Latest Updates
-
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ!
'ಶ್ರಾವಣ' ಎಂದರೆ ನಮ್ಮೆಲ್ಲರಿಗೂ ಶುಭವ ತರುವ ಮಾಸ
ಹಿಂದೂ ಮಾಸಗಳಲ್ಲಿ ಕೆಲವೊಂದು ಶುಭಕರವೆಂದು, ಕೆಲವೊಂದನ್ನು ಅಶುಭವೆಂದು ಪರಿಗಣಿಸಲಾಗುತ್ತದೆ. ಕೆಲವು ತಿಂಗಳುಗಳಲ್ಲಿ ಯಾವುದೇ ಶುಭ ಕಾರ್ಯವನ್ನು ಕೈಗೊಳ್ಳುವುದಿಲ್ಲ. ಇನ್ನು ಕೆಲವೊಂದು ತಿಂಗಳುಗಳನ್ನು ಶುಭವೆಂದು ಪರಿಗಣಿಸಿರಲಾಗುತ್ತದೆ.
ಅಂತಹ ತಿಂಗಳುಗಳಲ್ಲಿ ಶ್ರಾವಣವು ಒಂದು, ಆಷಾಡ ಮಾಸದ ನಂತರ ಬರುವ ಈ ಮಾಸವು ಅತ್ಯಂತ ಪವಿತ್ರ ಮಾಸವೆಂಬ ನಂಬಿಕೆ ಹಿಂದೂಗಳ ನಂಬಿಕೆಯಾಗಿದೆ. ಈ ಮಾಸದಲ್ಲಿ ಹಲವಾರು ಮದುವೆಗಳು, ಗೃಹಪ್ರವೇಶಗಳು, ಉಪನಯನಗಳು ಮತ್ತು ಇತರೆ ಕಾರ್ಯಕ್ರಮಗಳನ್ನು ನಡೆಸುತ್ತಾರೆ.

ಶ್ರಾವಣ ಮಾಸದದಲ್ಲಿ ಬರುವ ಪೌರ್ಣಿಮೆಯು ಮಹಾವಿಷ್ಣುವಿನ ಜನ್ಮ ನಕ್ಷತ್ರವಾದ ಶ್ರವಣ ನಕ್ಷತ್ರದ ದಿನವಾಗಿರುತ್ತದೆ. ಹೀಗಾಗಿ ಇದು ಪವಿತ್ರ ದಿನವೆಂಬ ನಂಬಿಕೆ ಇದೆ. ಇದರ ಜೊತೆಗೆ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ನಡುವೆ ಬರುವ ಈ ಮಾಸದಲ್ಲಿ ಹಲವಾರು ಹಬ್ಬ ಹರಿದಿನಗಳು ಇರುತ್ತವೆ. ಹಿಂದೂ ಧರ್ಮದ ಭಾವೈಕ್ಯತೆಯ ಹಬ್ಬ: ಶ್ರಾವಣ ಮಾಸ
ಈ ಮಾಸದಲ್ಲಿ ಬರುವ ನಾಲ್ಕೂ ಶುಕ್ರವಾರಗಳು ಅತ್ಯಂತ ಪವಿತ್ರವೆಂಬ ನಂಬಿಕೆ ಇದೆ. ಈ ಶುಕ್ರವಾರಗಳಂದು ಮಹಾಲಕ್ಷ್ಮಿಯ ಪೂಜೆಯನ್ನು ಮಾಡಲಾಗುತ್ತದೆ. ಈ ಮಾಸದ ಎರಡನೆ ಶುಕ್ರವಾರದಂದು ವರ ಮಹಾಲಕ್ಷ್ಮಿ ಹಬ್ಬವನ್ನು ಆಚರಿಸಲಾಗುತ್ತದೆ.
ಈ ಹಬ್ಬವನ್ನು ಎಷ್ಟು ಸಂಭ್ರಮದಿಂದ ಆಚರಿಸಲಾಗುತ್ತದೆ ಎಂದು ಬಿಡಿಸಿ ಹೇಳಬೇಕೆ? ವರಗಳನ್ನು ನೀಡುವ ವರ ಮಹಾಲಕ್ಷ್ಮಿಯನ್ನು ಅಂದು ಭಕ್ತರು ಭಕ್ತಿಭಾವದಿಂದ ಪೂಜಿಸಿ ಆರಾಧಿಸುತ್ತಾರೆ. ಸಂಪತ್ತಿನ ಅಧಿದೇವತೆ 'ಮಹಾಲಕ್ಷ್ಮಿ' ಬಗ್ಗೆ ತಿಳಿಯೋಣ ಬನ್ನಿ...
ಈ ಮಾಸದಲ್ಲಿ ಬರುವ ಮಂಗಳವಾರಗಳು ಸಹ ಅತ್ಯಂತ ಪವಿತ್ರವೆಂದು ಪರಿಗಣಿಸಲ್ಪಟ್ಟಿವೆ. ಈ ತಿಂಗಳ ಮಂಗಳವಾರಗಳಂದು ಮಹಿಳೆಯರು ಮಂಗಳ ಗೌರಿ ವ್ರತವನ್ನು ಆಚರಿಸುತ್ತಾರೆ. ತಮ್ಮ ವೈವಾಹಿಕ ಜೀವನವು ಸುಖಮಯವಾಗಿರಲಿ ಮತ್ತು ತಮ್ಮ ಕುಟುಂಬಕ್ಕೆ ಒಳ್ಳೆಯದಾಗಲಿ ಎಂದು ಪಾರ್ವತಿ ದೇವಿಯನ್ನು ಮಂಗಳ ಗೌರಿಯ ರೂಪದಲ್ಲಿ ಪೂಜಿಸುತ್ತಾರೆ.
ಇನ್ನು ಈ ತಿಂಗಳ ಶನಿವಾರಗಳನ್ನು ಶ್ರಾವಣ ಶನಿವಾರಗಳೆಂದು ಪೂಜಿಸಲಾಗುತ್ತದೆ. ಈ ದಿನ ಮಹಾವಿಷ್ಣುವನ್ನು ವೆಂಕಟೇಶ್ವರ ಅಥವಾ ಬಾಲಾಜಿ ಎಂಬ ರೂಪದಲ್ಲಿ ಆರಾಧಿಸಲಾಗುತ್ತದೆ. ಶ್ರಾವಣ ಮಾಸವನ್ನು ಶುಭ ಕಾರ್ಯಗಳಿಗಾಗಿ ಹೆಚ್ಚಾಗಿ ಪರಿಗಣಿಸಲಾಗುತ್ತದೆ. ಹಿಂದೂ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಶ್ರಾವಣ ಮಾಸದಲ್ಲಿ ಯಾರು ಜನಿಸುತ್ತಾರೋ, ಅವರಿಗೆ ಪ್ರಪಂಚದಲ್ಲಿ ವಿಶೇಷ ಸ್ಥಾನಮಾನಗಳನ್ನು ಪಡೆಯುತ್ತಾರಂತೆ. ಈ ಮಾಸದಲ್ಲಿ ಜಗನ್ನಾಥ ಸ್ವಾಮಿ, ಕೃಷ್ಣ, ಹಯಗ್ರೀವ ಮತ್ತು ವೈಕನ್ಸ್ ಮಹರ್ಷಿಯವರನ್ನು ಸಹ ಆರಾಧಿಸಲಾಗುತ್ತದೆ.



Click it and Unblock the Notifications


