. ಸಮೃದ್ಧಿ ಹಾಗೂ ಸಂಪತ್ತನ್ನು ಮನೆಗೆ ತರುವುದೇ ಇದರ ಉದ್ದೇಶವಾಗಿದೆ. ಕೆಲವೊಂದು ಪ್ರದೇಶಗಳಲ್ಲಿ ಗೌರಿಯನ್ನು ಮಂಗಳಗೌರಿ' ಎಂದು ಕರೆಯುತ್ತಾರೆ. ಆಕೆಯನ್ನು ಸಮೃದ್ಧಿ, ಸುಖ ಹಾಗೂ ಶಕ್ತಿಯ ದೇವತೆಯೆಂದು ಪರಿಗಣಿಸಲಾಗಿದೆ. ಗೌರಿ ಗಣೇಶ ಹಬ್ಬ ಆಚರಣೆಯ ಮಹತ್ವವೇನು?
ಗೌರಿಯ ಮೂರ್ತಿಯನ್ನು ಮನೆಗೆ ತರುವುದು
ಗಣೇಶ ಚತುರ್ಥಿಯ ಮುನ್ನಾ ದಿನ ಗೌರಿಯ ಮೂರ್ತಿಯನ್ನು ಮನೆಗೆ ತರಲಾಗುತ್ತದೆ. ಮನೆಯ ಅಂಗಳಕ್ಕೆ ರಂಗೋಲಿಯನ್ನು ಹಾಕಿ ಸುಮಂಗಲಿಯರು ಗೌರಿಯನ್ನು ಸ್ವಾಗತಿಸಲು ಮನೆಯನ್ನು ಅಲಂಕರಿಸುತ್ತಾರೆ. ಗೌರಿಯ ಮೂರ್ತಿಯನ್ನು ಮನೆಗೆ ತಂದಾಗ ಸಮೃದ್ಧಿ ಹಾಗೂ ಸಂಪತ್ತು ಬರುತ್ತದೆ ಎನ್ನುವ ನಂಬಿಕೆ.
ಅಲಂಕಾರ
ಕೆಲವೊಂದು ಕಡೆಗಳಲ್ಲಿ ಗೌರಿಯ ಮೂರ್ತಿಗೆ ಹೊಸ ಸೀರೆಯನ್ನು ಉಡಿಸಲಾಗುತ್ತದೆ. ಗೌರಿಗೆ ಬಂಗಾರದ ಸರ ಹಾಗೂ ಕೈಬಳೆಗಳನ್ನು ಹಾಕುತ್ತಾರೆ ಮತ್ತು ಹೂವಿನಿಂದಲೂ ಶೃಂಗಾರ ಮಾಡುತ್ತಾರೆ.
ಪೂಜೆ
ಕೆಲವು ಮನೆಗಳಲ್ಲಿ ಅರ್ಚಕರನ್ನು ಕರೆದು ಗೌರಿಯ ಪೂಜೆ ಮಾಡಿಸಿದರೆ, ಇನ್ನು ಕೆಲವರು ತಮ್ಮದೇ ಆದ ರೀತಿಯಲ್ಲಿ ಪೂಜೆ ಮಾಡುತ್ತಾರೆ. ಪೂಜೆಯ ಬಳಿಕ ಆರತಿ ಎತ್ತಲಾಗುತ್ತದೆ. ಸೀರೆ, ಬಾಳೆಹಣ್ಣು, ಅಕ್ಕಿ, ತೆಂಗಿನಕಾಯಿ ಮತ್ತು ಒಡವೆಗಳನ್ನು ಗೌರಿಗೆ ಅರ್ಪಿಸಲಾಗುತ್ತದೆ.
ವಿಸರ್ಜನೆ
ಗಣೇಶನ ಮೂರ್ತಿಯೊಂದಿಗೆ ಗೌರಿಯ ಮೂರ್ತಿಯನ್ನು ಜಲಸ್ತಂಭ ಮಾಡಲಾಗುತ್ತದೆ. ಅನ್ನ ಹಾಗೂ ಹಾಲನ್ನು ದೇವರಿಗೆ ಅರ್ಪಿಸಿ, ಪೂಜೆ ಮಾಡಿ ಆರತಿ ಎತ್ತಿದ ಬಳಿಕ ನೆರೆದಿರುವ ಭಕ್ತರಿಗೆ ಪ್ರಸಾದವನ್ನು ವಿತರಿಸಲಾಗುತ್ತದೆ. ಇದರ ಬಳಿಕ ವಿಸರ್ಜನೆಯ ಕಾರ್ಯಕ್ರಮಗಳು ನಡೆಯುತ್ತದೆ.
ಎಲ್ಲಾ ಕಡೆಗಳಲ್ಲಿ
ಗೌರಿಯನ್ನು ಪೂಜಿಸುವ ವಿಧಾನಗಳು ಭಿನ್ನವಾಗಿದ್ದರೂ ಪ್ರತಿಯೊಂದು ಕಡೆಗಳಲ್ಲೂ ಗೌರಿಯನ್ನು ಪೂಜಿಸುವಂತಹ ಸಂಪ್ರದಾಯ ಇದ್ದೇ ಇದೆ. ಸಂಪತ್ತು ಹಾಗೂ ಸಮೃದ್ಧಿಯ ದೇವತೆಯನ್ನು ಪ್ರತಿಯೊಬ್ಬರು ಶ್ರದ್ಧಾಭಕ್ತಿಯಿಂದ ಪೂಜಿಸುತ್ತಾರೆ. ಮದುವೆಯಾಗಿರುವ ಮಹಿಳೆಯರು ಸಂತಾನ ಭಾಗ್ಯ, ಸುಖ ಹಾಗೂ ಪತಿಯ ಆಯಸ್ಸು ಹೆಚ್ಚಾಗಲು ಗೌರಿಯನ್ನು ಪೂಜಿಸುತ್ತಾರೆ.



Click it and Unblock the Notifications

