Latest Updates
-
ಮುಂಬೈ ಆರೆಂಜ್ ಅಲರ್ಟ್: ಮಳೆಯಲ್ಲಿ ಆಫೀಸ್ ಹೋಗುವವರೇ, ಈ 'ನೋ-ಕುಕ್' ಪ್ರೋಟೀನ್ ಮೀಲ್ಸ್ ಮಿಸ್ ಮಾಡ್ಬೇಡಿ! -
ಅಮೆಜಾನ್ ಪ್ರೈಮ್ ಡೇ ಸೇಲ್: ಕಡಿಮೆ ಬೆಲೆಗೆ ವಸ್ತುಗಳನ್ನು ಖರೀದಿಸಲು ಈ ಸ್ಮಾರ್ಟ್ ಟ್ರಿಕ್ಸ್ ಮಿಸ್ ಮಾಡ್ಬೇಡಿ! -
ಯೋಗದ ನಂತರ ಮೈಕೈ ನೋವು ಕಾಡುತ್ತಿದೆಯೇ? ಕಚೇರಿಯಲ್ಲಿ ಕೆಲಸ ಮಾಡುವಾಗ ಈ 12 ನಿಮಿಷದ ಟಿಪ್ಸ್ ಪಾಲಿಸಿ -
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್! -
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್
ಹಿಂದೂ ಧರ್ಮದ ಪೂಜ್ಯನೀಯ ದೇವತೆ, ಗೋಮಾತೆ
ಹಿಂದೂಗಳಿಗೆ ಗೋವೆಂದರೆ ಮಾತೆ, ದೇವತೆಯ ಸಮಾನ. ಗೋವಿನಲ್ಲಿ ಎಲ್ಲಾ ದೇವದೇವತೆಗಳಿದ್ದಾರೆ ಮತ್ತು ಗೋವು ಕೇಳಿದ್ದನ್ನು ಪರಿಪಾಲಿಸುತ್ತಾಳೆ ಎಂದು ಗೋವನ್ನು ಕಾಮಧೇನು ಎಂದು ಕರೆಯುತ್ತಾರೆ. ಕಾಮಧೇನು ಎಂದರೆ ಬೇಡಿದನ್ನು ಕೊಡುವುದು ಎನ್ನುವ ಅರ್ಥವಿದೆ. ಈ ಕಾಮಧೇನು ಎನ್ನುವ ಪದದ ಬಗ್ಗೆ ಭಗವದ್ಗೀತೆಯಲ್ಲಿ ಉಲ್ಲೇಖವಿದೆ.

ಶ್ರೀ ಕೃಷ್ಣನು ಭಗವದ್ಗೀತೆಯಲ್ಲಿ ಧೇನುನಾಮ್ ಆಸ್ಮಿ ಕಾಮಧುಕ ಎನ್ನುತ್ತಾನೆ. ಇದರರ್ಥ ಗೋವುಗಳಲ್ಲಿ ನಾನು ಕಾಮಧುಕ, ಬೇಡಿದನ್ನು ಕೊಡುವ ಗೋವು ಎಂದು. ಕಾಮಧುಕ ಎಂದರೆ ಕಾಮಧೇನು ಎಂದರ್ಥ. ಇದನ್ನೇ ಸುರಭಿ ಎನ್ನಲಾಗುತ್ತದೆ. ಹಾಗಾದರೆ ಸುರಭಿ ಯಾರು ಮತ್ತು ಏನು? ಭಗವಂತ ಶ್ರೀ ಕೃಷ್ಣನ ಶಕ್ತಿಯನ್ನೇ ಪಡೆಯಲು ಈ ಪ್ರಾಣಿಗೆ ಹೇಗೆ ಸಾಧ್ಯವಾಯಿತು? ಈ ಪ್ರಶ್ನೆಗಳಿಗೆ ವೇದವ್ಯಾಸರು ಬರೆದಿರುವ ಮಹಾಭಾರತದ ಅನುಶಾಸನ ಪರ್ವದಲ್ಲಿ ಉತ್ತರವನ್ನು ಕೊಟ್ಟಿದ್ದಾರೆ.
ಸುರಭಿ ಗೋವು ಅಂದರೇನು?
ಆಧ್ಯಾತ್ಮಕ ಲೋಕದಿಂದ ಹೊರಬಂದು ಎಲ್ಲಾ ಜೀವಗಳಿಗೆ ಲಾಭವನ್ನು ಉಂಟುಮಾಡಿದ್ದೇ ಸುರಭಿ ಗೋವು. ಸುರಭಿ ಗೋವಿನಿಂದಲೇ ಭಾರತದ ಗೋವುಗಳು ಹುಟ್ಟಿವೆ. ಇದರಿಂದಾಗಿ ಭಾರತದ ಗೋವುಗಳು ಪೂಜ್ಯನೀಯವಾಗಿದೆ. ಎಲ್ಲಾ ಸೃಷ್ಟಿಗಳಿಗೆ ಮಾತೆಯಾಗಿರುವ ಕಾರಣ ಗೋವನ್ನು ತುಂಬಾ ಪಾವಿತ್ರ್ಯವೆಂದು ಪರಿಗಣಿಸಲಾಗುತ್ತದೆ ಎನ್ನುವುದು ಧರ್ಮಗುರುಗಳ ಅಭಿಮತವಾಗಿದೆ. ಹಿಂದೂ ಧರ್ಮದಲ್ಲಿ ಗೋಮಾತೆಯ ಸಗಣಿಯ ಪ್ರಾಮುಖ್ಯತೆಯೇನು?
