Latest Updates
-
ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್: ವಿಚ್ಛೇದನ, ಕಸ್ಟಡಿ ಸಮಸ್ಯೆಗಳಿಗೆ ಇಲ್ಲಿದೆ ಸುಲಭ ಪರಿಹಾರ! -
ಅಪಾರ್ಟ್ಮೆಂಟ್ನಲ್ಲಿ ಪರಿಸರ ಸ್ನೇಹಿ ಗಣೇಶ ಹಬ್ಬ: ದಂಡ ತಪ್ಪಿಸಿ, ಸುಲಭವಾಗಿ ವಿಸರ್ಜನೆ ಮಾಡುವುದು ಹೇಗೆ? -
ಓಣಂ ಸದ್ಯದ ಸಂಭ್ರಮ: ಬೆಲೆ ಏರಿಕೆ ಮತ್ತು ಆರೋಗ್ಯದ ಚಿಂತೆಯಿಲ್ಲದೆ ಹಬ್ಬ ಆಚರಿಸುವುದು ಹೇಗೆ? -
ಆಗಸ್ಟ್ 2026 ಏಕಾದಶಿ: ಸ್ಮಾರ್ತ vs ವೈಷ್ಣವ ವ್ರತದ ದಿನಾಂಕಗಳ ಗೊಂದಲವೇ? ಮಧುಮೇಹಿಗಳಿಗೆ ಇಲ್ಲಿದೆ ಉಪವಾಸದ ಸೂತ್ರ! -
ರಾಷ್ಟ್ರೀಯ ಬಾಹ್ಯಾಕಾಶ ದಿನ 2026: ನಿಮ್ಮ ಮಕ್ಕಳೊಂದಿಗೆ ಚಂದ್ರನ ರಹಸ್ಯಗಳನ್ನು ಅನ್ವೇಷಿಸಲು ಇಲ್ಲಿದೆ ಬೆಸ್ಟ್ ಪ್ಲಾನ್! -
ಓಣಂ ಹಬ್ಬದ ಸಂಭ್ರಮ: ಮಳೆಯಲ್ಲೂ ಸ್ಟೈಲಿಶ್ ಆಗಿ ಕಾಣಲು ₹1,200 ರೊಳಗೆ ಬೆಸ್ಟ್ ಫ್ಯಾಷನ್ ಟಿಪ್ಸ್! -
ಮಳೆಗಾಲದಲ್ಲಿ ಹಿರಿಯರು ಜಾರಿ ಬೀಳುವ ಆತಂಕವೇ? ಸುರಕ್ಷಿತವಾಗಿರಲು ಈ 12 ನಿಮಿಷಗಳ ಚೇರ್-ಯೋಗ ಟ್ರೈ ಮಾಡಿ! -
ಹಿರಿಯರ ಆರೋಗ್ಯಕ್ಕೆ ದಿನಕ್ಕೆ 12 ನಿಮಿಷದ 'ಚೇರ್ ಯೋಗ': ಚೈತನ್ಯ ಮತ್ತು ಸಮತೋಲನಕ್ಕೆ ಇದುವೇ ಮಂತ್ರ! -
ಫ್ಯಾಮಿಲಿ ವಾಟ್ಸಾಪ್ ಗ್ರೂಪ್ನಲ್ಲಿ ರಾಜಕೀಯ ಜಗಳವೇ? ಈ ಟಿಪ್ಸ್ ಪಾಲಿಸಿ, ಸಂಬಂಧ ಉಳಿಸಿಕೊಳ್ಳಿ! -
ಓಣಂ ಹಬ್ಬದ ಸಂಭ್ರಮ: ಹೂವಿನ ಬೆಲೆ ಏರಿಕೆ ನಡುವೆ ಕಡಿಮೆ ದರದಲ್ಲಿ ಖರೀದಿಸಲು ಇಲ್ಲಿವೆ ಟಿಪ್ಸ್!
ಗಾಳಿಗಿಂತ ದೊಡ್ಡ ದೇವರು ಸಿಕ್ಕಾಗ ಮತ್ತೆ ಬಾ!

