Latest Updates
-
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್! -
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ! -
ಮಳೆಗಾಲದಲ್ಲಿ ಅಂತರಾಷ್ಟ್ರೀಯ ಯೋಗ ದಿನ: ಹಿರಿಯರು ಸುರಕ್ಷಿತವಾಗಿ ಯೋಗ ಮಾಡುವುದು ಹೇಗೆ?
ಗಾಳಿಗಿಂತ ದೊಡ್ಡ ದೇವರು ಸಿಕ್ಕಾಗ ಮತ್ತೆ ಬಾ!

ಆಗ ನಿಧಾನವಾಗಿ ಕಣ್ಣು ಬಿಟ್ಟ ಆ ಸನ್ಯಾಸಿಯು “ಏಕೆ?” ಎಂದು ಯುವಕನನ್ನು ಕಾರಣ ಕೇಳಿದರು.
ಆ ಯುವಕನು ಒಂದು ಕ್ಷಣ ಯೋಚಿಸಿ “ನಾನು ದೇವರನ್ನು ಹುಡುಕಲು ಬಯಸುತ್ತಿದ್ದೇನೆ” ಎಂದು ಹೇಳಿದನು.
ಗುರುಗಳು ಚಟಕ್ಕನೆ ಎದ್ದು ನಿಂತರು ಮತ್ತು ಆ ಯುವಕನ ಕತ್ತನ್ನು ಗಟ್ಟಿಯಾಗಿ ಹಿಡಿದುಕೊಂಡರು. ಆತನನ್ನು ದರದರನೆ ಎಳೆದು ತಂದು, ನದಿಯಲ್ಲಿ ಆತನ ಮುಖವನ್ನು ಮುಳುಗಿಸಿ, ತಪ್ಪಿಸಿಕೊಳ್ಳಲು ಅವಕಾಶ ನೀಡದಂತೆ ಗಟ್ಟಿಯಾಗಿ ಹಿಡಿದುಕೊಂಡರು. ಒಂದು ನಿಮಿಷ ಅವನನ್ನು ಹಾಗೇ ನೀರಿನಲ್ಲಿ ಮುಳುಗಿಸಿದ ನಂತರ ಅವನಿಗೆ ಉಸಿರು ಕಟ್ಟಿದಂತಾಯಿತು, ಕೈಕಾಲು ಒದರುತ್ತ ಹುಯ್ದಾಡಲು ಪ್ರಾರಂಭಿಸಿದ. ಜೀವಕ್ಕಾಗಿ ಒದ್ದಾಡುತ್ತಿದ್ದ ಅವನನ್ನು ಸನ್ಯಾಸಿಯು ನೀರಿನಿಂದ ಹೊರಗೆ ಎಳೆದು ತಂದರು.
ಹೊರಗೆ ಬಂದ ಕೂಡಲೆ ಯುವಕ ಕುಡಿದ ನೀರನ್ನೆಲ್ಲ ಉಗಿದು, ಏದುಸಿರು ಬಿಡಲು ಪ್ರಾರಂಭಿಸಿದ. ಅಂತಿಮವಾಗಿ ಅವನನ್ನು ಆರಾಮಾಗಿ ಬಿಟ್ಟು ಆ ಸನ್ಯಾಸಿ ಆತನನ್ನು ಉದ್ದೇಶಿಸಿ ಮಾತನಾಡುತ್ತಾರೆ, “ಯವಕನೆ, ಈಗ ಹೇಳು, ನಿನ್ನನ್ನು ನೀರಿನಲ್ಲಿ ಮುಳುಗಿಸಿದಾಗ ಎಲ್ಲದಕ್ಕಿಂತ ಅತಿ ಮುಖ್ಯವಾಗಿ ನಿನಗೆ ಬೇಕೆನಿಸಿದ್ದು ಯಾವುದು?” ಎಂದು ಕೇಳುತ್ತಾರೆ.
ಆಗ ಯುವಕ “ಗಾಳಿ” ಎಂದು ಉತ್ತರಿಸುತ್ತಾನೆ.
“ಚೆನ್ನಾಗಿದೆ.. ಈಗ ಮನೆಗೆ ಹೋಗು. ಗಾಳಿಗಿಂತ ದೊಡ್ಡ ದೇವರು ನಿನಗೆ ಬೇಕು ಅಂತ ಅನಿಸಿದಾಗ ಮತ್ತೆ ನನ್ನ ಹತ್ತಿರ ಬಾ” ಎಂದು ನಗುತ್ತ ಹೇಳುತ್ತಾರೆ ಆ ಸನ್ಯಾಸಿ. ದೇವರನ್ನು ಕಾಣಲು ಬಂದ ಯುವಕ ಮರುಮಾತಿಲ್ಲದೆ ಅಲ್ಲಿಂದ ಜಾಗ ಖಾಲಿ ಮಾಡುತ್ತಾನೆ.



Click it and Unblock the Notifications