Latest Updates
-
ಬೆಂಗಳೂರಿಗರೇ ಗಮನಿಸಿ: ಇಂದು 6 ಗಂಟೆ ಪವರ್ ಕಟ್, ಈ ಮುನ್ನೆಚ್ಚರಿಕೆ ಮರೆಯದಿರಿ! -
ಶ್ರಾವಣ ಉಪವಾಸದಲ್ಲಿ ದಿನವಿಡೀ ಎನರ್ಜಿಯಿಂದ ಇರಬೇಕೆ? ಈ ಹೈ-ಪ್ರೋಟೀನ್ ಸಾತ್ವಿಕ ಆಹಾರ ಪದ್ಧತಿ ಫಾಲೋ ಮಾಡಿ! -
ಗುರು ಪೂರ್ಣಿಮೆ 2026: ಸರಳ ಪೂಜಾ ವಿಧಿ ಮತ್ತು ಕಡಿಮೆ ಬಜೆಟ್ನಲ್ಲಿ ಗುರುಗಳಿಗೆ ನೀಡಬಹುದಾದ ಬೆಸ್ಟ್ ಗಿಫ್ಟ್ ಐಡಿಯಾಗಳು! -
10 ನಿಮಿಷದ 'ಟೈಗರ್ ಫ್ಲೋ': ಬೆನ್ನುನೋವಿಗೆ ಮುಕ್ತಿ ನೀಡುವ ಅದ್ಭುತ ವ್ಯಾಯಾಮ ಇಲ್ಲಿದೆ! -
ಪ್ರತಿಭಟನೆಯಲ್ಲಿ ಪ್ರೀತಿ: 'ಪ್ರೊಟೆಸ್ಟ್ ನೇ ಬನಾ ದಿ ಜೋಡಿ' ಟ್ರೆಂಡ್ ಹಿಂದೆ ಅಡಗಿದೆ ದೊಡ್ಡ ಅಪಾಯ! -
ಮಳೆಗಾಲದಲ್ಲಿ ಮನೆಯಲ್ಲಿ ಬೂಷ್ಟು ಹರಡುತ್ತಿದೆಯೇ? ಈ 20 ನಿಮಿಷದ ಟಿಪ್ಸ್ ಪಾಲಿಸಿ, ಮನೆ ಫ್ರೆಶ್ ಆಗಿಡಿ! -
ಕೇವಲ 200 ರೂಪಾಯಿಯಲ್ಲಿ ಪರಿಸರ ಸ್ನೇಹಿ ಊಟ: ವಿಶ್ವ ಪ್ರಕೃತಿ ಸಂರಕ್ಷಣಾ ದಿನಕ್ಕೆ ನಿಮ್ಮ ಅಡುಗೆಮನೆಯೇ ಮೊದಲ ಹೆಜ್ಜೆ! -
CWG 2026: 6ನೇ ದಿನ ಭಾರತದ ಪದಕದ ಬೇಟೆ; ಮನೆಯಲ್ಲೇ ಕಮ್ಮಿ ಬಜೆಟ್ನಲ್ಲಿ ಅದ್ಭುತ ವಾಚ್ ಪಾರ್ಟಿ ಪ್ಲಾನ್! -
ವಿಶ್ವ ಹೆಪಟೈಟಿಸ್ ದಿನ: ಲಿವರ್ ಆರೋಗ್ಯ ಹೆಚ್ಚಿಸಲು ಈ 10 ನಿಮಿಷದ ಬೆಳಗಿನ ದಿನಚರಿ ಪಾಲಿಸಿ! -
ಮಳೆಗಾಲದ ರಜೆ: ವರ್ಕ್ ಫ್ರಮ್ ಹೋಮ್ ಪೋಷಕರಿಗೆ ಮಕ್ಕಳನ್ನು ನಿಭಾಯಿಸುವುದು ಹೇಗೆ? ಇಲ್ಲಿದೆ ಸರಳ ಟಿಪ್ಸ್
ಸಾಲದಿಂದ ಮುಕ್ತರಾಗಲು ಶ್ರಾವಣ ಶುಕ್ರವಾರ ಲಕ್ಷ್ಮಿ ಪೂಜೆ ಮಾಡುವಾಗ ಈ ಪರಿಹಾರ ಮಾಡಿದರೆ ಒಳ್ಳೆಯದು
