Latest Updates
-
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ!
ಶ್ರಾವಣ ಮಂಗಳವಾರ ಹನುಮಂತನನ್ನು ಈ ರೀತಿ ಪೂಜಿಸಿದರೆ ಸಂಕಷ್ಟಗಳು ದೂರಾಗುವುದು
ಶ್ರಾವಣ ಮಾಸ, ಶಿವನ ಪೂಜೆಗೆ ಮೀಸಲಾದ ತಿಂಗಳು, ಈ ತಿಂಗಳ ಪೂರ್ತಿ ಶಿವನ ಆರಾಧನೆ ಮಾಡಿದರೆ ಶಿವಕೃಪೆಗೆ ಪಾತ್ರರಾಗಬಹುದು, ಅದರಲ್ಲೂ ಶಿವ ಪೂಜೆಗೆ ಶ್ರಾವಣ ಸೋಮವಾರ ತುಂಬಾನೇ ಶ್ರೇಷ್ಠವಾದ ದಿನವಾಗಿದೆ.
ಅಲ್ಲದೆ ಶ್ರಾವಣ ಮಂಗಳವಾರ ಗೌರಿ ಪೂಜೆಗೆ, ಹನುಮಂತನ ಪೂಜೆಗೆ ತುಂಬಾ ಶ್ರೇಷ್ಠವಾದ ದಿನವಾಗಿದೆ. ಶ್ರಾವಣ ಮಂಗಳವಾರದಂದು ಹನುಮಂತನ ಆರಾಧನೆ ಹೇಗೆ ಮಾಡಬೇಕು? ಸಂಕಷ್ಟ ನಿವಾರಣೆಗೆ ಯಾವೆಲ್ಲಾ ಪರಿಹಾರ ಮಾಡಿದರೆ ಒಳ್ಳೆಯದು ಎಂದು ನೋಡೋಣ ಬನ್ನಿ:

ಶ್ರಾವಣ ಮಂಗಳವಾರ ಈ ಪೂಜಾ ವಿಧಿಗಳನ್ನು ಪಾಲಿಸಿ
- ಮಂಗಳವಾರ ಬೆಳಗ್ಗೆ ಬೇಗನೆ ಎದ್ದು ಸ್ನಾನ ಮಾಡಿ ಮಡಿ ಬಟ್ಟೆ ಧರಿಸಿ
- ಈ ದಿನ ಉಪವಾಸವಿದ್ದರೆ ಒಳ್ಳೆಯದು
- ಸಮೀಪದ ಹನುಮಂತನ ದೇವಾಲಯಕ್ಕೆ ಭೇಟಿ ನೀಡಿ.
- ಶ್ರೀರಾಮನಿಗೆ ಸಿಂಧೂರ, ಹೂ-ಹಣ್ಣುಗಳನ್ನು ಅರ್ಪಿಸಿ.
- ಆಲದ ಮರದ ಎಲೆಗಳನ್ನು ತಂದು ಅದರ ಮೇಲೆ ಶ್ರೀರಾಮ ಅಂತ ಬರೆದು ಹನುಮಂತನ ಮೂರ್ತಿ ಮುಂದೆ ಇಡಿ.
- ಆಲದ ಮರದ ಕೆಳಗಡೆ ಕೂತು ಹನುಮಾನ್ ಚಾಲೀಸ ಪಠಿಸಿ.
ನಿಮ್ಮ ಸಮಸ್ಯೆ ನಿವಾರಣೆಗೆ ಈ ಸಮಸ್ಯೆ ಈ ಪರಿಹಾರ ಮಾಡಿ:
* ಹನುಮಂತನಿಗೆ ಸಿಂಧೂರ ಅರ್ಪಿಸಿ
ಮಂಗಳವಾರ ಬೆಳಗ್ಗೆ ಹನುಮಂತನ ದೇವಾಲಯಕ್ಕೆ ಹೋಗಿ ಸಿಂಧೂರ ಹಾಗೂ ಕೆಂಪು ಹೂಗಳನ್ನು ಅರ್ಪಿಸಿ ಹನುಮಾನ್ ಮಂತ್ರಗಳನ್ನು ಪಠಿಸಿ.
ಮಂತ್ರ: ಓಂ ಹಂ ಹನುಮತೇ ನಮಃ
* ರುದ್ರಾಕ್ಷಿ ಮಾಲೆ ಹಿಡಿದು ಹನುಮಂತ್ರನ ಮಂತ್ರ ಪಠಿಸಿ
ನೀವು ರುದ್ರಾಕ್ಷಿ ಮಾಲೆ ಹಿಡಿದು 108 ಬಾರಿ ಹನುಮಂತನ
ಮರ್ಕಟೇಶ ಮಹೋತ್ಸಹಃ ನವಗ್ರಹ ದೋಷ ನಿವಾರಣಃ |
ಶತ್ರೂನ್ ಸಂಹಾರ ಮಾಂ ರಕ್ಷ ಶ್ರಿಯಂ ದಾಪಯಾ ದೇಹಿಮೇ ಪ್ರಭೋ ||
ಹಣದ ಸಮಸ್ಯೆ ಕಾಡದಿರಲು ಈ ಮಂತ್ರ ಪಠಿಸಿ
ತುಂಬಾ ಆರ್ಥಿಕ ಸಮಸ್ಯೆ ಇದ್ದರೆ ಹನುಮಂತನಿಗೆ ಮಂಗಳವಾರ ಪೂಜೆ ಮಾಡುವಾಗ ಆಲದ ಮರದ ಎಲೆಯನ್ನು ತಂದು ಅದರಲ್ಲಿ ಶ್ರೀರಾಮ ಎಂದು ಬರೆದು ಹನುಮಂತನ ಮೂರ್ತಿ ಮುಂದೆ ಇಟ್ಟು ಪೂಜಿಸಿ, ನಂತರ ಆ ಎಲೆಯನ್ನು ನಿಮ್ಮ ಪರ್ಸ್ನಲ್ಲಿ ಇಟ್ಟುಕೊಳ್ಳಿ.
* ಈ ದಿನ ರಾಮ ರಕ್ಷಾ ಸ್ತೋತ್ರ ಪಠಿಸಿ, ಹೀಗೆ ಮಾಡುವುದರಿಂದ ಶ್ರೀರಾಮ ಹಾಗೂ ಹನುಮಂತನ ಕೃಪೆ ನಿಮ್ಮ ಮೇಲಿರಲಿದೆ.



Click it and Unblock the Notifications