Latest Updates
-
ಬಿಸಿಗಾಳಿಯ ಎಚ್ಚರಿಕೆ: ಅಡುಗೆ ಮಾಡದೆಯೇ ದೇಹಕ್ಕೆ ತಂಪು ನೀಡುವ ಪ್ರೋಟೀನ್ ಆಹಾರಗಳಿವು! -
ಮಳೆಯ ನಡುವೆ ಯುಜಿಸಿ ನೆಟ್ ಪರೀಕ್ಷೆ: ಸಂಗಾತಿಯ ಈ ಸಣ್ಣ ಬೆಂಬಲವೇ ಯಶಸ್ಸಿನ ಗುಟ್ಟು -
ಮಳೆಗಾಲದಲ್ಲಿ ಮನೆಯ ಪೀಠೋಪಕರಣ ಹಾಳಾಗುತ್ತಿದೆಯೇ? ಬೂಸು ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಮುಂಬೈ ಆರೆಂಜ್ ಅಲರ್ಟ್: ಮಳೆಯಲ್ಲಿ ಆಫೀಸ್ ಹೋಗುವವರೇ, ಈ 'ನೋ-ಕುಕ್' ಪ್ರೋಟೀನ್ ಮೀಲ್ಸ್ ಮಿಸ್ ಮಾಡ್ಬೇಡಿ! -
ಅಮೆಜಾನ್ ಪ್ರೈಮ್ ಡೇ ಸೇಲ್: ಕಡಿಮೆ ಬೆಲೆಗೆ ವಸ್ತುಗಳನ್ನು ಖರೀದಿಸಲು ಈ ಸ್ಮಾರ್ಟ್ ಟ್ರಿಕ್ಸ್ ಮಿಸ್ ಮಾಡ್ಬೇಡಿ! -
ಯೋಗದ ನಂತರ ಮೈಕೈ ನೋವು ಕಾಡುತ್ತಿದೆಯೇ? ಕಚೇರಿಯಲ್ಲಿ ಕೆಲಸ ಮಾಡುವಾಗ ಈ 12 ನಿಮಿಷದ ಟಿಪ್ಸ್ ಪಾಲಿಸಿ -
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು!
ಶ್ರಾವಣ ಮಂಗಳವಾರ ಹನುಮಂತನನ್ನು ಈ ರೀತಿ ಪೂಜಿಸಿದರೆ ಸಂಕಷ್ಟಗಳು ದೂರಾಗುವುದು
ಶ್ರಾವಣ ಮಾಸ, ಶಿವನ ಪೂಜೆಗೆ ಮೀಸಲಾದ ತಿಂಗಳು, ಈ ತಿಂಗಳ ಪೂರ್ತಿ ಶಿವನ ಆರಾಧನೆ ಮಾಡಿದರೆ ಶಿವಕೃಪೆಗೆ ಪಾತ್ರರಾಗಬಹುದು, ಅದರಲ್ಲೂ ಶಿವ ಪೂಜೆಗೆ ಶ್ರಾವಣ ಸೋಮವಾರ ತುಂಬಾನೇ ಶ್ರೇಷ್ಠವಾದ ದಿನವಾಗಿದೆ.
ಅಲ್ಲದೆ ಶ್ರಾವಣ ಮಂಗಳವಾರ ಗೌರಿ ಪೂಜೆಗೆ, ಹನುಮಂತನ ಪೂಜೆಗೆ ತುಂಬಾ ಶ್ರೇಷ್ಠವಾದ ದಿನವಾಗಿದೆ. ಶ್ರಾವಣ ಮಂಗಳವಾರದಂದು ಹನುಮಂತನ ಆರಾಧನೆ ಹೇಗೆ ಮಾಡಬೇಕು? ಸಂಕಷ್ಟ ನಿವಾರಣೆಗೆ ಯಾವೆಲ್ಲಾ ಪರಿಹಾರ ಮಾಡಿದರೆ ಒಳ್ಳೆಯದು ಎಂದು ನೋಡೋಣ ಬನ್ನಿ:

ಶ್ರಾವಣ ಮಂಗಳವಾರ ಈ ಪೂಜಾ ವಿಧಿಗಳನ್ನು ಪಾಲಿಸಿ
- ಮಂಗಳವಾರ ಬೆಳಗ್ಗೆ ಬೇಗನೆ ಎದ್ದು ಸ್ನಾನ ಮಾಡಿ ಮಡಿ ಬಟ್ಟೆ ಧರಿಸಿ
- ಈ ದಿನ ಉಪವಾಸವಿದ್ದರೆ ಒಳ್ಳೆಯದು
- ಸಮೀಪದ ಹನುಮಂತನ ದೇವಾಲಯಕ್ಕೆ ಭೇಟಿ ನೀಡಿ.