ಶುಕ್ರವಾರ ಲಕ್ಷ್ಮಿ ಪೂಜೆಗೆ ವಿಶೇಷವಾದ ದಿನ, ಅದರಲ್ಲೂ ಶ್ರಾವಣ ಶುಕ್ರವಾರ ಲಕ್ಷ್ಮಿ ಪೂಜೆ ಮತ್ತಷ್ಟು ವಿಶೇಷವಾಗಿರುತ್ತದೆ. ಈ ದಿನ ಲಕ್ಷ್ಮಿಯನ್ನು ಆರಾಧನೆ ಮಾಡುವಾಗ ನಿಮ್ಮ ಜೀವನದಲ್ಲಿ ಏನು ಸಮಸ್ಯೆಯಿದೆಯೋ ಅದಕ್ಕೆ ತಕ್ಕಂತೆ ಪರಿಹಾರ ಮಾಡಿದರೆ ಆ ಸಮಸ್ಯೆ ಬೇಗನೆ ದೂರಾಗಲಿದೆ. ನಾವಿಲ್ಲಿ ಶ್ರಾವಣ ಶುಕ್ರವಾರ ಲಕ್ಷ್ಮಿ ಆರಾಧನೆ ಮಾಡುವಾಗ ಹಣದ ಸಮಸ್ಯೆ, ವೈವಾಹಿಕ ಜೀವನದ ಸಮಸ್ಯೆ, ವಿವಾಹ ತಡವಾಗುವುದು ಮುಂತಾದ ಸಮಸ್ಯೆಗೆ ಏನು ಪರಿಹಾರ ಮಾಡಿದರೆ ಒಳ್ಳೆಯದು ಎಂದು ಹೇಳಲಾಗಿದೆ ನೋಡಿ:

ಹಣದ ಸಮಸ್ಯೆಗೆ ಪರಿಹಾರ
ಲಕ್ಷ್ಮಿ ಕೃಪೆ ಇದ್ದರೆ ಸಾಲದಿಂದ ಮುಕ್ತರಾಗಿ ಒಳ್ಳೆಯ ಬದುಕು ನಡೆಸಬಹುದು, ಸಾಲದಿಂದ ಮುಕ್ತರಾಗಲು ಲಕ್ಷ್ಮಿಗೆ ಈ ಪರಿಹಾರ ಮಾಡಿದರೆ ಒಳ್ಳೆಯದು ಎಂದು ಹೇಳಲಾಗುವುದು:
* ಶ್ರಾವಣ ಶುಕ್ರವಾರದಂದು ಸಂಜೆ ಪೂಜೆ ಮಾಡುವಾಗ ಕೆಂಪು ಬಟ್ಟೆಯಲ್ಲಿ ಹಸಿರು ಏಲಕ್ಕಿ ಕಟ್ಟಿ ಲಕ್ಷ್ಮಿಯ ಮೂರ್ತಿಯ ಮುಂದಿಟ್ಟು ಪೂಜಿಸಬೇಕು, ನಂತರ ಆರತಿ ಬೆಳಗಿದ ನಂತರ ಅದನ್ನು ಪರ್ಸ್ ಅಥವಾ ನಮ್ಮ ಕಪಾಟಿನಲ್ಲಿಟ್ಟರೆ ಒಳ್ಳೆಯದು ಎಂದು ಹೇಳಲಾಗುವುದು. ಹೀಗೆ ಮಾಡುವುದರಿಂದ ಹಣಕ್ಕೆ ಸಂಬಂಧಿಸಿದ ದೋಷ ನಿವಾರಣೆಯಾಗಲಿದೆ ಎಂಬ ನಂಬಿಕೆ ಇದೆ.
ಶ್ರಾವಣ ಶುಕ್ರವಾರ ಶಿವಲಿಂಗಕ್ಕೆ ಅಭಿಷೇಕ ಮಾಡಿಸಿ
* ಶ್ರಾವಣ ಮಾಸ ಶಿವನಿಗೆ ಮೀಸಲಾದ ತಿಂಗಳು. ನೀವು ಶ್ರಾವಣ ಶುಕ್ರವಾರ 'ಓಂ ನಮಃ ಶಿವಾಯ' ಮಂತ್ರ ಪಠಿಸುತ್ತಾ ಜಲಾಭಿಷೇಕ ಮಾಡಿ.
