Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ಜುಲೈ 21ಕ್ಕೆ ಶ್ರಾವಣ ಮಾಸದ ಮೊದಲ ವಿನಾಯಕ ಚತುರ್ಥಿ: ಹೀಗೆ ಆರಾಧಿಸಿದರೆ ವಿಘ್ನೆಗಳೆಲ್ಲಾ ದೂರ
ಶ್ರಾವಣ ಮಾಸದ ಮೊದಲ ವಿನಾಯಕ ಚತುರ್ಥಿಯನ್ನು ಜುಲೈ 21ರಂದು ಆಚರಿಸಲಾಗುವುದು. ಶ್ರಾವಣ ಮಾಸದ ಶುಕ್ಲ ಪಕ್ಷದಲ್ಲಿ ಈ ವಿನಾಯಕ ಚತುರ್ಥಿ ಬಂದಿದ್ದು ಈ ದಿನ ಸಿದ್ಧಿ ವಿನಾಯಕನನ್ನು ಶಾಸ್ತ್ರೋಕ್ತವಾಗಿ ಪೂಜಿಸಲಾಗುವುದು. ಶ್ರಾವಣದಲ್ಲಿ ಆಚರಿಸುವ ವಿನಾಯಕ ಚತುರ್ಥಿಯ ಮಹತ್ವ ಹಾಗೂ ಪೂಜಾ ಸಮಯ, ಪೂಜಾ ವಿಧಿಗಳ ಕುರಿತು ಹೆಚ್ಚಿನ ಮಾಹಿತಿ ತಿಳಿಯೋಣ:

ಶ್ರಾವಣ ವಿನಾಯಕ ಚತುರ್ಥಿ
ಹಿಂದೂ ಪಂಚಾಂಗದ ಪ್ರಕಾರ ಚತುರ್ಥಿ ತಿಥಿಯು ಜುಲೈ 21 ರಂದು ಬೆಳಗ್ಗೆ 06.58 ರಿಂದ ಪ್ರಾರಂಭವಾಗಲಿದೆ, ಉದಯತಿಥಿಯ ಆಧಾರದ ಮೇಲೆ ಜುಲೈ 21 ರ ಶುಕ್ರವಾರದಂದು ಶ್ರಾವಣದ ದಿನದಂದು ಮೊದಲ ವಿನಾಯಕ ಚತುರ್ಥಿಯನ್ನು ಆಚರಿಸಲಾಗುತ್ತದೆ. ಈ ದಿನ ಉಪವಾಸವಿದ್ದು ವಿನಾಯಕನ್ನು ಆರಾಧಿಸುವುದರಿಂದ ಬಯಸಿದ್ದು ನೆರವೇರಲಿದೆ ಎಂಬ ನಂಬಿಕೆ.
ವಿನಾಯಕ ಚತುರ್ಥಿಯ ಆರಾಧನೆಗೆ ಮಂಗಳಕರ ಸಮಯ
ಜುಲೈ 21,ಈ ದಿನ ಗಣೇಶನ ಪೂಜೆಗೆ ಶುಭ ಮುಹೂರ್ತವು ಬೆಳಗ್ಗೆ 11.05 ರಿಂದ ಮಧ್ಯಾಹ್ನ 01.50 ರವರೆಗೆ ಇರುತ್ತದೆ.
ಪೂಜೆಗೆ ಎರಡು ಗಂಟೆ 45 ನಿಮಿಷಗಳಿವೆ.
ವಿನಾಯಕ ಚತುರ್ಥಿಯಂದು ರವಿಯೋಗ
ಶ್ರಾವಣದಲ್ಲಿ ಮೊದಲ ವಿನಾಯಕ ಚತುರ್ಥಿಯಂದು ಮಧ್ಯಾಹ್ನ 01.58 ರಿಂದ ರವಿ ಯೋಗವು ಪ್ರಾರಂಭವಾಗಲಿದ್ದು, ಜುಲೈ 22 ರ ಭಾನುವಾರದಂದು 05.37 ರವರೆಗೆ ಈ ಯೋಗವು ಮುಂದುವರಿಯುತ್ತದೆ. ರವಿ ಯೋಗವು ಎಲ್ಲಾ ಶುಭ ಕಾರ್ಯಗಳಿಗೆ ಶುಭ ಯೋಗವಾಗಿದೆ.
ಶುಭ ಕಾರ್ಯಗಳಿಗೆ ಈ ದಿನ ಅನೇಕ ಶುಭ ಯೋಗ ಏರ್ಪಟ್ಟಿದೆ
ಈ ದಿನ, ಲಾಭ-ಪ್ರಗತಿಗಾಗಿ ನೀವು ಈ ಶುಭಯೋಗದಲ್ಲಿ ಏನಾದರೂ ಹೊಸ ಕಾರ್ಯಕ್ಕೆ ಕೈ ಹಾಕಿದರೆ ಒಳ್ಳೆಯದು. ಬೆಳಗ್ಗೆ 10.44ರಿಂದ ಮಧ್ಯಾಹ್ನ 12.27ರವರೆಗೆ ಲಾಭ-ಪ್ರಗತಿ ಮುಹೂರ್ತವಿದೆ. ಇದರ ನಂತರ ಅಮೃತ-ಅತ್ಯುತ್ತಮ ಮುಹೂರ್ತವು ಮಧ್ಯಾಹ್ನ 12:27 ರಿಂದ 02:10 ರವರೆಗೆ ಇರಲಿದೆ. ಮತ್ತೊಂದೆಡೆ ರವಿ ಯೋಗದ ಬಗ್ಗೆ ಹೇಳುವುದಾದರೆ ಜುಲೈ 21 ರಂದು ಮಧ್ಯಾಹ್ನ 1.58 ರಿಂದ ಜುಲೈ 22 ರ ಬೆಳಗ್ಗೆ 5.37 ರವರೆಗೆ ರವಿ ಯೋಗ ಇರುತ್ತದೆ. ಈ ಸಮಯದಲ್ಲಿ ಯಾವುದೇ ರೀತಿಯ ಶುಭ ಕಾರ್ಯವನ್ನು ಮಾಡುವುದು ಒಳ್ಳೆಯದು ಎಂದು ಪರಿಗಣಿಸಲಾಗಿದೆ.
ವಿನಾಯಕ ಚತುರ್ಥಿ ಪೂಜಾ ವಿಧಾನ
ವಿನಾಯಕ ಚತುರ್ಥಿಯ ದಿನದಂದು ಬೆಳಗ್ಗೆ ಬೇಗನೆ ಎದ್ದು ಸ್ನಾನ ಮಾಡಿ ಗಣೇಶನನ್ನು ಪ್ರಾರ್ಥಿಸಿ, ಸಂಕಲ್ಪ ತೆಗೆದುಕೊಳ್ಳಿ.
* ನಂತರ ವಿಧಿ ವಿಧಾನಗಳ ಮೂಲಕ ಗಣಪತಿಯನ್ನು ಆರಾಧಿಸಿ. ಗನೇಶನಿಗೆ ಗರಿಕೆಯನ್ನು ಕಡ್ಡಾಯವಾಗಿ ಅರ್ಪಿಸಿ.
* ಲಡ್ಡುಗಳನ್ನು ನೈವೇದ್ಯವನ್ನಾಗಿ ಅರ್ಪಿಸಿ.



Click it and Unblock the Notifications