33 ಕೋಟಿ ದೇವತೆಗಳಿಗೂ ಗೋವು ಮಾತೆಯೆನ್ನುವುದು ಪುರಾಣಗಳಲ್ಲಿ ಉಲ್ಲೇಖವಿದೆ. ಗೋವನ್ನು ದೇವತೆಗಳ ದೇವತೆ ಎನ್ನುತ್ತಾರೆ. ಇದರಿಂದಾಗಿಯೇ ಸಾವಿರಾರು ವರ್ಷಗಳಿಂದಲೂ ಗೋವನ್ನು ಪೂಜ್ಯನೀಯವೆಂದು ಪರಿಗಣಿಸಲಾಗಿದೆ ಮತ್ತು ಗೋ ಮಾತೆಯನ್ನು ಪೂಜಿಸಲಾಗುತ್ತಿದೆ. ಗೋ ಮಾತೆಯ ಸೆಗಣಿ, ಮೂತ್ರ ಮತ್ತು ಹಾಲು ಅತೀ ಪಾವಿತ್ರ್ಯವೆಂದು ಪರಿಗಣಿಸಲಾಗಿದೆ. ಗೋವನ್ನು ಅದರ ಕರುವಿನಿಂದ ದೂರ ಮಾಡಬಾರದು. ಒಂದು ವೇಳೆ ಹೀಗೆ ಮಾಡಿದಲ್ಲಿ ಅದು ದೊಡ್ಡ ಪಾಪ ಎಂಬ ನಂಬಿಕೆಯಿದೆ.
ಪುರಾತನ ಕಾಲದಲ್ಲಿ ಸೆಗಣಿಯನ್ನು ಕೂಡ ಪೂಜಿಸಲಾಗುತ್ತಿತ್ತು. ಆದರೆ ಇಂದಿನ ದಿನಗಳಲ್ಲಿ ಸೆಗಣಿ ಬಿಡಿ, ಗೋವಿಗೆ ಕೂಡ ಗೌರವ ಸಲ್ಲಿಸುವುದನ್ನು ಮರೆಯುತ್ತಿದ್ದಾರೆ. ಗೋವಿನ ಹಾಲನ್ನು ಪ್ರತಿಯೊಂದು ಹಿಂದೂಗಳು ತಮ್ಮ ಮನೆಯಲ್ಲಿ ಪವಿತ್ರವೆಂದು ಪರಿಗಣಿಸಿ ಬಳಸುತ್ತಾರೆ. ಹಿಂದೂಗಳು ಗೋಮಾತೆಯನ್ನು ಪೂಜಿಸಲು ಕಾರಣಗಳೇನು?
ಗೋವು ಎಷ್ಟು ಪರಿಶುದ್ಧ?
ಪುರಾತನ ಕಾಲದಿಂದಲೂ ಗೋವಿನ ಸೆಗಣಿಯನ್ನು ಪವಿತ್ರವೆಂದು ಕಾಣಲಾಗುತ್ತಿತ್ತು. ಇಂದಿನ ದಿನಗಳಲ್ಲಿ ಹೆಚ್ಚಿನ ಹಿಂದೂಗಳು ತಮ್ಮ ಹಬ್ಬ ಹಾಗೂ ಇತರ ಕೆಲವು ಸಂದರ್ಭಗಳಲ್ಲಿ ಸೆಗಣಿಯನ್ನು ದೇವರ ಕೆಲಸಗಳಿಗೆ ಬಳಸುತ್ತಾರೆ. ಪುರಾಣಗಳಲ್ಲಿ ಇರುವಂತೆ ಮಲಗಿರುವ ಹಸುವನ್ನು ಎಬ್ಬಿಸಬಾರದು. ಇದು ಅದಕ್ಕೆ ಅಗೌರವ ತೋರಿಸಿದಂತೆ.
ಹಿಂದೂಗಳ ಮನೆಯಲ್ಲಿ ಹಾಲಿಗೂ ಪಾವಿತ್ರ್ಯತೆಯನ್ನು ಕೊಡಲಾಗಿದೆ. ಅತ್ಯಂತ ಸಾಧು ಸ್ವಭಾವದ ಮತ್ತು ಸುಂದರ ಗೋವುಗಳು ಅಗಾಧ ಶಕ್ತಿಯನ್ನು ಹೊಂದಿದೆ. ಇವುಗಳನ್ನು ಪೂಜಿಸಿದರೆ ನಮಗೆ ಪುಣ್ಯ ಹಾಗೂ ಎದುರಾಗುವಂತಹ ಸಂಕಷ್ಟಗಳು ನಿವಾರಣೆಯಾಗುತ್ತದೆ ಎನ್ನುವ ನಂಬಿಕೆಯಿದೆ.



Click it and Unblock the Notifications


