Latest Updates
-
ಬಿಸಿಗಾಳಿಯ ಅಬ್ಬರ ಶುರು: ನಿಮ್ಮ ಮನೆ ತಂಪಾಗಿರಲು ಮತ್ತು ಗಿಡಗಳನ್ನು ಉಳಿಸಲು ಈ ಸೀಕ್ರೆಟ್ ಟಿಪ್ಸ್ ಮಿಸ್ ಮಾಡ್ಬೇಡಿ! -
ಸುಡುವ ಬಿಸಿಲಿಗೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರ ಕ್ರಮ ಪಾಲಿಸಿ! -
ಮದರ್ಸ್ ಡೇ 2026: ಅಮ್ಮನಿಗೆ ಸರ್ಪ್ರೈಸ್ ನೀಡಲು ಈ ವೈರಲ್ ಟ್ರೆಂಡ್ಸ್ ಫಾಲೋ ಮಾಡಿ, ಮಿಸ್ ಮಾಡ್ಬೇಡಿ! -
ಅಮ್ಮನಿಗೆ ಈ ಬಾರಿ ವಿಶೇಷ ಉಡುಗೊರೆ: ತಾಯಂದಿರ ದಿನದಂದು 20 ನಿಮಿಷದ ಯೋಗದ ಮ್ಯಾಜಿಕ್! -
ದೆಹಲಿ ಮಳೆಯಲ್ಲಿ ಮದುವೆ ಸಂಭ್ರಮಕ್ಕೆ ಅಡ್ಡಿಯೇ? ಈ ಸಣ್ಣ ಬದಲಾವಣೆಗಳು ನಿಮ್ಮ ಮದುವೆಯನ್ನು ಉಳಿಸುತ್ತವೆ! -
ಬಿರುಗಾಳಿ ಅಬ್ಬರಕ್ಕೆ ಬಾಲ್ಕನಿ ಗಾರ್ಡನ್ ಹಾಳಾಗುತ್ತಾ? ನಿಮ್ಮ ಮನೆ ಮತ್ತು ಗಿಡಗಳನ್ನು ರಕ್ಷಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ಬೇಗೆಗೆ ಸುಸ್ತಾಗಿದ್ದೀರಾ? ದೆಹಲಿ ಸರ್ಕಾರದ ಈ 'ರಿಲೀಫ್ ವ್ಯಾನ್' ನಿಮ್ಮ ಜೀವ ರಕ್ಷಕವಾಗಬಹುದು! -
ಮೆಟ್ ಗಾಲಾ 2026: ದುಬಾರಿ ಫ್ಯಾಷನ್ ಅನ್ನು ನಮ್ಮೂರಿನ ಕ್ರಿಯೇಟರ್ಗಳು ದೇಸಿ ಶೈಲಿಯಲ್ಲಿ ಮರುಸೃಷ್ಟಿಸಿದ್ದು ಹೇಗೆ? ಅಚ್ಚರಿ ಪಡಬೇಡಿ! -
ಹೊರಗೆ ಬಿರುಗಾಳಿ, ಮನೆಯಲ್ಲಿ ಫಿಟ್ನೆಸ್: ಇಂದಿನ ಹವಾಮಾನಕ್ಕೆ ಈ ವರ್ಕೌಟ್ ಬೆಸ್ಟ್! -
ಮದುವೆ ಮನೆಯಲ್ಲಿ ನೋಟಿನ ಹಾರ: ಸಂಭ್ರಮದ ನಡುವೆ ಅನಿರೀಕ್ಷಿತವಾಗಿ ನುಗ್ಗಿ ಬಂತು ರಣರಂಗ!
ಆ. 16ಕ್ಕೆ ಶ್ರಾವಣ ಅಮವಾಸ್ಯೆ: ಈ ದಿನ ಏನು ಮಾಡಿದರೆ ಒಳ್ಳೆಯದು?
ಆಗಸ್ಟ್ 16ರಂದು ಶ್ರಾವಣ ಅಮವಾಸ್ಯೆ, ಇಂದಿಗೆ ಅಧಿಕ ಮಾಸದ ಶ್ರಾವಣ ಕೂಡ ಮುಕ್ತಾಯವಾಗಲಿದೆ, ನಾಳೆಯಿಂದ ನಿಜ ಶ್ರಾವಣ ಶುರುವಾಗಲಿದೆ. ಶಾಸ್ತ್ರಗಳ ಪ್ರಕಾರ ಈ ದಿನಕ್ಕೆ ತುಂಬಾನೇ ಮಹತ್ವವಿದೆ. ಈ ದಿನ ತರ್ಪಣ ಅಥವಾ ಪಿಂಡದಾನಕ್ಕೆ ತುಂಬಾನೇ ಮಹತ್ವವಾದ ದಿನವಾಗಿದೆ.

