Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಆಗಸ್ಟ್ 17ರಿಂದ ನಿಜ ಶ್ರಾವಣ ಶುರು: ಶಿವಕೃಪೆಗಾಗಿ ಮಾಡಬೇಕಾದ 5 ಕಾರ್ಯಗಳು
ಈ ವರ್ಷ ಶ್ರಾವಣ ಬರೋಬರಿ ಎರಡು ತಿಂಗಳು ಬಂದಿದೆ, ಆದರೆ ಈ ಮೊದಲು ಬಂದಿರುವುದು ಶ್ರಾವಣ ಅಧಿಕ ಮಾಸ, ಆಗಸ್ಟ್ 17ರಿಂದ ಶ್ರಾವಣ ಶುರು. 3 ವರ್ಷಕ್ಕೊಮ್ಮೆ ಅಧಿಕ ಮಾಸ ಇರುತ್ತದೆ. ಈ ವರ್ಷ ಶ್ರಾವಣ ಅಧಿಕ ಮಾಸ ಬಂದಿದೆ. ಯಾವ ಮಾಸದ ಮೊದಲು ಅಧಿಕ ಮಾಸ ಬರುವುದೋ ಆ ಹೆಸರನ್ನು ನೀಡಲಾಗುವುದು, ಶ್ರಾವಣ ಅಧಿಕ ಮಾಸ ಜುಲೈ 18ರಿಂದ ಆಗಸ್ಟ್ 16ರವರೆಗೆ ಇತ್ತು. ಇದೀಗ ನಿಜ ಶ್ರಾವಣ ಮಾಸ ಆಗಸ್ಟ್ 17ರಿಂದ ಪ್ರಾರಂಭವಾಗಿ ಸೆಪ್ಟೆಂಬರ್ 15ರವರೆಗೆ ಇರಲಿದೆ.

ಅಧಿಕ ಮಾಸದಲ್ಲಿ ಶುಭ ಕಾರ್ಯಗಳನ್ನು ಮಾಡುವುದಿಲ್ಲ
ಸಾಮಾನ್ಯವಾಗಿ ಅಧಿಕ ಮಾಸದಲ್ಲಿ ಶುಭ ಕಾರ್ಯಗಳನ್ನು ಮಾಡುವುದಿಲ್ಲ, ಆದರೆ ಪೂಜಾ ಕಾರ್ಯಗಳನ್ನು ಮಾಡಲಾಗುವುದು. ಅಧಿಕ ಮಾಸದಲ್ಲಿ ಪ್ರತಿನಿತ್ಯ ಶ್ರೀವಿಷ್ಣುವಿನ ನಾಮಸ್ಮರಣೆ ಮಾಡಿದರೆ ಒಳ್ಳೆಯದು ಎಂದು ಹೇಳಲಾಗುತ್ತದೆ. ಈ ಅವಧಿಯಲ್ಲಿ ದೇವರ ಪೂಜೆಗಳನ್ನು ಮಾಡಲಾಗುವುದು, ಆದರೆ ಇದುವರೆಗೆ ಹೋಗದೇ ಇರುವ ದೇವಾಲಯಕ್ಕೆ ಈ ಅವಧಿಯಲ್ಲಿ ಹೋಗಬಾರದು. ಗೃಹ ಪ್ರವೇಶ, ಸಂನ್ಯಾಸಗ್ರಹಣ, ಗ್ರಹಣದೀಕ್ಷೆ, ವಿವಾಹ, ಉಪನಯನ , ನಾಮಕರಣ ಈ ರೀತಿಯ ಯಾವುದೇ ಶುಭ ಕಾರ್ಯಗಳನ್ನು ಮಾಡುವುದಿಲ್ಲ.
ಶ್ರಾವಣದಲ್ಲಿ ಪೂಜಾ ಕಾರ್ಯಗಳನ್ನು ಮಾತ್ರವಲ್ಲ ಶುಭ ಕಾರ್ಯಗಳನ್ನು ಮಾಡಲಾಗುವುದು.
ಶ್ರಾವಣದಲ್ಲಿ ಈ ದಿನಾಂಕಗಳು ತುಂಬಾನೇ ಮುಖ್ಯವಾಗಿದೆ
ಶ್ರಾವಣ ಸೋಮವಾರ
ಆಗಸ್ಟ್ 21
ಆಗಸ್ಟ್ 28
ಸೆಪ್ಟೆಂಬರ್ 4
ಸೆಪ್ಟೆಂಬರ್ 11
ಮಂಗಳಗೌರಿ ವ್ರತ
ಆಗಸ್ಟ್ 22
ಆಗಸ್ಟ್ 29
ಸೆಪ್ಟೆಂಬರ್ 5
ಸೆಪ್ಟೆಂಬರ್ 12
ಶ್ರಾವಣದಲ್ಲಿ ಈ 5 ಕಾರ್ಯಗಳನ್ನು ಮಾಡಿದರೆ ಒಳ್ಳೆಯದು
* ಪ್ರತಿ ಶ್ರಾವಣ ಸೋಮವಾರ ಉಪವಾಸವಿದ್ದು ವ್ರತ ಮಾಡಿದರೆ ಒಳಿತಾಗುವುದು
* ಶ್ರಾವಣ ಸೋಮವಾರ ಶಿವನ ದೇವಾಲಯಕ್ಕೆ ಭೇಟಿ ನೀಡಿ ಅಭಿಷೇಕ ಮಾಡಿಸಿ
* ಶಿವನಿಗೆ ಬಿಲ್ವೆ ಪತ್ರೆ ಅರ್ಪಿಸಬೇಕು
* ಈ ಸಮಯದಲ್ಲಿ ಮಹಾ ಮೃತ್ಯುಂಜಯ ಮಂತ್ರ, ಲಿಂಗಾಷ್ಟಕಂ, ಶಿವನಾಮಸ್ಮರಣೆ ಮಾಡಬೇಕು
* ಸಾಧ್ಯವಾದರೆ ಇಡೀ ತಿಂಗಳು ಒಂದು ಹೊತ್ತು ಮಾತ್ರ ಆಹಾರ ಸೇವಿಸಿ ಉಳಿದ ಸಮಯದಲ್ಲಿ ಹಣ್ಣುಗಳನ್ನು ಸೇವಿಸಿ ಉಪವಾಸ ಮಾಡಿದರೆ ಒಳ್ಳೆಯದು
ಶ್ರಾವಣ ಮಾಸ ಆಚರಣೆ ಮಾಡುವುದರಿಂದ ಶಿವಕೃಪೆಯಿಂದ ಕಷ್ಟಗಳು ದೂರಾಗುವುದು, ವೈವಾಹಿಕ ಜೀವನದಲ್ಲಿ ಏನಾದರೂ ಸಮಸ್ಯೆಗಳಿದ್ದರೆ ಅವೆಲ್ಲಾ ದೂರಾಗುವುದು ಎಂಬುವುದು ಶಿವನ ಭಕ್ತರ ನಂಬಿಕೆಯಾಗಿದೆ.



Click it and Unblock the Notifications