Just In
- 36 min ago ಮೀನ ರಾಶಿಯಲ್ಲಿ ಬುಧ ವಕ್ರೀಯ ಚಲನೆ ಮಾಡುವಾಗ ಈ 5 ರಾಶಿಯವರು ವೃತ್ತಿ ಜೀವನದ ಬಗ್ಗೆ ಜಾಗ್ರತೆ
- 59 min ago ದಿನ ಭವಿಷ್ಯ ಮಾರ್ಚ್ 29: ಶುಕ್ರವಾರದ ಈ ದಿನ ದ್ವಾದಶ ರಾಶಿಗಳಿಗೆ ಹೇಗಿರಲಿದೆ?
- 1 hr ago ಏಪ್ರಿಲ್ನಲ್ಲಿ 14 ದಿನ ರಜೆ, ಏಪ್ರಿಲ್ 1ಕ್ಕೆ ಬ್ಯಾಂಕ್ಗಳಿಗೆ ರಜೆ ಇರಲು ಕಾರಣವೇನು?
- 1 hr ago ಹೋಳಿ ದಿನ ಸ್ಕೂಟಿಯಲ್ಲಿ ಟೈಟಾನಿಕ್ ಪೋಸ್ ನೀಡಿ ದೊಪ್ಪೆಂದು ಬಿದ್ದ ಹುಡುಗಿಗೆ ಬಿತ್ತು ದುಬಾರಿ ಫೈನ್
Don't Miss
- Movies Radha Bhagavathi ; ಮಲ್ಲಿ ಅಲಿಯಾಸ್ ರಾಧಾ ಭಗವತಿ ಹಿನ್ನೆಲೆ ಏನ್ಗೊತ್ತಾ..?
- News Bengaluru-Tumkur Metro: 52.41 ಕಿ.ಮೀ. ಮಾರ್ಗ, 19 ನಿಲ್ದಾಣಗಳು; ತುಮಕೂರು-ಬೆಂಗಳೂರು ಮೆಟ್ರೋ ಅಪ್ಡೇಟ್
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಶ್ರಾವಣ' ಎಂದರೆ ನಮ್ಮೆಲ್ಲರಿಗೂ ಶುಭವ ತರುವ ಮಾಸ
ಹಿಂದೂ ಮಾಸಗಳಲ್ಲಿ ಕೆಲವೊಂದು ಶುಭಕರವೆಂದು, ಕೆಲವೊಂದನ್ನು ಅಶುಭವೆಂದು ಪರಿಗಣಿಸಲಾಗುತ್ತದೆ. ಕೆಲವು ತಿಂಗಳುಗಳಲ್ಲಿ ಯಾವುದೇ ಶುಭ ಕಾರ್ಯವನ್ನು ಕೈಗೊಳ್ಳುವುದಿಲ್ಲ. ಇನ್ನು ಕೆಲವೊಂದು ತಿಂಗಳುಗಳನ್ನು ಶುಭವೆಂದು ಪರಿಗಣಿಸಿರಲಾಗುತ್ತದೆ.
ಅಂತಹ ತಿಂಗಳುಗಳಲ್ಲಿ ಶ್ರಾವಣವು ಒಂದು, ಆಷಾಡ ಮಾಸದ ನಂತರ ಬರುವ ಈ ಮಾಸವು ಅತ್ಯಂತ ಪವಿತ್ರ ಮಾಸವೆಂಬ ನಂಬಿಕೆ ಹಿಂದೂಗಳ ನಂಬಿಕೆಯಾಗಿದೆ. ಈ ಮಾಸದಲ್ಲಿ ಹಲವಾರು ಮದುವೆಗಳು, ಗೃಹಪ್ರವೇಶಗಳು, ಉಪನಯನಗಳು ಮತ್ತು ಇತರೆ ಕಾರ್ಯಕ್ರಮಗಳನ್ನು ನಡೆಸುತ್ತಾರೆ.
