Latest Updates
-
ಶ್ರಾವಣ ಉಪವಾಸದಲ್ಲಿ ದಿನವಿಡೀ ಎನರ್ಜಿಯಿಂದ ಇರಬೇಕೆ? ಈ ಹೈ-ಪ್ರೋಟೀನ್ ಸಾತ್ವಿಕ ಆಹಾರ ಪದ್ಧತಿ ಫಾಲೋ ಮಾಡಿ! -
ಗುರು ಪೂರ್ಣಿಮೆ 2026: ಸರಳ ಪೂಜಾ ವಿಧಿ ಮತ್ತು ಕಡಿಮೆ ಬಜೆಟ್ನಲ್ಲಿ ಗುರುಗಳಿಗೆ ನೀಡಬಹುದಾದ ಬೆಸ್ಟ್ ಗಿಫ್ಟ್ ಐಡಿಯಾಗಳು! -
10 ನಿಮಿಷದ 'ಟೈಗರ್ ಫ್ಲೋ': ಬೆನ್ನುನೋವಿಗೆ ಮುಕ್ತಿ ನೀಡುವ ಅದ್ಭುತ ವ್ಯಾಯಾಮ ಇಲ್ಲಿದೆ! -
ಪ್ರತಿಭಟನೆಯಲ್ಲಿ ಪ್ರೀತಿ: 'ಪ್ರೊಟೆಸ್ಟ್ ನೇ ಬನಾ ದಿ ಜೋಡಿ' ಟ್ರೆಂಡ್ ಹಿಂದೆ ಅಡಗಿದೆ ದೊಡ್ಡ ಅಪಾಯ! -
ಮಳೆಗಾಲದಲ್ಲಿ ಮನೆಯಲ್ಲಿ ಬೂಷ್ಟು ಹರಡುತ್ತಿದೆಯೇ? ಈ 20 ನಿಮಿಷದ ಟಿಪ್ಸ್ ಪಾಲಿಸಿ, ಮನೆ ಫ್ರೆಶ್ ಆಗಿಡಿ! -
ಕೇವಲ 200 ರೂಪಾಯಿಯಲ್ಲಿ ಪರಿಸರ ಸ್ನೇಹಿ ಊಟ: ವಿಶ್ವ ಪ್ರಕೃತಿ ಸಂರಕ್ಷಣಾ ದಿನಕ್ಕೆ ನಿಮ್ಮ ಅಡುಗೆಮನೆಯೇ ಮೊದಲ ಹೆಜ್ಜೆ! -
CWG 2026: 6ನೇ ದಿನ ಭಾರತದ ಪದಕದ ಬೇಟೆ; ಮನೆಯಲ್ಲೇ ಕಮ್ಮಿ ಬಜೆಟ್ನಲ್ಲಿ ಅದ್ಭುತ ವಾಚ್ ಪಾರ್ಟಿ ಪ್ಲಾನ್! -
ವಿಶ್ವ ಹೆಪಟೈಟಿಸ್ ದಿನ: ಲಿವರ್ ಆರೋಗ್ಯ ಹೆಚ್ಚಿಸಲು ಈ 10 ನಿಮಿಷದ ಬೆಳಗಿನ ದಿನಚರಿ ಪಾಲಿಸಿ! -
ಮಳೆಗಾಲದ ರಜೆ: ವರ್ಕ್ ಫ್ರಮ್ ಹೋಮ್ ಪೋಷಕರಿಗೆ ಮಕ್ಕಳನ್ನು ನಿಭಾಯಿಸುವುದು ಹೇಗೆ? ಇಲ್ಲಿದೆ ಸರಳ ಟಿಪ್ಸ್ -
ಮಳೆಗಾಲದಲ್ಲಿ ನಿಮ್ಮ ಮನೆಯ ಗಿಡಗಳು ಸಾಯುತ್ತಿವೆಯೇ? ಈ 15 ನಿಮಿಷದ ಟಿಪ್ಸ್ ಪಾಲಿಸಿ!
ಗಾಳಿಗಿಂತ ದೊಡ್ಡ ದೇವರು ಸಿಕ್ಕಾಗ ಮತ್ತೆ ಬಾ!