ಆಗ ನಿಧಾನವಾಗಿ ಕಣ್ಣು ಬಿಟ್ಟ ಆ ಸನ್ಯಾಸಿಯು “ಏಕೆ?” ಎಂದು ಯುವಕನನ್ನು ಕಾರಣ ಕೇಳಿದರು.
ಆ ಯುವಕನು ಒಂದು ಕ್ಷಣ ಯೋಚಿಸಿ “ನಾನು ದೇವರನ್ನು ಹುಡುಕಲು ಬಯಸುತ್ತಿದ್ದೇನೆ” ಎಂದು ಹೇಳಿದನು.
ಗುರುಗಳು ಚಟಕ್ಕನೆ ಎದ್ದು ನಿಂತರು ಮತ್ತು ಆ ಯುವಕನ ಕತ್ತನ್ನು ಗಟ್ಟಿಯಾಗಿ ಹಿಡಿದುಕೊಂಡರು. ಆತನನ್ನು ದರದರನೆ ಎಳೆದು ತಂದು, ನದಿಯಲ್ಲಿ ಆತನ ಮುಖವನ್ನು ಮುಳುಗಿಸಿ, ತಪ್ಪಿಸಿಕೊಳ್ಳಲು ಅವಕಾಶ ನೀಡದಂತೆ ಗಟ್ಟಿಯಾಗಿ ಹಿಡಿದುಕೊಂಡರು. ಒಂದು ನಿಮಿಷ ಅವನನ್ನು ಹಾಗೇ ನೀರಿನಲ್ಲಿ ಮುಳುಗಿಸಿದ ನಂತರ ಅವನಿಗೆ ಉಸಿರು ಕಟ್ಟಿದಂತಾಯಿತು, ಕೈಕಾಲು ಒದರುತ್ತ ಹುಯ್ದಾಡಲು ಪ್ರಾರಂಭಿಸಿದ. ಜೀವಕ್ಕಾಗಿ ಒದ್ದಾಡುತ್ತಿದ್ದ ಅವನನ್ನು ಸನ್ಯಾಸಿಯು ನೀರಿನಿಂದ ಹೊರಗೆ ಎಳೆದು ತಂದರು.
ಹೊರಗೆ ಬಂದ ಕೂಡಲೆ ಯುವಕ ಕುಡಿದ ನೀರನ್ನೆಲ್ಲ ಉಗಿದು, ಏದುಸಿರು ಬಿಡಲು ಪ್ರಾರಂಭಿಸಿದ. ಅಂತಿಮವಾಗಿ ಅವನನ್ನು ಆರಾಮಾಗಿ ಬಿಟ್ಟು ಆ ಸನ್ಯಾಸಿ ಆತನನ್ನು ಉದ್ದೇಶಿಸಿ ಮಾತನಾಡುತ್ತಾರೆ, “ಯವಕನೆ, ಈಗ ಹೇಳು, ನಿನ್ನನ್ನು ನೀರಿನಲ್ಲಿ ಮುಳುಗಿಸಿದಾಗ ಎಲ್ಲದಕ್ಕಿಂತ ಅತಿ ಮುಖ್ಯವಾಗಿ ನಿನಗೆ ಬೇಕೆನಿಸಿದ್ದು ಯಾವುದು?” ಎಂದು ಕೇಳುತ್ತಾರೆ.
ಆಗ ಯುವಕ “ಗಾಳಿ” ಎಂದು ಉತ್ತರಿಸುತ್ತಾನೆ.
“ಚೆನ್ನಾಗಿದೆ.. ಈಗ ಮನೆಗೆ ಹೋಗು. ಗಾಳಿಗಿಂತ ದೊಡ್ಡ ದೇವರು ನಿನಗೆ ಬೇಕು ಅಂತ ಅನಿಸಿದಾಗ ಮತ್ತೆ ನನ್ನ ಹತ್ತಿರ ಬಾ” ಎಂದು ನಗುತ್ತ ಹೇಳುತ್ತಾರೆ ಆ ಸನ್ಯಾಸಿ. ದೇವರನ್ನು ಕಾಣಲು ಬಂದ ಯುವಕ ಮರುಮಾತಿಲ್ಲದೆ ಅಲ್ಲಿಂದ ಜಾಗ ಖಾಲಿ ಮಾಡುತ್ತಾನೆ.



Click it and Unblock the Notifications