ಶ್ರಾವಣ ಮಾಸದದಲ್ಲಿ ಬರುವ ಪೌರ್ಣಿಮೆಯು ಮಹಾವಿಷ್ಣುವಿನ ಜನ್ಮ ನಕ್ಷತ್ರವಾದ ಶ್ರವಣ ನಕ್ಷತ್ರದ ದಿನವಾಗಿರುತ್ತದೆ. ಹೀಗಾಗಿ ಇದು ಪವಿತ್ರ ದಿನವೆಂಬ ನಂಬಿಕೆ ಇದೆ. ಇದರ ಜೊತೆಗೆ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ನಡುವೆ ಬರುವ ಈ ಮಾಸದಲ್ಲಿ ಹಲವಾರು ಹಬ್ಬ ಹರಿದಿನಗಳು ಇರುತ್ತವೆ. ಹಿಂದೂ ಧರ್ಮದ ಭಾವೈಕ್ಯತೆಯ ಹಬ್ಬ: ಶ್ರಾವಣ ಮಾಸ
ಈ ಮಾಸದಲ್ಲಿ ಬರುವ ನಾಲ್ಕೂ ಶುಕ್ರವಾರಗಳು ಅತ್ಯಂತ ಪವಿತ್ರವೆಂಬ ನಂಬಿಕೆ ಇದೆ. ಈ ಶುಕ್ರವಾರಗಳಂದು ಮಹಾಲಕ್ಷ್ಮಿಯ ಪೂಜೆಯನ್ನು ಮಾಡಲಾಗುತ್ತದೆ. ಈ ಮಾಸದ ಎರಡನೆ ಶುಕ್ರವಾರದಂದು ವರ ಮಹಾಲಕ್ಷ್ಮಿ ಹಬ್ಬವನ್ನು ಆಚರಿಸಲಾಗುತ್ತದೆ.
ಈ ಹಬ್ಬವನ್ನು ಎಷ್ಟು ಸಂಭ್ರಮದಿಂದ ಆಚರಿಸಲಾಗುತ್ತದೆ ಎಂದು ಬಿಡಿಸಿ ಹೇಳಬೇಕೆ? ವರಗಳನ್ನು ನೀಡುವ ವರ ಮಹಾಲಕ್ಷ್ಮಿಯನ್ನು ಅಂದು ಭಕ್ತರು ಭಕ್ತಿಭಾವದಿಂದ ಪೂಜಿಸಿ ಆರಾಧಿಸುತ್ತಾರೆ. ಸಂಪತ್ತಿನ ಅಧಿದೇವತೆ 'ಮಹಾಲಕ್ಷ್ಮಿ' ಬಗ್ಗೆ ತಿಳಿಯೋಣ ಬನ್ನಿ...
ಈ ಮಾಸದಲ್ಲಿ ಬರುವ ಮಂಗಳವಾರಗಳು ಸಹ ಅತ್ಯಂತ ಪವಿತ್ರವೆಂದು ಪರಿಗಣಿಸಲ್ಪಟ್ಟಿವೆ. ಈ ತಿಂಗಳ ಮಂಗಳವಾರಗಳಂದು ಮಹಿಳೆಯರು ಮಂಗಳ ಗೌರಿ ವ್ರತವನ್ನು ಆಚರಿಸುತ್ತಾರೆ. ತಮ್ಮ ವೈವಾಹಿಕ ಜೀವನವು ಸುಖಮಯವಾಗಿರಲಿ ಮತ್ತು ತಮ್ಮ ಕುಟುಂಬಕ್ಕೆ ಒಳ್ಳೆಯದಾಗಲಿ ಎಂದು ಪಾರ್ವತಿ ದೇವಿಯನ್ನು ಮಂಗಳ ಗೌರಿಯ ರೂಪದಲ್ಲಿ ಪೂಜಿಸುತ್ತಾರೆ.
ಇನ್ನು ಈ ತಿಂಗಳ ಶನಿವಾರಗಳನ್ನು ಶ್ರಾವಣ ಶನಿವಾರಗಳೆಂದು ಪೂಜಿಸಲಾಗುತ್ತದೆ. ಈ ದಿನ ಮಹಾವಿಷ್ಣುವನ್ನು ವೆಂಕಟೇಶ್ವರ ಅಥವಾ ಬಾಲಾಜಿ ಎಂಬ ರೂಪದಲ್ಲಿ ಆರಾಧಿಸಲಾಗುತ್ತದೆ. ಶ್ರಾವಣ ಮಾಸವನ್ನು ಶುಭ ಕಾರ್ಯಗಳಿಗಾಗಿ ಹೆಚ್ಚಾಗಿ ಪರಿಗಣಿಸಲಾಗುತ್ತದೆ. ಹಿಂದೂ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಶ್ರಾವಣ ಮಾಸದಲ್ಲಿ ಯಾರು ಜನಿಸುತ್ತಾರೋ, ಅವರಿಗೆ ಪ್ರಪಂಚದಲ್ಲಿ ವಿಶೇಷ ಸ್ಥಾನಮಾನಗಳನ್ನು ಪಡೆಯುತ್ತಾರಂತೆ. ಈ ಮಾಸದಲ್ಲಿ ಜಗನ್ನಾಥ ಸ್ವಾಮಿ, ಕೃಷ್ಣ, ಹಯಗ್ರೀವ ಮತ್ತು ವೈಕನ್ಸ್ ಮಹರ್ಷಿಯವರನ್ನು ಸಹ ಆರಾಧಿಸಲಾಗುತ್ತದೆ.