Latest Updates
-
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ!
ಜುಲೈ 21ಕ್ಕೆ ಶ್ರಾವಣ ಮಾಸದ ಮೊದಲ ವಿನಾಯಕ ಚತುರ್ಥಿ: ಹೀಗೆ ಆರಾಧಿಸಿದರೆ ವಿಘ್ನೆಗಳೆಲ್ಲಾ ದೂರ
ಶ್ರಾವಣ ಮಾಸದ ಮೊದಲ ವಿನಾಯಕ ಚತುರ್ಥಿಯನ್ನು ಜುಲೈ 21ರಂದು ಆಚರಿಸಲಾಗುವುದು. ಶ್ರಾವಣ ಮಾಸದ ಶುಕ್ಲ ಪಕ್ಷದಲ್ಲಿ ಈ ವಿನಾಯಕ ಚತುರ್ಥಿ ಬಂದಿದ್ದು ಈ ದಿನ ಸಿದ್ಧಿ ವಿನಾಯಕನನ್ನು ಶಾಸ್ತ್ರೋಕ್ತವಾಗಿ ಪೂಜಿಸಲಾಗುವುದು. ಶ್ರಾವಣದಲ್ಲಿ ಆಚರಿಸುವ ವಿನಾಯಕ ಚತುರ್ಥಿಯ ಮಹತ್ವ ಹಾಗೂ ಪೂಜಾ ಸಮಯ, ಪೂಜಾ ವಿಧಿಗಳ ಕುರಿತು ಹೆಚ್ಚಿನ ಮಾಹಿತಿ ತಿಳಿಯೋಣ:

ಶ್ರಾವಣ ವಿನಾಯಕ ಚತುರ್ಥಿ
ಹಿಂದೂ ಪಂಚಾಂಗದ ಪ್ರಕಾರ ಚತುರ್ಥಿ ತಿಥಿಯು ಜುಲೈ 21 ರಂದು ಬೆಳಗ್ಗೆ 06.58 ರಿಂದ ಪ್ರಾರಂಭವಾಗಲಿದೆ, ಉದಯತಿಥಿಯ ಆಧಾರದ ಮೇಲೆ ಜುಲೈ 21 ರ ಶುಕ್ರವಾರದಂದು ಶ್ರಾವಣದ ದಿನದಂದು ಮೊದಲ ವಿನಾಯಕ ಚತುರ್ಥಿಯನ್ನು ಆಚರಿಸಲಾಗುತ್ತದೆ. ಈ ದಿನ ಉಪವಾಸವಿದ್ದು ವಿನಾಯಕನ್ನು ಆರಾಧಿಸುವುದರಿಂದ ಬಯಸಿದ್ದು ನೆರವೇರಲಿದೆ ಎಂಬ ನಂಬಿಕೆ.
ವಿನಾಯಕ ಚತುರ್ಥಿಯ ಆರಾಧನೆಗೆ ಮಂಗಳಕರ ಸಮಯ
ಜುಲೈ 21,ಈ ದಿನ ಗಣೇಶನ ಪೂಜೆಗೆ ಶುಭ ಮುಹೂರ್ತವು ಬೆಳಗ್ಗೆ 11.05 ರಿಂದ ಮಧ್ಯಾಹ್ನ 01.50 ರವರೆಗೆ ಇರುತ್ತದೆ.
ಪೂಜೆಗೆ ಎರಡು ಗಂಟೆ 45 ನಿಮಿಷಗಳಿವೆ.
ವಿನಾಯಕ ಚತುರ್ಥಿಯಂದು ರವಿಯೋಗ
ಶ್ರಾವಣದಲ್ಲಿ ಮೊದಲ ವಿನಾಯಕ ಚತುರ್ಥಿಯಂದು ಮಧ್ಯಾಹ್ನ 01.58 ರಿಂದ ರವಿ ಯೋಗವು ಪ್ರಾರಂಭವಾಗಲಿದ್ದು, ಜುಲೈ 22 ರ ಭಾನುವಾರದಂದು 05.37 ರವರೆಗೆ ಈ ಯೋಗವು ಮುಂದುವರಿಯುತ್ತದೆ. ರವಿ ಯೋಗವು ಎಲ್ಲಾ ಶುಭ ಕಾರ್ಯಗಳಿಗೆ ಶುಭ ಯೋಗವಾಗಿದೆ.
ಶುಭ ಕಾರ್ಯಗಳಿಗೆ ಈ ದಿನ ಅನೇಕ ಶುಭ ಯೋಗ ಏರ್ಪಟ್ಟಿದೆ
ಈ ದಿನ, ಲಾಭ-ಪ್ರಗತಿಗಾಗಿ ನೀವು ಈ ಶುಭಯೋಗದಲ್ಲಿ ಏನಾದರೂ ಹೊಸ ಕಾರ್ಯಕ್ಕೆ ಕೈ ಹಾಕಿದರೆ ಒಳ್ಳೆಯದು. ಬೆಳಗ್ಗೆ 10.44ರಿಂದ ಮಧ್ಯಾಹ್ನ 12.27ರವರೆಗೆ ಲಾಭ-ಪ್ರಗತಿ ಮುಹೂರ್ತವಿದೆ. ಇದರ ನಂತರ ಅಮೃತ-ಅತ್ಯುತ್ತಮ ಮುಹೂರ್ತವು ಮಧ್ಯಾಹ್ನ 12:27 ರಿಂದ 02:10 ರವರೆಗೆ ಇರಲಿದೆ. ಮತ್ತೊಂದೆಡೆ ರವಿ ಯೋಗದ ಬಗ್ಗೆ ಹೇಳುವುದಾದರೆ ಜುಲೈ 21 ರಂದು ಮಧ್ಯಾಹ್ನ 1.58 ರಿಂದ ಜುಲೈ 22 ರ ಬೆಳಗ್ಗೆ 5.37 ರವರೆಗೆ ರವಿ ಯೋಗ ಇರುತ್ತದೆ. ಈ ಸಮಯದಲ್ಲಿ ಯಾವುದೇ ರೀತಿಯ ಶುಭ ಕಾರ್ಯವನ್ನು ಮಾಡುವುದು ಒಳ್ಳೆಯದು ಎಂದು ಪರಿಗಣಿಸಲಾಗಿದೆ.
ವಿನಾಯಕ ಚತುರ್ಥಿ ಪೂಜಾ ವಿಧಾನ
ವಿನಾಯಕ ಚತುರ್ಥಿಯ ದಿನದಂದು ಬೆಳಗ್ಗೆ ಬೇಗನೆ ಎದ್ದು ಸ್ನಾನ ಮಾಡಿ ಗಣೇಶನನ್ನು ಪ್ರಾರ್ಥಿಸಿ, ಸಂಕಲ್ಪ ತೆಗೆದುಕೊಳ್ಳಿ.
* ನಂತರ ವಿಧಿ ವಿಧಾನಗಳ ಮೂಲಕ ಗಣಪತಿಯನ್ನು ಆರಾಧಿಸಿ. ಗನೇಶನಿಗೆ ಗರಿಕೆಯನ್ನು ಕಡ್ಡಾಯವಾಗಿ ಅರ್ಪಿಸಿ.
* ಲಡ್ಡುಗಳನ್ನು ನೈವೇದ್ಯವನ್ನಾಗಿ ಅರ್ಪಿಸಿ.



Click it and Unblock the Notifications