ಆಗ ನಿಧಾನವಾಗಿ ಕಣ್ಣು ಬಿಟ್ಟ ಆ ಸನ್ಯಾಸಿಯು “ಏಕೆ?” ಎಂದು ಯುವಕನನ್ನು ಕಾರಣ ಕೇಳಿದರು.
ಆ ಯುವಕನು ಒಂದು ಕ್ಷಣ ಯೋಚಿಸಿ “ನಾನು ದೇವರನ್ನು ಹುಡುಕಲು ಬಯಸುತ್ತಿದ್ದೇನೆ” ಎಂದು ಹೇಳಿದನು.
ಗುರುಗಳು ಚಟಕ್ಕನೆ ಎದ್ದು ನಿಂತರು ಮತ್ತು ಆ ಯುವಕನ ಕತ್ತನ್ನು ಗಟ್ಟಿಯಾಗಿ ಹಿಡಿದುಕೊಂಡರು. ಆತನನ್ನು ದರದರನೆ ಎಳೆದು ತಂದು, ನದಿಯಲ್ಲಿ ಆತನ ಮುಖವನ್ನು ಮುಳುಗಿಸಿ, ತಪ್ಪಿಸಿಕೊಳ್ಳಲು ಅವಕಾಶ ನೀಡದಂತೆ ಗಟ್ಟಿಯಾಗಿ ಹಿಡಿದುಕೊಂಡರು. ಒಂದು ನಿಮಿಷ ಅವನನ್ನು ಹಾಗೇ ನೀರಿನಲ್ಲಿ ಮುಳುಗಿಸಿದ ನಂತರ ಅವನಿಗೆ ಉಸಿರು ಕಟ್ಟಿದಂತಾಯಿತು, ಕೈಕಾಲು ಒದರುತ್ತ ಹುಯ್ದಾಡಲು ಪ್ರಾರಂಭಿಸಿದ. ಜೀವಕ್ಕಾಗಿ ಒದ್ದಾಡುತ್ತಿದ್ದ ಅವನನ್ನು ಸನ್ಯಾಸಿಯು ನೀರಿನಿಂದ ಹೊರಗೆ ಎಳೆದು ತಂದರು.
ಹೊರಗೆ ಬಂದ ಕೂಡಲೆ ಯುವಕ ಕುಡಿದ ನೀರನ್ನೆಲ್ಲ ಉಗಿದು, ಏದುಸಿರು ಬಿಡಲು ಪ್ರಾರಂಭಿಸಿದ. ಅಂತಿಮವಾಗಿ ಅವನನ್ನು ಆರಾಮಾಗಿ ಬಿಟ್ಟು ಆ ಸನ್ಯಾಸಿ ಆತನನ್ನು ಉದ್ದೇಶಿಸಿ ಮಾತನಾಡುತ್ತಾರೆ, “ಯವಕನೆ, ಈಗ ಹೇಳು, ನಿನ್ನನ್ನು ನೀರಿನಲ್ಲಿ ಮುಳುಗಿಸಿದಾಗ ಎಲ್ಲದಕ್ಕಿಂತ ಅತಿ ಮುಖ್ಯವಾಗಿ ನಿನಗೆ ಬೇಕೆನಿಸಿದ್ದು ಯಾವುದು?” ಎಂದು ಕೇಳುತ್ತಾರೆ.
ಆಗ ಯುವಕ “ಗಾಳಿ” ಎಂದು ಉತ್ತರಿಸುತ್ತಾನೆ.
“ಚೆನ್ನಾಗಿದೆ.. ಈಗ ಮನೆಗೆ ಹೋಗು. ಗಾಳಿಗಿಂತ ದೊಡ್ಡ ದೇವರು ನಿನಗೆ ಬೇಕು ಅಂತ ಅನಿಸಿದಾಗ ಮತ್ತೆ ನನ್ನ ಹತ್ತಿರ ಬಾ” ಎಂದು ನಗುತ್ತ ಹೇಳುತ್ತಾರೆ ಆ ಸನ್ಯಾಸಿ. ದೇವರನ್ನು ಕಾಣಲು ಬಂದ ಯುವಕ ಮರುಮಾತಿಲ್ಲದೆ ಅಲ್ಲಿಂದ ಜಾಗ ಖಾಲಿ ಮಾಡುತ್ತಾನೆ.



Click it and Unblock the Notifications