Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಆ. 16ಕ್ಕೆ ಶ್ರಾವಣ ಅಮವಾಸ್ಯೆ: ಈ ದಿನ ಏನು ಮಾಡಿದರೆ ಒಳ್ಳೆಯದು?
ಆಗಸ್ಟ್ 16ರಂದು ಶ್ರಾವಣ ಅಮವಾಸ್ಯೆ, ಇಂದಿಗೆ ಅಧಿಕ ಮಾಸದ ಶ್ರಾವಣ ಕೂಡ ಮುಕ್ತಾಯವಾಗಲಿದೆ, ನಾಳೆಯಿಂದ ನಿಜ ಶ್ರಾವಣ ಶುರುವಾಗಲಿದೆ. ಶಾಸ್ತ್ರಗಳ ಪ್ರಕಾರ ಈ ದಿನಕ್ಕೆ ತುಂಬಾನೇ ಮಹತ್ವವಿದೆ. ಈ ದಿನ ತರ್ಪಣ ಅಥವಾ ಪಿಂಡದಾನಕ್ಕೆ ತುಂಬಾನೇ ಮಹತ್ವವಾದ ದಿನವಾಗಿದೆ.

ಶ್ರಾವಣ ಅಮವಾಸ್ಯೆಯಂದು ಪಿತೃಷದೋಷಕ್ಕೆ ಪರಿಹಾರ
ಪಿತೃದೋಷವಿದ್ದರೆ ಜೀವನದಲ್ಲಿ ಅನೇಕ ಸಮಸ್ಯೆಗಳು ಎದುರಾಗುವುದು. ಯಾವುದೇ ಕೆಲಸ ಕೈ ಹಿಡಿಯಲ್ಲ, ಮನೆಯಲ್ಲಿ ನೆಮ್ಮದಿ ಇರಲ್ಲ, ವ್ಯವಹಾರದಲ್ಲಿ ಯಾವುದೇ ಪ್ರಗತಿ ಕಂಡು ಬರುವುದಿಲ್ಲ, ಸಂತಾನ ಭಾಗ್ಯ ಇರುವುದಿಲ್ಲ ಈ ರೀತಿ ಅನೇಕ ಬಗೆಯ ಸಮಸ್ಯೆ ಕಂಡು ಬರುವುದು, ಪಿತೃದೋಷ ನಿವಾರಣೆ ಮಾಡಿದರೆ ಜೀವನದಲ್ಲಿ ಒಳಿತಾಗುವುದು.
ಶ್ರಾವಣ ಅಮವಾಸ್ಯೆಯಂದು ಪಿತೃದೋಷಕ್ಕೆ ಪರಿಹಾರ ಮಾಡಿಕೊಳ್ಳಬಹುದು. ಈ ದಿನ ಪೂರ್ವಜರಿಗೆ ಪಿಂಡದಾನ ಅಥವಾ ತರ್ಪಣ ಮಾಡಿದರೆ ಪಿತೃದೋಷದಿಂದ ಮುಕ್ತರಾಗಬಹುದು. ಹೀಗೆ ಮಾಡುವುದರಿಂದ ಪೂರ್ವಜರ ಆತ್ಮಕ್ಕೆ ಶಾಂತಿ ಸಿಗಲಿದೆ, ಎಲ್ಲಾ ರೀತಿಯ ಕಂಟಕಗಳು ದೂರಾಗಲಿದೆ.
ಶ್ರಾವಣ ಅಮವಾಸ್ಯೆಯಂದು ಈ ಕಾರ್ಯಗಳನ್ನು ಮಾಡಿದರೆ ಒಳ್ಳೆಯದು:
ದಾನ ಮಾಡಿ
ಈ ದಿನ ನಿಮ್ಮ ಶಕ್ತಿಗೆ ತಕ್ಕಂತೆ ಬಡವರಿಗೆ ದಾನ ಮಾಡಿ, ಹೀಗೆ ದಾನ ಮಾಡುವುದರಿಂದ ಪುಣ್ಯಫಲ ಸಿಗುವುದು, ಹೀಗೆ ಮಾಡುವುದರಿಂದ ನಿಮ್ಮ ನೆಮ್ಮದಿ, ಸಂಪತ್ತು ಹೆಚ್ಚಲಿದೆ ಎಂದು ಹೇಳಲಾಗುವುದು.
ಚಂದ್ರದೋಷವಿದ್ದರೆ
ಚಂದ್ರದೋಷವಿದ್ದರೆ ಮನಸ್ಸಿಗೆ ನೆಮ್ಮದಿ ಇರಲ್ಲ, ಚಂದ್ರ ನಿಮ್ಮ ರಾಶಿಯಲ್ಲಿ ದುರ್ಬಲ ಸ್ಥಾನದಲ್ಲಿದ್ದರೆ ಹಸುವಿಗೆ ಹಿಟ್ಟನ್ನು ದಾನ ಮಾಡಿ.
ತುಳಸಿ ಪೂಜೆ ಮಾಡಿ
ಈ ದಿನ ತುಳಸಿ ಪೂಜೆ ಮಾಡಿ, ಇದರಿಂದ ಶ್ರೀ ವಿಷ್ಣು ಹಾಗೂ ಲಕ್ಷ್ಮಿಯ ಕೃಪೆಗೆ ಪಾತ್ರರಾಗಬಹುದು.ಅಲ್ಲದೆ ಈ ದಿನ ಅರಳಿ ಮರದ ಕೆಳಗಡೆ ತುಪ್ಪದ ದೀಪ ಹಚ್ಚಿ, ಹೀಗೆ ಮಾಡುವುದರಿಂದ ಅದೃಷ್ಟ ಒಲಿಯಲಿದೆ ಎಂದು ಹೇಳಲಾಗುವುದು.
ನೀವು ಅರಳಿ ಮರಕ್ಕೆ ಸುತ್ತು ಹಾಕಿ ಬಡವರಿಗೆ ಆಹಾರವನ್ನು ದಾನ ಮಾಡಿದರೆ ಒಳ್ಳೆಯದು ಎಂದು ಹೇಳಲಾಗುವುದು.
ಶಿವ-ಪಾರ್ವತಿಯನ್ನು ಪೂಜಿಸಿ
ಈ ದಿನ ನೀವು ಶಿವ ಪಾರ್ವತಿಯನ್ನು ಪೂಜಿಸುವುದರಿಮದ ಒಳಿತಾಗುವುದು ಎಂದು ಹೇಳಲಾಗುವುದು. ಈ ದಿನ ಶಿವ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಮಾಡಿಸಿದರೆ ಒಳ್ಳೆಯದು.



Click it and Unblock the Notifications