Latest Updates
-
ಐಟಿಆರ್ ಸಲ್ಲಿಕೆ ಗಡುವು ಹತ್ತಿರ: ದಂಪತಿಗಳು ಒಟ್ಟಾಗಿ ಕುಳಿತು ಈ ಕೆಲಸ ಮಾಡಿದರೆ ಟೆನ್ಷನ್ ಫ್ರೀ! -
ಬೆಂಗಳೂರಿಗರೇ ಗಮನಿಸಿ: ಇಂದು 6 ಗಂಟೆ ಪವರ್ ಕಟ್, ಈ ಮುನ್ನೆಚ್ಚರಿಕೆ ಮರೆಯದಿರಿ! -
ಶ್ರಾವಣ ಉಪವಾಸದಲ್ಲಿ ದಿನವಿಡೀ ಎನರ್ಜಿಯಿಂದ ಇರಬೇಕೆ? ಈ ಹೈ-ಪ್ರೋಟೀನ್ ಸಾತ್ವಿಕ ಆಹಾರ ಪದ್ಧತಿ ಫಾಲೋ ಮಾಡಿ! -
ಗುರು ಪೂರ್ಣಿಮೆ 2026: ಸರಳ ಪೂಜಾ ವಿಧಿ ಮತ್ತು ಕಡಿಮೆ ಬಜೆಟ್ನಲ್ಲಿ ಗುರುಗಳಿಗೆ ನೀಡಬಹುದಾದ ಬೆಸ್ಟ್ ಗಿಫ್ಟ್ ಐಡಿಯಾಗಳು! -
10 ನಿಮಿಷದ 'ಟೈಗರ್ ಫ್ಲೋ': ಬೆನ್ನುನೋವಿಗೆ ಮುಕ್ತಿ ನೀಡುವ ಅದ್ಭುತ ವ್ಯಾಯಾಮ ಇಲ್ಲಿದೆ! -
ಪ್ರತಿಭಟನೆಯಲ್ಲಿ ಪ್ರೀತಿ: 'ಪ್ರೊಟೆಸ್ಟ್ ನೇ ಬನಾ ದಿ ಜೋಡಿ' ಟ್ರೆಂಡ್ ಹಿಂದೆ ಅಡಗಿದೆ ದೊಡ್ಡ ಅಪಾಯ! -
ಮಳೆಗಾಲದಲ್ಲಿ ಮನೆಯಲ್ಲಿ ಬೂಷ್ಟು ಹರಡುತ್ತಿದೆಯೇ? ಈ 20 ನಿಮಿಷದ ಟಿಪ್ಸ್ ಪಾಲಿಸಿ, ಮನೆ ಫ್ರೆಶ್ ಆಗಿಡಿ! -
ಕೇವಲ 200 ರೂಪಾಯಿಯಲ್ಲಿ ಪರಿಸರ ಸ್ನೇಹಿ ಊಟ: ವಿಶ್ವ ಪ್ರಕೃತಿ ಸಂರಕ್ಷಣಾ ದಿನಕ್ಕೆ ನಿಮ್ಮ ಅಡುಗೆಮನೆಯೇ ಮೊದಲ ಹೆಜ್ಜೆ! -
CWG 2026: 6ನೇ ದಿನ ಭಾರತದ ಪದಕದ ಬೇಟೆ; ಮನೆಯಲ್ಲೇ ಕಮ್ಮಿ ಬಜೆಟ್ನಲ್ಲಿ ಅದ್ಭುತ ವಾಚ್ ಪಾರ್ಟಿ ಪ್ಲಾನ್! -
ವಿಶ್ವ ಹೆಪಟೈಟಿಸ್ ದಿನ: ಲಿವರ್ ಆರೋಗ್ಯ ಹೆಚ್ಚಿಸಲು ಈ 10 ನಿಮಿಷದ ಬೆಳಗಿನ ದಿನಚರಿ ಪಾಲಿಸಿ!
ಶ್ರಾವಣ ಮಂಗಳವಾರ ಹನುಮಂತನನ್ನು ಈ ರೀತಿ ಪೂಜಿಸಿದರೆ ಸಂಕಷ್ಟಗಳು ದೂರಾಗುವುದು
ಶ್ರಾವಣ ಮಾಸ, ಶಿವನ ಪೂಜೆಗೆ ಮೀಸಲಾದ ತಿಂಗಳು, ಈ ತಿಂಗಳ ಪೂರ್ತಿ ಶಿವನ ಆರಾಧನೆ ಮಾಡಿದರೆ ಶಿವಕೃಪೆಗೆ ಪಾತ್ರರಾಗಬಹುದು, ಅದರಲ್ಲೂ ಶಿವ ಪೂಜೆಗೆ ಶ್ರಾವಣ ಸೋಮವಾರ ತುಂಬಾನೇ ಶ್ರೇಷ್ಠವಾದ ದಿನವಾಗಿದೆ.
