Latest Updates
-
ಹೊಸ ಮನೆ, ವಾಹನ ಖರೀದಿಸುವ ಯೋಗ! ಜೀವನದಲ್ಲಿ ಹೆಚ್ಚಲಿದೆ ಸಂತಸ -
March 10 Horoscope: ಆದಾಯ ಗಳಿಕೆಯ ಆಸೆಯಿಂದ ಹಣ ಕಳೆದುಕೊಳ್ಳಬೇಡಿ -
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ?
ಶೂನ್ಯತೆ, ನಿರ್ಥಕತೆ, ಖಾಲಿತನದ ನಿಜವಾದ ಅರ್ಥ

ಒಂದು ದಿನ ಸುಭುತಿಯು ಮರವೊಂದರ ಕೆಳಗಡೆ ಸ್ಥಿತಪ್ರಜ್ಞನಂತೆ ಧ್ಯಾನದಲ್ಲಿ ಮುಳುಗಿದ್ದನು. ಆಗ ಇದ್ದಕ್ಕಿದ್ದಂತೆ ಪ್ರತ್ಯಕ್ಷರಾದ ದೇವತೆಗಳು ಆತನ ಮೇಲೆ ಪುಷ್ಪ ವೃಷ್ಟಿ ಮಾಡಲು ಶುರು ಮಾಡಿದರು. ಇದರಿಂದ ಸುಭುತಿಯ ಏಕಾಂತ ಕಡಿತಗೊಂಡಿತು ಮತ್ತು ಆತನಿಗೆ ಆಶ್ಚರ್ಯವೋ ಆಶ್ಚರ್ಯ. ಸುತ್ತ ಮುತ್ತ ನೋಡಿದಾಗ ಆತನಿಗೆ ದೇವತೆಗಳು ಹೂಮಳೆ ಸುರಿಸಿದ್ದು ಕಂಡುಬಂದಿತು.
"ಇದೇಕೆ ನನ್ನ ಮೇಲೆ ಪುಷ್ಪ ವೃಷ್ಟಿ ಮಾಡಿದಿರಿ?" ಎಂದು ಸುಭುತಿ ವಿನಮ್ರವಾಗಿ ದೇವರನ್ನು ಪ್ರಶ್ನಿಸಿದ.
"ಶೂನ್ಯತೆ, ಖಾಲಿತನದ ಬಗ್ಗೆ ನಿನ್ನ ಮಾತುಗಳನ್ನು, ಉಪದೇಶಗಳನ್ನು, ನಿನ್ನ ಚಿಂತನೆಯನ್ನು ನಾವು ಮೆಚ್ಚಿದ್ದೇವೆ. ಆದ್ದರಿಂದಲೇ ಈ ಹೂ ಮಳೆ" ಎಂದು ದೇವತೆಗಳು ಉಸುರಿದರು.
"ಆದರೆ..." ಸುಭುತಿ ಹೇಳಿದ, "ನಾನು ಶೂನ್ಯತೆ ಬಗ್ಗೆ ನಿಮ್ಮ ಜೊತೆ ಮಾತನಾಡಿಯೇ ಇಲ್ಲವಲ್ಲ?"
"ನೀನು ಶೂನ್ಯತೆ ಬಗ್ಗೆ ಮಾತನಾಡಿಯೂ ಇಲ್ಲ, ನಾವು ಶೂನ್ಯತೆ ಬಗ್ಗೆ ಕೇಳಿಯೂ ಇಲ್ಲ" ಎಂದು ದೇವತೆಗಳು ಸುಭುತಿಯನ್ನು ಪ್ರಶಂಶಿಸಿದರು.
ಬುದ್ಧನ ಅನುಯಾಯಿಯಾಗಿದ್ದ ಸುಭುತಿಯ ಮೇಲೆ ಮತ್ತೆ ಯತೇಚ್ಛವಾಗಿ ಹೂವಿನ ಸುರಿಮಳೆಯಾಯ್ತು.



Click it and Unblock the Notifications