* ಲಕ್ಷ್ಮಿ ಮಂತ್ರ ಪಠಿಸಿ
ಮದುವೆಗೆ ಅಡೆತಡೆ ಇದ್ದರೆ
ಈ ದಿನ ನೀವು ಶಿವನಿಗೆ ಪಂಚಾಮೃತ ಅರ್ಪಿಸಿ ಅದರ ಜೊತೆಗೆ ಒಂದು ರೂಪಾಯಿ ನಾಣ್ಯವನ್ನು ಇಡಿ. ನಂತರ ಆ ನಾಣ್ಯವನ್ನು ನಿಮ್ಮ ಬಳಿ ಇರಿಸಿ,ಹೀಗೆ ಮಾಡುವುದರಿಂದ ವಿವಾಹದಲ್ಲಿರುವ ಅಡೆತಡೆ ದೂರಾಗಿ ಮನೆಯಲ್ಲಿ ಶುಭಕಾರ್ಯ ನಡೆಯುವುದು.
ಸಂಪತ್ತು ವೃದ್ಧಿಗೆ
ಶ್ರಾವಣ ಶುಕ್ರವಾರದಂದು ಅಕ್ಕಿ ಪಾಯಸವನ್ನು ಲಕ್ಷ್ಮಿಗೆ ನೈವೇದ್ಯವನ್ನಾಗಿ ಅರ್ಪಿಸಿ.
* ಶ್ರಾವಣ ಶುಕ್ರವಾರ 8 ಚಿಕ್ಕ ಹೆಣ್ಮಕ್ಕಳನ್ನು ಮನೆಗೆ ಕರೆದು ಅವರನ್ನು ಪೂಜಿಸಿ ಅವರಿಗೆ ಹೂವುಗಳು , ಸಿಹಿ ತಿಂಡಿಗಳು, ಬಟ್ಟೆಗಳನ್ನು ದಾನ ಮಾಡಿ.
ಇದರಿಂದ ಲಕ್ಷ್ಮಿ ಕೃಪೆ ಸಿಗುವುದು ಎಂಬ ನಂಬಿಕೆ ಇದೆ.
ಶುಕ್ರವಾರ ಉಪವಾಸ
ಧಾರ್ಮಿಕ ನಂಬಿಕೆಗಳ ಪ್ರಕಾರ, ಈ ದಿನದ ಉಪವಾಸವು ಸಹ ಪ್ರಯೋಜನಕಾರಿಯಾಗಿದೆ. ಸಾಧ್ಯವಾದರೆ ಈ ದಿನ ಕಠಿಣ ಉಪವಾಸ ನಿಯಮ ಆಚರಿಸಿ. ಇದರಿಂದ ಲಕ್ಷ್ಮಿ ಕೃಪೆಗೆ ಪಾತ್ರರಾಗಬಹುದು.
ಅನ್ನವನ್ನು ವ್ಯರ್ಥ ಮಾಡಬೇಡಿ
ಧಾರ್ಮಿಕ ನಂಬಿಕೆಗಳ ಪ್ರಕಾರ ಆಹಾರವು ಲಕ್ಷ್ಮಿಯಾಗಿದೆ, ಆದ್ದರಿಂದ ಅನ್ನವನ್ನು ವ್ಯರ್ಥ ಮಾಡಬಾರದು. ಅಲ್ಲದೆ ಶುಕ್ರವಾರ ನಿರ್ಗತಿಕರಿಗೆ ಆಹಾರ ದಾನ ಮಾಡಿ.
ಶುಕ್ರವಾರ ಈ ಪರಿಹಾರ ಕೂಡ ಮಾಡಿದರೆ ಒಳ್ಳೆಯದು:
* ಶುಕ್ರವಾರ ದೀಪವನ್ನು ಹಚ್ಚಿ 11 ದಿನಗಳ ಕಾಲ ಅಖಂಡ ಜ್ಯೋತಿಯನ್ನು ಬೆಳಗಿಸಿ. 11ನೇ ದಿನ 11 ಹೆಣ್ಣು ಮಕ್ಕಳಿಗೆ ತಾಯಿಯ ಹೆಸರಿನಲ್ಲಿ ಊಟ ಹಾಕಬೇಕು. ಇದರಿಂದ ಹಣದ ಸಮಸ್ಯೆ ದೂರಾಗಲಿದೆ
* ಪ್ರತಿ ಶುಕ್ರವಾರದಂದು ದಕ್ಷಿಣಾವರ್ತಿ ಶಂಖದಲ್ಲಿ ನೀರು ತುಂಬಿ ವಿಷ್ಣುವಿಗೆ ಅಭಿಷೇಕ ಮಾಡುವುದರಿಂದ ತಾಯಿ ಲಕ್ಷ್ಮಿ ಶೀಘ್ರವಾಗಿ ಪ್ರಸನ್ನಳಾಗುತ್ತಾಳೆ.



Click it and Unblock the Notifications