Latest Updates
-
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಾದಿದೆ! -
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್!
ಶ್ರಾವಣದ ಮಾಸ: ಸೋಮವಾರ, ಮಂಗಳವಾರ ಈ 5 ತಪ್ಪುಗಳನ್ನು ಮಾಡದಿರಿ
ಶ್ರಾವಣ ಮಾಸದಲ್ಲಿ ಶ್ರಾವಣ ಸೋಮವಾರಕ್ಕೆ ತುಂಬಾನೇ ಮಹತ್ವವಿದೆ. ಪ್ರತಿ ಸೋಮವಾರ ಶಿವನಿಗೆ ವಿಶೇಷ ಪೂಜೆ ಮಾಡಿ ಆರಾಧಿಸಲಾಗುವುದು. ಈ ದಿನ ಶಿವನ ಆರಾಧನೆ ಮಾಡುವುದರಿಂದ ಹೆಚ್ಚಿನ ಫಲ ಸಿಗಲಿದೆ, ಈ ದಿನ ಉಪವಾಸವಿದ್ದು ಶಿವ-ಪಾರ್ವತಿಯ ಆರಾಧನೆ ಮಾಡಿದರೆ ಶಿವ-ಪಾರ್ವತಿಯ ಕೃಪೆಯಿಂದ ಬದುಕಿನಲ್ಲಿ ಒಳಿತಾಗುವುದು ಎಂಬ ನಂಬಿಕೆ.
ಶ್ರಾವಣ ಮಾಸದಲ್ಲಿ ಸೋಮವಾರ ಶಿವನ ಆರಾಧನೆ ಮಾಡಿದರೆ ಮಂಗಳ ವಾರ ಮಂಗಳ ಗೌರಿ ಅಂದರೆ ಪಾರ್ವತಿಯ ಆರಾಧನೆ ಮಾಡಲಾಗುವುದು. ಈ ವ್ರತಗಳನ್ನು ಪಾಲಿಸುವವರು ಕೆಲವೊಂದು ಪೂಜಾ ನಿಯಮಗಳನ್ನು ಪಾಲಿಸಬೇಕು, ಈ ತಪ್ಪುಗಳು ಆಗದಂತೆ ಎಚ್ಚರವಹಿಸಬೇಕು.

1. ಶ್ರಾವಣ ಮಾಸದಲ್ಲಿ ಹೆಚ್ಚಾಗಿ ತಿನ್ನಬಾರದು: ಶ್ರಾವಣ ಮಾಸದಲ್ಲಿ ಅತೀ ಹೆಚ್ಚು ತಿನ್ನಬಾರದು, ಅಲ್ಲದೆ ಬರೀ ಸಾತ್ವಿಕ ಆಹಾರವನ್ನಷ್ಟೇ ಸೇವಿಸಬೇಕು. ಈ ಅವಧಿಯಲ್ಲಿ ಧ್ಯಾನದಲ್ಲಿ ಮಗ್ನರಾಗಿರಬೇಕು, ಸದಾ ಶಿವನ ಧ್ಯಾನದಲ್ಲಿರುವುದರಿಂದ ಶಿವಕೃಪೆಯಿಂದಾಗಿ ಬದುಕು ತುಂಬಾನೇ ಸುಂದರವಾಗುವುದು. ಅಲ್ಲದೆ ಮನೆಯ ವಾತಾವರಣ ಕೂಡ ತುಂಬಾ ಶಾಂತವಾಗಿರಬೇಕು. ಮನೆಯಲ್ಲಿ ಜಗಳ, ವಾಗ್ವಾದ ಏನೂ ಇರಬಾರದು.
2. ಈರುಳ್ಳಿ, ಬೆಳ್ಳುಳ್ಳಿ ಸೇವಿಸಬಾರದು
ಶ್ರಾವಣ ಮಾಸದಲ್ಲಿ ಈರುಳ್ಳಿ, ಬೆಳ್ಳುಳ್ಳಿ ಸೇವಿಸುವಂತಿಲ್ಲ, ಅದರಲ್ಲೂ ಉಪವಾಸದ ದಿನವಂತೂ ಇವುಗಳನ್ನು ಮುಟುವಂತೆಯೂ ಇಲ್ಲ.