ಅಲ್ಲದೆ ಶ್ರಾವಣ ಮಂಗಳವಾರ ಗೌರಿ ಪೂಜೆಗೆ, ಹನುಮಂತನ ಪೂಜೆಗೆ ತುಂಬಾ ಶ್ರೇಷ್ಠವಾದ ದಿನವಾಗಿದೆ. ಶ್ರಾವಣ ಮಂಗಳವಾರದಂದು ಹನುಮಂತನ ಆರಾಧನೆ ಹೇಗೆ ಮಾಡಬೇಕು? ಸಂಕಷ್ಟ ನಿವಾರಣೆಗೆ ಯಾವೆಲ್ಲಾ ಪರಿಹಾರ ಮಾಡಿದರೆ ಒಳ್ಳೆಯದು ಎಂದು ನೋಡೋಣ ಬನ್ನಿ:

ಶ್ರಾವಣ ಮಂಗಳವಾರ ಈ ಪೂಜಾ ವಿಧಿಗಳನ್ನು ಪಾಲಿಸಿ
- ಮಂಗಳವಾರ ಬೆಳಗ್ಗೆ ಬೇಗನೆ ಎದ್ದು ಸ್ನಾನ ಮಾಡಿ ಮಡಿ ಬಟ್ಟೆ ಧರಿಸಿ
- ಈ ದಿನ ಉಪವಾಸವಿದ್ದರೆ ಒಳ್ಳೆಯದು
- ಸಮೀಪದ ಹನುಮಂತನ ದೇವಾಲಯಕ್ಕೆ ಭೇಟಿ ನೀಡಿ.
- ಶ್ರೀರಾಮನಿಗೆ ಸಿಂಧೂರ, ಹೂ-ಹಣ್ಣುಗಳನ್ನು ಅರ್ಪಿಸಿ.
- ಆಲದ ಮರದ ಎಲೆಗಳನ್ನು ತಂದು ಅದರ ಮೇಲೆ ಶ್ರೀರಾಮ ಅಂತ ಬರೆದು ಹನುಮಂತನ ಮೂರ್ತಿ ಮುಂದೆ ಇಡಿ.
- ಆಲದ ಮರದ ಕೆಳಗಡೆ ಕೂತು ಹನುಮಾನ್ ಚಾಲೀಸ ಪಠಿಸಿ.
ನಿಮ್ಮ ಸಮಸ್ಯೆ ನಿವಾರಣೆಗೆ ಈ ಸಮಸ್ಯೆ ಈ ಪರಿಹಾರ ಮಾಡಿ:
* ಹನುಮಂತನಿಗೆ ಸಿಂಧೂರ ಅರ್ಪಿಸಿ
ಮಂಗಳವಾರ ಬೆಳಗ್ಗೆ ಹನುಮಂತನ ದೇವಾಲಯಕ್ಕೆ ಹೋಗಿ ಸಿಂಧೂರ ಹಾಗೂ ಕೆಂಪು ಹೂಗಳನ್ನು ಅರ್ಪಿಸಿ ಹನುಮಾನ್ ಮಂತ್ರಗಳನ್ನು ಪಠಿಸಿ.
ಮಂತ್ರ: ಓಂ ಹಂ ಹನುಮತೇ ನಮಃ
* ರುದ್ರಾಕ್ಷಿ ಮಾಲೆ ಹಿಡಿದು ಹನುಮಂತ್ರನ ಮಂತ್ರ ಪಠಿಸಿ
ನೀವು ರುದ್ರಾಕ್ಷಿ ಮಾಲೆ ಹಿಡಿದು 108 ಬಾರಿ ಹನುಮಂತನ
ಮರ್ಕಟೇಶ ಮಹೋತ್ಸಹಃ ನವಗ್ರಹ ದೋಷ ನಿವಾರಣಃ |
ಶತ್ರೂನ್ ಸಂಹಾರ ಮಾಂ ರಕ್ಷ ಶ್ರಿಯಂ ದಾಪಯಾ ದೇಹಿಮೇ ಪ್ರಭೋ ||
ಹಣದ ಸಮಸ್ಯೆ ಕಾಡದಿರಲು ಈ ಮಂತ್ರ ಪಠಿಸಿ
ತುಂಬಾ ಆರ್ಥಿಕ ಸಮಸ್ಯೆ ಇದ್ದರೆ ಹನುಮಂತನಿಗೆ ಮಂಗಳವಾರ ಪೂಜೆ ಮಾಡುವಾಗ ಆಲದ ಮರದ ಎಲೆಯನ್ನು ತಂದು ಅದರಲ್ಲಿ ಶ್ರೀರಾಮ ಎಂದು ಬರೆದು ಹನುಮಂತನ ಮೂರ್ತಿ ಮುಂದೆ ಇಟ್ಟು ಪೂಜಿಸಿ, ನಂತರ ಆ ಎಲೆಯನ್ನು ನಿಮ್ಮ ಪರ್ಸ್ನಲ್ಲಿ ಇಟ್ಟುಕೊಳ್ಳಿ.
* ಈ ದಿನ ರಾಮ ರಕ್ಷಾ ಸ್ತೋತ್ರ ಪಠಿಸಿ, ಹೀಗೆ ಮಾಡುವುದರಿಂದ ಶ್ರೀರಾಮ ಹಾಗೂ ಹನುಮಂತನ ಕೃಪೆ ನಿಮ್ಮ ಮೇಲಿರಲಿದೆ.



Click it and Unblock the Notifications