ಶ್ರಾವಣ ಅಮವಾಸ್ಯೆಯಂದು ಪಿತೃಷದೋಷಕ್ಕೆ ಪರಿಹಾರ
ಪಿತೃದೋಷವಿದ್ದರೆ ಜೀವನದಲ್ಲಿ ಅನೇಕ ಸಮಸ್ಯೆಗಳು ಎದುರಾಗುವುದು. ಯಾವುದೇ ಕೆಲಸ ಕೈ ಹಿಡಿಯಲ್ಲ, ಮನೆಯಲ್ಲಿ ನೆಮ್ಮದಿ ಇರಲ್ಲ, ವ್ಯವಹಾರದಲ್ಲಿ ಯಾವುದೇ ಪ್ರಗತಿ ಕಂಡು ಬರುವುದಿಲ್ಲ, ಸಂತಾನ ಭಾಗ್ಯ ಇರುವುದಿಲ್ಲ ಈ ರೀತಿ ಅನೇಕ ಬಗೆಯ ಸಮಸ್ಯೆ ಕಂಡು ಬರುವುದು, ಪಿತೃದೋಷ ನಿವಾರಣೆ ಮಾಡಿದರೆ ಜೀವನದಲ್ಲಿ ಒಳಿತಾಗುವುದು.
ಶ್ರಾವಣ ಅಮವಾಸ್ಯೆಯಂದು ಪಿತೃದೋಷಕ್ಕೆ ಪರಿಹಾರ ಮಾಡಿಕೊಳ್ಳಬಹುದು. ಈ ದಿನ ಪೂರ್ವಜರಿಗೆ ಪಿಂಡದಾನ ಅಥವಾ ತರ್ಪಣ ಮಾಡಿದರೆ ಪಿತೃದೋಷದಿಂದ ಮುಕ್ತರಾಗಬಹುದು. ಹೀಗೆ ಮಾಡುವುದರಿಂದ ಪೂರ್ವಜರ ಆತ್ಮಕ್ಕೆ ಶಾಂತಿ ಸಿಗಲಿದೆ, ಎಲ್ಲಾ ರೀತಿಯ ಕಂಟಕಗಳು ದೂರಾಗಲಿದೆ.
ಶ್ರಾವಣ ಅಮವಾಸ್ಯೆಯಂದು ಈ ಕಾರ್ಯಗಳನ್ನು ಮಾಡಿದರೆ ಒಳ್ಳೆಯದು:
ದಾನ ಮಾಡಿ
ಈ ದಿನ ನಿಮ್ಮ ಶಕ್ತಿಗೆ ತಕ್ಕಂತೆ ಬಡವರಿಗೆ ದಾನ ಮಾಡಿ, ಹೀಗೆ ದಾನ ಮಾಡುವುದರಿಂದ ಪುಣ್ಯಫಲ ಸಿಗುವುದು, ಹೀಗೆ ಮಾಡುವುದರಿಂದ ನಿಮ್ಮ ನೆಮ್ಮದಿ, ಸಂಪತ್ತು ಹೆಚ್ಚಲಿದೆ ಎಂದು ಹೇಳಲಾಗುವುದು.
ಚಂದ್ರದೋಷವಿದ್ದರೆ
ಚಂದ್ರದೋಷವಿದ್ದರೆ ಮನಸ್ಸಿಗೆ ನೆಮ್ಮದಿ ಇರಲ್ಲ, ಚಂದ್ರ ನಿಮ್ಮ ರಾಶಿಯಲ್ಲಿ ದುರ್ಬಲ ಸ್ಥಾನದಲ್ಲಿದ್ದರೆ ಹಸುವಿಗೆ ಹಿಟ್ಟನ್ನು ದಾನ ಮಾಡಿ.
ತುಳಸಿ ಪೂಜೆ ಮಾಡಿ
ಈ ದಿನ ತುಳಸಿ ಪೂಜೆ ಮಾಡಿ, ಇದರಿಂದ ಶ್ರೀ ವಿಷ್ಣು ಹಾಗೂ ಲಕ್ಷ್ಮಿಯ ಕೃಪೆಗೆ ಪಾತ್ರರಾಗಬಹುದು.ಅಲ್ಲದೆ ಈ ದಿನ ಅರಳಿ ಮರದ ಕೆಳಗಡೆ ತುಪ್ಪದ ದೀಪ ಹಚ್ಚಿ, ಹೀಗೆ ಮಾಡುವುದರಿಂದ ಅದೃಷ್ಟ ಒಲಿಯಲಿದೆ ಎಂದು ಹೇಳಲಾಗುವುದು.
ನೀವು ಅರಳಿ ಮರಕ್ಕೆ ಸುತ್ತು ಹಾಕಿ ಬಡವರಿಗೆ ಆಹಾರವನ್ನು ದಾನ ಮಾಡಿದರೆ ಒಳ್ಳೆಯದು ಎಂದು ಹೇಳಲಾಗುವುದು.
ಶಿವ-ಪಾರ್ವತಿಯನ್ನು ಪೂಜಿಸಿ
ಈ ದಿನ ನೀವು ಶಿವ ಪಾರ್ವತಿಯನ್ನು ಪೂಜಿಸುವುದರಿಮದ ಒಳಿತಾಗುವುದು ಎಂದು ಹೇಳಲಾಗುವುದು. ಈ ದಿನ ಶಿವ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಮಾಡಿಸಿದರೆ ಒಳ್ಳೆಯದು.



Click it and Unblock the Notifications