- ಶ್ರೀರಾಮನಿಗೆ ಸಿಂಧೂರ, ಹೂ-ಹಣ್ಣುಗಳನ್ನು ಅರ್ಪಿಸಿ.
- ಆಲದ ಮರದ ಎಲೆಗಳನ್ನು ತಂದು ಅದರ ಮೇಲೆ ಶ್ರೀರಾಮ ಅಂತ ಬರೆದು ಹನುಮಂತನ ಮೂರ್ತಿ ಮುಂದೆ ಇಡಿ.
- ಆಲದ ಮರದ ಕೆಳಗಡೆ ಕೂತು ಹನುಮಾನ್ ಚಾಲೀಸ ಪಠಿಸಿ.
ನಿಮ್ಮ ಸಮಸ್ಯೆ ನಿವಾರಣೆಗೆ ಈ ಸಮಸ್ಯೆ ಈ ಪರಿಹಾರ ಮಾಡಿ:
* ಹನುಮಂತನಿಗೆ ಸಿಂಧೂರ ಅರ್ಪಿಸಿ
ಮಂಗಳವಾರ ಬೆಳಗ್ಗೆ ಹನುಮಂತನ ದೇವಾಲಯಕ್ಕೆ ಹೋಗಿ ಸಿಂಧೂರ ಹಾಗೂ ಕೆಂಪು ಹೂಗಳನ್ನು ಅರ್ಪಿಸಿ ಹನುಮಾನ್ ಮಂತ್ರಗಳನ್ನು ಪಠಿಸಿ.
ಮಂತ್ರ: ಓಂ ಹಂ ಹನುಮತೇ ನಮಃ
* ರುದ್ರಾಕ್ಷಿ ಮಾಲೆ ಹಿಡಿದು ಹನುಮಂತ್ರನ ಮಂತ್ರ ಪಠಿಸಿ
ನೀವು ರುದ್ರಾಕ್ಷಿ ಮಾಲೆ ಹಿಡಿದು 108 ಬಾರಿ ಹನುಮಂತನ
ಮರ್ಕಟೇಶ ಮಹೋತ್ಸಹಃ ನವಗ್ರಹ ದೋಷ ನಿವಾರಣಃ |
ಶತ್ರೂನ್ ಸಂಹಾರ ಮಾಂ ರಕ್ಷ ಶ್ರಿಯಂ ದಾಪಯಾ ದೇಹಿಮೇ ಪ್ರಭೋ ||
ಹಣದ ಸಮಸ್ಯೆ ಕಾಡದಿರಲು ಈ ಮಂತ್ರ ಪಠಿಸಿ
ತುಂಬಾ ಆರ್ಥಿಕ ಸಮಸ್ಯೆ ಇದ್ದರೆ ಹನುಮಂತನಿಗೆ ಮಂಗಳವಾರ ಪೂಜೆ ಮಾಡುವಾಗ ಆಲದ ಮರದ ಎಲೆಯನ್ನು ತಂದು ಅದರಲ್ಲಿ ಶ್ರೀರಾಮ ಎಂದು ಬರೆದು ಹನುಮಂತನ ಮೂರ್ತಿ ಮುಂದೆ ಇಟ್ಟು ಪೂಜಿಸಿ, ನಂತರ ಆ ಎಲೆಯನ್ನು ನಿಮ್ಮ ಪರ್ಸ್ನಲ್ಲಿ ಇಟ್ಟುಕೊಳ್ಳಿ.
* ಈ ದಿನ ರಾಮ ರಕ್ಷಾ ಸ್ತೋತ್ರ ಪಠಿಸಿ, ಹೀಗೆ ಮಾಡುವುದರಿಂದ ಶ್ರೀರಾಮ ಹಾಗೂ ಹನುಮಂತನ ಕೃಪೆ ನಿಮ್ಮ ಮೇಲಿರಲಿದೆ.



Click it and Unblock the Notifications