3. ಎಣ್ಣೆಯಲ್ಲಿ ಕರಿದ ಪದಾರ್ಥ ತಿನ್ನಬಾರದು
ಶ್ರಾವಣ ಮಾಸದ ಆಹಾರ ಪದ್ಧತಿ ನಮ್ಮ ದೇಹವನ್ನು ಡಿಟಾಕ್ಸ್ ಮಾಡುವಲ್ಲಿ ತುಂಬಾ ಸಹಕಾರಿಯಾಗಿದೆ. ಈ ಅವಧಿಯಲ್ಲಿ ಎಣ್ಣೆಯಲ್ಲಿ ಕರಿದ ಪದಾರ್ಥಗಳನ್ನು ತಿಂದರೆ ದೇಹದಲ್ಲಿರುವ ಕಶ್ಮಲ ಹೊರ ಹಾಕಲು ಸಾಧ್ಯವಿಲ್ಲ. ದೇಹದಲ್ಲಿರುವ ಕಶ್ಮಲ ಹೊರಹಾಕಿದರೆ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗುವುದು, ಕಾಯಿಲೆ ಬೀಳುವುದು ಕಡಿಮೆಯಾಗುವುದು ಈ ದೃಷ್ಟಿಯಿಂದ ಶ್ರಾವಣ ಮಾಸದ ವ್ರತ ತುಂಬಾನೇ ಸಹಕಾರಿ. ದೇವರ ಕೃಪೆ ಜೊತೆ ಆರೋಗ್ಯ ಭಾಗ್ಯ ಕೂಡ ಪಡೆಯಬಹುದು.
4. ಹೆಚ್ಚು ಸಕ್ಕರೆ ಸೇವಿಸಬೇಡಿ
ಉಪವಾಸವಿದ್ದಾಗ ಬಾಯಿಗೆ ಏನಾದರೂ ಸಿಹಿ ಬೇಕೆಂದಿನಿಸುವುದು, ಆದರೆ ಸಿಹಿ ತಿನ್ನಲು ಸಕ್ಕರೆ ತಿನ್ನಬೇಡಿ, ಅದರ ಬದಲಿಗೆ ಬೆಲ್ಲ ಅಥವಾ ಬೆಲ್ಲದ ಸಿಹಿ ತಿಂಡಿ ಬಳಸಿ.
5. ಉಪವಾಸ ಮಾಡುವಾಗ ನಿಮ್ಮ ಆರೋಗ್ಯ ಸ್ಥಿತಿ ಗಮನದಲ್ಲಿರಲಿ
ಉಪವಾಸ ಮಾಡಿದರೆ ಆರೋಗ್ಯಕ್ಕೆ ಒಳ್ಳೆಯದು, ಆದರೆ ಶುಗರ್ ಅಥವಾ ಬೇರೆ ಏನಾದರೂ ಆರೋಗ್ಯ ಸಮಸ್ಯೆಯಿದ್ದರೆ ಕಠಿಣ ವ್ರತ ಮಾಡಬೇಡಿ, ಇದರಿಂದ ಇನ್ಸುಲಿನ್ನಲ್ಲಿ ಹೆಚ್ಚು ಕಡಿಮೆ ಆದರೆ ತೊಂದರೆಯಾಗುವುದು. ಆದ್ದರಿಂದ ಸಂಪೂರ್ಣ ದಿನ ಉಪವಾಸವಿರಲು ಸಾಧ್ಯವಾಗದವರು ಈ ದಿನ ಸಾತ್ವಿಕ ಆಹಾರ ಮಾತ್ರ ಸೇವಿಸಿ ಅಥವಾ ಒಂದು ಹೊತ್ತು ಆಹಾರ ಸೇವಿಸಿ ಉಪವಾಸ ಮಾಡಿ.



Click it and Unblock the Notifications