Latest Updates
-
ಸಿಡಿಲು-ಮಳೆಯ ಎಚ್ಚರಿಕೆ: ಹೊರಗೆ ಹೋಗುವ ಸಾಹಸ ಬೇಡ, ಮನೆಯಲ್ಲೇ ಫಿಟ್ ಆಗಿರಲು ಈ ಟಿಪ್ಸ್ ಫಾಲೋ ಮಾಡಿ! -
ನೀಟ್ ಮರುಪರೀಕ್ಷೆ: ಅಡ್ಮಿಟ್ ಕಾರ್ಡ್ ಬಿಡುಗಡೆ, ಪರೀಕ್ಷೆಗೆ ಹೋಗುವ ಮುನ್ನ ವಿದ್ಯಾರ್ಥಿಗಳು ಮತ್ತು ಪೋಷಕರು ತಪ್ಪದೇ ಮಾಡಬೇಕಾದ ಕೆಲಸಗಳಿವು! -
ಮಳೆಗಾಲದ ಅಬ್ಬರಕ್ಕೆ ನಿಮ್ಮ ಮನೆ ಸಿದ್ಧವೇ? ಸೋರಿಕೆ ಮತ್ತು ಹಾನಿ ತಪ್ಪಿಸಲು ಈ ಸರಳ ಟಿಪ್ಸ್ ಪಾಲಿಸಿ -
ಸುಡುವ ಬಿಸಿಲಿಗೆ ಹವಾಮಾನ ಇಲಾಖೆ ಎಚ್ಚರಿಕೆ: ದೇಹ ತಂಪಾಗಿಡಲು ಈ ಪಾನೀಯಗಳೇ ರಾಮಬಾಣ! -
ಲಕ್ನೋದಲ್ಲಿ ಭಾರತ-ಅಫ್ಘಾನಿಸ್ತಾನ ಹೈ-ವೋಲ್ಟೇಜ್ ಕದನ: ಪಂದ್ಯದ ಮಜಾ ಸವಿಯಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದ ಯೋಗ ದಿನಾಚರಣೆ: ಮೈದಾನದಲ್ಲಿ ಯೋಗ ಮಾಡಲು ಸಿದ್ಧರಿದ್ದೀರಾ? ಇಲ್ಲಿದೆ ಅಗತ್ಯ ಮುನ್ನೆಚ್ಚರಿಕೆಗಳು! -
ಟೆಲಿಗ್ರಾಮ್ ಬಳಕೆದಾರರೇ ಎಚ್ಚರ: ಜೂನ್ 16 ರಿಂದ 22 ರವರೆಗೆ ಸೇವೆ ಸ್ಥಗಿತ, ಪರ್ಯಾಯ ಮಾರ್ಗಗಳೇನು? -
ಪಂಜಾಬ್-ಹರಿಯಾಣದಲ್ಲಿ ಭಾರಿ ಬಿರುಗಾಳಿ ಎಚ್ಚರಿಕೆ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಈ 20 ನಿಮಿಷಗಳ ಟಿಪ್ಸ್ ಪಾಲಿಸಿ! -
ಸೋಯಾಬೀನ್ ಎಣ್ಣೆ ಬೆಲೆ ಏರಿಕೆ: ಅಡುಗೆ ಮನೆ ಬಜೆಟ್ ಮೇಲೆ ಹೊರೆ, ಕಲಬೆರಕೆ ಪತ್ತೆ ಹಚ್ಚುವುದು ಹೇಗೆ? -
ದೆಹಲಿ-ಎನ್ಸಿಆರ್ನಲ್ಲಿ ಮಳೆ ಅಬ್ಬರ: ಟ್ರಾಫಿಕ್ ಕಿರಿಕಿರಿ ತಪ್ಪಿಸಲು ನೀವು ಮಾಡಬೇಕಾದ್ದೇನು?
ಶೂನ್ಯತೆ, ನಿರ್ಥಕತೆ, ಖಾಲಿತನದ ನಿಜವಾದ ಅರ್ಥ

ಒಂದು ದಿನ ಸುಭುತಿಯು ಮರವೊಂದರ ಕೆಳಗಡೆ ಸ್ಥಿತಪ್ರಜ್ಞನಂತೆ ಧ್ಯಾನದಲ್ಲಿ ಮುಳುಗಿದ್ದನು. ಆಗ ಇದ್ದಕ್ಕಿದ್ದಂತೆ ಪ್ರತ್ಯಕ್ಷರಾದ ದೇವತೆಗಳು ಆತನ ಮೇಲೆ ಪುಷ್ಪ ವೃಷ್ಟಿ ಮಾಡಲು ಶುರು ಮಾಡಿದರು. ಇದರಿಂದ ಸುಭುತಿಯ ಏಕಾಂತ ಕಡಿತಗೊಂಡಿತು ಮತ್ತು ಆತನಿಗೆ ಆಶ್ಚರ್ಯವೋ ಆಶ್ಚರ್ಯ. ಸುತ್ತ ಮುತ್ತ ನೋಡಿದಾಗ ಆತನಿಗೆ ದೇವತೆಗಳು ಹೂಮಳೆ ಸುರಿಸಿದ್ದು ಕಂಡುಬಂದಿತು.
"ಇದೇಕೆ ನನ್ನ ಮೇಲೆ ಪುಷ್ಪ ವೃಷ್ಟಿ ಮಾಡಿದಿರಿ?" ಎಂದು ಸುಭುತಿ ವಿನಮ್ರವಾಗಿ ದೇವರನ್ನು ಪ್ರಶ್ನಿಸಿದ.
"ಶೂನ್ಯತೆ, ಖಾಲಿತನದ ಬಗ್ಗೆ ನಿನ್ನ ಮಾತುಗಳನ್ನು, ಉಪದೇಶಗಳನ್ನು, ನಿನ್ನ ಚಿಂತನೆಯನ್ನು ನಾವು ಮೆಚ್ಚಿದ್ದೇವೆ. ಆದ್ದರಿಂದಲೇ ಈ ಹೂ ಮಳೆ" ಎಂದು ದೇವತೆಗಳು ಉಸುರಿದರು.
"ಆದರೆ..." ಸುಭುತಿ ಹೇಳಿದ, "ನಾನು ಶೂನ್ಯತೆ ಬಗ್ಗೆ ನಿಮ್ಮ ಜೊತೆ ಮಾತನಾಡಿಯೇ ಇಲ್ಲವಲ್ಲ?"
"ನೀನು ಶೂನ್ಯತೆ ಬಗ್ಗೆ ಮಾತನಾಡಿಯೂ ಇಲ್ಲ, ನಾವು ಶೂನ್ಯತೆ ಬಗ್ಗೆ ಕೇಳಿಯೂ ಇಲ್ಲ" ಎಂದು ದೇವತೆಗಳು ಸುಭುತಿಯನ್ನು ಪ್ರಶಂಶಿಸಿದರು.
ಬುದ್ಧನ ಅನುಯಾಯಿಯಾಗಿದ್ದ ಸುಭುತಿಯ ಮೇಲೆ ಮತ್ತೆ ಯತೇಚ್ಛವಾಗಿ ಹೂವಿನ ಸುರಿಮಳೆಯಾಯ್ತು.



Click it and Unblock the Notifications