Latest Updates
-
ಮಾಸಿಕ ಶಿವರಾತ್ರಿ ಉಪವಾಸ: ಸುಸ್ತಾಗದಂತೆ ಇರಲು 6 ನಿಮಿಷದ ಸರಳ ವ್ಯಾಯಾಮ ಮತ್ತು ಟಿಪ್ಸ್ -
ಮನೆಯವರ ವಿರೋಧದ ನಡುವೆ ಮದುವೆ: ಅಲಹಾಬಾದ್ ಹೈಕೋರ್ಟ್ನಿಂದ ಜೋಡಿಗಳಿಗೆ ಸಿಕ್ಕಿತು ಭರ್ಜರಿ ರಕ್ಷಣೆ! -
ಮಳೆ ನಂತರ ದೆಹಲಿ-ಎನ್ಸಿಆರ್ನಲ್ಲಿ ಶುದ್ಧ ಗಾಳಿ: ನಿಮ್ಮ ಮನೆಯನ್ನು ಫ್ರೆಶ್ ಆಗಿಡಲು ಈ ಸರಳ ಟಿಪ್ಸ್ ಪಾಲಿಸಿ! -
ಯೋಗಿನಿ ಏಕಾದಶಿ: ಮಧುಮೇಹಿಗಳು ಉಪವಾಸ ಮಾಡುವಾಗ ಈ ಆರೋಗ್ಯ ಟಿಪ್ಸ್ ಮರೆಯದಿರಿ! -
ವಿಶ್ವ ಜನಸಂಖ್ಯಾ ದಿನ: ಉಚಿತ ಗರ್ಭನಿರೋಧಕಗಳು ಮತ್ತು ನಿಮ್ಮ ಗೌಪ್ಯತೆ ಬಗ್ಗೆ ತಿಳಿಯಲೇಬೇಕಾದ ಸತ್ಯಗಳು -
ಭಾರತ-ಇಂಗ್ಲೆಂಡ್ ಟಿ20 ಪಂದ್ಯದ ರೋಚಕತೆ ನಡುವೆ ಫಿಟ್ ಆಗಿರಲು ಈ 7 ನಿಮಿಷದ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದ ಡೇಟಿಂಗ್: ಬಜೆಟ್ ಸ್ನೇಹಿ ಐಡಿಯಾಗಳು ಮತ್ತು ಸುರಕ್ಷಿತವಾಗಿರಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ಕೋಲ್ಕತ್ತಾದಲ್ಲಿ ಭಾರಿ ಮಳೆ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಮಿಸ್ ಮಾಡಬೇಡಿ! -
ಮಳೆಗಾಲದಲ್ಲಿ ಹೊಟ್ಟೆಯ ಸಮಸ್ಯೆ ಕಾಡ್ತಿದೆಯಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ -
ಧಮಾಲ್ 4 ರಿಲೀಸ್: ಅಜಯ್ ದೇವಗನ್ ಕಾಮಿಡಿ ಹಬ್ಬಕ್ಕೆ ಫ್ಯಾಮಿಲಿ ಜೊತೆ ರೆಡಿಯಾಗಿ!
ಆತನ ಸಾವು ದೇಗುಲದ ಪ್ರಶಾಂತತೆ ಕದಡಿತ್ತು

ಶಿಯೋಚಿ ವಿಶಿಷ್ಟ ರೀತಿಯಲ್ಲಿ ತನ್ನ ಶಿಷ್ಯರಿಗೆ ಬೋಧನೆ ಮಾಡುತ್ತಿದ್ದ. ಪಾಠಗಳಿಲ್ಲ, ಪ್ರವಚನಗಳಿಲ್ಲ. ಮೌನದ ಮುಖಾಂತರವೇ ಅತ್ಯಂತ ಪ್ರಭಾವಶಾಲಿಯಾಗಿ ಬೋಧನೆ ಮಾಡಲಾಗುತ್ತಿತ್ತು. ಮೌನದ ಮುಖಾಂತರವೇ ಬೋಧನೆ ಮಾಡುತ್ತಿದ್ದರಿಂದ ಇಡೀ ದೇಗುಲ ರಾತ್ರಿ, ಹಗಲೂ ಶಾಂತವಾಗಿ ಇರುತ್ತಿತ್ತು. ಸುತ್ತಲಿನ ಜನರು ಕೂಡ ಗುರು ಶಿಯೋಚಿಯನ್ನು ಮತ್ತು ಈ ರೀತಿಯ ಬೋಧನೆ ಶ್ಲಾಘಿಸುತ್ತಿದ್ದರು.
ಶಿಷ್ಯಂದಿರಿಗೆ ಧ್ಯಾನದ ಹೊರತಾಗಿ ದೇಗುಲದಲ್ಲಿ ಇನ್ನೇನೂ ಮಾಡುವುದಕ್ಕೆ ಇರುತ್ತಿರಲಿಲ್ಲ. ಶಿಯೋಚಿಯು ಸೂತ್ರಗಳನ್ನು ಪಠಿಸುತ್ತಿರಲಿಲ್ಲ ಬದಲಾಗಿ ಧ್ಯಾನವನ್ನು ಮಾತ್ರ ಮಾಡುತ್ತಿದ್ದ. ಶಿಷ್ಯರು ಕೂಡ ಶಿಯೋಚಿಯ ಬೋಧನೆಯನ್ನು ಶ್ರದ್ಧೆ ಮತ್ತು ಭಕ್ತಿಯಿಂದ ಕಲಿಯುತ್ತಿದ್ದರು.
ಇದು ಹಲವಾರು ತಿಂಗಳುಗಳ ಕಾಲ ನಡೆದುಕೊಂಡು ಬಂದಿತು. ದೇಗುಲದ ದಿವ್ಯ ಪ್ರಶಾಂತತೆ ಒಂದು ದಿನ ಕದಡಿ ಹೋಯಿತು. ಅತ್ಯಂತ ಶಾಂತವಾಗಿದ್ದ ದೇಗುಲದಲ್ಲಿ ಗಂಟೆ ಜಾಗಟೆಗಳು ಮೊಳಗಲು ಪ್ರಾರಂಭಿಸಿದವು. ಮೌನದ ಮುಖಾಂತರ ನಡೆಯುತ್ತಿದ್ದ ಬೋಧನೆಗಳು, ಪಾಠ, ಪ್ರವಚನಗಳು ಎಂಟು ದಿಕ್ಕಿಗೆ ಹರಡುವಂತೆ ಕೇಳಲು ಪ್ರಾರಂಭಿಸಿದವು.
ಆ ದೇವಸ್ಥಾನದ ಪಕ್ಕದಲ್ಲಿಯೇ ಒಬ್ಬ ಹಿರಿಯ ನಾಗರಿಕರ ಹೆಂಗಸು ವಾಸವಾಗಿದ್ದರು. ಅವರಿಗೆ ಈ ಬದಲಾವಣೆ ವಿಚಿತ್ರವಾಗಿ ಕಂಡಿತು. ಆದರೆ, ಅವರಿಗೆ ಸತ್ಯ ಕಂಡುಕೊಳ್ಳಲು ಹೆಚ್ಚು ಸಮಯ ಬೇಕಾಗಲಿಲ್ಲ. ಅದೇನೆಂದರೆ, ಶಿಯೋಚಿಯು ಮರಣ ಹೊಂದಿದ್ದ.



Click it and Unblock the Notifications